ಬೆಂಗಳೂರು: EPS ಪಿಂಚಿಣಿದಾರರ ಬೃಹತ್ ಪ್ರತಿಭಟನಾ ಸಭೆ ಇದೇ ಜ.12/ ರಂದು ನಗರದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಬಿಎಂಟಿಸಿ & ಕೆಎಸ್ಆರ್ಟಿಸಿ ನಿವೃತ್ತ ನೌಕರರ ಸಂಘಟನೆಯ ಕಾರ್ಯಾಧ್ಯಕ್ಷ ನಂಜುಂಡೇಗೌಡ ತಿಳಿಸಿದ್ದಾರೆ.
ರಾಷ್ಟ್ರೀಯ ಸಂಘರ್ಷ ಸಮಿತಿ ಮುಖಂಡರಾದ ಕಮಾಂಡರ್ ಅಶೋಕ್ ರಾವತ್, ವೀರೇಂದ್ರ ಸಿಂಗ್ ರಜಾವತ್ ಹಾಗೂ ರಮಾಕಾಂತ ನರಗುಂದ ಅವರು ಈ ಸಂದೇಶ ನೀಡಿದ್ದು, ದೇಶಾದ್ಯಂತ ಎಲ್ಲ ಇಪಿಎಸ್ ನಿವೃತ್ತರು ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಅಂದು ಸಭೆ ಸೇರಿ, ಶಾಂತಿಯುತ ಪ್ರತಿಭಟನೆ ನಡೆಸಲಿದ್ದೇವೆ.
ಹೀಗಾಗಿ ಬೆಂಗಳೂರಿನ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲೂ ಪ್ರತಿಭಟನೆ ನಡೆಸಿ ಬಳಿಕ ಮನವಿ ಪತ್ರವನ್ನು ಪಿಎಫ್ ಅಧಿಕಾರಿಗಳಿಗೆ ಸಲ್ಲಿಸಲಿದ್ದೇವೆ ಎಂದು ತಿಳಿಸಿದ್ದಾರೆ.
ಇನ್ನು ಕೇಂದ್ರ ಉದ್ಯೋಗ ಹಾಗೂ ಕಾರ್ಮಿಕ ಸಚಿವರಿಗೆ (minister for labour & employment) ಮನವಿ ಪತ್ರವನ್ನು ಪ್ರತಿಭಟನೆ ಮೂಲಕ ಪ್ರಾದೇಶಿಕ ಭವಿಷ್ಯ ನಿಧಿ ಆಯುಕ್ತರಿಗೆ ಸಲ್ಲಿಸಿಲು ನಮ್ಮ ಸಂಘಟನೆಯ ವತಿಯಿಂದ ಈ ಚಳವಳಿಯಲ್ಲಿ ಭಾಗವಹಿಸುವ ಸಂಬಂಧ ಮೊನ್ನೆ ಲಾಲ್ಬಾಗ್ ಆವರಣದಲ್ಲಿ ಜರುಗಿದ ಮಾಸಿಕ ಸಭೆಯಲ್ಲಿ ಕೈಗೊಂಡ ನಿರ್ಣಯದಂತೆ ಪ್ರತಿಭಟನೆಯಲ್ಲಿ ಪ್ರತಿಯೊಬ್ಬರು ಭಾಗವಹಿಸಬೇಕು ಎಂದು ತಿಳಿಸಿದ್ದಾರೆ.
ಕಳೆದ ತಿಂಗಳು ನವದೆಹಲಿಯಲ್ಲಿ ಎನ್ಎಸಿ ಮುಖಂಡರು ಹಾಗೂ ಸಾವಿರಾರು EPS ನಿವೃತ್ತರು ನಡೆಸಿದ ಪ್ರತಿಭಟನೆ, ಉಪವಾಸ ಸತ್ಯಾಗ್ರಹ, ಅಮರಣಾಂತ ನಿರಶನ ಇವುಗಳನ್ನು ಕಂಡು, ಕೇಂದ್ರ ಸರ್ಕಾರದ ಉನ್ನತ ಸಚಿವರು ಹಾಗೂ ಅಧಿಕಾರಿಗಳು ನಮ್ಮ ಮುಖಂಡರ ನಿರಶನವನ್ನು ಕೈಬಿಡಿಸಿ, ಮಾತುಕತೆ ಮೂಲಕ EPS ನಿವೃತ್ತರ ಎಲ್ಲ ಮೂಲಭೂತ ಬೇಡಿಕೆಗಳನ್ನು ಈಡೇರಿಸುವುದಾಗಿ ಭರವಸೆ ನೀಡಿದ್ದರು.
