NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ವಿಭಾಗದಿಂದ ವಿಭಾಗಗಳಿಗೆ ಚಾಲನಾ, ತಾಂತ್ರಿಕ ಸಿಬ್ಬಂದಿಗಳ ವರ್ಗಾವಣೆ ಮಾಡದಂತೆ ಎಂಡಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಾಲಕ, ಚಾಲಕ-ಕಂ-ನಿರ್ವಾಹಕ, ನಿರ್ವಾಹಕ ಹಾಗೂ ತಾಂತ್ರಿಕ ಸಿಬ್ಬಂದಿಗಳನ್ನು ವಿಭಾಗದಿಂದ ವಿಭಾಗಗಳಿಗೆ ವರ್ಗಾವಣೆ ಮಾಡದಂತೆ ನಿಗಮದ ವ್ಯವಸ್ಥಾಪಕ ನಿರ್ದೇಶಕ ಅಕ್ರಮ್‌ ಪಾಷ ಆದೇಶ ಹೊರಡಿಸಿದ್ದಾರೆ.

ನಿಗಮದ ಕೆಲವೊಂದು ವಿಭಾಗಗಳಲ್ಲಿ ಚಾಲಕ, ಚಾಲಕ-ಕಂ-ನಿರ್ವಾಹಕ, ನಿರ್ವಾಹಕ ಹಾಗೂ ತಾಂತ್ರಿಕ ಸಿಬ್ಬಂದಿಗಳ ತೀವ್ರ ಕೊರತೆ ಇದ್ದರೂ ಸಹ ವಿಭಾಗದಿಂದ ವಿಭಾಗಕ್ಕೆ ವರ್ಗಾವಣೆ ಮಾಡುತ್ತಿರುವುದರಿಂದ ಕೆಲವೊಂದು ವಿಭಾಗಗಳಲ್ಲಿ ಚಾಲನಾ ಹಾಗೂ ತಾಂತ್ರಿಕ ಸಿಬ್ಬಂದಿಗಳ ಮಂಜೂರಾತಿ ಹಾಗೂ ಕಾರ್ಯ ನಿರ್ವಹಣೆಗಳಲ್ಲಿ ಅಸಮತೋಲನಾ ಉಂಟಾಗುತ್ತಿದೆ. ಹೀಗಾಗಿ ವರ್ಗಾವಣೆ ಮಾಡಬಾರದು ಎಂದು ತಿಳಿಸಿದ್ದಾರೆ.

ಈ ಸಂಬಂಧ ನಿಗಮದ ಮುಖ್ಯ ಸಂಚಾರ ವ್ಯವಸ್ಥಾಪಕರು (ಕಾರ್ಯಾಚರಣೆ) ಹಾಗೂ ಮುಖ್ಯ ಯಾಂತ್ರಿಕ ಅಭಿಯಂತರರಿಗೆ ನ.17ರಂದು ಆದೇಶ ಹೊರಡಿಸಿದ್ದಾರೆ.

ಪ್ರತಿ ದಿನ ಚಾಲಕ, ಚಾಲಕ-ಕಂ-ನಿರ್ವಾಹಕ, ನಿರ್ವಾಹಕ ಹಾಗೂ ತಾಂತ್ರಿಕ ಸಿಬ್ಬಂದಿಗಳ ವಿಭಾಗದಿಂದ ವಿಭಾಗಗಳ ಹಾಗೂ ಅಂತರ ನಿಗಮ ವರ್ಗಾವಣೆಗೂ ಸಹ ವಿವಿಧ ಪ್ರಾಧಿಕಾರದ ಮೂಲಕ ತೀವ್ರ ಒತ್ತಡಗಳು ಬರುತ್ತಿರುತ್ತವೆ. ಇದರಿಂದಾಗಿ ಕಾರ್ಯ ನಿರ್ವಹಣೆಯಲ್ಲಿ ಇನ್ನಷ್ಟು ವ್ಯತಿರಿಕ್ತ ಪರಿಣಾಮ ಉಂಟಾಗುವ ಸಾಧ್ಯತೆ ಇದೆ.

