KSRTC: ವೇತನ ಹೆಚ್ಚಳ-55 ತಿಂಗಳ ಹಿಂಬಾಕಿ ಘೋಷಣೆ ಮಾಡದಿದ್ದರೆ ಜೂನ್ ಆರಂಭದಲ್ಲಿ ಸಾರಿಗೆ ಮುಷ್ಕರ ಖಚಿತ!?

- ಸರ್ಕಾರಕ್ಕೆ ಎಚ್ಚರಿಕೆ ಕೊಡಲು ತೆರೆ ಮರೆಯಲ್ಲಿ ಸಮಾಲೋಚನೆ
- ಕೇಂದ್ರ ಸ್ಥಾನದ ಅಧಿಕಾರಿಗಳೇ ನೌಕರರಿಗೆ ಕರೆ ಕೊಡುವ ಬಗ್ಗೆ ಚರ್ಚೆಯಲ್ಲಿ ತಲ್ಲೀನ!
ಬೆಂಗಳೂರು: ಸಾರಿಗೆ ನೌಕರರಿಗೂ ಸರಿ ಸಮಾನ ವೇತನ ಕೊಡುತ್ತೇವೆ ಎಂದು ವೇತನ ಅಗ್ರಿಮೆಂಟ್ ಮಾಡದೆ, ಜತೆಗೆ ಕಳೆದ 2020ರ ಜನವರಿ 1ರಿಂದ ಆಗಿರುವ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿಯನ್ನು ಬಿಡುಗಡೆ ಮಾಡದೆ. ಜತೆಗೆ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳವನ್ನೂ ಈವರೆಗೂ ಅಂದರೆ 17 ತಿಂಗಳು ಕಳೆಯುತ್ತಾ ಬಂದರೂ ಮಾಡದೆ ಬರಿ ಕಾಲವನ್ನು ದೂಡಿಕೊಂಡೆ ಬರುತ್ತಿದೆ ಸರ್ಕಾರ.
ಈ ನಡುವೆ, ಈವರೆಗೂ ಸಿಎಂ ನೌಕರರ ಸಂಘಟನೆಗಳೊಂದಿಗೆ ಒಂದು ಸಭೆ ಕರೆದಿದ್ದು ಬಿಟ್ಟರೆ ಮತ್ತೆ ವೇತನ ಹೆಚ್ಚಳದ ಬಗ್ಗೆ ಯಾವುದೇ ಚಕಾರವೆತ್ತುತ್ತಿಲ್ಲ. ಜತೆಗೆ ಒಂದು ಬಾರಿ ಸಭೆಯನ್ನು ಮುಂದೂಡಿ ಏ.15-2025ರಂದು ತಮ್ಮ ನಿವಾಸ ಕಾವೇರಿಯಲ್ಲಿ ನಾಮ್ ಕೇ ವಾಸ್ತೆ ಎಂಬಂತೆ ಒಂದು ಸಭೆ ಕರೆದು ಅಷ್ಟಕ್ಕೆ ಸುಮ್ಮನಾಗಿದ್ದಾರೆ.
ಈ ನಡುವೆ ಕಳೆದ 2020ರ ಜನವರಿ 1ರಿಂದ ಅನ್ವಯವಾಗುವಂತೆ ಆಗಿರುವ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿಯನ್ನು ಈವರೆಗೂ ಕೊಡುವ ಬಗ್ಗೆ ಯಾವುದೇ ಒಂದು ಸ್ಪಷ್ಟ ನಿಲುವನ್ನು ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ತೆಗೆದುಕೊಂಡಿಲ್ಲ. ಇನ್ನು ಮುಷ್ಕರ ಮಾಡುತ್ತೇವೆ ಎಂದು ಸಂಘಟನೆಗಳು ಮುಂದಾದರೆ ಆಗ 38 ತಿಂಗಳ ಹಿಂಬಾಕಿ ಹಾಗೂ ನಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ನೀಡಿರುವ ಭರವಸೆಯಂತೆ ವೇತನ ಮಾಡುತ್ತೇವೆ ಎಂಬ ಹೇಳಿಕೆ ನೀಡುವ ಮೂಲಕ ಸಂಘಟನೆಗಳ ಮುಖಂಡರ ದಾರಿಯನ್ನು ಈ ಸರ್ಕಾರ ತಪ್ಪಿಸುತ್ತಲೇ ಬಂದಿದೆ.
