KSRTC “ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ”: ನೌಕರರಿಗೆ 38 ತಿಂಗಳ ಹಿಂಬಾಕಿ, 2024ರ ವೇತನ ಹೆಚ್ಚಳ ಮಾಡಲಾಗದಿದ್ದರೂ ಸರ್ಕಾರದಿಂದ “ಶಕ್ತಿಯ” ಒಣಾಡಂಬರ..!

ಬೆಂಗಳೂರು: “ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ” ಅಂದಂಗೆ ಸಾರಿಗೆ ನೌಕರರಿಗೆ 38 ತಿಂಗಳ ವೇತನ ಹೆಚ್ಚಳದ ಹಿಂಬಾಕಿ ಕೊಟ್ಟಿಲ್ಲ. ಜತೆಗೆ 2024ರ ಜನವರಿ 1ರಿಂದ ಜಾರಿಗೆ ಬರುವಂತೆ ವೇತನ ಹೆಚ್ಚಳ ಮಾಡಿಲ್ಲ. ಈ ವೇತನ ಹೆಚ್ಚಳ ಮಾಡಿದರೆ ಮತ್ತೆ 18 ತಿಂಗಳ ಇದರ ಹಿಂಬಾಕಿಯನ್ನು ಕೊಡಬೇಕು ಇದರ ಬಗ್ಗೆ ಕ್ರಮ ಕೈಗೊಳ್ಳದ ಸರ್ಕಾರ ಶಕ್ತಿ ಯೋಜನೆ ಹೆಸರಿನಲ್ಲಿ ಜನರ ದುಡ್ಡಿನಿಂದ ಸಂಭ್ರಮಿಸುತ್ತಿದೆ.
ಅದಕ್ಕೆ ಹೇಳುತ್ತಿರುವುದು “ಹೊಟ್ಟೆಗೆ ಹಿಟ್ಟಿಲ್ಲ ಜುಟ್ಟಿಗೆ ಮಲ್ಲಿಗೆ” ಇದು ಕನ್ನಡದ ಗಾದೆ. ಇದರ ಅರ್ಥವೇನೆಂದರೆ, ಊಟಕ್ಕೂ ಗತಿ ಇಲ್ಲದಿದ್ದರೂ, ತೋರಿಕೆಗೆ ಚೆನ್ನಾಗಿ ಕಾಣಿಸಿಕೊಳ್ಳುವುದು ಅಥವಾ ಆಡಂಬರ ಮಾಡುವುದು. ಅಂದರೆ ನ್ಯಾಯಯುತವಾಗಿ ನೌಕರಿಗೆ ಕೊಡಬೇಕಿರುವ ವೇತನವನ್ನು ಕೊಡುವ ಬಗ್ಗೆ ಮಾತನಾಡುತ್ತಿಲ್ಲ.
ಆದರೆ ನಾಡಿನ ಜನರ ಮೆಚ್ಚುಗೆಗಾಗಿ ಅನಗತ್ಯವಾಗಿ ಸಾರ್ವಜನಿಕರ ಹಣ ವ್ಯಯಿಸಿ ಶಕ್ತಿ ಯೋಜನೆ ಹೆಸರಿನಲ್ಲೂ ಕೊಳ್ಳೆಹೊಡೆಯುವ ಹುನ್ನಾರ ಮಾಡುತ್ತಿದೆ ಈ ನಾಚಿಕೆ ಇಲ್ಲದ ಸರ್ಕಾರ. ನೌಕರರಿಗೆ ಸಿಗಬೇಕಿರುವ ಮೂಲಭೂತ ಅವಶ್ಯಕತೆಗಳನ್ನು ಪೂರೈಸದಿದ್ದರೂ ಈ ತೋರಿಕೆಯ ಆಡಂಬರದಲ್ಲಿ ತೊಡಗುವುದು ಎಷ್ಟು ಸರಿ ಎಂದು ಪ್ರಜ್ಞಾವಂತ ನಾಗರಿಕರು ಚೀಮಾರಿ ಹಾಕುತ್ತಿದ್ದಾರೆ ಈ ಸರ್ಕಾರಕ್ಕೆ.
