ಬೆಂಗಳೂರು: ಸಮಸ್ತ ನಾಲ್ಕೂ ಸಾರಿಗೆ ನಿಗಮಗಳ ಅಧಿಕಾರಿಗಳು ಮತ್ತು ನೌಕರರು ನಾವು ಬೇರೆಬೇರೆ ಎಂದು ಭೇದಭಾವ ಮಾಡದೆ ಒಗ್ಗಟ್ಟಿನಿಂದ ದೃಢನಿರ್ಧಾರ ತೆಗೆದುಕೊಳ್ಳುವತ್ತ ಮಹತ್ವದ ಹೆಜ್ಜೆ ಇಟ್ಟರೆ ಸರ್ಕಾರಕ್ಕೆ ಈಗಾಗಲೇ ಇಟ್ಟಿರುವ ಬೇಡಿಕೆಗಳನ್ನು ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ!
ಈ ಹಿಂದಿನಿಂದ ಅಂದರೆ ಕಳೆದ 4 ದಶಕಗಳಿಂದಲೂ ಈವರೆಗೂ ಅಧಿಕಾರಿ ವರ್ಗ ನಮಗೆ ವೇತನ ಹೆಚ್ಚಳ ಮಾಡಿ ಎಂದು ಸರ್ಕಾರಕ್ಕಾಗಲಿ ಅಥವಾ ಆಡಳಿತ ಮಂಡಳಿಗಳಿಗಾಗಲಿ ಮನವಿ ಸಲ್ಲಿಸಿರಲಿಲ್ಲ. ಹೀಗಾಗಿ ಸಾರಿಗೆ ಚಾಲನಾ ಸಿಬ್ಬಂದಿ ಈ ವೇತನ ಹೆಚ್ಚಳಕ್ಕಾಗಿ ಪ್ರತಿ 4ವರ್ಷಕ್ಕೊಮ್ಮೆ 3-4ದಿನಗಳು ಮುಷ್ಕರ ಮಾಡಿದ ಬಳಿಕ ಒಂದಷ್ಟು ವೇತನ ಹೆಚ್ಚಳವಾಗುತ್ತಿದೆ.
ಈ ವೇತನ ಹೆಚ್ಚಳ ಮಾಡುವುದಕ್ಕೂ ಮೊದಲು ಧರಣಿ ನಿರತ ನೂರಾರು ನೌಕರರನ್ನು ಅದರಲ್ಲೂ ಮುಷ್ಕರದ ಮುಂದಾಳತ್ವ ವಹಿಸಿಕೊಂಡವರನ್ನು ಅಮಾನತು, ವಜಾ, ವರ್ಗಾವಣೆ ಮಾಡಿ ಅವರಿಗೆ ನೋವು ಕೊಟ್ಟು, ಅವರ ವೇತನಕ್ಕೆ ಮತ್ತು ಮುಂಬಡ್ತಿಯನ್ನು ಕಸಿದುಕೊಂಡು ಮತ್ತೆ ಡ್ಯೂಟಿ ಕೊಡುವ ಚಾಳಿ ಇದೆ.
ಹೀಗಾಗಿ ಈ ರೀತಿ ವೇತನ ಪರಿಷ್ಕಣೆಗಾಗಿ ನೂರಾರು, ಸಾವಿರಾರು ನೌಕರರು ಬೀದಿಗೆ ಬರುವುದು ಬೇಡ ಎಂದು ಕಳೆದ 2021ರ ಏಪ್ರಿಲ್ನಲ್ಲಿ ನಿರಂತವಾಗಿ 14ದಿನಗಳ ಕಾಲ ಮುಷ್ಕರ ಭಾರಿ ದೊಡ್ಡಮಟ್ಟದಲ್ಲೇ ನಡೆಯಿತು. ಆ ವೇಳೆ ಕೆಲ ಸಂಘಟನೆಗಳ ಮುಖಂಡರೆ ಮುಷ್ಕರ ನಿರತ ನೌಕರರನ್ನು ಅಮಾನತು, ವಜಾ, ವರ್ಗಾವಣೆ ಜತೆಗೆ ಪೊಲೀಸ್ ಕೇಸ್ಗಳನ್ನು ಹಾಕಿಸಿ ಒಂದು ರೀತಿ ನೌಕರರ ವಿರುದ್ಧವೇ ಸೇಡು ತೀರಿಸಿಕೊಳ್ಳುವಂತೆ ವರ್ತಿಸಿದರು.
