NEWSದೇಶ-ವಿದೇಶನಮ್ಮಜಿಲ್ಲೆ

KSRTC ಅಧಿಕಾರಿಗಳ ಕಳ್ಳಾಟ: ಕರ್ನಾಟಕ – ಆಂಧ್ರ ನಡುವೆ ಸಂಸ್ಥೆ ಬಸ್‌ಗಳ ಬದಲಿಗೆ ಖಾಸಗಿ ಬಸ್‌ಗಳ ದರ್ಬಾರ್‌!

ತುಂಬುತ್ತಿದೆ ಅಧಿಕಾರಿಗಳ ಜೇಬು l ಬರಿದಾಗುತ್ತಿದೆ ಸಂಸ್ಥೆಯ ಖಜಾನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಬೆಂಗಳೂರಿನಿಂದ ಆಂಧ್ರಪ್ರದೇಶದ ಕಡಪಾ ಹಾಗೂ ತಿರುಪತಿ ನಡುವೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಬಸ್‌ಗಳ ಸಂಚಾರ ವಿರಳವಾಗಿರುವುದರಿಂದ ಜನರು ಪರದಾಡುವ ಸ್ಥಿತಿ ನಿರ್ಮಾಣವಾಗಿದೆ.

ಆಂಧ್ರ ಪ್ರದೇಶದ ಕಡಪಾದಲ್ಲಿ ಹಾಗೂ ತಿರುಪತಿಯಲ್ಲಿ ಕನ್ನಡಿಗರು ಅಧಿಕ ಸಂಖ್ಯೆಯಲ್ಲಿ ವಾಸವಾಗಿದ್ದಾರೆ. ಅಲ್ಲದೇ ಶ್ರೀಕ್ಷೇತ್ರ ರಾಯಚೂತಿ ವೀರಭದ್ರೇಶ್ವರ ದೇವಸ್ಥಾನಕ್ಕೆ ಹೋಗಲು ಜನರಿಗೆ ಕಡಪಾ ಅಥವಾ ತಿರುಪತಿ ಬಸ್ ಅವಶ್ಯಕತೆ ಇದೆ. ಜನರ ಅನುಕೂಲಕ್ಕೆ ತಕ್ಕಂತೆ KSRTC ಬಸ್‌ಗಳನ್ನು ಬಿಡದಿರುವುದರಿಂದ ಕಡಪಾ, ತಿರುಪತಿ ಹಾಗೂ ಬೆಂಗಳೂರು ನಡುವೆ ಸಂಚರಿಸುವ ಸಾರ್ವಜನಿಕರಿಗೆ ನಿತ್ಯ ಸಮಸ್ಯೆಯಾಗಿದೆ.

ಹೀಗಾಗಿ ಪ್ರತಿನಿತ್ಯ ಪರದಾಡುತ್ತಿರುವ ಜನರಿಗೆ ಅನುಕೂಲ ಕಲ್ಪಿಸುವ ನಿಟ್ಟಿನಲ್ಲಿ ಅವಶ್ಯಕತೆಗೆ ತಕ್ಕಂತೆ ಬಸ್ ವ್ಯವಸ್ಥೆ ಕಲ್ಪಿಸಬೇಕು. ಸುರಕ್ಷಿತ ಪ್ರಯಾಣಕ್ಕೆ ಅನುಕೂಲ ಕಲ್ಪಿಸಲು ಹಾಗೂ ಗಡಿಯಿಂದಾಚೆಗೆ ತೆರಳುವ ಕನ್ನಡಿಗರಿಗೆ ಉತ್ತಮ ಸೇವೆ ಒದಗಿಸಲು ಸರ್ಕಾರ ಬಸ್ ಸೇವೆ ಒದಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಖಾಸಗಿ ಬಸ್‌ಗಳ ದರ್ಬರ್‌: ಕೋಲಾರ ಜಿಲ್ಲೆಯಿಂದ ಆಂಧ್ರದ ಮದನಪಲ್ಲಿ ಪುಂಗನೂರು, ರಾಯಚೂತಿ, ಚಂಬಕೂರು ರಾಮಸಮುದ್ರಂ ನಡುವೆ ಸಂಚರಿಸುತ್ತಿದ್ದ ರಾಜ್ಯ ಸಾರಿಗೆ ಸಂಸ್ಥೆ ಬಸ್‌ಗಳ ಮಾರ್ಗಗಳನ್ನು ನಿಲ್ಲಿಸುವಲ್ಲಿ ಮದನಪಲ್ಲಿಯ ವೈಎಸ್‌ಆರ್‌ಸಿಪಿ ಶಾಸಕ ಮಹಮದ್ ನವಾಜ್ ಬಾಷಾ ಅವರು ಯಶಸ್ವಿಯಾಗಿದ್ದಾರೆ.

