NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನಾಲ್ಕೂ ಸಾರಿಗೆ ನಿಗಮಗಳ ನೌಕರರಿಗೆ ಅಕ್ಟೋಬರ್ ವೇತನದಲ್ಲೇ ಶೇ.2ರಷ್ಟು ಹೆಚ್ಚಳದ ತುಟ್ಟಿಭತ್ಯೆ ಸೇರಿಸಿ ಎಂಡಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಅಧಿಕಾರಿಗಳು, ನೌಕರರಿಗೆ ಅಕ್ಟೋಬರ್-2025 ರ ಮಾಹೆಯ ವೇತನದಲ್ಲಿ ಮತ್ತು ಮುಂದಕ್ಕೆ ತುಟ್ಟಿಭತ್ಯೆ ದರವನ್ನು ಶೇ.12.25 ರಿಂದ ಶೇ.14.25 ಕ್ಕೆ ಹೆಚ್ಚಿಸಿ ಅನುಷ್ಠಾನಗೊಳಿಸಲು KSRTC ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್‌ಪಾಷ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಇಂದು ಆದೇಶ ಹೊರಡಿಸಿರುವ ಅವರು, ಕರ್ನಾಟಕ ಸರ್ಕಾರದ ಆದೇಶ ಸಂಖ್ಯೆ: ಆಇ 18 ಎಸ್‌ಆರ್‌ಪಿ 2025, ಬೆಂಗಳೂರು 15.10.2025ರಲ್ಲಿ ಸರ್ಕಾರಿ ನೌಕರರಿಗೆ 01.07.2025 ರಿಂದ ಅನ್ವಯವಾಗುವಂತೆ ತುಟ್ಟಿಭತ್ಯೆ ದರವನ್ನು ಶೇ.12.25 ರಿಂದ ಶೇ.14.25 ಕ್ಕೆ ಹೆಚ್ಚಿಸಿ ಆದೇಶಿಸಿದೆ.

ಹೀಗಾಗಿ ರಾಜ್ಯ ಸಾರಿಗೆ ನಿಗಮಗಳಲ್ಲೂ ಕೂಡ ಈ ಪರಿಷ್ಕೃತ ತುಟ್ಟಿಭತ್ಯೆ ದರವನ್ನು ಅನುಷ್ಠಾನಗೊಳಿಸಿ ಪಾವತಿಸಲು ಕ್ರಮ ತೆಗೆದುಕೊಳ್ಳಲಾಗಿದೆ ಎಂದು ತಿಳಿಸಿದ್ದಾರೆ.

ಇನ್ನು ನಾಲ್ಕೂ ಸಾರಿಗೆ ನಿಗಮಗಳಲ್ಲೂ ಅಕ್ಟೋಬರ್-2025ರ ಮಾಹೆಯ ವೇತನದಲ್ಲಿ ಮತ್ತು ಮುಂದಕ್ಕೆ ತುಟ್ಟಿಭತ್ಯೆ ದರವನ್ನು ಶೇ.12.25 ರಿಂದ ಶೇ.14.25 ಕ್ಕೆ ಹೆಚ್ಚಿಸಿ ಅನುಷ್ಠಾನಗೊಳಿಸಬೇಕು ಎಂದು ಆದೇಶ ಮಾಡಿದ್ದಾರೆ.

ಅಲ್ಲದೆ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಅಧಿಕಾರಿಗಳು ಹಾಗೂ ಸಿಬ್ಬಂದಿಗಳಿಗೆ ಜುಲೈ-2025 ರಿಂದ ಸೆಪ್ಟೆಂಬರ್ 2025 ರವರೆಗಿನ ತುಟ್ಟಿಭತ್ಯೆ ಹಿಂಬಾಕಿ ಪಾವತಿಯ ಕುರಿತು ಪ್ರತ್ಯೇಕವಾಗಿ ಆದೇಶಿಸಲಾಗುವುದು ಎಂದು ತಿಳಿಸಿದ್ದಾರೆ.

ಜತೆಗೆ ಸಹೋದರ ಸಂಸ್ಥೆಗಳಾದ ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ, ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮ ಹಾಗೂ ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಗಳು ಹಿಂಬಾಕಿ ಪಾವತಿಯ ಕುರಿತು ಆಯಾ ಸಂಸ್ಥೆಗಳು ಆರ್ಥಿಕ ಪರಿಸ್ಥಿತಿಗನುಗುಣವಾಗಿ ನಿರ್ಧರಿಸಬೇಕು ಎಂದು ವ್ಯವಸ್ಥಾಪಕ ನಿರ್ದೇಶಕರು ಆದೇಶ ಹೊರಡಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
BMTC: ದೈಹಿಕವಾಗಿ ಫಿಟ್‌ ಇದ್ದರೂ ಲಘುಡ್ಯೂಟಿ ಮಾಡುತ್ತಿರುವ ನೌಕರರ ಸಂಘಟನೆಯ ಮುಖಂಡ- ಕಂಡು ಕಾಣದಂತೆ ಮೌನವಾಗಿರುವ ಅಧಿಕ... ಮೃತ ಗೃಹಲಕ್ಷ್ಮಿಯರ ಬ್ಯಾಂಕ್‌ ಖಾತೆ ಸೇರಿದೆ ಬರೋಬರಿ 79.75 ಕೋಟಿ ರೂ.ಗೂ ಹೆಚ್ಚು ಹಣ ಇಂದಿನಿಂದ KSRTC ಬಸ್‌ನಲ್ಲಿ ಯಾವುದೇ ವಿಶೇಷ ಕಾರ್ಡ್‌ ಇಲ್ಲದೆ ಮಹಿಳೆಯರ ಮುಕ್ತ ಪ್ರಯಾಣಕ್ಕೆ ಅವಕಾಶ- "ಪ್ರಿಯದರ್ಶಿನಿ ಯ... ಪೆಟ್ರೋಲ್, ಡೀಸೆಲ್‌ಗೆ ಪರ್ಯಾಯವಾಗಿ ನೂರಕ್ಕೆ ನೂರರಷ್ಟು ಎಥನಾಲ್ ಬಳಕೆ: ಕೇಂದ್ರ ಸರ್ಕಾರದ ನಿರ್ಧಾರ ಸ್ವಾಗತ 8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