CRIMENEWSಮೈಸೂರು

KSRTC ನಂಜನಗೂಡು: ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದ ಬಸ್‌- ತಪ್ಪಿದ ಭಾರಿ ಅನಾಹುತ

ವಿಜಯಪಥ ಸಮಗ್ರ ಸುದ್ದಿ

ನಂಜನಗೂಡು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗದ ಬಸ್ಸೊಂದು ಚಾಲಕನ ನಿಯಂತ್ರಣ ತಪ್ಪಿ  ವಿದ್ಯುತ್‌ ಕಂಬಕ್ಕೆ ಡಿಕ್ಕಿ ಹೊಡೆದಿದ್ದರೂ ಭಾರಿ ಅನಾಹುತವೊಂದು ತಪ್ಪಿರುವ ಘಟನೆ ತಾಲೂಕಿನ ಕಲಹಳ್ಳಿ ಗೇಟ್ ಬಳಿ ಇಂದು ನಡೆದಿದೆ.

ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕಿನ ಕಲಹಳ್ಳಿ ಗೇಟ್ ಬಳಿ ಬಸ್‌ನ ಬ್ರೇಕ್ ಫೇಲಾದ ಪರಿಣಾಮ ಬಸ್ ನೇರವಾಗಿ ವಿದ್ಯುತ್ ಕಂಬಕ್ಕೆ ಡಿಕ್ಕಿಯಾಗಿದೆ. ಈ ವೇಳೆ ಕಂಬ ಮುರಿದು ಬಿದಿದ್ದರಿಂದ ಪವರ್‌ ಕಟ್ಟಾಗಿ ಅದೃಷ್ಟವಶಾತ್‌ ಯಾವುದೇ ಪ್ರಾಣಾಪಾಯ ಸಂಭವಿಸಿಲ್ಲ.

ನಂಜನಗೂಡು ಮತ್ತು ತಿ.ನರಸೀಪುರ ನಡುವಿನ ಮಾರ್ಗದಲ್ಲಿ ಸಂಚರಿಸುತ್ತಿದ್ದ ಬಸ್, ತಿರುವು ತೆಗೆದುಕೊಳ್ಳುವ ವೇಳೆ ಚಾಲಕನ ನಿಯಂತ್ರಣ ತಪ್ಪಿದ್ದರಿಂದ ಈ ಅವಘಡ ನಡೆದಿದೆ. ಈ ವೇಳೆ  ವಿದ್ಯುತ್‌  ಕಂಬ ಮುರಿದು ಬಿದ್ದಿದ್ದರಿಂದ ವಿದ್ಯುತ್‌ ಸಂಪರ್ಕ ತಕ್ಷಣವೇ ಕಡಿತಗೊಂಡಿದೆ. ಹೀಗಾಗಿ  ಯಾವುದೇ ಅನಾಹುತ ಸಂಭವಿಸಿಲ್ಲ.

ಘಟನೆ ಸಂಭವಿಸಿದ ವೇಳೆ ಬಸ್ಸಿನಲ್ಲಿ ಹಲವಾರು ಪ್ರಯಾಣಿಕರು ಇದ್ದರೂ ಯಾವುದೇ ಗಂಭೀರ ಗಾಯಗಳಾಗಿಲ್ಲ. ಇನ್ನು ಈ ಘಟನೆಯ ಸಂಬಂಧ ಬಿಳಿಗೆರೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

ಈ ಘಟನೆಯಿಂದ ಸ್ಥಳದಲ್ಲಿ ಕೆಲಕಾಲ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಈ ಅವಘಡಕ್ಕೆ ಬಸ್‌ನ ತಾಂತ್ರಿಕ ದೋಷವೇ ಪ್ರಮುಖ ಕಾರಣವೆಂದು ಶಂಕಿಸಲಾಗಿದ್ದು ಪರಿಶೀಲನೆ ಬಳಿಕ ಸತ್ಯ ಹೊರಬೀಳಲಿದೆ.

