NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಅಶ್ವಮೇಧ ಕ್ಲಾಸಿಕ್‌ ಬಸ್‌ಗಳಿಗೆ ಮೈಸೂರಲ್ಲಿ ಉಸ್ತುವಾರಿ ಸಚಿವ ಡಾ.ಮಹದೇವಪ್ಪ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಸಾಂಸ್ಕೃತಿಕ ನಗರಿ ಮೈಸೂರಿಂದ ವಿವಿಧೆಡೆ ಸಂಚರಿಸಲಿರುವ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ 20 ನೂತನ ಅಶ್ವಮೇಧ ಕ್ಲಾಸಿಕ್‌ ಬಸ್‌ಗಳಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಶನಿವಾರ ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು.

ಮೈಸೂರು ಅರಮನೆಯ ಕೋಟೆ ಆಂಜನೇಯ ಸ್ವಾಮಿ ದೇವಾಲಯದ ಮುಂಭಾಗ ಸಂಸ್ಥೆಯ ಮೈಸೂರು ವಿಭಾಗ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮೈಸೂರು ಗ್ರಾಮಾಂತರ ಘಟಕದಿಂದ ಸಂಚರಿಸಲಿರುವ 20 ನೂತನ ಅಶ್ವಮೇಧ ಕ್ಲಾಸಿಕ್‌ ಬಸ್‌ಗಳ ಸಂಚಾರಕ್ಕೆ ಚಾಲನೆ ನೀಡಲಾಯಿತು.

ಈಗಾಗಲೇ ಬೆಂಗಳುರು, ಮಂಡ್ಯ ಸೇರಿದಂತೆ ವಿವಿಧ ಘಟಕಗಳಿಂದ ಅಶ್ವಮೇಧ ಬಸ್‌ಗಳು ಕಾರ್ಯಾಚೆಣೆ ಮಾಡುತ್ತಿದ್ದು, ಪ್ರಯಾಣಿಕರ ಮನಗೆದ್ದಿವೆ. ಇದೀಗ ಮೈಸೂರು ಘಟಕಕ್ಕೆ ಹೊಸದಾಗಿ 20 ಅಶ್ವಮೇಧ ಬಸ್‌ಗಳು ಸೇರ್ಪಡೆಗೊಂಡಿದ್ದು ಜನರ ಸೇವೆ ಆರಂಭಿಸಿವೆ.

ಮೈಸೂರು-ಬೆಂಗಳೂರು ನಡುವೆ 3 ಬಸ್, ನಂಜನಗೂಡು-ಮೈಸೂರು-ಬೆಂಗಳೂರು ನಡುವೆ 3 ಬಸ್, ನಂಜನಗೂಡು-ತಿ.ನರಸೀಪುರ-ಬೆಂಗಳೂರು ನಡುವೆ 7 ಬಸ್, ಎಚ್.ಡಿ.ಕೋಟೆ-ಬೆಂಗಳೂರು ನಡುವೆ 2 ಬಸ್, ಹುಣಸೂರು-ಬೆಂಗಳೂರು ನಡುವೆ 2 ಬಸ್, ಹಾಸನ- ಬೆಂಗಳೂರು ನಡುವೆ 2 ಬಸ್ ಹಾಗೂ ಮೈಸೂರು- ವಿರಾಜಪೇಟೆ ನಡುವೆ ಒಂದು ಬಸ್‌ ಸಂಚರಿಸಲಿದೆ.

ಅಶ್ವಮೇಧ ಬಸ್‌ಗಳ ವಿಶೇಷ: ಪಾಯಿಂಟ್ ಟು ಪಾಯಿಂಟ್ ಎಕ್ಸ್‌ಪ್ರೆಸ್ ಬಸ್‌ಗಳಾಗಿ ಅಶ್ವಮೇಧ ಕ್ಲಾಸಿಕ್ ಬಸ್‌ಗಳು ಸಂಚರಿಸಲಿವೆ. ಬಿ.ಎಸ್-6 ಮಾದರಿಯ ಈ ಬಸ್‌ಗಳು ಪರಿಸರ ಸ್ನೇಹಿ ಬಸ್‌ಗಳಾಗಿವೆ. ಸೆನ್ಸಾರ್ ಚಾಲಿತ ನ್ಯೂಮ್ಯಾಟಿಕ್ ಬಾಗಿಲು, ತುರ್ತು ಬಟನ್ ಅಳವಡಿಸಲಾಗಿದೆ. ಸಾಮಾನ್ಯ ಬಸ್‌ಗಳಿಗಿಂತ ಒಂದು ಅಡಿ ಎತ್ತರ ಹೊಂದಿರುವುದರಿಂದ ಬೆಳಕು, ಗಾಳಿ ಚನ್ನಾಗಿದೆ. ಪ್ರಯಾಣಿಕರ ಸೀಟ್ ನಡುವೆ ಹೆಚ್ಚಿನ ಸ್ಥಳಾವಕಾಶ ಇರುವುದರಿಂದ ಆರಾಮದಾಯಕ ಪ್ರಯಾಣ ಮಾಡಬಹುದಾಗಿದೆ.

ನೀರಿನ ಬಾಟಲ್ ಹಾಗೂ ಪತ್ರಿಕೆ ಇಡಲು ಪೌಚ್ ವ್ಯವಸ್ಥೆ ಇದೆ. ಮೊಬೈಲ್ ಚಾರ್ಜಿಂಗ್, ಪ್ಯಾನಿಕ್ ಬಟನ್, ಬಸ್‌ನ ಮುಂದೆ ಹಾಗೂ ಹಿಂದೆ ಸಿಸಿ ಕ್ಯಾಮರಾ ಅಳವಡಿಸಲಾಗಿದೆ.

ಶಾಸಕರಾದ ಕೆ.ಹರೀಶ್‌ಗೌಡ, ತನ್ವೀರ್‌ಸೇಠ್‌, ಮಂಜೇಗೌಡ, ಗ್ರಾಮಾಂತರ ವಿಭಾಗೀಯ ನಿಯಂತ್ರಣಾಧಿಕಾರಿ ಬಿ.ಶ್ರೀನಿವಾಸ್‌, ನಗರ ವಿಭಾಗೀಯ ನಿಯಂತ್ರಣಾಧಿಕಾರಿ ವೀರೇಶ್‌, ಕಾರ್ಮಿಕ ಕಲ್ಯಾಣಾಧಿಕಾರಿ ಪುಟ್ಟೇಗೌಡ ಮತ್ತಿತರರು ಇದ್ದರು.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