NEWSಉದ್ಯೋಗನಮ್ಮರಾಜ್ಯ

KSRTC ಅಧಿಕಾರಿಗಳು ಕಚೇರಿಗೆ ಬಂದಾಗ ತಮ್ಮ ಹಣ ಎಷ್ಟಿತ್ತು ಹೋಗುವಾಗ ಎಷ್ಟಿದೆ ಅಂತ ತಿಳಿಸಬೇಕು: ಎಂಡಿ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯ ಸರ್ಕಾರವು ಕಚೇರಿಗಳಲ್ಲಿ ನಗದು ಘೋಷಣೆ ವಹಿ ನಿರ್ವಹಣೆ ಕುರಿತು ವಿವರವಾಗಿ ಮಾರ್ಗಸೂಚಿಗಳನ್ನು ನೀಡಿ, ನಿಗಮ/ ಮಂಡಳಿಗಳಲ್ಲಿ ಸಹ ನಗದು ಘೋಷಣೆ ವಹಿ ನಿರ್ವಹಣೆ ಮಾಡುವಂತೆ ನಿರ್ದೇಶನ ನೀಡಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಎಲ್ಲ ಹಂತದ ಕಚೇರಿಗಳಲ್ಲಿ ನಗದು ಘೋಷಣೆ ವಹಿ ನಿರ್ವಹಣೆ ಮಾಡಲು ಕೂಡಲೆ ಕ್ರಮ ವಹಿಸಬೇಕು ಎಂದು ಎಂಡಿ ಅಕ್ರಮ್‌ ಪಾಷ ಆದೇಶ ಹೊರಡಿಸಿದ್ದಾರೆ.

ಕ್ರಮ ವಹಿಸಬೇಕಿರುವುದು: 1. ಅಧಿಕಾರಿ/ ನೌಕರರು ಕರ್ತವ್ಯಕ್ಕೆ ಹಾಜರಾದ ತಕ್ಷಣ ಹಾಗೂ ಕಚೇರಿಯಿಂದ ನಿರ್ಗಮಿಸುವಾಗ ಕಚೇರಿಗೆ ತಂದ ನಗದು ಮೊತ್ತವನ್ನು ನಗದು ಘೋಷಣೆ ವಹಿಯಲ್ಲಿ ತನ್ನ ಸಹಿಯೊಂದಿಗೆ ಘೋಷಿಸತಕ್ಕದ್ದು.

2. ನಗದು ಘೋಷಣೆ ವಹಿಯು ಸಂಬಂಧಪಟ್ಟ ವಿಭಾಗ/ ಶಾಖೆಯ ಅಧಿಕಾರಿಯ ವಶದಲ್ಲಿರತಕ್ಕದ್ದು ಮತ್ತು ಈ ಅಧಿಕಾರಿಯು ನೌಕರನು ಮಾಡಿದ ನಮೂದುಗಳ ಸತ್ಯಾಸತ್ಯತೆಯನ್ನು ಪರಿಶೀಲಿಸುವ ಅಧಿಕಾರವನ್ನು ಹೊಂದಿದ್ದಾರೆ.

3. ಯಾವುದೇ ಅಧಿಕಾರಿ/ ನೌಕರನು ನಗದು ಘೋಷಿಸಿದ್ದಕ್ಕಿಂತ ಹೆಚ್ಚಿನ ಹಣವನ್ನು ಹೊಂದಿರುವುದು ಕಂಡುಬಂದರೆ, ಅಂತಹ ಹೆಚ್ಚುವರಿ ಹಣವನ್ನು ಅಕ್ರಮ ಸಂಪಾದನೆ ಎಂದು ಅರ್ಥೈಸಲಾಗುತ್ತದೆ ಹಾಗೂ ಅಂತಹ ಹೆಚ್ಚುವರಿ ಹಣವನ್ನು ಸಕ್ರಮ ಹಣ ಎಂದು ಸಾಬೀತುಪಡಿಸುವುದು ಅಧಿಕಾರಿ/ ನೌಕರನ ಹೊಣೆಯಾಗಿರುತ್ತದೆ.

4. ನಗದು ಘೋಷಣೆ ವಹಿಯನ್ನು ಕಚೇರಿಯ ವೇಳೆಯ ಎಲ್ಲ ಸಮಯದಲ್ಲಿ ಯಾವುದೇ ಉನ್ನತ ಇಲಾಖಾ ಮುಖ್ಯಸ್ಥರ/ ಸಕ್ಷಮ ಪ್ರಾಧಿಕಾರ/ ವಿಭಾಗ ಮುಖ್ಯಸ್ಥರ/ ಘಟಕದ ಮುಖ್ಯಸ್ಥರ ತಪಾಸಣೆಗಾಗಿ ತೆರೆದಿರಬೇಕು ಎಂದು ತಿಳಿಸಿದ್ದಾರೆ.

