ಬೆಂಗಳೂರು: ಸಮಸ್ತ ನಾಲ್ಕೂ ಸಾರಿಗೆ ನಿಗಮಗಳ ಅಧಿಕಾರಿಗಳು ಮತ್ತು ನೌಕರರು ನಾವು ಬೇರೆಬೇರೆ ಎಂದು ಭೇದಭಾವ ಮಾಡದೆ ಒಗ್ಗಟ್ಟಿನಿಂದ ದೃಢನಿರ್ಧಾರ ತೆಗೆದುಕೊಳ್ಳುವತ್ತ ಮಹತ್ವದ ಹೆಜ್ಜೆ ಇಟ್ಟರೆ ಸರ್ಕಾರಕ್ಕೆ ಈಗಾಗಲೇ ಇಟ್ಟಿರುವ ಬೇಡಿಕೆಗಳನ್ನು ಈಡೇರಿಸಿಕೊಳ್ಳುವುದು ಅಸಾಧ್ಯವೆ ಅಲ್ಲ!
ಈ ಹಿಂದಿನಿಂದ ಅಂದರೆ ಕಳೆದ 4 ದಶಕಗಳಿಂದಲೂ ಈವರೆಗೂ ಅಧಿಕಾರಿ ವರ್ಗ ನಮಗೆ ವೇತನ ಹೆಚ್ಚಳ ಮಾಡಿ ಎಂದು ಸರ್ಕಾರಕ್ಕಾಗಲಿ ಅಥವಾ ಆಡಳಿತ ಮಂಡಳಿಗಳಿಗಾಗಲಿ ಮನವಿ ಸಲ್ಲಿಸಿರಲಿಲ್ಲ. ಹೀಗಾಗಿ ಸಾರಿಗೆ ಚಾಲನಾ ಸಿಬ್ಬಂದಿ ಈ ವೇತನ ಹೆಚ್ಚಳಕ್ಕಾಗಿ ಪ್ರತಿ 4ವರ್ಷಕ್ಕೊಮ್ಮೆ 3-4ದಿನಗಳು ಮುಷ್ಕರ ಮಾಡಿದ ಬಳಿಕ ಒಂದಷ್ಟು ವೇತನ ಹೆಚ್ಚಳವಾಗುತ್ತಿದೆ.
ಈ ವೇತನ ಹೆಚ್ಚಳ ಮಾಡುವುದಕ್ಕೂ ಮೊದಲು ಧರಣಿ ನಿರತ ನೂರಾರು ನೌಕರರನ್ನು ಅದರಲ್ಲೂ ಮುಷ್ಕರದ ಮುಂದಾಳತ್ವ ವಹಿಸಿಕೊಂಡವರನ್ನು ಅಮಾನತು, ವಜಾ, ವರ್ಗಾವಣೆ ಮಾಡಿ ಅವರಿಗೆ ನೋವು ಕೊಟ್ಟು, ಅವರ ವೇತನಕ್ಕೆ ಮತ್ತು ಮುಂಬಡ್ತಿಯನ್ನು ಕಸಿದುಕೊಂಡು ಮತ್ತೆ ಡ್ಯೂಟಿ ಕೊಡುವ ಚಾಳಿ ಇದೆ.
ಹೀಗಾಗಿ ಈ ರೀತಿ ವೇತನ ಪರಿಷ್ಕಣೆಗಾಗಿ ನೂರಾರು, ಸಾವಿರಾರು ನೌಕರರು ಬೀದಿಗೆ ಬರುವುದು ಬೇಡ ಎಂದು ಕಳೆದ 2021ರ ಏಪ್ರಿಲ್ನಲ್ಲಿ ನಿರಂತವಾಗಿ 14ದಿನಗಳ ಕಾಲ ಮುಷ್ಕರ ಭಾರಿ ದೊಡ್ಡಮಟ್ಟದಲ್ಲೇ ನಡೆಯಿತು. ಆ ವೇಳೆ ಕೆಲ ಸಂಘಟನೆಗಳ ಮುಖಂಡರೆ ಮುಷ್ಕರ ನಿರತ ನೌಕರರನ್ನು ಅಮಾನತು, ವಜಾ, ವರ್ಗಾವಣೆ ಜತೆಗೆ ಪೊಲೀಸ್ ಕೇಸ್ಗಳನ್ನು ಹಾಕಿಸಿ ಒಂದು ರೀತಿ ನೌಕರರ ವಿರುದ್ಧವೇ ಸೇಡು ತೀರಿಸಿಕೊಳ್ಳುವಂತೆ ವರ್ತಿಸಿದರು.
