NEWSನಮ್ಮಜಿಲ್ಲೆಮೈಸೂರು

KSRTC ಮೈಸೂರು: ಜು.29ರಿಂದ ಸಾರಿಗೆ ನೌಕರರ ಉಪವಾಸ ಸತ್ಯಾಗ್ರಹ ಹಿನ್ನೆಲೆ ನಾಳೆ ತುರ್ತು ಸಭೆ

ವಿಜಯಪಥ ಸಮಗ್ರ ಸುದ್ದಿ

ಮೈಸೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕುರಿತು ನೌಕರರ ಸಲಹೆ ಮತ್ತು ಸೂಚನೆಗಳನ್ನು ಕೇಳಿ ತೀರ್ಮಾನಿಸಲು ತುರ್ತು ಸಭೆಯನ್ನು ಇದೇ ಜು.27ರಂದು ಆಯೋಜಿಸಲಾಗಿದೆ.

ಈ ಸಭೆಯನ್ನು ಅಂದು ಸಾಯಂಕಾಲ 4 ಗಂಟೆಗೆ ಮೈಸೂರಿನ ಬಸ್ ಸ್ಟ್ಯಾಂಡ್ ಬಳಿಯ ಪಿಡಬ್ಲ್ಯೂಡಿ ಗೆಸ್ಟ್ ಹೌಸ್‌ನಲ್ಲಿ ಆಯೋಜಿಲಾಗಿದೆ.

ಹೀಗಾಗಿ ಕೂಟದ ಮೈಸೂರು ನಗರ ಮತ್ತು ಗ್ರಾಮಾಂತರ ವಿಭಾಗಗಳ, ಪದಾಧಿಕಾರಿಗಳು ಮತ್ತು ಸಕ್ರಿಯ ಕಾರ್ಯಕರ್ತರು ಜು.27ರ ಭಾನುವಾರ ಸಾಯಂಕಾಲ 4ಗಂಟೆಗೆ ನೌಕರರ ಕೂಟದ ಗೌರವಾಧ್ಯಕ್ಷ ಸುರೇಶ್ ಅಧ್ಯಕ್ಷತೆಯಲ್ಲಿ ನಡೆಯುತ್ತಿರುವ ಈ ಸಭೆಗೆ ಆಗಮಿಸಿ ಜು. 29ರಿಂದ ಹಮ್ಮಿಕೊಳ್ಳುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ಕುರಿತು ತಮ್ಮ ಸಲಹೆ ಮತ್ತು ಸೂಚನೆಗಳನ್ನು ನೀಡಬೇಕು ಎಂದು ಮನವಿ ಮಾಡಿದ್ದಾರೆ.

ತಮ್ಮ ಸಲಹೆ ಹಾಗೂ ಸೂಚನೆಗಳು ಭಾರಿ ಅಮೂಲ್ಯವಾಗಿದ್ದು ತಾವು ಈ ತುರ್ತು ಸಭೆಯಲ್ಲಿ ಭಾಗವಹಿಸಿ ಅಂತಿಮವಾಗಿ ತೀರ್ಮಾನಿಸಲು ಎರಡು ವಿಭಾಗದ ನೌಕರರು ಭಾಗವಹಿಸಬೇಕೆಂದು ಪದಾಧಿಕಾರಿಗಳು ಕೋರಿದ್ದಾರೆ.

ಇದರ ನಡುವೆ ಜು.29ರಿಂದ ಹಮ್ಮಿಕೊಳ್ಳುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹಕ್ಕೆ ಮೈಸೂರು ನಗರ ಪೊಲೀಸರಿಂದ ಅನುಮತಿ ಪಡೆಯುವ ಸಲುವಾಗಿ ಅರ್ಜಿ ಸಲ್ಲಿಸಲಾಗಿದೆ ಎಂದೂ ತಿಳಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ ಬಾಲಕಾರ್ಮಿಕ ಪದ್ಧತಿ ನಿರ್ಮೂಲನೆಗೆ ಶಿಕ್ಷಣವೊಂದೇ ಆಯುಧ: ನ್ಯಾ. ಶ್ರೀಶೈಲ್ ಭೀಮಸೇನ ಬಾಗಡಿ