ಯೋಗ್ಯವಲ್ಲ ಬಸ್‌ಗಳನ್ನು  ಚಾಲಕರಿಗೆ ಓಡಿಸಲು ಅಧಿಕಾರಿಗಳು ಒತ್ತಡ ಹೇರುತ್ತಿರುವುದರಿಂದ ಇಂಥ ಅನಾಹುತನಗಳು ಸಂಬವಿಸುತ್ತಿವೆ ಎಂದು ಚಾಲನಾ ಸಿಬ್ಬಂದಿಗಳು ಆರೋಪಿಸುತ್ತಿದ್ದಾರೆ. ಒಂದು ವೇಳೆ ನಿರ್ವಾಹಣೆ ಮಾಡದ ಬಸ್‌ಅನ್ನು ಅಧಿಕಾರಿಗಳು ಕೊಟ್ಟಿದ್ದರೆ ಅಂಥ ಅಧಿಕಾರಿಗಳನ್ನು ಅಮಾನತು ಮಾಡಿ ಸೂಕ್ತ ಕ್ರಮ ಜರುಗಿಸಬೇಕು ಎಂದು ಸಾರ್ವಜನಿಕರು ಆಗ್ರಹಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC: ಶೇ.12-15ರ ನಡುವೆ ವೇತನ ಹೆಚ್ಚಳ ಬಹುತೇಕ ಖಚಿತ, ಅಧಿಕೃತ ಆದೇಶ ಹೊರಬೀಳುವುದೊಂದೆ ಬಾಕಿ ! ಜನರ ಆಶೀರ್ವಾದವಿರುವ ನಮ್ಮ 'ಕುರ್ಚಿ'ಗಳು ಭದ್ರವಾಗಿವೆ, ಕನ್ನಡಿಗರು ಕೇಳುತ್ತಿರುವ ಈ ಪ್ರಶ್ನೆಗಳಿಗೆ ಮೊದಲು ಉತ್ತರ ನೀಡಿ... KSRTC: ಬ್ರೇಕ್ ಫೇಲಾಗಿ ಕಾಂಪೌಂಡ್‌ಗೆ ಡಿಕ್ಕಿ ಹೊಡೆದ ಬಸ್‌- ತಪ್ಪಿದ ಭಾರಿ ಅನಾಹುತ ನಾಗಮಲೆ ಬಳಿ ಚಿರತೆ ದಾಳಿಗೆ ಮೃತಪಟ್ಟ ಬಾಲಕನ ಕುಟುಂಬಕ್ಕೆ ₹20 ಲಕ್ಷ ಪರಿಹಾರ KKRTC ದ್ವಂದ್ವ ನಿಲುವಿಗೆ ಹೈಕೋರ್ಟ್‌ ತೀವ್ರ ಅಸಮಾಧಾನ- 25 ಸಾವಿರ ರೂ. ದಂಡ, ಅಧಿಕಾರಿಗಳಿಂದಲೇ ವಸೂಲಿಗೆ ಆದೇಶ ತಮಿಳುನಾಡಿನ ನೂತನ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ತಮಿಳಗ ವೆಟ್ರಿ ಕಳಗಂ ನಾಯಕ ದಳಪತಿ ವಿಜಯ್ ಅತೀ ಶೀಘ್ರದಲ್ಲೇ KSRTC ನಾಲ್ಕೂ ನಿಗಮಗಳ ಸಾರಿಗೆ ಕಾರ್ಮಿಕ ಸಂಘಟನೆಗಳ ಚುನಾವಣೆ ! ರಾಜ್ಯದ ಯೋಜನೆ ಮತ್ತು ಸಾಂಖ್ಯಿಕ ಇಲಾಖೆ ಸಚಿವ ಡಿ.ಸುಧಾಕರ್ ನಿಧನ NWKRTC: ಮೇ 11ರಂದು ಹಾಲಿ ನೌಕರರಿಗೆ, ಮೇ 15ರಂದು ನಿವೃತ್ತರಿಗೆ ಮೇ18ರಂದು ವರ್ಗಾವಣೆಗೊಂಡ ನೌಕರರಿಗೆ 11 ತಿಂಗಳುಗಳ ವೇ... ಮೇ 11ರಂದು KSRTC ನೌಕರರಿಗೆ 11 ತಿಂಗಳು- KKRTC ನೌಕರರಿಗೆ 12 ತಿಂಗಳುಗಳ ವೇತನ ಹಿಂಬಾಕಿ ಪಾವತಿಗೆ ಆದೇಶ