ಇನ್ನು ಈಗಲಾದರೂ ತಾವು ವಿಧಾನಸಭೆ ಚುನಾವಣೆ ವೇಳೆ ಪ್ರಣಾಳಿಕೆಯಲ್ಲಿ ಕೊಟ್ಟಿರುವ ಭರವಸೆಯಂತೆ ನೌಕರರಿಗೆ ಸರಿ ಸಮಾನ ವೇತನ ಮಾಡಬೇಕು. ಜತೆಗೆ 38 ತಿಂಗಳ ಹಿಂಬಾಕಿ ಕೊಡಬೇಕು. ನೌಕರರಿಗೆ ಸಿಗಬೇಕಿರುವ ಇತರ ಸಲವತ್ತುಗಳನ್ನು ಕೂಡಲೇ ಕೊಡುತ್ತೇವೆ ಎಂದು ಘೋಷಣೆ ಮಾಡಬೇಕು ಎಂದು ಸಿಎಂ ಸಿದ್ದರಾಮಯ್ಯಗೆ ಇದೇ ನಾಡಿನ ಜನ ಆಗ್ರಹಿಸಿದ್ದಾರೆ.
ಇನ್ನು ಸಾರಿಗೆ ಸಚಿವರು ಹಳೆ ಕತೆಯನ್ನೇ ಅಂದರೆ ಹಿಂದಿನ ಬಿಜೆಪಿ ಸರ್ಕಾರ 5900 ಕೋಟಿ ರೂ. ಹೊರೆ ಹಾಕಿ ಹೋಯಿತು ಎಂದು ಹೇಳಿಕೊಂಡು ತಿರುಗುತ್ತಿರುವುದು ಬಿಟ್ಟರೆ ಅಧಿಕಾರ ವಹಿಸಿಕೊಂಡ ಈವರೆಗೂ ಇವರಿಗೆ ನೌಕರರಿಗೆ ಕೊಡಬೇಕಿರುವ 38 ತಿಂಗಳ ಹಂಬಾಕಿ ಕೊಡುವುದಕ್ಕೂ ಆಗಿಲ್ಲ. ಆದರೆ ಸಾರಿಗೆ ನೌಕರರು ನಮ್ಮ ಕುಟುಂಬ ಇದ್ದಂತೆ ಎಂದು ತಲೆಮೇಲೆ ಕೈಯಾಡಿಸುತ್ತ ನೌಕರರನ್ನು ಕಳೆದ 2 ವರ್ಷಗಳಿಂದಲೂ ಯಾಮಾರಿಕೊಂಡು ಬರುವುದರಲ್ಲಿ ಭಾರೀ ಜಾಣ್ಮೆ ಪ್ರದರ್ಶಿಸುತ್ತಿದ್ದಾರೆ.
ಈ ನಡುವೆ ಸಾರಿಗೆ ನೌಕರರಿಗೆ ಸಿಗಬೇಕಿರುವ ನ್ಯಾಯಯುತ ಸೌಲಭ್ಯ ಕೊಡಿಸುವುದಕ್ಕೆ ಮುಂದಾಗಬೇಕಾದ ಸಂಘಟನೆಗಳು ತಮ್ಮ ಸ್ವಾರ್ಥಕ್ಕಾಗಿ ಒಬ್ಬರಿಗೊಬ್ಬರು ಮಾಧ್ಯಮಗಳ ಮುಂದೆ ನಿಂದಿಸಿಕೊಳ್ಳುವುದರಲ್ಲೇ ಕಾಲ ಕಳೆಯುತ್ತಾಲೇ 4-5 ಕಳೆದಿದ್ದಾರೆ. ಇದರಿಂದ ನೌಕರರಿಗೆ ಪ್ರಯೋಜನವಾಗಿದ್ದಾದರು ಏನು?
