NEWSನಮ್ಮರಾಜ್ಯ

KSRTC: ನೌಕರರ ಮಾರ್ಚ್‌ ತಿಂಗಳ ವೇತನ ಏ.2ರಂದು ಪಾವತಿಸಲು ಎಂಡಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರಿಗೆ ಈ ಬಾರಿ ಮಾರ್ಚ್‌ ವೇತನವನ್ನು ಏಪ್ರಿಲ್‌ 2ರಂದು ಪಾವತಿಸಲು ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್‌ ಆದೇಶ ಹೊರಡಿಸಿದ್ದಾರೆ.

ಈ ಸಂಬಂಧ ಆದೇಶ ಹೊರಡಿಸಿರುವ ಅವರು, ಮಾರ್ಚ್‌ ತಿಂಗಳ ವೇತನದ ಜತೆಗೆಯಲ್ಲೇ 2023-2024 ನೇ ಸಾಲಿನ ಗಳಿಕೆ ರಜೆ ನಗದೀಕರಣ ಪಾವತಿಸಬೇಕು ಎಂದು ಮಾ.18ರಂದು ಆದೇಶ ಹೊರಡಿಸಿದ್ದಾರೆ.

ಪ್ರತಿ ತಿಂಗಳ ಮೊದಲನೆಯ ದಿನ ಅಂದರೆ 1ರಂದೆ ಸಂಸ್ಥೆಯ ನೌಕರರಿಗೆ ವೇತನ ಪಾವತಿಸಲಾಗುತ್ತಿತ್ತು. ಆದರೆ ಈ ಬಾರಿ ಮಾ.30 ಭಾನುವಾರ, ಮಾ.31ರಂದು ಸಾರ್ವತ್ರಿಕ ರಜೆ ಮತ್ತು  ಏಪ್ರೀಲ್ 1ರಂದು ಬ್ಯಾಂಕ್ ವ್ಯವಹರಿಸದೇ ಇರುವುದರಿಂದ ಮಾರ್ಚ್‌-2025 ರ ಮಾಹೆಯ ವೇತನವನ್ನು ಏಪ್ರೀಲ್2ರಂದು ಪಾವತಿಸಲಾಗುವುದು ಎಂದು ತಿಳಿಸಿದ್ದಾರೆ.

ಈ ವೇತನದೊಂದಿಗೆ 2023-2024 ರ ಸಾಲಿನ ಗಳಿಕೆ ರಜೆ ನಗದೀಕರಣದ ಮೊತ್ತವನ್ನು ಎಲ್ಲಾ ಅರ್ಹ ಅಧಿಕಾರಿ/ಸಿಬ್ಬಂದಿಗಳಿಗೆ ಸೇರಿಸಿ ಪಾವತಿಸಲು ಹಾಗೂ ಸೇವಾ ವಿಮುಕ್ತಿ ಹೊಂದಿದ ಅಧಿಕಾರಿ/ಸಿಬ್ಬಂದಿಗಳಿಗೆ ದಿನಾಂಕ 11.04.2025 ರಂದು ಧನಾದೇಶದ ಮೂಲಕ ಪಾವತಿಸಲು ಆದೇಶಿಸಿದ್ದಾರೆ.

ಎಲ್ಲಾ ಹಿರಿಯ/ ವಿಭಾಗೀಯ ನಿಯಂತ್ರಣಾಧಿಕಾರಿಗಳು, ಕಾರ್ಯ ವ್ಯವಸ್ಥಾಪಕರು, ಪ್ರಾದೇಶಿಕ ಕಾರ್ಯಾಗಾರ/ಕಾರ್ಯ ನಿರ್ವಾಹಕ ಅಭಿಯಂತರರು ತಪ್ಪದೆ ಪಾಲಿಸಬೇಕು ಎಂದು ತಿಳಿಸಿದ್ದಾರೆ.