ಕೋಲಾರ-ಚಿಕ್ಕಬಳ್ಳಾಪುರದ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಅಧಿಕಾರಿಗಳ ಮೇಲೆ ಸ್ಥಳೀಯ ಶಾಸಕರು, ಪ್ರಭಾವಿ ರಾಜಕಾರಣಿಗಳ ಮೂಲಕ ಒತ್ತಡ ಹೇರಿ ಮದನಪಲ್ಲಿ ಶಾಸಕ ಮಹಮದ್ ನವಾಜ್ ಬಾಷಾ ಮಾಲೀಕತ್ವದ ಬಸ್‌ಗಳ ಓಡಾಟವನ್ನು ಈ ಭಾಗದಲ್ಲಿ ಹೆಚ್ಚಿಸಿದ್ದು, KSRTC ಬಸ್‌ಗಳ ಓಡಾಟಕ್ಕೆ ನಿಲ್ಲಿಸಿದ್ದಾರೆ. ಇದರಿಂದ ಈ ಮಾರ್ಗಗಳಲ್ಲಿ ನಿತ್ಯ ಓಡಾಡುವ ಸಾರ್ವಜನಿಕರು ಹೆಚ್ಚಿನ ದರಕೊಟ್ಟು ಸಂಚರಿಸಬೇಕಾದ ಸ್ಥಿತಿ ನಿರ್ಮಾಣವಾಗಿದೆ ಎಂಬ ಆರೋಪ ಕೇಳಿ ಬಂದಿದೆ.

ಖಾಸಗಿ ಬಸ್‌ ಮಾಲೀಕರ ಜತೆ ಕೈಜೋಡಿಸಿದ KSRTC ಅಧಿಕಾರಿಗಳು: ಕರ್ನಾಟಕ ಮತ್ತು ಆಂಧ್ರದ ಗಡಿಯಿಂದ, ಬೆಂಗಳೂರಿ-ಚಿಂತಾಮಣಿ – ಮದನಪಲ್ಲಿ – ರಾಯಚೋತಿ -ಕಡಪ ಮತ್ತು ಬೆಂಗಳೂರು – ಚಿಂತಾಮಣಿ ಮೂಲಕ ಮದನಪಲ್ಲಿಗೆ, ಬೆಂಗಳೂರು – ಯಲಹಂಕ – ಚಿಂತಾಮಣಿ- ಮದನಪಲ್ಲಿ ಪೈಲರ್ ತಿರುಪತಿಗೆ ತೆರಳುವ ಕೆಎಸ್‌ಆರ್‌ಟಿಸಿ ಬಸ್‌ಗಳನ್ನು ಹೆಚ್ಚಿನ ಸಂಖ್ಯೆಯಲ್ಲಿ ಬಿಡಬೇಕು.

ಆದರೆ, KSRTC ಬಸ್‌ಗಳು ತೀರಾ ಕಡಿಮೆ ಬಿಟ್ಟಿದ್ದು, ಅದೂ ಕೂಡ ನಿಯಮಿತ ಸೇವೆಗೆ ನಿತ್ಯ ಮತ್ತು ವಾರಾಂತ್ಯ ಹಾಗೂ ಹಬ್ಬ ಹರಿದಿನಗಳಲ್ಲಿ ಭಾರಿ ಬೇಡಿಕೆ ಇದೆ. ಆದರೆ, ಕೋಲರಾದ ವಿಭಾಗದ ಅಧಿಕಾರಿಗಳು ಖಾಸಗಿ ಬಸ್‌ ಮಾಲೀಕರ ಜತೆ ಕೈ ಜೋಡಿಸಿ KSRTC ಬಸ್‌ ಓಡಾಡುವ ಮಾರ್ಗದಲ್ಲಿ ಖಾಸಗಿ ಬಸ್‌ಗಳು ಓಡಾಡುವಂತೆ ನೋಡಿಕೊಳ್ಳುತ್ತಿದ್ದಾರೆ. ಇದು ಸಂಸ್ಥೆಗೆ ಅಧಿಕಾರಿಗಳು ಮಾಡುತ್ತಿರುವ ಮೋಸವಾಗಿದೆ.