ಇನ್ನು ನಾವು ಸರಿ ಸಮಾನ ವೇತನ ಕೊಡಿಸುತ್ತೇವೆ ದುಡುಕಬೇಡಿ ಎಂದು ಹೇಳಿಕೊಳ್ಳುತ್ತಿರುವ ಕೂಟ ಈವರೆಗೂ ಈ ಹೇಳಿಕೆ ಕೊಡುವುದನ್ನು ಬಿಟ್ಟರೆ ಮತ್ತೇನನ್ನು ಮಾಡುತ್ತಿಲ್ಲ. ಇತ್ತ ಜಂಟಿ ಕ್ರಿಯಾ ಸಮಿತಿಯ ಪದಾಧಿಕಾರಿಗಳು ಇಲ್ಲ ಇಲ್ಲ ಸಾರಿಗೆ ಕಾರ್ಮಿಕರಿಗೆ ಸರ್ಕಾರಿ ನೌಕರರಿಗಿಂತ ಹೆಚ್ನ ವೇತನ ಸಿಗುವಂತೆ ಮಾಡುವುದೇ ನಮ್ಮ ಗುರಿ ನಾವೇಕೆ ಸರಿ ಸಮಾನ ವೇತನ ಕೇಳಬೇಕು ಅದಕ್ಕಿಂತಲೂ ಹೆಚ್ಚಿನ ವೇತನ ಕೊಡಿಸುತ್ತೇವೆ ಎಂದು ಕೇವಲ ಶೇ.25ರಷ್ಟು ವೇತನ ಹೆಚ್ಚಳ ಮಾಡಿ ಎಂದು ಸರ್ಕಾರಕ್ಕೆ ಆಗ್ರಹ ಮಾಡುತ್ತಾರೆ.
ಶೇ.40ರಿಂದ 45ರಷ್ಟು ವೇತನ ಕಡಿಮೆ ಪಡೆಯುತ್ತಿರುವ ನೌಕರರಿಗೆ ಇವರ ಒತ್ತಾಯದಂತೆ ಸರ್ಕಾರ ಶೇ.25ರಷ್ಟು ವೇತನ ಹೆಚ್ಚಳ ಮಾಡಿದರೆ ಸರ್ಕಾರಿ ನೌಕರರಿಗಿಂತಲೂ ಹೆಚ್ಚಿನ ವೇತನ ಕೊಡಿಸಿದಂತಾಗುತ್ತದೆಯೇ? ಇಲ್ಲ ಮತ್ತೆ 2028ಕ್ಕೆ ಇನ್ನೊಂದು ಒಪ್ಪಂದವಾಗುತ್ತದೆ ಆ ವೇಳೆ ಮತ್ತೆ ಶೇ.25ರಷ್ಟು ವೇತನ ಹೆಚ್ಚಳ ಮಾಡಿದರೆ ಸರ್ಕಾರಿ ನೌಕರರಿಗಿಂತ ಹೆಚ್ಚಾಗುತ್ತದೆ ಎಂದು ಹೇಳುತ್ತಾರೆ.
ಅಂದರೆ, ಈಗ ಕಡಿಮೆ ತೆಗೆದುಕೊಳ್ಳಿ ಮುಂದೆ ಹೆಚ್ಚಾಗುತ್ತದೆ ಎಂಬುವುದು ಇವರ ಮಾತು. ಆದರೆ ಈ 2024-2028ರ ನಡುವೆ ನಿವೃತ್ತಿ ಹೊಂದುವವರಿಗೆ ಎಷ್ಟು ವೇತನ ಹೆಚ್ಚಳವಾದಂತಾಗುತ್ತದೆ. ಅವರಿಗೆ ಲಾಸ್ ಆಗುವುದಿಲ್ಲವೇ ಎಂದರೆ ಅದಕ್ಕೆ ನಾವೇನು ಮಾಡುವುಕ್ಕೂ ಆಗುವುದಿಲ್ಲ ಎಂಬ ಹೇಳಿಕೆ ನೀಡುತ್ತಾರೆ ಈ ಜಂಟಿಯವರು. ಇದಕ್ಕೆ ಏನು ಹೇಳಬೇಕು?