ಅಲ್ಲದೆ ಅಂತರ ನಿಗಮ ವರ್ಗಾವಣೆ ಮಾಡಲು ಸಹ ಶೀಘ್ರದಲ್ಲಿ ಅಧಿಸೂಚನೆ ಹೊರಡಿಸುತ್ತಿರುವುದರಿಂದ ಈ ಕೂಡಲೇ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶವರೆಗೆ ಕೇಂದ್ರ ಕಚೇರಿಯಿಂದ ಚಾಲಕ, ಚಾಲಕ-ಕಂ-ನಿರ್ವಾಹಕ, ನಿರ್ವಾಹಕ ಹಾಗೂ ತಾಂತ್ರಿಕ ಸಿಬ್ಬಂದಿಗಳ ವರ್ಗಾವಣೆಗಳನ್ನು ಮಾಡದಂತೆ ತಡೆಯಿಡಿಯಲು ಎಂಡಿ ಆದೇಶಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಸಾರಿಗೆ ನೌಕರರೇ.. ಎಚ್ಚರ! ಕೈಕಟ್ಟಿ ಕುಳಿತರೆ ನಿಮ್ಮ ನಿಮ್ಮ ಕುಟುಂಬದ ಭವಿಷ್ಯ ಶೂನ್ಯ! ನಾಳೆ ಸಕ್ಕರೆ ನಾಡು ಮಂಡ್ಯಕ್ಕೆ ಮತ್ತೊಮ್ಮೆ ಪ್ರಧಾನಿ ನರೇಂದ್ರ ಮೋದಿ: ಸ್ವಾಗತಕ್ಕೆ ಸಜ್ಜಾದ ಶ್ರೀಮಠ 6ನೇ ದಿನ ಪೂರ್ಣಗೊಂಡ ಸಾರಿಗೆ ನೌಕರರ ಪಾದಯಾತ್ರೆ: ಏ.15ರಂದು ಸೀಬಿಯಿಂದ ಮುಂದುವರಿಕೆ ಕಬ್ಬಿನ ಹಣ ಪಾವತಿಗಾಗಿ ಡಿಸಿ ಕಚೇರಿ ಮುಂದೆ ಏ.21ರಿಂದ ನಿರಂತರ ಪ್ರತಿಭಟನಾ ಧರಣಿ: ಕುರುಬೂರ್ ಶಾಂತಕುಮಾರ್ ಚುನಾವಣೆವೇಳೆ ಕೊಟ್ಟ ಭರವಸೆ ಈಡೇರಿಸಿದ್ದೇವೆ: ಶಾಸಕ ಶ್ರೀನಿವಾಸ್ ಸಾರಿಗೆ ನೌಕರರ ಬೇಡಿಕೆ ಈಡೇರಿಕೆಗೆ ಆಗ್ರಹ- ನಾಲ್ಕನೇ ದಿನಕ್ಕೆ ಕಾಲಿಟ್ಟ ಪಾದಯಾತ್ರೆ: ಇಂದು ಶಿರಾದಲ್ಲಿ ವಾಸ್ತವ್ಯ ಸಾರಿಗೆ ನೌಕರರ ಒಕ್ಕೂಟದ ಪಾದಯಾತ್ರೆಗೆ ಸಂಪೂರ್ಣ ಬೆಂಬಲ: ಮಹಾಮಂಡಳದ ಅಧ್ಯಕ್ಷ ಆರ್‌.ಪಿ.ಕೊಪರ್ಡೆ ನಡದು ಹೋಗುತ್ತಿರುವ ನಮ್ಮ ನೌಕರರಿಗೆ ಕೃತಜ್ಞತೆ ಸಲ್ಲಿಸಿ: ಸಾರಿಗೆ ನೌಕರ ಮನವಿ ಸಾರಿಗೆ ನೌಕರರ 2ನೇ ದಿನದ ಪಾದಯಾತ್ರೆ: 30 ಕಿಮೀ ನಡಿಗೆ ಯಶಸ್ವಿ- ಹಿರಿಯೂರಿನಲ್ಲಿ ವಾಸ್ತವ್ಯ ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶ ಪ್ರಕಟ- ಯಾವ ಜಿಲ್ಲೆಗೆ ಯಾವ ಸ್ಥಾನ