NEWSನಮ್ಮಜಿಲ್ಲೆನಮ್ಮರಾಜ್ಯ

KSRTC ನೌಕರರ ವೇತನ ಹೆಚ್ಚಳಕ್ಕೆ ಜೆಡಿಎಸ್‌ ಮುಖಂಡ, ವಕೀಲ ಶಂಕರೇಗೌಡ ಆಗ್ರಹ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ಹಾಗೂ 38 ತಿಂಗಳ ಹಿಂಬಾಕಿ ಬಗ್ಗೆ ಕೂಡಲೇ ಆದೇಶ ಹೊರಡಿಸಬೇಕು ಎಂದು ಜೆಡಿಎಸ್‌ ಮುಖಂಡರು ಆಗ್ರಹಿಸಿದ್ದಾರೆ.

ಜಿಲ್ಲೆಯ ತಿ.ನರಸೀಪುರ ತಾಲೂಕಿನ ನಿವಾಸಿ ಜೆಡಿಎಸ್‌ ಮುಖಂಡರಾದ ವಕೀಲ ಶಂಕರೇಗೌಡ ಸಾರಿಗೆ ನೌಕರರ ಬಗ್ಗೆ ಅಪಾರ ಕಾಳಜಿ ಹೊಂದಿ ಈ ಬಗ್ಗೆ ಸಿಎಂ ಅವರಿಗೆ ಒತ್ತಾಯ ಮಾಡಿದ್ದಾರೆ.

ಇದು ಸಾರಿಗೆ ನೌಕರರು ಕಳೆದ 2020ರಿಂದ ಈವರೆಗೂ  ವೇತನ ಹೆಚ್ಚಳವಿಲ್ಲದೆ, ಇನ್ನು ಹೆಚ್ಚಳವಾದ ಶೇ.15ರಷ್ಟು ವೇತನದ 38 ತಿಂಗಳ ಹಿಂಬಾಕಿಯನ್ನು ಈವರೆಗೂ ಪಡೆಯದೆ ಜತೆಗೆ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳವನ್ನು 18 ತಿಂಗಳುಗಳು ಕಳೆದರೂ ಮಾಡದೆ ಸರ್ಕಾರ ಮೀನಮೇಷ ಎಣಿಸುತ್ತಿದೆ. ಹೀಗೆ ಆದರೆ ನೌಕರರು ಜೀವನ ಸಾಗಿಸುವುದಾದರೂ ಹೇಗೆ ಎಂದು ಪ್ರಶ್ನಿಸಿದ್ದಾರೆ.

ಅಲ್ಲದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಈಗಲಾದರೂ ಈ ಬಗ್ಗೆ ಕಾಳಜಿ ವಹಿಸಿ ಹಗಲಿರುಳೆನ್ನದೆ ಸಾರ್ವಜನಿಕರ ಸೇವೆಯಲ್ಲಿ ನಿರತರಾಗಿರುವ ಸಾರಿಗೆ ನೌಕರರಿಗೆ ಸಿಗಬೇಕಿರುವ ನ್ಯಾಯಯುತ ಸೌಲಭ್ಯಗಳನ್ನು ಕೂಡಲೇ ಕೊಡಬೇಕು ಎಂದು ಒತ್ತಾಯಿಸಿದ್ದಾರೆ.

ಸಾರಿಗೆ ಸಿಬ್ಬಂದಿಗಳಿಗೆ ವೇತನ ಹೆಚ್ಚಳ ವಿಷಯಕ್ಕೆ ಸಂಬಂಧಿಸಿದಂತೆ ಸಿಎಂಗೆ ಜೆಡಿಎಸ್‌ ಹಾಗೂ ಬಿಜೆಪಿ ಮುಖಂಡರು ಹಲವಾರು ಬಾರಿ ಒತ್ತಾಯ ಮಾಡಿದ್ದರೂ ಜತೆಗೆ ಅಧಿವೇಶನದಲ್ಲೂ ಈ ಬಗ್ಗೆ ಸಿಎಂ ಹಾಗೂ ಸಾರಿಗೆ ಸಚಿವರ ಗಮನ ಸೆಳೆದರೂ ಯಾವುದೇ ಪ್ರಯೋಜನವಾಗಿಲ್ಲ. ಇನ್ನಾದರೂ ನೌಕರರ ಬಗ್ಗೆ ಕಾಳಜಿ ವಹಿಸಬೇಕು ಎಂದು ಆಗ್ರಹಿಸಿದ್ದಾರೆ.

ಸಾರಿಗೆ ನೌಕರರು ಸರ್ಕಾರದ ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ ಶಕ್ತಿಯೋಜನೆಯನ್ನು ಅತ್ಯಂತ ಯಶಸ್ವಿಯಾಗಿ ಜಾರಿಗೆ ತಂದ ಸರ್ಕಾರದ ಯಶಸ್ಸಿಗೆ ಕಾರಣರಾಗಿದ್ದಾರೆ. ಆದರೆ, ವೇತನ ಹೆಚ್ಚಿಸುವಲ್ಲಿ ಸರ್ಕಾರ ಇದುವರೆಗೂ ಯಾವುದೇ ಕ್ರಮ ತೆಗೆದುಕೊಂಡಿಲ್ಲ ಎಂದು ಕಿಡಿಕಾರಿದ್ದಾರೆ.

ಇನ್ನು ಹಲವಾರು ಬಾರಿ ನೌಕರರ ಪರ ಸಂಘಟನೆಗಳು, ರಾಜಕಾರಣಿಗಳು, ಶಾಸಕರು ಸಂಸದರೂ, ನಗರಸಭೆ, ಪಟ್ಟಣ ಪಂಚಾಯಿತಿ, ಪುರಸಭೆ, ಜಿಪಂ, ತಾಪಂ ಸದಸ್ಯರು ಹಾಗೂ ಅಧ್ಯಕ್ಷರು ಸೇರಿದಂತೆ ವಿಪಕ್ಷದ ನಾಯಕರು ಸಾರಿಗೆ ನೌಕರರ ವೇತನ ಹೆಚ್ಚಳ ಮಾಡಿ ಎಂದು ಒತ್ತಾಯ ಮಾಡಿದರೂ ಕೂಡ ತಾವು ಕಾಳಜಿ ವಹಿಸಿಲ್ಲದಿರುವುದು ಬಾರಿ ನೋವಿನ ಸಂಗತಿ ಎಂದು ಅಸಮಾಧಾನ ವ್ಯಾಕ್ತಪಡಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