ಏನೆ ಆಗಲೇ ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಆಗಲೇ ಬೇಕು ಎಂದು ಕಳೆದ 5 ವರ್ಷಗಳಿಂದಲೂ ಪಟ್ಟು ಹಿಡಿದಿರುವ ನೌಕರರ ಒಕ್ಕೂಟ ಈಗಲಾದರೂ ತಮ್ಮ ಬೇಡಿಕೆ ಈಡೇರಿಸಲೇ ಬೇಕು ಎಂದು ಒಂದು ಗಡುವನ್ನು ನೀಡಬೇಕು. ಆ ಗಡುವಿನಲ್ಲಿ ಸರ್ಕಾರ ವೇತನ ಹೆಚ್ಚಳ ಮಾಡದಿದ್ದರೆ ಅಧಿಕಾರಿಗಳ ಒಳಗೊಂಡಂತ್ತೆ ಹೋರಾಟಕ್ಕೆ ದುಮುಕಬೇಕು. ಹೀಗೆ ಆದರೆ ಸರ್ಕಾರ ತಾನು ಕೊಟ್ಟಿರುವ ಭರವಸೆ ಈಡೇರಿಸುತ್ತದೆ ಇಲ್ಲ ಹೀಗೆ ಕಾಲ ದೂಡುತ್ತಲೇ ಹೋಗುತ್ತದೆ. ಹೀಗಾಗಿ ಈಗಲಾದರೂ ಒಕ್ಕೂಟ ಹಾಗೂ ಸಾರಿಗೆ ಅಧಿಕಾರಿಗಳು ಎಚ್ಚೆತ್ತುಕೊಳ್ಳಬೇಕು ಎಂಬುವುದು ಸಾಮಾನ್ಯ ನೌಕರರ ಆಗ್ರಹ.
Related

You Might Also Like
BMTC ಚಾಲನಾ ಸಿಬ್ಬಂದಿಗಳ ಡ್ಯೂಟಿ ರೋಟಾ ಕೌನ್ಸೆಲಿಂಗ್ಗೆ ಸಿಟಿಎಂ ಆದೇಶ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಪೂರ್ವ, ಪಶ್ಚಿಮ, ಉತ್ತರ, ದಕ್ಷಿಣ, ಈಶಾನ್ಯ, ವಾಯುವ್ಯ ಹಾಗೂ ಕೇಂದ್ರೀಯ ವಲಯದ ವಿಭಾಗೀಯ ನಿಯಂತ್ರಣಾಧಿಕಾರಿಗಳು ಚಾಲನಾ ಸಿಬ್ಬಂದಿಗಳನ್ನು ಹೊಸದಾಗಿ ಕೌನ್ಸೆಲಿಂಗ್...
KSRTC: ಆಗಸ್ಟ್ 5ರಿಂದ ವೇತನ ಹೆಚ್ಚಳಕ್ಕೆ ಆಗ್ರಹಿಸಿ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಮುಷ್ಕರ ಪಕ್ಕ!
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಪಾವತಿ ಹಾಗೂ 2024ರ ಜನವರಿ 1ರಿಂದ ಆಗಬೇಕಿರುವ...
ಆ.5ರಿಂದ ಅನಿರ್ದಿಷ್ಟಾವಧಿ ಸಾರಿಗೆ ಮುಷ್ಕರ: ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಪಾವತಿ ಹಾಗೂ 2024ರ ಜನವರಿ 1ರಿಂದ ಆಗಬೇಕಿರುವ...
KSRTC ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ: ಹಲವು ಪ್ರಯಾಣಿಕರಿಗೆ ಗಾಯ
ಹಾಸನ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ಗಳ ನಡುವೆ ಮುಖಾಮುಖಿ ಡಿಕ್ಕಿ ಸಂಭವಿಸಿದ ಘಟನೆ ಸಕಲೇಶಪುರ ತಾಲೂಕಿನ ವೆಂಕಟಿಹಳ್ಳಿ ಗ್ರಾಮದ ಬಳಿ ಇಂದು ಬೆಳಗ್ಗೆ ನಡೆದಿದೆ....
ಚಲಿಸುತ್ತಿದ್ದ ಬಸ್ನಲ್ಲೇ ಗಂಡು ಮಗುವಿಗೆ ಜನ್ಮನೀಡಿ ಕಿಟಕಿಯಿಂದ ಎಸೆದ ಪಾಪಿ ತಾಯಿ
ಮುಂಬೈ: ಬಸ್ನಲ್ಲಿ ಪ್ರಯಾಣಿಸುತ್ತಿದ್ದ ಗರ್ಭಿಣಿ ಬಸ್ನಲ್ಲೇ ಮಗುವಿಗೆ ಜನ್ಮನೀಡಿ ಬಳಿಕ ಕಿಟಕಿಯಿಂದ ಆ ನಮಜಾತ ಶಿಶುವನ್ನು ಎಸೆದು ಕೊಂದಿರುವ ಘಟನೆ ಮಹಾರಾಷ್ಟ್ರದ ಪರ್ಭಾನಿ ನಗರದ ಪತ್ರಿ-ಸೇಲು ರಸ್ತೆಯಲ್ಲಿ...
