ಮಡಿಕೇರಿ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಪುತ್ತೂರು ವಿಭಾಗ ಮಡಿಕೇರಿ ಘಟಕದ ಚಾಲಕ ಬೋಧಕ ಮತ್ತು ಚಾಲಕರಾಗಿದ್ದ ಪಿ.ಎಸ್.ವೈಲೇಶ ಹಾಗೂ ಚಾಲಕ ಮಹಾಬಲ ಶೆಟ್ಟಿ, ಸಂಚಾರ ನಿಯಂತ್ರಕ ಶ್ರೀನಿವಾಸ್ ಅವರು ನಿವೃತ್ತಿಹೊಂದಿದ ಹಿನ್ನೆಲೆಯಲ್ಲಿ ಬೀಳ್ಕೊಡುಗೆ ಸಮಾರಂಭವನ್ನು ಅದ್ದೂರಿಯಾಗಿ ಆಯೋಜಿಸಿ ಬೀಳ್ಕೊಡಲಾಯಿತು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಪ್ರಭಾರ ವಿಭಾಗೀಯ ಸಂಚಲನಾಧಿಕಾರಿ ಅಧ್ಯಕ್ಷತೆಯಲ್ಲಿ ಸಂಸ್ಥೆಯ ವತಿಯಿಂದ ಮೂವರಿಗೂ ಕನ್ನಡ ಪೇಟ, ಮಣಿ ಹಾರ ಮತ್ತು ಶಾಲು ಹೊದಿಸಿ ಸನ್ಮಾನಿಸಿ ಗೌರವಿಸುವ ಮೂಲಕ ಬೀಳ್ಕೊಡಲಾಯಿತು.
ಈ ವೇಳೆ ಮಾತನಾಡಿದ ಘಟಕ ವ್ಯವಸ್ಥಾಕರು ಹಾಗೂ ಪ್ರಭಾರಿ ವಿಭಾಗೀಯ ಸಂಚಲನಾಧಿಕಾರಿ ವರ್ಗಾವಣೆ, ನಿವತ್ತಿ ಸರ್ಕಾರಿ ನೌಕರರಿಗೆ ಸಹಜ. 30-35 ವರ್ಷ ಚಾಲಕರಾಗಿ ಸಂಚಾರ ನಿಯಂತ್ರಕರಾಗಿ ಸೇವೆ ಸಲ್ಲಿಸಿ ನಿವತ್ತಿಯಾಗುತ್ತಿರುವ ಸಿಬ್ಬಂದಿ ಮುಂದಿನ ತಮ್ಮ ನಿವೃತ್ತಿ ಜೀವನ ಸುಖಮಯವಾಗಿರಲಿ ಎಂದು ಹರಸಿದರು.
ವಯಸ್ಸನ್ನು ಆಧರಿಸಿ ಸರ್ಕಾರ ನಿಗದಿಪಡಿಸಿದ ನಿಯಮದಂತೆ ನಿವೃತ್ತಿ ಆಗಲೇಬೇಕು. ಯುವಕರಿಗೆ ಜಾಗ ಮಾಡಿಕೊಡಬೇಕು. ಚಾಲಕರ ಹಾಗೂ ನಿರ್ವಾಹಕರು ಅತ್ಯಂತ ಒತ್ತಡದ ಪರಿಸ್ಥಿತಿಯಲ್ಲಿ ಸೇವೆ ಸಲ್ಲಿಸುತ್ತಿದ್ದಾರೆ. ಸ್ಥಳೀಯ ಘಟಕವು ಈ ಹಿಂದೆ ರಾಜ್ಯದಲ್ಲಿಯೇ ಅತ್ಯುತ್ಯಮ ಸಾರಿಗೆ ಘಟಕ ಎಂದು ಹೆಸರು ಪಡೆದಿತ್ತು. ಮತ್ತೆ ಅದನ್ನು ವಾಪಾಸ್ ಪಡೆಯಲು ಸಿಬ್ಬಂದಿಗಳಿಂದ ಪ್ರಾಮಾಣಿಕ ಸೇವೆ ಮೂಡಿ ಬರಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ವಿಶೇಷ ಅತಿಥಿಯಾಗಿ ಆಗಮಿಸಿದ ಕನ್ನಡ ಸಾಹಿತ್ಯ ಪರಿಷತ್ ನಿಕಟಪೂರ್ವ ಅಧ್ಯಕ್ಷ ಬಿ.ಎಸ್. ಲೋಕೇಶ್ ಸಾಗರ್ ಅವರು ಸಂಸ್ಥೆಯ ಚಾಲಕ ಬೋಧಕ ಹಾಗೂ ಕವಿಗಳಾದ ವೈಲೇಶ್ ಅವರು ಸೇರಿದಂತೆ ನಿವೃತ್ತರಾಗಿರುವ ಎಲ್ಲ ಜೀವನ ಸುಖಕರವಾಗಿರಲಿ ಎಂದರು.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಪರಿಶಿಷ್ಟ ಜಾತಿ ಮತ್ತು ಪಂಗಡದ ರಾಜ್ಯ ಮಟ್ಟದ ಮುಖಂಡ ಶ್ರೀನಿವಾಸ ಅವರ ಜತೆಗೆ ಈ ಇಬ್ಬರಿಗೂ ಸಂಸ್ಥೆಯ ಪಜಾ ಮತ್ತು ಪಪಂ. ಸಂಘದ ವಿಭಾಗೀಯ ಅಧ್ಯಕ್ಷ ಬಿ.ಎಸ್.ಕುಮಾರಸ್ವಾಮಿ ಮತ್ತು ಮಡಿಕೇರಿ ಘಟಕದ ಅಧ್ಯಕ್ಷ ರಾಮಚಂದ್ರ ಅವರ ಉಸ್ತುವಾರಿಯಲ್ಲಿ ಸಂಘದ ವತಿಯಿಂದ ಸನ್ಮಾನಿಸಲಾಯಿತು.