ಇನ್ನು ನಿಗಮದ ಮಟ್ಟದಲ್ಲಿ ನಗದು ಘೋಷಣೆ ವಹಿ ನಿರ್ವಹಣೆಯ ಮೇಲ್ವಿಚಾರಣೆ ಮಾಡಲು ಉಪ ಮುಖ್ಯ ಸಿಬ್ಬಂದಿ ವ್ಯವಸ್ಥಾಪಕ (ಸಿಬ್ಬಂದಿ) ಅವರನ್ನು ನೋಡಲ್ ಅಧಿಕಾರಿಯನ್ನಾಗಿ ನೇಮಿಸಲಾಗಿದೆ. ಹೀಗಾಗಿ ಸಂಬಂಧಪಟ್ಟವರೆಲ್ಲರೂ ಈ ಆದೇಶವನ್ನು ಮನದಟ್ಟು ಮಾಡಿಕೊಂಡು ಅದರಂತೆ ಕ್ರಮ ಕೈಗೊಳ್ಳತಕ್ಕದ್ದು. ಅಲ್ಲದೆ ಈ ಸುತ್ತೋಲೆಯು ತಕ್ಷಣದಿಂದ ಜಾರಿಗೆ ಬರುತ್ತದೆ ಎಂದು ತಿಳಿಸಿದ್ದಾರೆ. ಆದೇಶ ಪ್ರತಿ 1738 Cash Declaration

Megha
the authorMegha

Leave a Reply

error: Content is protected !!
Latest news
KSRTC ಮೈಸೂರು ಡಿಸಿಗೆ- RC, FC ಚಾಲಕ ನಿರ್ವಾಹಕರ ಜವಾಬ್ದಾರಿನಾ?: ಹೇ ತಲೆಕೆಟ್ಟ ಡಿಸಿ ನೀನು ನಿಜವಾಗಲು ಜವಾಬ್ದಾರಿಯಿಂ... ಭಾರೀ ಮಳೆಗೆ ನೆಲಕಚ್ಚಿದ ಪರಂಗಿ ಅಡಿಕೆ ಗಿಡಗಳು -ಅಪಾರ ಪ್ರಮಾಣದ ಬೆಳೆ ಹಾನಿ ರೈತರ ಗೋಳಾಟ ಪ್ರೀತಿ ನಿರಾಕರಿಸಿದ್ದಕ್ಕೆ ಹೈಟೆನ್ಷನ್ ಕಂಬ ಹತ್ತಿ ಕುಳಿತಿರುವ ಪಾಗಲ್‌ ನಾಳೆಯಿಂದ ಹಮ್ಮಿಕೊಂಡಿದ್ದ ಅರ್ನಿದಿಷ್ಟವಾಧಿ ಸಾರಿಗೆ ನೌಕರರ ಮುಷ್ಕರ ವಾಪಸ್‌: ಜಂಟಿ ಕ್ರಿಯಾ ಸಮಿತಿ ಜಂಟಿ ಕ್ರಿಯಾ ಸಮಿತಿಗೆ ಶಾಕ್‌: KSRTC ನೌಕರರ ಅನಿರ್ದಿಷ್ಟಾವಧಿ ಮುಷ್ಕರಕ್ಕೆ ಹೈ ಕೋರ್ಟ್‌ ತಡೆ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ ಮತ್ತೊಂದು KSRTC ನೌಕರರ ಸಂಘ ದುಬಾರೆ ಸಾಕಾನೆ ಶಿಬಿರದಲ್ಲಿ ನಡೆದ ಕಾದಾಟದಲ್ಲಿ ಗಾಯಗೊಂಡಿದ್ದ ಮಾರ್ತಾಂಡ ಸಾವು ಇಂದು ರಾತ್ರಿ 8.30ರಿಂದ 9.30ರವರೆಗೆ KSRTC ಎಂಡಿ ಅಕ್ರಮ್‌ ಪಾಷರ ಭೇಟಿ ಮಾಡಿ ಗೌಪ್ಯ ಸಭೆ ನಡೆಸಿದ ಜಂಟಿ ಮುಖಂಡರು! ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ ಗುಡುಗು ಸಿಡಿಲಿನ ಆರ್ಭಟ: ಮನೆ ಮುಂದೆ ನಿಂತಿದ್ದ ಶಿಕ್ಷಕ ಹೃದಯಾಘಾತಕ್ಕೆ ಬಲಿ