ಕೃಷಿ ಭೂಮಿ ಕಳೆದು ಕೊಳ್ಳುತ್ತಿರುವ ರೈತರಿಗೆ ನ್ಯಾಯ ಸಮ್ಮತ ಪರಿಹಾರ ನೀಡಲು ಪಟ್ಟು: ಡಿಸಿ ಕಚೇರಿ ಬಳಿ ರೈತ ಮುಖಂಡರ ಪ್ರತಿಭಟನೆ
ಮೈಸೂರು: 66/11 ಕೆ.ವಿ. ಮತ್ತು 220 ಕೆವಿ ಸಾಮರ್ಥ್ಯದ ವಿದ್ಯುತ್ ಪ್ರಸರಣ ನಿಗಮದ ತಂತಿ ರೈತರ ಜಮೀನಿನ ಮೇಲೆ ಹಾದು ಹೋಗಿರುವುದರಿಂದ ಕೃಷಿ ಭೂಮಿ ಕಳೆದು ಕೊಳ್ಳುತ್ತಿರುವ...
ಬಿ.ಸರೋಜಾದೇವಿ ಮೇರು ನಟಿ: ಅಂತಿಮ ದರ್ಶನ ಪಡೆದ ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಬಿ.ಸರೋಜಾದೇವಿ ಒಬ್ಬ ಮೇರು ನಟಿ. ಪಂಚಭಾಷೆ ತಾರೆಯಾಗಿ ಕನ್ನಡ, ತಮಿಳು, ತೆಲುಗು, ಹಿಂದಿ ಭಾಷೆಗಳಲ್ಲಿ ಪಾತ್ರಗಳನ್ನು ಮಾಡಿ ಸೈ ಎನಿಸಿಕೊಂಡಿದ್ದ ಅದ್ಭುತ ನಟಿ ಎಂದು ಮುಖ್ಯಮಂತ್ರಿ...
ದೇವನಹಳ್ಳಿ ತಾಲೂಕಿನ ಭೂಸ್ವಾಧೀನ ಪ್ರಕ್ರಿಯೆ ಸಂಪೂರ್ಣ ಕೈಬಿಟ್ಟಿದ್ದೇವೆ: ಸಿಎಂ
ಬೆಂಗಳೂರು: ದೇವನಹಳ್ಳಿ ತಾಲೂಕು ಚನ್ನರಾಯಪಟ್ಟಣ ಹಾಗೂ ಇತರ ಗ್ರಾಮಗಳಲ್ಲಿನ ಭೂಸ್ವಾಧೀನ ಪ್ರಕ್ರಿಯೆಯನ್ನು ಸಂಪೂರ್ಣವಾಗಿ ಕೈಬಿಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ. ಇಂದು ತಮ್ಮ ಅಧ್ಯಕ್ಷತೆಯಲ್ಲಿ ವಿಧಾನಸೌಧದ ಸಭಾಂಗಣದಲ್ಲಿ...
KKRTC ವೋಲ್ವೋ ಬಸ್ – ಟ್ರಕ್ ನಡುವೆ ಭೀಕರ ಅಪಘಾತ: ಚಾಲಕನ ಕಾಲಿಗೆ ತೀವ್ರಪೆಟ್ಟು
ಚಿತ್ರದುರ್ಗ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ವೋಲ್ವೋ ಬಸ್ ಹಾಗೂ ಟ್ರಕ್ ನಡುವೆ ಇಂದು ಮುಂಜಾನೆ ಸಂಭವಿಸಿದ ಭೀಕರ ಅಪಘಾತದಲ್ಲಿ ಬಸ್ ಚಾಲಕನ ಕಾಲು ಮುರಿದಿದ್ದು,...