KSRTC: 2006ರಲ್ಲಿ ಡ್ಯೂಟಿಗೆ ಸೇರಿ ಹಲವರು ನಿವೃತ್ತರಾಗುತ್ತಿದ್ದಾರೆ- ಅಚ್ಚರಿ ಎಂದರೆ ಬೇಸಿಕ್ ಪೇ 27 ಸಾವಿರ ದಾಟಲೇ ಇಲ್ಲಆದರೆ..!

- ಸರ್ಕಾರಿ ಡಿ ಗ್ರೂಪ್ ನೌಕರರ ಮೂಲ ವೇತನ ಸೇರಿದ ಕೂಡಲೇ 27 ಸಾವಿರ ಬೇಸಿಕ್ ಪೇ
- ನಮ್ಮ ಈ ದುರಂತ ಕತೆಗೆ ನಾಯಕರು ಯಾರು? ಜಂಟಿ ಸಂಘಟನೆಗಳ ನಾಯಕರೆ ಉತ್ತರಿಸುವಿರಾ?
ಬೆಂಗಳೂರು: ಸರ್ಕಾರದ ಅಧಿನದಲ್ಲಿರುವ ಸಾರಿಗೆ ಸಂಸ್ಥೆಗಳಿಗೆ 2006ರಲ್ಲಿ ಸೇರಿದ ಮಾಜಿ ಯೋಧರು, ನೌಕರರು ಹಲವಾರು ಕಾರಣಗಳಿಂದ ಇವತ್ತಿನ ದಿನಗಳಲ್ಲಿ ನಿವೃತ್ತಿ ಹೊಂದಿದ್ದಾರೆ ಹಾಗೂ ಹೊಂದುತ್ತಿದ್ದಾರೆ. ಅವರು 2006 ರಿಂದ 31/05/2025 ವರೆಗೆ ಸೇವೆ ಸಲ್ಲಿಸಿದ್ದರು ಸಹ ಅವರ ಬೇಸಿಕ್ ಪೇ 27 ಸಾವಿರ ರೂಪಾಯಿ ಸಹ ತಲುಪಲಿಲ್ಲ.
ಆದರೆ ವಿಪರ್ಯಾಸದ ಸಂಗತಿ ಏನೆಂದರೆ ಸರಕಾರದ ಏಳನೇ ವೇತನದ ಆಯೋಗದ ಪ್ರಕಾರ ಸರ್ಕಾರಿ ನೌಕರನ ಮೊದಲನೆಯ ಬೇಸಿಕ್ ಪೇ 27 ಸಾವಿರ ರೂಪಾಯಿ ಇದೆ. ಹಾಗೆ ಸಾರಿಗೆ ಸಂಸ್ಥೆಯಲ್ಲಿ ಇಷ್ಟು ವರ್ಷಗಳ ಕಾಲ ಸೇವೆ ಸಲ್ಲಿಸಿದರೂ ಸಹ 27 ಸಾವಿರ ರೂಪಾಯಿ ಬೇಸಿಕ್ ಪೇ ತಲುಪಲಿಲ್ಲ. ಇದಕ್ಕೆ ಯಾರು ಕಾರಣಕರ್ತರು?
ಇದು ನಮ್ಮ ನಾಯಕರ ಗಮನಕ್ಕೆ ಏಕೆ ಬರುತ್ತಿಲ್ಲ? ನಮ್ಮ ಸಾರಿಗೆ ಸಂಸ್ಥೆಯಲ್ಲಿರುವ ನಮ್ಮ ಮಹಾನ್ ನಾಯಕರು ನಾಲ್ಕು ವರ್ಷಕ್ಕೊಮ್ಮೆ ವೇತನ ಪರಿಷ್ಕರಣೆಗೆ ಸಂಬಂಧಿಸಿದಂತೆ ಇವತ್ತಿನ ದಿನಗಳಲ್ಲಿಯೂ ಸಹ ಸಾರಿಗೆ ನೌಕರರ ವೇತನ ಸರ್ಕಾರಿ ನೌಕರನಗಿಂತ ಹೆಚ್ಚು ಕಡಿಮೆ 50% ಕಡಿಮೆ ವೇತನ ಇದೆ.
ಆದರೆ, ನಮ್ಮ ಮಹಾನ್ ನಾಯಕರು ಇವತ್ತಿನ ಅಗ್ರಿಮೆಂಟ್ ವಿಷಯಕ್ಕೆ ಸಂಬಂಧಿಸಿದಂತೆ 1/1/2024ರಿಂದ ಮತ್ತೆ 25% ಡಿಮಾಂಡ್ ಏಕೆ ಇಟ್ಟಿದ್ದಾರೆ? ಇದು ಎಷ್ಟು ಸರಿ? ನಮ್ಮ ರಾಜ್ಯ ಸರ್ಕಾರವೇ ಇವತ್ತಿನ ದಿನಗಳಲ್ಲಿ ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಕೊಡುವುದಾಗಿ ಹೇಳುತ್ತಿರುವಾಗ ನಮ್ಮ ಮಹಾನ್ ನಾಯಕರು ಏಕೆ ತಿರಸ್ಕಾರ ಮಾಡುತ್ತಿದ್ದಾರೆ? ಎಂಬುದರ ಬಗ್ಗೆ ಜಂಟಿ ಸಂಘಟನೆಗಳ ನಾಯಕರು ಸಾರಿಗೆ ಸಂಸ್ಥೆಯ ನೌಕರರಿಗೆ ಸ್ಪಷ್ಟೀಕರಣ ಕೊಡಬೇಕು ಎಂದು ನೌಕರರು ಒತ್ತಾಯಿಸಿದ್ದಾರೆ.