ಇನ್ನು ಈ ಬಗ್ಗೆ ಜಂಟಿ ಕ್ರಿಯಾ ಸಮಿತಿ ಹಾಗೂ ಸಾರಿಗೆ ನೌಕರರ ಒಕ್ಕೂಟ ಬೇರೆ ಬೇರೆಯಾಗಿಯೇ ಈಗಾಗಲೇ ಹತ್ತಾರು ಮನವಿ ಪತ್ರಗಳನ್ನು ಕೊಟ್ಟು ನೌಕರರ ವೇತನ ಹೆಚ್ಚಳ ಸೇರಿ ವಿವಿಧ ಬೇಡಿಕೆಗಳ ಈಡೇರಿಸುವಂತೆ ಒತ್ತಾಯಿಸುತ್ತಲೇ ಬಂದಿವೆ. ಆದರೆ ಸರ್ಕಾರ ಮಾತ್ರ ದಪ್ಪ ಚರ್ಮದಂತೆ ನಡೆದುಕೊಳ್ಳುತ್ತಲೆ ಇದೆ.
ಇದರಿಂದ ನೌಕರರು ಹತಾಶೆಗೊಳಗಾಗುತ್ತಿದ್ದಾರೆ. ಅತ್ತ ಅಧಿಕಾರಿಗಳು ನಮಗೂ ಇದಕ್ಕೂ ಯಾವುದೇ ಸಂಬಂಧ ಇಲ್ಲ ಎಂಬಂತೆ ನಡೆದುಕೊಳ್ಳುತ್ತಿದ್ದಾರೆ. ಇದು ಹೀಗೆಯೇ ಮುಂದುವರಿದರೆ ಈ ಸರ್ಕಾರ ಹೋಗಿ ಮತ್ತೊಂದು ಸರ್ಕಾರ ಬಂದರೂ ಸಾರಿಗೆ ನೌಕರರ ವೇತನ ಹೆಚ್ಚಳವಾಗುವುದು ಅನುಮಾನವೆ (Doubt).
ಹೀಗಾಗಿ ಇನ್ನಾದರೂ ಸರ್ಕಾರಕ್ಕೆ ಚಳಿ ಬಿಡಿಸಲು ಇತ್ತ ಅಧಿಕಾರಿಗಳು ಮತ್ತು ನೌಕರರು ಒಗ್ಗಟ್ಟಿನಿಂದ ಮನವಿ ಸಲ್ಲಿಸಿ ಒಂದು ನಿರ್ದಿಷ್ಟ ಗಡುವು ನೀಡಬೇಕು. ಜತೆಗೆ ಆ ಗಡುವಿನಲ್ಲಿ ಸರ್ಕಾರ ಬೇಡಿಕೆ ಈಡೇರಿಸಿಲ್ಲ ಎಂದರೆ ಮಾರನೆ ದಿನದಿಂದಲೇ ಬಸ್ಗಳನ್ನು ಸಂಪೂರ್ಣ ನಿಲ್ಲಿಸಿ ಡಿಪೋ ಡಿಪೋಗಳಲ್ಲೇ ಧರಣಿ ಕೂರಬೇಕು ಹೀಗೆ ಆದರೆ ಮಾತ್ರ ಸರ್ಕಾರ ಬೇಡಿಕೆ ಈಡೇರಿಸಲು ಮುಂದಾಗುತ್ತದೆ ಇಲ್ಲ ಅಂದರೆ ಇದೇ ದೊಂಬರಾಟ ಮುಂದುವರಿಯುತ್ತದೆ.
ಅಲ್ಲದೆ ಇದರಿಂದ ಅಧಿಕಾರಿಗಳು ಹಾಗೂ ನೌಕರರು ಇನಷ್ಟು ಕಡಿಮೆ ವೇತನ ಪಡೆದು ಪೇಚಾಡಿಕೊಂಡೆ ಡ್ಯೂಟಿ ಮಾಡಬೇಕಾಗುತ್ತದೆ. ಜತೆಗೆ ಅಧಿಕಾರಿಗಳು ನೌಕರರ ಸುಲಿಗೆ ಮಾಡುವ ದಂದೆ ಕೂಡ ಹೆಚ್ಚಾಗಿ ನೌಕರರು ಇನ್ನಷ್ಟು ಸಮಸ್ಯೆಗೆ ಸಿಲುಕಿಕೊಳ್ಳುವಂತಾಗುತ್ತದೆ. ಹೀಗಾಗಿ ಇದೆಲ್ಲಕ್ಕೂ ಒಂದು ಪೂರ್ಣ ವಿರಾಮ ಬೀಳಬೇಕು ಎಂದರೆ ಅಧಿಕಾರಿಗಳು ತಮ್ಮ ಚಳಿ ಬಿಟ್ಟು ಸರ್ಕಾರಕ್ಕೆ ಎಚ್ಚರಿಕೆ ನೀಡುವ ಕೆಲಸ ಮಾಡಬೇಕಿದೆ.
