KSRTC ಮಂಡ್ಯ: ಓವರ್ಟೇಕ್ ನೆಪದಲ್ಲಿ ತಾನೇ ಬಸ್ಗೆ ಬೈಕ್ ಡಿಕ್ಕಿ ಹೊಡೆಸಿ ಅಪಘಾತದ ಹೈಡ್ರಾಮ ಮಾಡಿದ ಬೈಕ್ ಸವಾರ ಯೋಗೇಶ್

ಮಂಡ್ಯ: ಹಳೇ ದ್ವೇಷದ ಹಿನ್ನೆಲೆಯಲ್ಲಿ ಕೆಎಸ್ಆರ್ಟಿಸಿ ನೌಕರನ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ್ದು ಅಲ್ಲದೆ ಬಳಿಕ ಚಲಿಸುತ್ತಿದ್ದ ಬಸ್ ಮುಂದೆ ಹೋಗಿ ತಾನೆ ಬಸ್ಗೆ ಬೈಕ್ ಡಿಕ್ಕಿಹೊಡೆಸಿ ಚಾಲಕನೆ ನನ್ನನ್ನು ಕೊಲ್ಲುವ ಉದ್ದೇಶದಿಂದ ಅಪಘಾತ ಮಾಡಿದ್ದಾನೆ ಎಂದು ಬಿಂಬಿಸಿರುವ ಘಟನೆ ಸೋಮವಾರ (ಸೆ.9) ಬೆಳಗ್ಗೆ ನಡೆದಿದೆ.
ಘಟನೆ ವಿವರ: ಮಂಡ್ಯ ಜಿಲ್ಲೆ ಮಳವಳ್ಳಿ ತಾಲೂಕಿನ ತಳಗವಾದಿ ನಿವಾಸಿ ಕೆಎಸ್ಆರ್ಟಿಸಿ ಮಳವಳ್ಳಿ ಘಟಕದ ಚಾಲಕ ಹನುಮಂತ ಎಂಬುವರ ಮೇಲೆ ಅದೇ ಗ್ರಾಮದ ಯೋಗೇಶ್ ಎಂಬಾತ ಕಳೆದ ಸೆ.30ರಂದು ಕೆ.ಪಿ.ದೊಡ್ಡಿ ಬಳಿ ಬೈಕ್ನಲ್ಲಿ ಹನುಮಂತ ಹೋಗುತ್ತಿದ್ದ ವೇಳೆ ಯೋಗೇಶ್ ಸೇರಿದಂತೆ ಮೂವರು ಅಡ್ಡಗಟ್ಟಿ ಹಣೆಯ ಮೇಲೆ ಮತ್ತು ಮೂಗಿನ ಮೇಲೆ ಹಲ್ಲೆ ನಡೆಸಿ ಕ್ಷಣರ್ಧದಲ್ಲಿ ಪರಾರಿಯಾಗಿದ್ದರು.
ಈ ಸಂಬಂಧ ಕೆಎಸ್ಆರ್ಟಿಸಿ ಚಾಲಕ ಹನುಮಂತ ಕೆ.ಎಂ.ದೊಡ್ಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದರು. ಬಳಿಕ ಅದೇ ಠಾಣೆಯಲ್ಲಿ ಯೋಗೇಶ್ ಕೂಡ ಪ್ರತಿ ದೂರು ನೀಡಿದ್ದಾನೆ. ಇಷ್ಟಕ್ಕೆ ಸುಮ್ಮನಾಗದ ಯೋಗೇಶ್ ಆಬಳಿಕ ಅಂದು ಸಂಜೆ ಹನುಮಂತನ ಮನೆಗೆ ತನಗೆ ಹೆಣ್ಣುಕೊಟ್ಟ ಅತ್ತೆ ಮಾವನನ್ನು ಕಳುಹಿಸಿ ಅವಾಚ್ಯವಾಗಿ ನಿಂದಿಸಿದ್ದಾನೆ. ನಂತರ ಈತ ಅತ್ತೆ ನಾಗಮ್ಮ ಮತ್ತು ಮಾವ ಮಹೇಶ್ ಇಬ್ಬರು ಹೋಗಿ ಮಳವಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.