ಇನ್ನು ಈಗಲೂ ನಮಗೆ ಒಬ್ಬ ಡಿ ಗ್ರೂಪ್ ನೌಕರನಿಗೆ ಸಿಗುವ ಬೇಸಿಕ್ ಪೇ ಅಂದರೆ 27 ಸಾವಿರ ರೂಪಾಯಿ 23ವರ್ಷ ಸೇವೆ ಸಲ್ಲಿಸಿದರೂ ಪಡೆಯಲಾಗುತ್ತಿಲ್ಲ. ಇದರ ನಡುವೆ ಅಡುಗೋಲಜ್ಜಿ ಕಥೆ ಹೇಳಿಕೊಂಡು ಈಗಲೂ ಬರಿ ಶೇ.25ರಷ್ಟು ವೇತನ ಹೆಚ್ಚಳ ಮಾಡಿ ಎಂದು ಸರ್ಕಾರಕ್ಕೆ ಒತ್ತಾಯ ಮಾಡುತ್ತಿದ್ದೀರಿ ಎಂದರೆ ನಿಮ್ಮ ಮನಸ್ಥಿತಿಗೆ ನಾವು ಏನನ್ನ ಬೇಕು ನೀವೆ ಹೇಳಿ ಎಂದು ಪ್ರಶ್ನಿಸುತ್ತಿದ್ದಾರೆ.
ಈಗಲಾದರೂ ಬದಲಾಗಿ ಸಾರಿಗೆ ನೌಕರರಿಗೆ ಬರಬೇಕಿರುವ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಹಾಗೂ ಈಗಿನ 17 ತಿಂಗಳ ವೇತನ ಹೆಚ್ಚಳವಾಗುವ ಅದರ ಹಿಂಬಾಕಿಯನ್ನು ಕೊಡಿಸುವ ಜತೆಗೆ ಸರ್ಕಾರಿ ನೌಕರರಿಗೆ ಸರಿ ಸಮಾನವಾದ ವೇತನ ಕೊಡಿ ಎಂದು ಸರ್ಕಾರವನ್ನು ಒತ್ತಾಯಿಸಿ ಅದನ್ನು ಬಿಟ್ಟು ಈ ರೀತಿ ಕಥೆ ಕಟ್ಟಿಕೊಂಡು ಕೂರಬೇಡಿ ಈಗಾಗಲೇ ನಾವು ತುಂಬ ನೊಂದಿದ್ದೇವೆ ಬೇಯುತ್ತಿದ್ದೇವೆ.
ಇನ್ನೆಷ್ಟು ನೋಯಿಸುತ್ತೀರಿ.. ಸಾಕು ಇನ್ನಾದರೂ ನಮಗೆ ನೆಮ್ಮದಿಯಿಂದ ಡ್ಯೂಟಿ ಮಾಡುವುದಕ್ಕೆ ಅವಕಾಶವಾಗುವ ರೀತಿಯಲ್ಲಿ ಸರ್ಕಾರದ ಜತೆ ಮತುಕತೆ ನಡೆಸಿ ನಮ್ಮೆಲ್ಲ ನೌಕರರಿಗೆ ಬೆಳಕಾಗಿ. ಅದನ್ನು ಬಿಟ್ಟು ಈ ರೀತಿ ನಡೆದುಕೊಳ್ಳಬೇಡಿ ಇದು ನಮ್ಮ ನೋವಿನ ನುಡಿ ಎಂದು ನೌಕರರು ಮನವಿ ಮಾಡಿದ್ದಾರೆ.
Related

You Might Also Like
ಸರ್ಕಾರ ಕೊಟ್ಟ ಭರವಸೆಯಂತೆ KSRTC ನೌಕರರ ಬೇಡಿಕೆ ಈಡೇರಿಸಿಕೊಳ್ಳಲು ನಿಮ್ಮ ಜತೆ ನಾವು ಕೈ ಜೋಡಿಸಲು ಸಿದ್ಧ: ಅನಂತ ಸುಬ್ಬರಾವ್ಗೆ ಮನವಿ ಪತ್ರ ಕೊಟ್ಟ ಕೂಟ
ನೀವು ನಮ್ಮ ಜತೆ ಕೈ ಜೋಡಿಸಿ ಒಟ್ಟಿಗೆ ಸೇರಿ ನೌಕರರಿಗೆ ಒಳ್ಳೆಯದು ಮಾಡೋಣ ಬೆಂಗಳೂರು: ಸಾರಿಗೆ ನೌಕರರ ನ್ಯಾಯಯುತ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಾರಿಗೆ ಮುಷ್ಕರದ ಬದಲಿಗೆ ಸಾರಿಗೆ...
ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು: ಸಿಎಂ ಸಿದ್ದರಾಮಯ್ಯ ಸಲಹೆ
ಬೆಂಗಳೂರು: ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು. ಇದು ವೃತ್ತಿಗೆ ಮಾಡುವ ಅವಮಾನ. ನಮ್ಮ ಮೇಲೆ, ಸರ್ಕಾರಿ ನೌಕರರ ಮೇಲೆ ಸಮಾಜದ ಋಣ ಇದೆ ಎಂದು ಮುಖ್ಯಮಂತ್ರಿ...
ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಆಹಾರ ಸಚಿವ ಮುನಿಯಪ್ಪ
ಮೈಸೂರು: ಮೈಸೂರಿನ ದಕ್ಷಿಣ ನಗರದ ಸಗಟು ಮಳಿಗೆ ಬಂಡಿಪಾಲ್ಯಕ್ಕೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಇಂದು ಭೇಟಿ ನೀಡಿ ಆಹಾರ ಧಾನ್ಯಗಳ...
ಪಾದಚಾರಿ ಮಾರ್ಗ ಒತ್ತುವರಿ, ಅನಧಿಕೃತ ಜಾಹೀರಾತು ತೆರವು: ಆಯುಕ್ತ ಸತೀಶ್
ಬೆಂಗಳೂರು: ಬಿಬಿಎಂಪಿ ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ, ಅನಧಿಕೃತ ಜಾಹೀರಾತು ತೆರವು ಕಾರ್ಯಾಚರಣೆ ಹಾಗೂ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಪಾಲಿಕೆ ವ್ಯಾಪ್ತಿಯ ರಾಜರಾಜೇಶ್ವರಿನಗರ ವಲಯದಲ್ಲಿ...
ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹಣೆಯಾದರೆ ನಿವೇಶನ ಮಾಲೀಕರಿಗೆ ದಂಡ ವಿಧಿಸಿ: ಸ್ನೇಹಲ್
ಬೆಂಗಳೂರು: ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹಣೆಯಾದಲ್ಲಿ ನಿವೇಶನ ಮಾಲೀಕರಿಗೆ ನೋಟಿಸ್ ನೀಡಿ ದಂಡ ವಿಧಿಸುವಂತೆ ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪೂರ್ವ...
KSRTC ಅಧಿಕಾರಿಗಳು ಕಚೇರಿಗೆ ಬಂದಾಗ ತಮ್ಮ ಹಣ ಎಷ್ಟಿತ್ತು ಹೋಗುವಾಗ ಎಷ್ಟಿದೆ ಅಂತ ತಿಳಿಸಬೇಕು: ಎಂಡಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರವು ಕಚೇರಿಗಳಲ್ಲಿ ನಗದು ಘೋಷಣೆ ವಹಿ ನಿರ್ವಹಣೆ ಕುರಿತು ವಿವರವಾಗಿ ಮಾರ್ಗಸೂಚಿಗಳನ್ನು ನೀಡಿ, ನಿಗಮ/ ಮಂಡಳಿಗಳಲ್ಲಿ ಸಹ ನಗದು ಘೋಷಣೆ ವಹಿ ನಿರ್ವಹಣೆ ಮಾಡುವಂತೆ...
ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ನ್ಯಾ.ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಬಖ್ರು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜ್ಯಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ...
BMTC ನೌಕರರಿಗೆ ಕಿರುಕುಳ: ಸಮಸ್ಯೆ ಕೇಳದ ಘಟಕ- 20ರ ಡಿಎಂ- ಸರ್ವಾಧಿಕಾರಿಯ ವರ್ತನೆ
2 ಗಂಟೆ ಬಳಿಕ ತನ್ನ ಕಚೇರಿ ಬಾಗಿಲು ಹಾಕಿಕೊಂಡು ಚೇಳಗಳ ಜತೆ ಹರಟೆ ನೌಕರರ ಸಮಸ್ಯೆ ಬಗೆಹರಿಸದೆ ದರ್ಪ ಮೆರೆಯುತ್ತಿರುವ ಕಿರಾತಕ ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ...
BMTC: ಹೋಟೆಲ್ಗೆ ನುಗ್ಗಿದ ಎಲೆಕ್ಟ್ರಿಕ್ ಬಸ್, ಓರ್ವ ಯುವತಿ ಸಾವು, ಮೂವರಿಗೆ ಗಾಯ
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಎಂದು ಕರೆಸಿಕೊಳ್ಳುವ ಬೆಂಗಳೂರು ಮಹಾನಗರ ಸಾರಿಗೆಯ ಎಲೆಕ್ಟ್ರಿಕ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಫುಟ್ಪಾತ್ಗೆ ನುಗ್ಗಿದ ಪರಿಣಾಮ ಯುವತಿಯೋರ್ವರು ಮೃತಪಪ್ಟಿದ್ದು, ಫುಟ್ಪಾತ್ ಮೇಲೆ...