ಇನ್ನು ಇತ್ತ ಸರ್ಕಾರ ಕೂಡ ಈವರೆಗೂ ಅಂದರೆ 2020ರ ಜನವರಿ 1ರಿಂದ ಹೆಚ್ಚಳವಾಗಿರುವ ವೇತನದ 38 ತಿಂಗಳ ಹಿಂಬಾಕಿ ಜತೆಗೆ ಈ ಮೇ ತಿಂಗಳ ವರೆಗೂ ಅಂದರೆ 17 ತಿಂಗಳ 2024 ಜನವರಿ 1ರಿಂದ ಅನ್ವಯವಾಗುವಂತೆ ಹೆಚ್ಚಳವಾಗುವ ವೇತನದ ಹಿಂಬಾಕಿ ಎಲ್ಲವನ್ನು ಮುಂದಿನ ಈ ತಿಂಗಳಿನಿಂದ ಕೊಡಲಾಗುವುದು ಎಂದು ಘೋಷಣೆ ಮಾಡಬೇಕು.
ಅಲ್ಲದೆ ಸರ್ಕಾರ ನೌಕರರಿಗೆ ಸರಿ ಸಮಾನ ವೇತನವನ್ನು ವೇತನ ಆಯೋಗದಂತೆ ತಾವು ಕೊಟ್ಟ ಭರವಸೆಯಂತೆ ಮಾಡಿದ್ದೇವೆ ಎಂದು ಘೋಷಣೆ ಮಾಡಿ ಸಾರಿಗೆ ನೌಕರರ ಪ್ರಮುಖ ಬೇಡಿಕೆಯನ್ನು ಈಡೇರಿಸುವುದಕ್ಕೆ ಸಿಎಂ ಸಿದ್ದರಾಮಯ್ಯ ಮುಂದಾಗಬೇಕು.
ಎಲ್ಲವನ್ನು ಈ ತಿಂಗಳ ಒಳಗೇ ಮಾಡಬೇಕು ಇಲ್ಲದಿದ್ದರೆ ಮೇ ತಿಂಗಳು ಕಳೆದ ಜೂನ್ ಆರಂಭದಲ್ಲೇ ಸಾರಿಗೆ ನೌಕರರ ಮುಷ್ಕರವನ್ನು ಎದುರಿಸಲು ಸಿದ್ಧರಾಗಬೇಕು ಎಂದು ಕೇಂದ್ರ ಕಚೇರಿಯಲ್ಲಿರುವ ಅಧಿಕಾರಿಗಳ ಒಂದು ಸಮೂಹ ಗೌಪ್ಯವಾಗಿ ಮುಷ್ಕರಕ್ಕೆ ಬೆಂಬಲ ನೀಡಲು ಸಮಲೋಚನೆಯಲ್ಲಿ ತೊಡಗಿದೆ ಎಂದು ಬಲ್ಲ ಮೂಲಗಳು ಖಚಿತಪಡಿಸಿವೆ.
ಹೀಗಾಗಿ ಸರ್ಕಾರ ಮತ್ತು ಸಾರಿಗೆ ಆಡಳಿತ ಮಂಡಳಿಯ ನಡೆಯಿಂದ ಬೇಸತ್ತಿರುವ ಬಹುತೇಕ ಎಲ್ಲ ಅಧಿಕಾರಿಗಳು ಸಮಾಲೋಚನೆ ನಡೆಸುತ್ತಿದ್ದು, ನಾವು ಬಸ್ ನಿಲ್ಲಿಸದಿದ್ದರೆ ಸರ್ಕಾರ ನಮ್ಮ ಬೇಡಿಕೆಗಳನ್ನು ಈಡೇರಿಸುವುದಿಲ್ಲ ಎಂಬ ಚರ್ಚೆ ಶುರುವಾಗಿದೆ. ಇದರ ಬಿಸಿ ಜೂನ್ ಆರಂಭದಲ್ಲೇ ಸರ್ಕಾರಕ್ಕೆ ತಟ್ಟಲಿದೆ ಎಂದು ತಿಳಿದು ಬಂದಿದೆ.