ಆದರೆ ಆ ಬಳಿಕ ಕೇಂದ್ರ ಸರ್ಕಾರದ ಇತ್ತೀಚಿನ ಬೆಳವಣಿಗೆ ನಿರಾಶಾದಾಯಕವಾಗಿದ್ದು, ನಮ್ಮ ಮುಖಂಡರಲ್ಲಿ ಬೇಸರ ಮೂಡಿಸಿದೆ. ಕಾಲಚಕ್ರ ಉರುಳುತ್ತಿದ್ದು, ಲಕ್ಷಾಂತರ ನಿವೃತ್ತರು ಈಗಾಗಲೇ ಕಾಲನ ಕರೆಗೆ ತಮ್ಮ ಜೀವ ಚೆಲ್ಲಿದ್ದಾರೆ. ನಿವೃತ್ತರು ಇನ್ನೆಷ್ಟು ದಿನ ತಮ್ಮ ಜೀವ ಹಿಡಿದಿಟ್ಟುಕೊಳ್ಳಲು ಸಾಧ್ಯ?.
ಇದನ್ನು ಕೇಂದ್ರ ಸರ್ಕಾರ ಹಾಗೂ ಇಪಿಎಫ್ಒ ಅಧಿಕಾರಿಗಳು ಅರ್ಥಮಾಡಿಕೊಳ್ಳಬೇಕು. ಇವರು ಈಗಲಾದರೂ ತಮ್ಮ ಜವಾಬ್ದಾರಿ ಅರಿತು, ಕಾರ್ಯ ತತ್ಪರರಾಗಿ ಕೂಡಲೇ ನಮ್ಮ ಮುಖಂಡರನ್ನು ಆಹ್ವಾನಿಸಿ, ಮಾತುಕತೆ ಮೂಲಕ ನಿವೃತ್ತರ ಎಲ್ಲ ಬೇಡಿಕೆಗಳನ್ನು ಈಡೇರಿಸಬೇಕೆಂದು ಆಗ್ರಹಿಸಿ, ಈ ಪ್ರತಿಭಟನಾ ಸಭೆ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದ್ದಾರೆ.
ಕೇಂದ್ರ ಸರ್ಕಾರ ನಮ್ಮ ಮುಖಂಡರಿಗೆ ನೀಡಿರುವ ಭರವಸೆಯಂತೆ ನಡೆದುಕೊಳ್ಳಬೇಕು, ಯಾವುದೇ ಕಾರಣಕ್ಕೂ ನಮ್ಮ ಬೇಡಿಕೆಯ ಪ್ರಸ್ತಾವನೆಯನ್ನು ಮುಂದೂಡಿ, ಕಾಲ ವಿಳಂಬ ಮಾಡಲು ಅವಕಾಶವಿಲ್ಲ ಎಂಬ ಎಚ್ಚರಿಕೆಯ ಸಂದೇಶವನ್ನು ನೀಡಲಾಗುವುದು. ನಿವೃತ್ತರ ಶಕ್ತಿ ಏನೆಂದು ಇಷ್ಟರಲ್ಲೇ ಮಾಡಿ ತೋರಿಸುತ್ತೇವೆ!!!. ಈ ಪ್ರತಿಭಟನಾ ಸಭೆಯನ್ನು ಎನ್ಎಸಿ ಹಾಗೂ ಬಿಎಂಟಿಸಿ, ಕೆಎಸ್ಆರ್ಟಿಸಿ ವತಿಯಿಂದ ಆಯೋಜಿಸಿದ್ದು, ಜಂಟಿಯಾಗಿ ಹಮ್ಮಿಕೊಳ್ಳಲಾಗಿದೆ ಎಂದಿದ್ದಾರೆ.
ಈ ನಮ್ಮ ಎಲ್ಲಾ ಬೇಡಿಕೆಗಳಿಗೆ ಸಂಬಂಧಿಸಿದಂತೆ, ನಮ್ಮ ನಾಯಕರಿಗೆ ಶಕ್ತಿ ತುಂಬಲು, ಜ.12 ರಂದು ಬೆಳಗ್ಗೆ 11 ಗಂಟೆಗೆ ನಗರದ ರಿಚ್ಮಂಡ್ ವೃತ್ತದಲ್ಲಿರುವ ಪ್ರಾದೇಶಿಕ ಭವಿಷ್ಯ ನಿಧಿ ಕಚೇರಿ ಆವರಣದಲ್ಲಿ ಜರುಗುವ ಶಾಂತಿಯುತ ಪ್ರತಿಭಟನಾ ಸಭೆಯಲ್ಲಿ ಎಲ್ಲ EPS ನಿವೃತ್ತರು ಭಾಗವಹಿಸಬೇಕೆಂದು ನಂಜುಂಡೇಗೌಡ ತಿಳಿಸಿದ್ದಾರೆ.