ಆ ವೇಳೆ ಇದೇ ನಾಲ್ಕೂ ನಿಗಮಗಳ ಅಧಿಕಾರಿಗಳು ಕೂಡ ತಮಗೆ ವೇತನ ಹೆಚ್ಚಳವಾಗುತ್ತಿರುವುದೇ ಇವರ ಹೋರಾಟದಿಂದ ಎಂದು ತಿಳಿದಿದ್ದರೂ ಆ ಕೆಲ ಮುಖಂಡರ ಮಾತನ್ನು ಕೇಳಿ ನೌಕರರನ್ನು ಬಲಿಪಶು ಮಾಡಿದರು. ಆ ಬಳಿಕ ಅಂದರೆ ಈಗ ಅಧಿಕಾರಿಗಳಿಗೂ ತಾವು ಮಾಡಿದ ತಪ್ಪಿನ ಅರಿವಾದಂತೆ ಕಾಣುತ್ತಿದೆ. ಹೀಗಾಗಿ ಪ್ರಸ್ತುತ ನಾವು ಅಂದರೆ ಅಧಿಕಾರಿಗಳು- ನೌಕರರು ಬೇರೆಬೇರೆ ಅಲ್ಲ ನಾವೆಲ್ಲ ಸಂಸ್ಥೆಯ ಸಹೋದ್ಯೋಗಿಗಳು ಎಂದು ಅರಿತಿದ್ದಾರೆ ಎನ್ನಬಹುದೇನೋ ಗೊತ್ತಿಲ್ಲ.
ಆದರೆ, ಈವರೆಗೂ ವೇತನ ಹೆಚ್ಚಳ ಸಂಬಂಧ ಯಾವುದೇ ಮನವಿಯನ್ನು ಕೊಡದಿದ್ದವರು ಈಗ ಮನವಿ ಪತ್ರವನ್ನು ಸಂಬಂಧಪಟ್ಟ ಸಾರಿಗೆ ಸಚಿವರಿಗೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲ ನಮಗೂ ಸರ್ಕಾರಿ ನೌಕರರ ಸರಿ ಸಮಾನ ವೇತನ ಅಂದರೆ 7ನೇ ವೇತನ ಆಯೋಗವನ್ನು ಅಳವಡಿಸಿ ಎಂದು ಒತ್ತಾಯ ಮಾಡುತ್ತಿದ್ದಾರೆ.
ಇದು ಸಾರಿಗೆ ನಿಗಮಗಳಲ್ಲಿ ಒಂದು ಹೊಸ ಅಧ್ಯಾಯವನ್ನೇ ತೆರೆದಂತಾಗಿದ್ದು, ಈವರೆಗೂ ನೌಕರರು ಮತ್ತು ನಾವು ಬೇರೆಬೇರೆ ಎಂದುಕೊಂಡಿದ್ದ ಅಧಿಕಾರಿಗಳು ಕೂಡ ನಾವೆಲ್ಲರೂ ಒಂದೆ ಎಂದು ಹೇಳುತ್ತಿದ್ದಾರೆ. ಅಷ್ಟೇ ಅಲ್ಲ ಅಧಿಕಾರಿಗಳನ್ನು ಬೇರೆ ರೀತಿ ನೋಡುತ್ತಿದ್ದ ನೌಕರರು ಕೂಡ ಇಂದು ಅವರು ನಮ್ಮ ಮೇಲಧಿಕಾರಿಗಳು ಅವರು ನಮ್ಮವರೆ ಎನ್ನುತ್ತಿದ್ದಾರೆ.
ಇನ್ನು ಈ ಎಲ್ಲದರ ನಡುವೆ ನೌಕರರು ಮತ್ತು ಅಧಿಕಾರಿಗಳ ಮಧ್ಯೆಯೇ ಭಾರಿ ಅಂದರೆ ದೊಡ್ಡ ಕಂದಕವನ್ನೇ ಸೃಷ್ಟಿಸಿ ಒಡೆದಾಳುತ್ತಿದ್ದ ಕೆಲ ಸಂಘಟನೆಗಳ ಮುಖಂಡರ ಮುಖವಾಡ ಈಗ ಕಳಚಿದ್ದು ಸಮಸ್ತ ಸಾರಿಗೆಯ 1.25 ಲಕ್ಷ ನೌಕರರು ಕಾಲಕಾಲಕ್ಕೆ ತಕ್ಕ ಸೌಲಭ್ಯಗಳನ್ನು ಪಡೆಯುವುದಕ್ಕೆ ಒಗ್ಗಟ್ಟಾಗಿದ್ದಾರೆ.