Related

You Might Also Like
ಸರ್ಕಾರಿ ಬಸ್ ಗಾಜು ಒಡೆದು, ಚಾಲನಾ ಸಿಬ್ಬಂದಿ ಮೇಲೆ ಬೈಕ್ ಸವಾರನಿಂದ ಹಲ್ಲೆ
ಹುಬ್ಬಳ್ಳಿ: ಗದುಗಿನಿಂದ ಹುಬ್ಬಳ್ಳಿಗೆ ಬರುತ್ತಿದ್ದ ಸರ್ಕಾರಿ ಸಾರಿಗೆ ಬಸನ್ನು ನಗರದ ಗದಗ ರಸ್ತೆ ಬಳಿ ಬೈಕ್ ಸವಾರನೊಬ್ಬ ಅಡ್ಡಗಟ್ಟಿ ಬಸ್ ಗಾಜು ಒಡೆದು ಹಾಕಿರುವುದಲ್ಲದೆ ಚಾಲಕ ಹಾಗೂ...
ಕೊಟ್ಟ ಚಿನ್ನಾಭರಣ- ನಗದನ್ನು ವಾಪಸ್ ಕೊಡಿಸಿ ಎಂದರೆ 2 ಲಕ್ಷ ಲಂಚಕೊಡಿ ಎಂದ ಪೊಲೀಸರು: ಲೋಕಾಯುಕ್ತ ಖೆಡ್ಡಕ್ಕೆ ಬಿದ್ದರು
ಬೆಂಗಳೂರು: ಕೊಟ್ಟಿರುವ ಆಭರಣ ಮತ್ತು ನಗದನ್ನು ವಾಪಸ್ ಕೊಡಿಸಿ ಎಂದು ದೂರು ನೀಡಲು ಪೊಲೀಸ್ ಠಾಣೆಗೆ ಹೋದರೆ ನಮಗೆ 2 ಲಕ್ಷ ರೂ. ಲಂಚ ಕೊಟ್ಟರೆ ವಾಪಸ್...
ಭೀಕರ ಅಪಘಾತ: ಲಾರಿಗೆ ಸರ್ಕಾರಿ ಬಸ್ ಡಿಕ್ಕಿ -ಮೂವರ ಸಾವು, 7ಮಂದಿಗೆ ಗಂಭೀರಗಾಯ
ಯಲ್ಲಾಪುರ: ನಿಂತಿದ್ದ ಲಾರಿಗೆ ಸರ್ಕಾರಿ ಬಸ್ ಹಿಂದಿನಿಂದ ಡಿಕ್ಕಿ ಹೊಡೆದ ಪರಿಣಾಮ ಭೀಕರ ಅಪಘಾತ ಸಂಭವಿಸಿದ್ದು, ಮೂವರು ಮೃತಪಟ್ಟು 7 ಮಂದಿ ಗಂಭೀರವಾಗಿ ಗಾಯಗೊಂಡಿೆಉವ ಘಟನೆ ಉತ್ತರಕನ್ನಡ...
KSRTC: ಯಾವುದೇ ಕಾರಣಕ್ಕೂ ನೌಕರರ ವಾರದ ರಜೆ ರದ್ದುಪಡಿಸಬಾರದು- ಹಿಂದಿನ ವ್ಯವಸ್ಥಾಪಕ ನಿರ್ದೇಶಕರ ಆದೇಶ
ವಾರದ ರಜೆ ರದ್ದು ಪಡಿಸಿದರೆ ಅಂಥ ಅಧಿಕಾರಿಯ ವಿರುದ್ಧ ಮೇಲಧಿಕಾರಿಗಳಿಗೆ ದೂರು ನೀಡುವ ಅಧಿಕಾರಿ ನೌಕರರಿಗೆ ಇದೆ ಬೆಂಗಳೂರು: ನೌಕರರಿಗೆ ವಾರದ ರಜೆಯನ್ನು ನಿಗದಿತ ದಿನದಂದು ನೀಡಬೇಕು...