ಈ ವಿಷಯ ತಿಳಿಯುತ್ತಿದ್ದಂತೆ ಹನುಮಂತನ ಪಾಲಕರೂ ಕೂಡ ಪ್ರತಿ ದೂರು ದಾಖಲಿಸಿದ್ದಾರೆ. ಇನ್ನು ಇತ್ತ ಹಲ್ಲೆಗೊಳಗಾಗಿ 6-7ದಿನಗಳಿಂದ ಚಿಕಿತ್ಸೆ ಪಡೆದ ಬಳಿಕ ಅಂದರೆ ಸೋಮವಾರ ಸೆ.9ರಂದು ಡ್ಯೂಟಿಗೆ ಹನುಮಂತ ಹೋಗಿದ್ದಾರೆ. ಇದೇ ಸಮಯ ಕಾಯುತ್ತಿದ್ದ ಯೋಗೇಶ್ ಮಂಡ್ಯ ಬಸ್ನಿಲ್ದಾಣದಿಂದ ಕೆ.ಎಂ.ದೊಡ್ಡಿ ಮಾರ್ಗವಾಗಿ ಮಳವಳ್ಳಿಗೆ ಬಸ್ ಹೋಗುತ್ತಿದ್ದಾಗ ಕಾಗೇಪುರ ಟಿ. ಬಳಿ ಬಂದು ಹನುಮಂತನ ಜತೆ ಕ್ಯಾತೆತೆಗೆದಿದ್ದಾನೆ.
ಈ ವೇಳೆ ಹನುಮಂತನಿಗೆ ಅವಾಚ್ಯವಾಗಿ ಬೈದಿದ್ದು ಅಲ್ಲದೆ ಮಾರ್ಗಾಚರಣೆಯಲ್ಲಿದ್ದ ಬಸ್ಸನ್ನು ಹಿಂದಿನಿಂದ ಬೈಕ್ನಲ್ಲಿ ಪಾಲೋಮಾಡಿಕೊಂಡು ಹೋಗಿದ್ದಾನೆ. ಈ ಬೈಕ್ನಲ್ಲಿ ಚೌಡಯ್ಯ ಎಂಬುವರನ್ನು ಹಿಂದೆ ಕೂರಿಸಿಕೊಂಡು ಹೋಗಿದ್ದು, ಬಸವನಪುರ ಬಳಿ ಬಸ್ ಓವರ್ಟೇಕ್ ಮಾಡುವ ನಾಟಕವಾಡಿ ಬಸ್ನ ಮುಂದಿನ ಎಡಭಾಗದಕ್ಕೆ ಹೋಗಿ ಬೈಕ್ ಬೇಕ್ಹೊಡೆಸಿ ಬಸ್ ಬೈಕ್ಗೆ ಡಿಕ್ಕಿ ಹೋಡೆದಿದೆ ಎಂದು ನಾಡಕವಾಡಿದ್ದಾನೆ.
ಅಲ್ಲದೆ ಈ ವೇಳೆ ಕೆಳಗೆ ಬಿದ್ದು ಕಾಲಿಗೆ ಗಾಯ ಮಾಡಿಕೊಂಡು ಹಿಂಬದಿ ಸವಾರ ಚೌಡಯ್ಯನಿಗೂ ಗಾಯವಾಗುವಂತೆ ನೋಡಿಕೊಂಡಿದ್ದಾನೆ. ಬಳಿಕ ಆಸ್ಪತ್ರೆಗೆ ದಾಖಲಾಗಿ ಟಿ.ಸಿ. ಹನುಮಂತ ನನ್ನನ್ನು ಕೊಲ್ಲುವ ಉದ್ದೇಶದಿಂದಲೇ ಸರ್ಕಾರಿ ಬಸ್ ದುರುಪಯೋಗ ಪಡಿಸಿಕೊಂಡು ನನ್ನ ಬೈಕ್ಗೆ ಡಿಕ್ಕಿ ಹೊಡೆಸಿದ್ದಾನೆ ಎಂದು ಎಲ್ಲವನ್ನು ಇವನೇ ಮಾಡಿ ಕೊಲೆ ಯತ್ನ ಪ್ರಕರಣವನ್ನು ಪೊಲೀಸ್ ಠಾಣೆಯಲ್ಲಿ ಸೆ.9ರಂದು ದಾಖಲಿಸಿದ್ದಾನೆ.