ಇನ್ನು ಈಗಲೂ ಸಾರಿಗೆಯ ಅಧಿಕಾರಿಗಳು- ನೌಕರರ ಸಲಹೆ ಕೇಳದೆ ಕೆಲ ಸಂಘಟನೆಗಳ ಮುಖಂಡರು ವೇತನ ಹೆಚ್ಚಳದ ಬೇಡಿಕೆಯನ್ನು ಸರ್ಕಾರ ಮುಂದೆ ಇಡುತ್ತಿದ್ದಾರೆ. ಅಲ್ಲದೆ ಒಂದು ರೀತಿ ಸರ್ವಾಧಿಕಾರಿ ಧೋರಣೆಯಲ್ಲಿ ನೌಕರರ ದೂರವಿಟ್ಟು ನಿರ್ಧಾರ ತೆಗೆದುಕೊಂಡು ಬಳಿಕ ನೌಕರರ ಬೆಂಬಲವಿದೆ ಎಂದು ಮಾಧ್ಯಮಗಳ ಮುಂದೆ ಹೇಳಿಕೆ ಕೊಡುತ್ತಿದ್ದಾರೆ.
ಆದರೆ ಶೇ.99ರಷ್ಟು ನೌಕರರು ನೂರಕ್ಕೆ ನೂರರಷ್ಟು ಅಧಿಕಾರಿಗಳಿಗೆ ನಾಲ್ಕೂ ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್ ಬೇಡ ನಮಗೆ ಸರಿ ಸಮಾನ ವೇತನ ಆಗಬೇಕು ಆ ನಿಟ್ಟಿನಲ್ಲಿ ನಮ್ಮ ಪರವಾಗಿ ಹೋರಾಟ ಮಾಡುವುದಿದ್ದರೆ ಬನ್ನಿ ಇಲ್ಲ ಸುಮ್ಮನಿರಿ ಎಂದು ಕಡ್ಡಿ ಮುರಿದಂತೆ ಹೇಳುತ್ತಿದ್ದಾರೆ.
ಈ ಎಲ್ಲದರ ನಡುವೆ ನಾವು ಯಾವ ಸಂಘಟನೆಗಳನ್ನು ನೆಚ್ಚಿಕೊಂಡರು ಪ್ರಯೋಜನವಿಲ್ಲ ಅಧಿಕಾರಿಗಳು-ನೌಕರರು ಒಗ್ಗಟ್ಟಿನಿಂದ ನಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳೋಣ ಎಂದು ಈಗಾಗಲೇ ನಿರ್ಧಾರಕ್ಕೆ ಬಂದಿದ್ದು ಈ ಸಂಬಂಧ ಹಲವಾರು ಸುತ್ತಿನ ಮಾತುಕತೆಗಳು ಆಗಿವೆ. ಅದರಂತೆ ಸರ್ಕಾರ ಕೂಡ ನೂರಕ್ಕೆ ಇನ್ನೂರರಷ್ಟು ಅಧಿಕಾರಿಗಳು -ನೌಕರರ ಬೇಡಿಕೆ ಈಡೇರಿಸುವತ್ತ ಕ್ರಮ ತೆಗೆದುಕೊಳ್ಳಲಿದೆ ಎಂದು ಹೆಸರೇಳಲಿಚ್ಛಿಸದ ಅಧಿಕಾರೊಯೊಬ್ಬರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆದರೆ, ಮತ್ತೊಂದೆಡೆ ನಾವು ಬಸ್ ನಿಲ್ಲಿಸಿ ಮುಷ್ಕರ ಮಾಡುವುದಿಲ್ಲ ನಮ್ಮದೇನಿದ್ದರೂ ಶಾಂತಿಯುತ ಧರಣಿಗೆ ಬೆಂಬಲ ಎಂಬ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆಗಳನ್ನು ಅಧಿಕಾರಿಗಳ ವರ್ಗ ಮುಂದಿಡುತ್ತಿದೆ. ಈಎಲ್ಲವನ್ನು ಗಮನಿಸುತ್ತಿರುವ ಸರ್ಕಾರ ನಿನ್ನೆ ಅಂದರೆ ಏ.5ರಂದು ನಡೆಯಬೇಕಿದ್ದ ಸಿಎಂ ಅಧ್ಯಕ್ಷತೆಯ ಸಭೆಯನ್ನೇ ಮುಂದೂಡಿದ್ದು ಭಾರಿ ಅಚ್ಚರಿಗೂ ಕಾರಣವಾಗಿದೆ. ಹೀಗಾಗಿ ಇನ್ನಾದರೂ ಅಧಿಕಾರಿ ವರ್ಗ ಎಚ್ಚೆತ್ತುಕೊಳ್ಳಬೇಕು ಇಲ್ಲದಿದ್ದರೆ ಉಳಿಗಾವಿಲ್ಲ…!
Related

You Might Also Like
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...