ಆ ವೇಳೆ ಇದೇ ನಾಲ್ಕೂ ನಿಗಮಗಳ ಅಧಿಕಾರಿಗಳು ಕೂಡ ತಮಗೆ ವೇತನ ಹೆಚ್ಚಳವಾಗುತ್ತಿರುವುದೇ ಇವರ ಹೋರಾಟದಿಂದ ಎಂದು ತಿಳಿದಿದ್ದರೂ ಆ ಕೆಲ ಮುಖಂಡರ ಮಾತನ್ನು ಕೇಳಿ ನೌಕರರನ್ನು ಬಲಿಪಶು ಮಾಡಿದರು. ಆ ಬಳಿಕ ಅಂದರೆ ಈಗ ಅಧಿಕಾರಿಗಳಿಗೂ ತಾವು ಮಾಡಿದ ತಪ್ಪಿನ ಅರಿವಾದಂತೆ ಕಾಣುತ್ತಿದೆ. ಹೀಗಾಗಿ ಪ್ರಸ್ತುತ ನಾವು ಅಂದರೆ ಅಧಿಕಾರಿಗಳು- ನೌಕರರು ಬೇರೆಬೇರೆ ಅಲ್ಲ ನಾವೆಲ್ಲ ಸಂಸ್ಥೆಯ ಸಹೋದ್ಯೋಗಿಗಳು ಎಂದು ಅರಿತಿದ್ದಾರೆ ಎನ್ನಬಹುದೇನೋ ಗೊತ್ತಿಲ್ಲ.
ಆದರೆ, ಈವರೆಗೂ ವೇತನ ಹೆಚ್ಚಳ ಸಂಬಂಧ ಯಾವುದೇ ಮನವಿಯನ್ನು ಕೊಡದಿದ್ದವರು ಈಗ ಮನವಿ ಪತ್ರವನ್ನು ಸಂಬಂಧಪಟ್ಟ ಸಾರಿಗೆ ಸಚಿವರಿಗೆ ಸಲ್ಲಿಸಿದ್ದಾರೆ. ಅಷ್ಟೇ ಅಲ್ಲ ನಮಗೂ ಸರ್ಕಾರಿ ನೌಕರರ ಸರಿ ಸಮಾನ ವೇತನ ಅಂದರೆ 7ನೇ ವೇತನ ಆಯೋಗವನ್ನು ಅಳವಡಿಸಿ ಎಂದು ಒತ್ತಾಯ ಮಾಡುತ್ತಿದ್ದಾರೆ.
ಇದು ಸಾರಿಗೆ ನಿಗಮಗಳಲ್ಲಿ ಒಂದು ಹೊಸ ಅಧ್ಯಾಯವನ್ನೇ ತೆರೆದಂತಾಗಿದ್ದು, ಈವರೆಗೂ ನೌಕರರು ಮತ್ತು ನಾವು ಬೇರೆಬೇರೆ ಎಂದುಕೊಂಡಿದ್ದ ಅಧಿಕಾರಿಗಳು ಕೂಡ ನಾವೆಲ್ಲರೂ ಒಂದೆ ಎಂದು ಹೇಳುತ್ತಿದ್ದಾರೆ. ಅಷ್ಟೇ ಅಲ್ಲ ಅಧಿಕಾರಿಗಳನ್ನು ಬೇರೆ ರೀತಿ ನೋಡುತ್ತಿದ್ದ ನೌಕರರು ಕೂಡ ಇಂದು ಅವರು ನಮ್ಮ ಮೇಲಧಿಕಾರಿಗಳು ಅವರು ನಮ್ಮವರೆ ಎನ್ನುತ್ತಿದ್ದಾರೆ.
ಇನ್ನು ಈ ಎಲ್ಲದರ ನಡುವೆ ನೌಕರರು ಮತ್ತು ಅಧಿಕಾರಿಗಳ ಮಧ್ಯೆಯೇ ಭಾರಿ ಅಂದರೆ ದೊಡ್ಡ ಕಂದಕವನ್ನೇ ಸೃಷ್ಟಿಸಿ ಒಡೆದಾಳುತ್ತಿದ್ದ ಕೆಲ ಸಂಘಟನೆಗಳ ಮುಖಂಡರ ಮುಖವಾಡ ಈಗ ಕಳಚಿದ್ದು ಸಮಸ್ತ ಸಾರಿಗೆಯ 1.25 ಲಕ್ಷ ನೌಕರರು ಕಾಲಕಾಲಕ್ಕೆ ತಕ್ಕ ಸೌಲಭ್ಯಗಳನ್ನು ಪಡೆಯುವುದಕ್ಕೆ ಒಗ್ಗಟ್ಟಾಗಿದ್ದಾರೆ.