Related

You Might Also Like
ಮೈಸೂರು ಅರಮನೆ ಸೇರಿದಂತೆ ಸೂಕ್ಷ್ಮ ವಲಯಗಳಲ್ಲಿ ಡ್ರೋನ್ ಹಾರಾಟ ನಿಷೇಧ
ಮೈಸೂರು: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ...
ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು...
ವೈದ್ಯರು, ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆಗೆ ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ ರಾಜ್ಯ ಸರ್ಕಾರ ಅನುಮೋದನೆ...
ರಾಜ್ಯಾದ್ಯಂತ 7 ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ 40 ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ದಾಖಲೆಗಳು ವಶ
ಬೆಂಗಳೂರು: ರಾಜ್ಯಾದ್ಯಂತ 40 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಭ್ರಷ್ಟರ ಭೇಟಿಯಾಡುತ್ತಾ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಭಷ್ಟ್ರ ಅಧಿಕಾರಿಗಳ ವಿರುದ್ಧ ಅಕ್ರಮ...
BMTC: ಸಾರಿಗೆ ನೌಕರರಿಗೆ ಹಿಂಬಾಕಿ, ವೇತನ ಹೆಚ್ಚಳ ಮಾಡದಿದ್ದರೂ ಪ್ರಯಾಣಿಕರಿಗೆ ಹೊಸ ಹೊಸ ಯೋಜನೆ ಮಾತ್ರ ನಿಂತಿಲ್ಲ
ಬೆಂಗಳೂರು: ರಾಜ್ಯ ಸರ್ಕಾರಿ ಸಾರಿಗೆ ನೌಕರರಿಗೆ 2024ರ ಜನವರಿಯಿಂದ ಆಗಬೇಕಿರುವ ವೇತನ ಹೆಚ್ಚಳ ಹಾಗೂ ಕಳೆದ 2020ರ ಜನವರಿಯಿಂದ ಆಗಿರುವ ತೇತನ ಹೆಚ್ಚಳದ 38 ತಿಂಗಳ ಹಿಂಬಾಕಿ...
44ನೇ ವಯಸ್ಸಿಗೇ ಸಿಎಂ ಆಗಿ ಸಾಧನೆಗೈದ ಆರ್. ಗುಂಡೂರಾವ್: ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಅವರು ಸಿಎಂ ಆಗಿದ್ದಾಗ ನಾನು ಜನತಾ ಪಕ್ಷದಲ್ಲಿ ಇದ್ದೇ, ಲೋಕಸಭಾ ಸದಸ್ಯರಾಗಿದ್ದ ಸಂದರ್ಭದಲ್ಲಿ ಅವರನ್ನು ನೋಡಲು ಹೋಗಿದ್ದೇ ಎಂದು ಸಿಎಂ ಸಿದ್ದರಾಮಯ್ಯ...
ಸಾಮಾಜಿಕ ನ್ಯಾಯದ ಬದ್ಧತೆ ಇರಬೇಕು ತೋರಿಕೆಯಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು. ತೋರಿಕೆ ಇರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಹಿರಿಯ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ...
ಕೆಂಪೇಗೌಡ ಬಸ್ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಸಿಎಂ ಎನಿಸಿಕೊಂಡಿದ್ದ ಆರ್. ಗುಂಡೂರಾವ್ ಪ್ರತಿಮೆ ಅನಾವರಣ
ಬೆಂಗಳೂರು: ದಕ್ಷಿಣ ಏಷ್ಯಾದಲ್ಲೇ ಪ್ರಪ್ರಥಮ ಹಾಗೂ ಅತ್ಯಪೂರ್ವ ಎಂಬ ಖ್ಯಾತಿಯ ಕೆಂಪೇಗೌಡ ಸಾರಿಗೆ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಮುಖ್ಯ ಮಂತ್ರಿ ಎನಿಸಿಕೊಂಡಿದ್ದ ಪ್ರಾತ:ಸ್ಮರಣಿಯ ಆರ್. ಗುಂಡೂರಾವ್...
ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ₹4,195 ಕೋಟಿ ಬಿಡುಗಡೆಯಾಗಿಲ್ಲ. ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ಸುಮಾರು ₹4,195 ಕೋಟಿ ಬಿಡುಗಡೆಯಾಗಿಲ್ಲ. ಈ ದಿಸೆಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರವನ್ನು ಒತ್ತಾಯಿಸಿ ಬಾಕಿ...