CrimeNEWSನಮ್ಮಜಿಲ್ಲೆ

KSRTC ಚಿಕ್ಕಮಗಳೂರು: ಘಟಕದ ಗೇಟ್‌ ಬಳಿ ತ್ಯಾಜ್ಯಗಳ ನಡುವೆ ಚಾಲಕನ ಪಾರ್ಥಿವ ಶರೀರವಿಟ್ಟು ಅಂತಿಮ ದರ್ಶನಕ್ಕೆ ವ್ಯವಸ್ಥೆ- ಅಧಿಕಾರಿಗಳ ನಡೆಗೆ ನೌಕರರ ಬೇಸರ

ಡ್ಯೂಟಿ ಮೇಲೆ ಇದ್ದಾಗಲೇ ನಿಧನರಾದ ಚಾಲಕ ರವಿ.
ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿಕ್ಕಮಗಳೂರು ಘಟಕದ ಚಾಲಕ ರವಿ ಎಸ್. ಅವರು ಡ್ಯೂಟಿ ಮೇಲೆ ಇದ್ದಾಗಲೇ ಕೊಯಮುತ್ತೂರಿನಲ್ಲಿ ಹೃದಯಾಘಾತದಿಂದ ಮಂಗಳವಾರ ಬೆಳಗ್ಗಿನ ಜಾವ ನಿಧನಾರಾಗಿದ್ದಾರೆ.

ಅವರು ಚಿಕ್ಕಮಗಳೂರು ವಿಭಾಗದ ಚಿಕ್ಕಮಗಳೂರು ಘಟಕದಲ್ಲಿ ಚಾಲಕರಾಗಿದ್ದರು. ಅಂತ್ಯೆಯೆ ಮಂಗಳವಾರ ಅನುಸೂಚಿ ಸಂಖ್ಯೆ 25/26 ರಲ್ಲಿ ಕರ್ತವ್ಯ ನಿರ್ವಹಿಸಿಕೊಂಡು ಚಿಕ್ಕಮಗಳೂರಿನಿಂದ ಕೊಯಮುತ್ತೂರಿಗೆ ಹೋಗಿ ತಂಗಿದ್ದರು.

ಈ ವೇಳೆ ಅಂದರೆ 10.09.2024 ರಂದು ಬೆಳಗಿನ ಜಾವ ತಮ್ಮ ನಿತ್ಯ ಕರ್ಮಗಳನ್ನು ಮುಗಿಸಿಕೊಳ್ಳಲು ಹೋದ ಸಂದರ್ಭದಲ್ಲಿ ಶೌಚಾಲಯದಲ್ಲೇ ಹೃದಯಾಘಾತದಿಂದ ನಿಧನರಾಗಿದ್ದರು.

ಬಳಿಕ ರವಿ ಅವರ ಪಾರ್ಥಿವ ಶರೀರವನ್ನು ಬುಧವಾರ ಅಂದರೆ ಸೆ.11ರಂದು ಬೆಳಗ್ಗೆ ಸುಮಾರು ಆರು ಗಂಟೆಗೆ ಚಿಕ್ಕಮಗಳೂರು ಘಟಕಕ್ಕೆ ತಂದು ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಲಾಗಿತ್ತು. ಅದರಂತೆ ಪಾರ್ಥಿವ ಶರೀರದ ಅಂತಿಮ ದರ್ಶನವನ್ನು ಸಿಬ್ಬಂದಿಗಳು ಪಡೆದರು.

ನಿಗಮದ ಒಬ್ಬ ಚಾಲನಾ ಸಿಬ್ಬಂದಿ ನಿಧನರಾಗಿದ್ದು ಅವರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡಿದ್ದು ಸರಿಯಾಗಿಯೇ ಇದೆ. ಆದರೆ ಆ ಪಾರ್ಥಿವ ಶರೀರವನ್ನು ಘಟಕದ ಒಳ ಭಾಗದಲ್ಲಿ ಇಡದೆ ಗೇಟ್‌ ಪಕ್ಕದಲ್ಲಿ ತ್ಯಾಜ್ಯಗಳಿದ್ದ ಸ್ಥಳದಲ್ಲಿ ಇಟ್ಟಿದ್ದು ಭಾರಿ ನೋವಿನ ಸಂಗತಿಯಾಗಿದೆ.