ಚಂದ್ರಶೇಖರನಾಥ ಶ್ರೀಗಳ ಪೂರ್ವಾಶ್ರಮದ ಹೆಸರು ಕೆ.ಟಿ.ಗೋವಿಂದೇಗೌಡ
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧಿಪತಿ 80 ವರ್ಷದ ಶ್ರೀ ಚಂದ್ರಶೇಖರನಾಥ ಸ್ವಾಮಿಗಳು ಇಂದು ರಾತ್ರಿ 12.01 ರ ಸಮಯದಲ್ಲಿ ಇಹಲೋಕ ತ್ಯಜಿಸುವ ಮೂಲಕ ಶ್ರೀ ಕೃಷ್ಣನ...
ಶ್ರೀ ಕೃಷ್ಣ ಜನ್ಮಾಷ್ಟಮಿಯ ಸಂಭ್ರಮ: ದೇವಕಿ ಸುತನ ವೇಷದಲ್ಲಿ ಮಿಂಚಿದ ಲಿಟಲ್ ಲಿಶಾನ್
ಬೆಂಗಳೂರು: ರಾಜ್ಯಾದ್ಯಂತ ಶ್ರೀ ಕೃಷ್ಣ ಜನ್ಮಾಷ್ಟಮಿಯನ್ನು ಶನಿವಾರ ಅದ್ದೂರಿಯಾಗಿ ಆಚರಿಸುತ್ತಿದ್ದು, ಪುಟಾಣಿಗಳು ಶ್ರೀಕೃಷ್ಣ - ರಾಧೆ ವೇಷ ಧರಿಸಿ ಮಿಂಚುತ್ತಿದ್ದಾರೆ. ಈ ಪೈಕಿ ಮಕ್ಕಳ ಚಂದದ ಫೋಟೋಗಳನ್ನು...
ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಚಂದ್ರಶೇಖರನಾಥ ಸ್ವಾಮೀಜಿ ನಿಧನ
ಬೆಂಗಳೂರು: ವಿಶ್ವ ಒಕ್ಕಲಿಗರ ಮಹಾಸಂಸ್ಥಾನ ಮಠದ ಪೀಠಾಧ್ಯಕ್ಷರಾದ ಶ್ರೀ ಚಂದ್ರಶೇಖರನಾಥ ಸ್ವಾಮೀಜಿ ಅವರು ಇಂದು ತಡರಾತ್ರಿ ನಿಧನಹೊಂದಿದ್ದಾರೆ. ಕೆಂಗೇರಿ ಸಮೀಪ ಶ್ರೀಮಠ ಸ್ಥಾಪನೆ ಮಾಡಿ ಶಿಕ್ಷಣ, ಆಧ್ಯಾತ್ಮಿಕ...
EPS ಪಿಂಚಣಿದಾರರಿಗೆ ಕನಿಷ್ಠ ಪಿಂಚಣಿ ಜಾರಿಗೆ ಸಂಸತ್ತಿನಲ್ಲಿ ಒತ್ತಾಯಿಸಲು ಆಗ್ರಹಿಸಿ ಸಂಸದರ ಮನೆ ಮುಂದೆ ಧರಣಿಗೆ ನಿರ್ಧಾರ
ಮೈಸೂರು: ಇಪಿಎಸ್ ನಿವೃತ್ತ ನೌಕರರಿಗೆ ಕನಿಷ್ಠ ಪಿಂಚಣಿ 7500 ರೂ.+ ಇತರೆ ಸೌಲಭ್ಯಗಳನ್ನು ಜಾರಿ ಮಾಡುವ ಸಂಬಂಧ ಲೋಕಸಭೆ ಅಧಿವೇಶನದಲ್ಲಿ ಗಮನ ಸೆಳೆಯುವಂತೆ ಮೈಸೂರು ಹಾಗೂ ಚಾಮರಾಜನಗರ...
ರೇಣುಕಾಸ್ವಾಮಿ ಕೊಲೆ ಪ್ರಕರಣ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್: ಮತ್ತೆ ಜೈಲಿಗೆ ನಟ ದರ್ಶನ್ ಅಂಡ್ ಟೀಂ
ನ್ಯೂಡೆಲ್ಲಿ: ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣದಲ್ಲಿ ನಟ ದರ್ಶನ್, ಪವಿತ್ರಾ ಗೌಡ ಸೇರಿದಂತೆ ಎಲ್ಲ ಆರೋಪಗಳಿಗೆ ಕರ್ನಾಟಕ ಹೈಕೋರ್ಟ್ ನೀಡಿದ್ದ ಜಾಮೀನನ್ನು ಸುಪ್ರೀಂ ಕೋರ್ಟ್ ರದ್ದುಗೊಳಿಸಿದೆ. ಜಾಮೀನು...