ಇನ್ನು ಈಗಲೂ ಸಾರಿಗೆಯ ಅಧಿಕಾರಿಗಳು- ನೌಕರರ ಸಲಹೆ ಕೇಳದೆ ಕೆಲ ಸಂಘಟನೆಗಳ ಮುಖಂಡರು ವೇತನ ಹೆಚ್ಚಳದ ಬೇಡಿಕೆಯನ್ನು ಸರ್ಕಾರ ಮುಂದೆ ಇಡುತ್ತಿದ್ದಾರೆ. ಅಲ್ಲದೆ ಒಂದು ರೀತಿ ಸರ್ವಾಧಿಕಾರಿ ಧೋರಣೆಯಲ್ಲಿ ನೌಕರರ ದೂರವಿಟ್ಟು ನಿರ್ಧಾರ ತೆಗೆದುಕೊಂಡು ಬಳಿಕ ನೌಕರರ ಬೆಂಬಲವಿದೆ ಎಂದು ಮಾಧ್ಯಮಗಳ ಮುಂದೆ ಹೇಳಿಕೆ ಕೊಡುತ್ತಿದ್ದಾರೆ.
ಆದರೆ ಶೇ.99ರಷ್ಟು ನೌಕರರು ನೂರಕ್ಕೆ ನೂರರಷ್ಟು ಅಧಿಕಾರಿಗಳಿಗೆ ನಾಲ್ಕೂ ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್ ಬೇಡ ನಮಗೆ ಸರಿ ಸಮಾನ ವೇತನ ಆಗಬೇಕು ಆ ನಿಟ್ಟಿನಲ್ಲಿ ನಮ್ಮ ಪರವಾಗಿ ಹೋರಾಟ ಮಾಡುವುದಿದ್ದರೆ ಬನ್ನಿ ಇಲ್ಲ ಸುಮ್ಮನಿರಿ ಎಂದು ಕಡ್ಡಿ ಮುರಿದಂತೆ ಹೇಳುತ್ತಿದ್ದಾರೆ.
ಈ ಎಲ್ಲದರ ನಡುವೆ ನಾವು ಯಾವ ಸಂಘಟನೆಗಳನ್ನು ನೆಚ್ಚಿಕೊಂಡರು ಪ್ರಯೋಜನವಿಲ್ಲ ಅಧಿಕಾರಿಗಳು-ನೌಕರರು ಒಗ್ಗಟ್ಟಿನಿಂದ ನಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳೋಣ ಎಂದು ಈಗಾಗಲೇ ನಿರ್ಧಾರಕ್ಕೆ ಬಂದಿದ್ದು ಈ ಸಂಬಂಧ ಹಲವಾರು ಸುತ್ತಿನ ಮಾತುಕತೆಗಳು ಆಗಿವೆ. ಅದರಂತೆ ಸರ್ಕಾರ ಕೂಡ ನೂರಕ್ಕೆ ಇನ್ನೂರರಷ್ಟು ಅಧಿಕಾರಿಗಳು -ನೌಕರರ ಬೇಡಿಕೆ ಈಡೇರಿಸುವತ್ತ ಕ್ರಮ ತೆಗೆದುಕೊಳ್ಳಲಿದೆ ಎಂದು ಹೆಸರೇಳಲಿಚ್ಛಿಸದ ಅಧಿಕಾರೊಯೊಬ್ಬರು ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಆದರೆ, ಮತ್ತೊಂದೆಡೆ ನಾವು ಬಸ್ ನಿಲ್ಲಿಸಿ ಮುಷ್ಕರ ಮಾಡುವುದಿಲ್ಲ ನಮ್ಮದೇನಿದ್ದರೂ ಶಾಂತಿಯುತ ಧರಣಿಗೆ ಬೆಂಬಲ ಎಂಬ ಅಡ್ಡಗೋಡೆ ಮೇಲೆ ದೀಪವಿಟ್ಟಂತೆ ಹೇಳಿಕೆಗಳನ್ನು ಅಧಿಕಾರಿಗಳ ವರ್ಗ ಮುಂದಿಡುತ್ತಿದೆ. ಈಎಲ್ಲವನ್ನು ಗಮನಿಸುತ್ತಿರುವ ಸರ್ಕಾರ ನಿನ್ನೆ ಅಂದರೆ ಏ.5ರಂದು ನಡೆಯಬೇಕಿದ್ದ ಸಿಎಂ ಅಧ್ಯಕ್ಷತೆಯ ಸಭೆಯನ್ನೇ ಮುಂದೂಡಿದ್ದು ಭಾರಿ ಅಚ್ಚರಿಗೂ ಕಾರಣವಾಗಿದೆ. ಹೀಗಾಗಿ ಇನ್ನಾದರೂ ಅಧಿಕಾರಿ ವರ್ಗ ಎಚ್ಚೆತ್ತುಕೊಳ್ಳಬೇಕು ಇಲ್ಲದಿದ್ದರೆ ಉಳಿಗಾವಿಲ್ಲ…!