ಬಸ್ ಹಿಂದೆ ಪಾಲೋ ಮಾಡಿದ್ದು ಮತ್ತು ಓವರ್ಟೇಕ್ ಮಾಡುವ ನೆಪದಲ್ಲಿ ಬಂದು ಬಸ್ಗೇ ಬೈಕ್ ಡಿಕ್ಕಿಹೊಡೆಸಿದ್ದನ್ನು ವಿಡಿಯೋ ಮಾಡಬೇಕು ಎಂದುಕೊಂಡ ಚಾಲಕ ಹನುಮಂತ ಬಸ್ ಓಡಿಸುತ್ತಿದ್ದರಿಂದ ನಿಗಮದಲ್ಲಿ ಅದಕ್ಕೆ ಅವಕಾಶವಿಲ್ಲದ ಕಾರಣ ವಿಡಿಯೋ ಮಾಡಲು ಸಾಧ್ಯವಾಗಿಲ್ಲ. ಒಂದು ವೇಳೆ ಬಸ್ನಲ್ಲಿ ಸಿಸಿಟಿವಿ ಇದ್ದಿದ್ದರೆ ಯೋಗೇಶ್ ಮಾಡಿದ ಕುತಂತ್ರವೆಲ್ಲ ಬಯಲಾಗುತ್ತಿತ್ತು.
ಜತೆಗೆ ಸರ್ಕಾರಿ ಬಸ್ ಕಾರ್ಯಾಚರಣೆಗೆ ಅಡ್ಡಿಪಡಿಸಿದ ಕಾರಣಕ್ಕೆ ಯೋಗೇಶ್ ವಿರುದ್ಧ ದೂರು ದಾಖಲಿಸಬಹುದಿತ್ತು. ಈಗಲೂ ಈ ಸಂಬಂಧ ಸಂಸ್ಥೆಯ ಕಾನೂನು ವಿಭಾಗದ ಅಧಿಕಾರಿಗಳು ಯೋಗೇಶ್ ಸೃಷ್ಟಿಸಿರುವ ಡ್ರಾಮಾ ವಿರುದ್ಧ ದೂರು ದಾಖಲಿಸಿ ಈತನ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸುವುದಕ್ಕೆ ಅವಕಾಶವಿದೆ.
ಇನ್ನು ಸಾರಿಗೆ ನೌಕರ ಹನುಮಂತ ಮತ್ತು ಯೋಗೇಶ್ ನಡುವೆ ಈ ದ್ವೇಷಕ್ಕೆ ಕಾರಣವೇನು ಎಂದರೆ ಈ ಇಬ್ಬರ ಕುಟುಂಬದವರು ತಳಗವಾದಿ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಬರುವ ನಾಲ್ಕೂ ಗ್ರಾಮಗಳಿಗೆ ಟ್ಯಾಂಕರ್ ಮೂಲಕ ನೀರು ಸರಬರಾಜು ಮಾಡುತ್ತಿದ್ದಾರೆ. ಒಂದು ಟ್ಯಾಂಕರ್ ನೀರಿಗೆ ಹನುಮಂತ ಕುಟುಂಬದವರು 200 -300 ರೂಪಾಯಿ ತೆಗೆದುಕೊಂಡರೆ ಯೋಗೇಶ್ ಕುಟುಂಬದವರು 600-700 ರೂ. ಚಾರ್ಜ್ ಮಾಡುತ್ತಾರಂತೆ. ಅದಕ್ಕೆ ಬಹುತೇಕ ತಳಗವಾದಿ ಗ್ರಾಪಂ ವ್ಯಾಪ್ತಿಯ ನಿವಾಸಿಗಳು ಹೆಚ್ಚಾಗಿ ಹನುಮಂತನ ಕುಟುಂಬವರು ಸರಬರಾಜು ಮಾಡುವ ಟ್ಯಾಂಕರ್ ನೀರನ್ನು ಹೆಚ್ಚಾಗಿ ಬಳಸುತ್ತಿದ್ದಾರೆ.