ಸಂಸ್ಥೆಯಲ್ಲಿ ಹಲವಾರು ವರ್ಷಗಳ ಕಾಲ ದುಡಿದು ಡ್ಯೂಟಿಯಲ್ಲೇ ನಿಧನರಾದ ಒಬ್ಬ ಚಾಲಕರ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ಈ ರೀತಿ ಬೇಕಾಬಿಟ್ಟಿಯಾಗಿ ವ್ಯವಸ್ಥೆ ಮಾಡಿದ್ದು ಮಾತ್ರ ನಾಗರಿಕ ಸಮಾಜ ತಲೆ ತಗ್ಗಿಸುವ ವಿಷಯ. ಇದರಿಂದ ಹಲವು ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಮೃತ ಚಾಲಕರ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡುವಾಗ ಘಟಕದ ಅಧಿಕಾರಿಗಳು ಕಾಳಜಿ ತೆಗೆದುಕೊಳ್ಳಬೇಕು. ಅದನ್ನು ಬಿಟ್ಟು ಈ ರೀತಿ ಯಾರೋ ದಾರಿಹೋಕರು ಮೃತಪಟ್ಟಿದ್ದಾರೆ ಎಂಬಂತೆ ಗೇಟ್‌ ಪಕ್ಕದಲ್ಲಿ ಅದೂ ಕೂಡ ತ್ಯಾಜ್ಯವಿರುವ ಸ್ಥಳದಲ್ಲಿ ಪಾರ್ಥಿವ ಶರೀರ ಇರಿಸಿದ್ದು ಮಾತ್ರ ಅವಮಾನ ಮಾಡಿದಂತೆಯೇ ಸರಿ ಎಂದು ನೌಕರರು ಭಾರಿ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಲ್ಲದೆ ಈ ಬಗ್ಗೆ ಮೇಲಧಿಕಾರಿಗಳಿಗೆ ಘಟಕದಲ್ಲಿ ಪಾರ್ಥಿವ ಶರೀರದ ಅಂತಿಮ ದರ್ಶನಕ್ಕೆ ವ್ಯವಸ್ಥೆ ಮಾಡುವಾಗ ಸಾಮಾನ್ಯ ಅರಿವು ಇರಬೇಕು ಎಂಬುದರ ಬಗ್ಗೆ ಸಂಬಂಧಪಟ್ಟ ಅಧಿಕಾರಿಗಳು ಸಲಹೆ ನೀಡಬೇಕು. ಈಗ ಆಗಿರುವ ಪ್ರಮಾದ ಮತ್ತೆ ಮರುಕಳಿಸದಂತೆ ನೋಡಿಕೊಳ್ಳಬೇಕು ಎಂದು ಒತ್ತಾಯಿಸಿದ್ದಾರೆ.

error: Content is protected !!
LATEST
KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್ ದೆಹಲಿ ನೂತನ ಮುಖ್ಯಮಂತ್ರಿಯಾಗಲಿದ್ದಾರೆ ಅತಿಶಿ: ಎಎಪಿ ನಾಯಕರ ಸಭೆಯಲ್ಲಿ ನಿರ್ಧಾರ BMTC 1500 ನಿವೃತ್ತ ನೌಕರರ ಗ್ರಾಚ್ಯುಟಿ, EL ಹಣ 400 ಕೋಟಿ ರೂ.ಬಾಕಿ: 16-18 ತಿಂಗಳಿನಿಂದ ಕೇಂದ್ರ ಕಚೇರಿಗೆ ಅಲೆದಾಟ!! ಸುಪ್ರೀಂ ಕೋರ್ಟ್ ಅಧಿಕೃತ  ಭಾಷೆ ಇಂಗ್ಲಿಷ್- ಹಿಂದಿಯಲ್ಲಿ ವಾದಕ್ಕೆ ಅನುಮತಿ ಇಲ್ಲ: ವಕೀಲರಿಗೆ ನೆನಪಿಸಿದ ಕೋರ್ಟ್‌ ಕೃಷಿ ಉತ್ಪನ್ನಗಳ ಬೆಂಬಲ ಬೆಲೆಗಿಂತ ಕಡಿಮೆ ದರಕ್ಕೆ ಖರೀದಿ ಮಾಡದಂತ ಕಟ್ಟುನಿಟ್ಟಿನ ಕಾನೂನು ಜಾರಿಗೆ ರೈತ ಮುಖಂಡರ ಆಗ್ರಹ KSRTC ಬಸ್‌ -ಕಾರು ನಡುವೆ ಅಪಘಾತ: ಅನಾರೋಗ್ಯದ ನಡುವೆ ಕಾರು ಚಲಾಯಿಸಿದ ಪತಿ ಮೃತ- ಪತ್ನಿ ಪ್ರಾಣಾಪಾಯದಿಂದ ಪಾರು