Related

You Might Also Like
BMTC: ಚಾಲಕ ಹುದ್ದೆಯಿಂದ ಚಾಲಕ ಕಂ ನಿರ್ವಾಹಕ ಹುದ್ದೆಗೆ ನಿಯೋಜಿಸಿದ್ದ ಆದೇಶ ಹಿಂಪಡೆಯಲು ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ನಿಯಮ 17/1 ರ ಅಡಿಯಲ್ಲಿ ಚಾಲಕ ಹುದ್ದೆಯಿಂದ ಚಾಲಕ-ಕಂ-ನಿರ್ವಾಹಕ ಹುದ್ದೆಗೆ ನಿಯೋಜಿಸಿರುವ ಆದೇಶಗಳನ್ನು ಜುಲೈ 1ರಿಂದಲೇ ಹಂತ ಹಂತವಾಗಿ ಹಿಂಪಡೆದು...
ಕಾವೇರಿ ತಾಯಿಗೆ ಪೂಜೆ ಸಲ್ಲಿಸಿ, ಬಾಗಿನ ಅರ್ಪಿಸಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮಂಡ್ಯ: ಸೋತ ಗಿರಾಕಿಗಳು ಸರ್ಕಾರ ಬಿದ್ದೋಗತ್ತೆ ಎಂದು ಸುಳ್ಳು ಹೇಳಿಕೊಂಡು ತಿರುಗುತ್ತಿದ್ದಾರೆ. ನನ್ನ ಮತ್ತು ಡಿಸಿಎಂ ಡಿ.ಕೆ.ಶಿವಕುಮಾರ್ ಅವರ ನಡುವಿನ ವಿಶ್ವಾಸ ಸರಿ ಇಲ್ಲ ಎಂದು ಬುರುಡೆ...
ವನಮಹೋತ್ಸವದಲ್ಲಿ ತ್ರಿಚಕ್ರ ವಾಹನ ವಿತರಣೆ, ಸ್ವಚ್ಛತಾ ಕಾರ್ಯಕ್ರಮಕ್ಕೆ ಚಾಲನೆ
ಬೆಂಗಳೂರು ಗ್ರಾಮಾಂತ: ವಿಶ್ವ ಪರಿಸರ ದಿನಾಚರಣೆ ಅಂಗವಾಗಿ ವನಮಹೋತ್ಸವ ಕಾರ್ಯಕ್ರಮದಲ್ಲಿ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಣೆ ಹಾಗೂ ಸ್ವಚ್ಛತಾ ಕೆಲಸಕ್ಕಾಗಿ ನೂತನ ಆಟೋ ವಾಹನ ಮತ್ತು ಹಿಟಾಚಿ...
9 ಎಕರೆಯಲ್ಲಿ ಕೆಂಪೇಗೌಡರ ವಸ್ತು ಸಂಗ್ರಹಾಲಯ ನಿರ್ಮಾಣ: ಉಸ್ತುವಾರಿ ಸಚಿವ ಕೆಎಚ್ಎಂ
ನಾಡಪ್ರಭು ಕೆಂಪೇಗೌಡರ 516 ನೇ ಜಯಂತ್ಯೋತ್ಸವ ಬೆಂಗಳೂರು: ನಾಡಪ್ರಭು ಕೆಂಪೇಗೌಡರ ಮೂಲ ಸ್ಥಳವಾದ ಆವತಿ ಗ್ರಾಮದ ಬಳಿ 9.10 ಎಕರೆ ಪ್ರದೇಶದಲ್ಲಿ ನಾಡಪ್ರಭು ಕೆಂಪೇಗೌಡರ ಜೀವನ ಚರಿತ್ರೆ,...