ಇನ್ನೊಂದು ಪ್ರಮುಖ ವಿಷಯವೆಂದರೆ ಹನುಮಂತನ ಕುಟುಂಬದವರು ಗ್ರಾಮದಲ್ಲಿ ಯಾರಾದರು ನಿಧನರಾದರೆ ಅವರ ಕುಟುಂಬದವರಿಗೆ ಉಚಿತವಾಗಿ ನೀರು ಸರಬರಾಜು ಮಾಡುತ್ತಾರೆ. ಇದರಿಂದಲೂ ನಮಗೆ ಲಾಸ್ ಆಗುತ್ತಿದೆ ಎಂದು ಯೋಗೇಶ್ ದ್ವೇಷ ಸಾಧಿಸುತ್ತಿದ್ದು ಈ ದ್ವೇಷದಿಂದಲೇ ಹನುಮಂತನನ್ನು ಕೆಲಸದಿಂದ ವಜಾಗೊಳಿಸಿದರೆ ಆರ್ಥಿಕವಾಗಿ ದಿವಾಳಿ ಆಗುತ್ತಾರೆ. ಆಗ ನಾವು ಹೇಳಿದಂತೆ ಈ ಕುಟುಂಬದಬರು ಕೇಳುತ್ತಾರೆ ಎಂಬ ಕಿಡಿಗೇಡಿ ಮನೋಭಾವದಿಂದ ಈ ಕೃತ್ಯ ಎಸಗಿದ್ದಾನೆ ಯೋಗೇಶ್ ಎಂಬ ಆರೋಪ ಕೇಳಿ ಬಂದಿದೆ.
ಒಟ್ಟಾರೆ ಯೋಗೇಶ್ನ ಉದ್ದೇಶ ಹನುಮಂತನನ್ನು ಕೆಲಸದಿಂದ ವಜಾ ಮಾಡಿಸಬೇಕು ಎಂಬುದಾಗಿದೆ. ಹೀಗಾಗಿ ಆತ ಹೇಗಿದ್ದರೂ ಚಾಲಕನಾಗಿದ್ದಾನೆ ಅಪಘಾತ ನಾಟಕವಾಡಿದರೆ ಆತನನ್ನು ಕೆಲಸದಿಂದ ತೆಗೆಯುತ್ತಾರೆ ಎಂದು ತಾನೂ ಸೇರಿದಂತೆ ಹಿಂಬದಿ ಸವಾರನ ಪ್ರಾಣವನ್ನು ಲೆಕ್ಕಿಸದೆ ಬೈಕ್ಅನ್ನು ಬಸ್ಗೆ ಡಿಕ್ಕಿಹೊಡೆಸಿ ಅಪಘಾತ ಮಾಡಿದ್ದು ಈ ಅಪಘಾತವನ್ನು ಚಾಲಕ ಹನುಮಂತನ ಮೇಲೆ ಬರುವಂತೆ ನೋಡಿಕೊಂಡಿದ್ದಾನೆ ಎಂಬ ಆರೋಪ ಕೇಳಿ ಬಂದಿದೆ.
ಇನ್ನು ಈ ಬಗ್ಗೆ ಪೊಲೀಸರು ಸೂಕ್ತ ತನಿಖೆ ನಡೆಸಿದ ಬಳಿಕ ಯಾರದು ತಪ್ಪು ಎಂಬ ಸತ್ಯ ಹೊರಬರಬೇಕಿದೆ. ಆದರೆ, ಯೋಗೇಶ್ ಒಂದು ರಾಜಕೀಯ ಪಕ್ಷದಲ್ಲಿ ಗುರುತಿಸಿಕೊಂಡಿದ್ದು ಆತನ ಕಿಡಿಗೇಡಿ ಕೃತ್ಯಗಳು ಹೆಚ್ಚಾಗಿವೆ ಎಂದು ತಿಳಿದು ಬಂದಿದೆ. ಹೀಗಾಗಿ ಯಾವುದೇ ಒತ್ತಡಕ್ಕೂ ಮಣಿಯದೆ ಪೊಲೀಸರು ನಿಷ್ಪಕ್ಷಪಾತ ತನಿಖೆ ನಡೆಸುವ ಮೂಲಕ ತಪ್ಪು ಮಾಡಿದವರಿಗೆ ಕಾನೂನಿನಡಿ ತಕ್ಕ ಶಿಕ್ಷೆ ಕೊಡಿಸಬೇಕು ಎಂದು ಹನುಮಂತನ ಕುಟುಂಬದವರು ಪೊಲೀಸರಲ್ಲಿ ಮನವಿ ಮಾಡಿದ್ದಾರೆ.
Related

You Might Also Like
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...