ಇನ್ನದಾರು ಎಚ್ಚೆತ್ತುಕೊಂಡು KSRTC ಕೋಲಾರ ವಿಭಾಘದ ಅಧಿಕಾರಿಗಳು ಪ್ರತಿ ಅರ್ಧಗಂಟೆಗೆ ಒಂದು ksrtc ಬಸ್‌ಗಳ ಸೇವೆಯನ್ನು ಪ್ರತಿದಿನ ಮತ್ತು ವಾರಾಂತ್ಯ ಮತ್ತು ವಿಶೇಷ ದಿನಗಳಲ್ಲಿ ಮುಂಜಾನೆ 5ಗಂಟೆಯಿಂದ ಮಧ್ಯರಾತ್ರಿ 12ರ ವರೆಗೆ ಸಂಸ್ಥೆಯ ಬಸ್‌ಗಳನ್ನು ಬಿಡಬೇಕು ಎಂದು ಮನವಿ ಮಾಡಿದ್ದಾರೆ.

ಇನ್ನು ಖಾಸಗಿ ಬಸ್ ಬಸ್‌ಗಳ ಧನದಾಹಕ್ಕೆ ಸಾರ್ವಜನಿಕರು ಹೈರಾಣಾಗಿದ್ದಾರೆ. ಇತ್ತ KSRTC ಬಸ್‌ಗಳು ಕಡಿಮೆ ಬಿಟ್ಟಿರುವುದರಿಂದ ಸಂಸ್ಥೆಗೆ ಬರಬೇಕಿರುವ ಆದಾಯದಲ್ಲೂ ಕುಂಟಿತವಾಗುತ್ತಿದೆ. ಹೆಚ್ಚು ಆದಾಯ ಬರುವ ಈ ಮಾರ್ಗಗಳನ್ನು ಖಾಸಗಿ ಬಸ್‌ ಮಾಲೀಕರಿಗೆ ಪರೋಕ್ಷವಾಗಿ ನಿಗಮದ ಅಧಿಕಾರಿಗಳು ಮಾರಿಕೊಂಡಿದ್ದು, ಈ ಬಗ್ಗೆ ವಿಚಾರಣೆ ನಡೆಸಿ ಸಾರಿಗೆ ಸಚಿವರು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿದ್ದಾರೆ.

ಇನ್ನು ಚಿಕ್ಕಬಳಾಪುರ ವಿಭಾಗ ಚಿಂತಾಮಣಿ ಮದನಪಲ್ಲಿ ಕಡಪ ಮಾರ್ಗವಾಗಿ ಮತ್ತು ಕರ್ನಾಟಕ ಮತ್ತು ಆಂಧ್ರ ಗಡಿಗಳಿಂದ ಅಂತರರಾಜ್ಯ ಪರವಾನಗಿ ಇಲ್ಲದೆ ಕಾರ್ಯನಿರ್ವಹಿಸುತ್ತಿರುವ ಖಾಸಗಿ ಬಸ್ ನಿರ್ವಾಹಕರಿಗೆ ಕಡಿವಾಣವಾಕಬೇಕಿದೆ. ಜತೆಗೆ KSRTC ಬಸ್‌ಗಳು ಸುರಕ್ಷಿತ ಪ್ರಯಾಣಕ್ಕೆ ಅನುಕೂಲವಾಗಿದ್ದು ನಂ.1 ಆದಾಯದವನ್ನು ಅಂತರರಾಜ್ಯ ಮಾರ್ಗಗಳು ಕೊಡುತ್ತಿರುವುದರಿಂದ ಈ ಬಗ್ಗೆ ಸಾರಿಗೆ ಸಚಿವರು ಮತ್ತು ಎಂಡಿ ಗಮನ ಹರಿಸಬೇಕು ಎಂದು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