ಲೋಕಾಯುಕ್ತರು ರಾಜಿನಾಮೆ ನೀಡಬೇಕು, ಅಬಕಾರಿ ಸಚಿವರ ವಜಾಗೊಳಿಸಲು ಆಗ್ರಹಿಸಿ KRS ಪಕ್ಷದಿಂದ ಬೃಹತ್ ಪ್ರತಿಭಟನೆ
ಬೆಂಗಳೂರು: ಲೋಕಾಯುಕ್ತರು ರಾಜಿನಾಮೆ ನೀಡಲಿ, ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ ಅವರನ್ನು ವಜಾಗೊಳಿಸಿ, ನ್ಯಾಯಾಂಗದ ಉಸ್ತುವಾರಿಯಲ್ಲಿ ಸಿಬಿಐ ತನಿಖೆಗೆ ವಹಿಸಿ ಎಂದು ಆಗ್ರಹಿಸಿ ಕರ್ನಾಟಕ ರಾಷ್ಟ್ರ ಸಮಿತಿ ಪಕ್ಷದ...
ಸರ್ಕಾರ ಅತೀ ಶೀಘ್ರದಲ್ಲೇ ಸಾರಿಗೆ ನೌಕರರಿಗೆ ಕೊಟ್ಟ ಭರವಸೆ ಈಡೇರಿಸಲಿದೆ: ಡಿಸಿಎಂ ಡಿಕೆಶಿ
ಬೆಂಗಳೂರು: ಚುನಾವಣಾ ಪೂರ್ವ ಪ್ರಣಾಳಿಕೆ ಭರವಸೆಯಂತೆ ಸಾರಿಗೆ ನೌಕರರಿಗೆ ಸರ್ಕಾರಿ ನೌಕರರಂತೆ ಸಮಾನ ವೇತನ ನೀಡುವಂತೆ ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಅವರಿಗೆ ಸಾರಿಗೆ ನೌಕರರ ಕೂಟದ ರಾಜ್ಯಾಧ್ಯಕ್ಷ...
KKRTC: ತನ್ನದಲ್ಲದ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಕೇಳಿದ ಮಹಿಳೆ- ಪ್ರಶ್ನಿಸಿದ್ದಕ್ಕೆ ಪ್ರಜ್ಞೆ ತಪ್ಪುವವರೆಗೂ ಕಂಡಕ್ಟರ್ ಮೇಲೆ ಹಲ್ಲೆ ಮಾಡಿದ ಸಂಬಂಧಿಕರು
ಕಲಬುರಗಿ: ಬೇರೆಯವರ ಆಧಾರ್ ಕಾರ್ಡ್ ತೋರಿಸಿ ಟಿಕೆಟ್ ಪಡೆದುಕೊಳ್ಳಲು ಮುಂದಾದ ಮಹಿಳೆಗೆ ಇದು ನಿಮ್ಮ ಆಧಾರ ಕಾರ್ಡ್ ಅಲ್ಲ ನಿಮ್ಮದನ್ನು ಕೊಡಿ ಎಂದು ನಿರ್ವಾಹಕರು ಹೇಳಿದ್ದಕ್ಕೆ ಮಹಿಳೆ...
KSRTC: ಟೈರ್ ಬ್ಲಾಸ್ಟಾಗಿ ಮನೆಗೆ ನುಗ್ಗಿದ ಬಸ್-10ಕ್ಕೂ ಹೆಚ್ಚು ಪ್ರಯಾಣಿಕರಿಗೆ ಗಾಯ
ತಿಪಟೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಟೈರ್ ಬ್ಲಾಸ್ಟ್ ಆಗಿ ಚಾಲಕನ ನಿಯಂತ್ರಣ ತಪ್ಪಿದ ಪರಿಣಾಮ ಮನೆಗೆ ಬಸ್ ನುಗ್ಗಿದ ಘಟನೆ ತಾಲೂಕಿನ ಸಿದ್ದಾಪುರ...
ಕ್ರೂರವಾಗಿ ಮಹಿಳೆ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟ ಪಾಪಿಗಳು ಎಸ್ಕೇಪ್
ಬೆಂಗಳೂರು: ಅತ್ಯಾಚಾರ ಮಾಡಿದ ಬಳಿಕ ಮಹಿಳೆಯನ್ನು ಅತ್ಯಂತ ಕ್ರೂರವಾಗಿ ಕೊಲೆಗೈದು ಮೂಟೆಕಟ್ಟಿ ಕಸದ ಲಾರಿಯಲ್ಲಿಟ್ಟು ದುಷ್ಕರ್ಮಿಗಳು ಎಸ್ಕೇಪ್ ಆಗಿರುವ ಘಟನೆ ಚನ್ನಮ್ಮನಕೆರೆ ಠಾಣಾ ವ್ಯಾಪ್ತಿಯ ಸ್ಕೇಟಿಂಗ್ ಗ್ರೌಂಡ್...