ಈ ವಿಷಯವನ್ನು ಸಂಬಂಧಪಟ್ಟ ನಿರ್ದೇಶಕರು (ಸಿ & ಜಾ), ಎಲ್ಲ ಇಲಾಖಾ ಮುಖ್ಯಸ್ಥರು,  ಉಪ ಮುಖ್ಯ ಲೆಕ್ಕಾಧಿಕಾರಿ ಹಾಗೂ ವ್ಯವಸ್ಥಾಪಕ ನಿರ್ದೇಶಕರಆಪ್ತ ಕಾರ್ಯದರ್ಶಿ ಅವರಿಗೆ ಮಾಹಿತಿಗಾಗಿ ಆದೇಶದ ಪ್ರತಿ ರವಾನಿಸಲಾಗಿದೆ.

Deva
the authorDeva

Leave a Reply

error: Content is protected !!
Latest news
KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ BMTC: 30ನೇ ಘಟಕದ ಎಲೆಕ್ಟ್ರಿಕ್‌ ಬಸ್‌ಗಳ ಅಸಮರ್ಪಕ ಕಾರ್ಯಾಚರಣೆ ವಿರುದ್ಧ ಸಿಎಸ್‌ಗೆ ದೂರು ನೀಡಿದ ನಿರ್ವಾಹಕರು ಪಬ್‌ನಲ್ಲಿ ಸಂಭವಿಸಿದ ಭೀಕರ ಅಗ್ನಿ ಅವಘಡ -ಅಬಕಾರಿ ಡಿಸಿ ಅಮಾನತಿಗೆ ಶಿಫಾರಸು: ಸಚಿವ ಡಾ.ಯತೀಂದ್ರ ಸಿದ್ದರಾಮಯ್ಯ ಹೊಲದ ಕೂಲಿ ಕೆಲಸ ಬಿಟ್ಟು ಮತ್ತೆ ಶಿಕ್ಷಣದತ್ತ ಹೆಜ್ಜೆ ಇಟ್ಟ ವಿದ್ಯಾರ್ಥಿನಿ: ಪ್ರಾಂಶುಪಾಲರ ಮಾನವೀಯತೆಗೆ ಬೆಲೆ ಕಟ್ಟಲಾದ... ಕನಿಷ್ಠ ವಿದ್ಯಾರ್ಹತೆ SSLC ಪಾಸ್‌: ಡಿಪ್ಲೊಮಾ ಇನ್ ಕೋ ಆಪರೇಟಿವ್ ಮ್ಯಾನೇಜ್‌ಮೆಂಟ್ ಪ್ರವೇಶಕ್ಕೆ ಅರ್ಜಿ ಆಹ್ವಾನ ಕರ್ನಾಟಕದಲ್ಲಿ ‘ಕರ್ತವ್ಯ’ ಕ್ರಾಂತಿ: ಸ್ವದೇಶಿ ಎಐ ತಂತ್ರಜ್ಞಾನದ ಹೊಸ ಹೆಜ್ಜೆ ಜೂನ್, 21ರಂದು ವಿಶ್ವ ಯೋಗ ದಿನ ಆಚರಿಸೋಣ ಬನ್ನಿ ಡಿಸಿ ಡಾ.ಅನುರಾಧ ಕರೆ ಇ-ಖಾತಾ ತಿದ್ದುಪಡಿ ಜವಾಬ್ದಾರಿ ಉಪ ಆಯುಕ್ತರಿಗೆ ಕೊಡಿ: ಮಹೇಶ್ವರ್ ರಾವ್ ವಿದ್ಯುತ್ ಖಾಸಗೀಕರಣ ನಿಲ್ಲಿಸಿ: ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಆಗ್ರಹ BMTC: ದೈಹಿಕವಾಗಿ ಫಿಟ್‌ ಇದ್ದರೂ ಲಘುಡ್ಯೂಟಿ ಮಾಡುತ್ತಿರುವ ನೌಕರರ ಸಂಘಟನೆಯ ಮುಖಂಡ- ಕಂಡು ಕಾಣದಂತೆ ಮೌನವಾಗಿರುವ ಅಧಿಕ...