ನಾರಾಯಣ ಹೆಬ್ಬಾಳ್ ಮತ್ತು ಮಿತ್ರ ಮಂಜುಗೌಡ ವೈಲೇಶ್ ಅವರನ್ನು ಸನ್ಮಾನಿಸಿದರು. ಘಟಕ ವ್ಯವಸ್ಥಾಕರು ಹಾಗೂ ಪ್ರಭಾರಿ ವಿಭಾಗೀಯ ಸಂಚಲನಾಧಿಕಾರಿ ನಿವೃತ್ತರನ್ನು ಶ್ಲಾಘಿಸಿ ನೌಕರರನ್ನು ಉದ್ದೇಶಿಸಿ ಮಾತನಾಡಿದರು. ನಾರಾಯಣ ಮೂರ್ತಿ ನಿರೂಪಿಸಿದರೆ ಮದನಕುಮಾರ್ ನಿವೃತ್ತರ ಪರಿಚಯ ಮಾಡಿಕೊಟ್ಟರು.
Related

You Might Also Like
ಬೆಂ.ಗ್ರಾಮಾಂತರ: ನಾಳೆ ಕೇಂದ್ರ ಗೃಹ ಸಚಿವ ಅಮಿತ್ ಷಾ ಆಗಮ- ವಾಹನ, ಸಾರ್ವಜನಿಕರ ಪ್ರವೇಶ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರು ನಾಳೆ (ಜೂ.20) ಬೆಂಗಳೂರು ಉತ್ತರ ತಾಲೂಕಿನ ನಗರೂರು ಗ್ರಾಮದಲ್ಲಿನ ಬಿ.ಜಿ.ಎಸ್ ಆಸ್ಪತ್ರೆಯ ನೂತನ ಘಟಕದ ಕಟ್ಟಡ...
ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿಗೆ ಅರ್ಜಿ ಆಹ್ವಾನ
ಬೆಂಗಳೂರು: ಕರ್ನಾಟಕ ಇನ್ಸ್ಟಿಟ್ಯೂಟ್ ಆಫ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ಸಂಸ್ಥೆಯು ಆರು ತಿಂಗಳ ಅವಧಿಯ ರೆಗ್ಯುಲರ್ ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್ಮೆಂಟ್ ತರಬೇತಿ ಪ್ರವೇಶಕ್ಕೆ ಅರ್ಜಿ...
ಮಾವಿನ ಬೆಂಬೆಲ ಬೆಲೆ ನಿಗದಿಗೆ ಆಹಾರ ಸಚಿವ ಮುನಿಯಪ್ಪ ಒತ್ತಾಯ
ಬೆಂಗಳೂರು: ಮಾವಿಗೆ ಬೆಂಬಲ ಬೆಲೆ ಷೋಷಣೆ ಮಾಡಲು ಸರ್ಕಾರವನ್ನು ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಒತ್ತಾಯಿಸಿದ್ದಾರೆ. ಇಂದು ನಡೆದ ಸಚಿವ ಸಂಪುಟದ...
ವಿವೇಚನಾತ್ಮಕವಾಗಿ ನೈಸರ್ಗಿಕ ಸಂಪತ್ ಬಳಸಿದರಷ್ಟೇ ಉಳಿಗಾಲ: ಸಚಿವ ಈಶ್ವರ ಖಂಡ್ರೆ
ಪಳೆಯುಳಿಕೆ ಇಂಧನಕ್ಕೆ ಪರ್ಯಾಯವಾಗಿ ನವೀಕೃತ ಮತ್ತು ಜೈವಿಕ ಇಂಧನ ಬಳಕೆಗೆ ಕರೆ ಬೆಂಗಳೂರು: ಪರಿಸರ ಸ್ನೇಹಿಯಾದ ನವೀಕರಿಸಬಹುದಾದ ಮತ್ತು ಜೈವಿಕ ಇಂಧನ ಬಳಕೆಗೆ ಹೆಚ್ಚಿನ ಒತ್ತು ನೀಡುವ...
KKRTC ಕಂಡಕ್ಟರ್ ಮೇಲೆ ಹಲ್ಲೆ: ಮೂವರಿಗೆ ₹75 ಸಾವಿರ ದಂಡ- ಕಟ್ಟಲಾಗದಿದ್ದರೆ 6 ತಿಂಗಳು ಜೈಲು ಶಿಕ್ಷೆ- ಕೋರ್ಟ್ ಮಹತ್ವದ ತೀರ್ಪು
ಕಲಬುರಗಿ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆ ಬಸ್ ನಿರ್ವಾಹಕರ ಮೇಲೆ ಹಲ್ಲೆ ಮಾಡಿದ ಮೂವರಿಗೆ ಅಫಜಲಪುರ ಪ್ರಧಾನ ದಿವಾಣಿ ನ್ಯಾಯಾಲಯ ಮತ್ತು ಜೆಎಂಎಫ್ಸಿ ನ್ಯಾಯಾಲಯ ತಲಾ...
KKRTC ವಿಜಯಪುರ: ತಂದೆ ನಿಧನರಾದ ನಾಲ್ಕೇ ದಿನಕ್ಕೆ ಡ್ಯೂಟಿಗೆ ಬರಬೇಕಿತ್ತು ಅಂತ ಚಾಲಕನಿಗೆ ಗೈರುಹಾಜರಿ ಮಾಡಿದ ಡಿಸಿ ನಾರಾಯಣಪ್ಪ ಕುರುಬರ
ಒಟ್ಟು 58 ದಿನ ರಜೆಯಲ್ಲಿದ್ದ ಚಾಲಕ ಕಂ ನಿರ್ವಾಹಕನಿಗೆ ಹಿಂದೆ ಮುಂದೆ ಗೈರು ಹಾಜರಿ ತೋರಿಸಿ 7ದಿನ ರಜೆ ಮಂಜೂರು ಮಾಡಿದ ಡಿಸಿಯ ನಡೆ ಅನುಮಾನಕ್ಕೆ ಎಡೆ...
BMTC: ಯುವತಿ ಮೇಲೆ ಬಸ್ ನುಗ್ಗಿಸಲು ಯತ್ನ ಪ್ರಕರಣದ FIRಗೆ ಹೈ ಕೋರ್ಟ್ ತಡೆ
ಬಿಎಂಟಿಸಿ ಚಾಲಕನ ಪರ ವಕ್ಕಾಲತ್ತು ವಹಿಸಿದ್ದ ಸುಪ್ರೀಂ ಕೋರ್ಟ್ ಹಾಗೂ ಹೈ ಕೋರ್ಟ್ ವಕೀಲ ಎಚ್.ಬಿ.ಶಿವರಾಜು ಬಹುತೇಕ ಸಾರಿಗೆ ನೌಕರರ ಎಲ್ಲ ಪ್ರಕರಣಗಳಲ್ಲೂ ಜಾಣ್ಮೆಯ ವಾದ ಮಂಡಿಸಿ...
KSRTC ನೂತನ 2000 ಚಾಲಕ ಕಂ ನಿರ್ವಾಹಕರಿಗೆ ನಿಯೋಜನಾ ಆದೇಶ ಪತ್ರ ವಿತರಣೆ: ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದಲ್ಲಿ ಎಂಟು ವರ್ಷಗಳ ಬಳಿಕ ಬೃಹತ್ ನೇಮಕಾತಿ ನಡೆದಿದ್ದು, 2000 ಚಾಲಕ ಕಂ ನಿರ್ವಾಹಕ ಅಭ್ಯರ್ಥಿಗಳ ನೇಮಕಾತಿಯು ಪಾರದರ್ಶಕವಾಗಿ ಮಾಡಲಾಗಿದೆ....
ಜೂ.21ರಂದು 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಜಿಲ್ಲಾ ಮಟ್ಟದ 11ನೇ ಅಂತಾರಾಷ್ಟ್ರೀಯ ಯೋಗ ದಿನಾಚರಣೆಯನ್ನು ಜೂನ್ 21 ರಂದು ದೇವನಹಳ್ಳಿ ಟೌನ್ ನಲ್ಲಿರುವ ಕ್ರೀಡಾಂಗಣದಲ್ಲಿ ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಎ.ಬಿ.ಬಸವರಾಜು ತಿಳಿಸಿದ್ದಾರೆ....