NEWS

KSRTC- ಉಪವಾಸ ಸತ್ಯಾಗ್ರಹ ನಿರತ ಮತ್ತೊಬ್ಬ ಸಾರಿಗೆ ಸಿಬ್ಬಂದಿ ಅಸ್ವಸ್ಥ ಆಸ್ಪತ್ರೆಗೆ ದಾಖಲು : ಈವರೆಗೆ ಮೂವರು ಸಿಬ್ಬಂದಿ ದಾಖಲು

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ವೇತನ ಸೇರಿದಂತೆ ಇತರ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಬೆಳಗಾವಿಯ ಸುವರ್ಣ ಸೌಧದ ಬಳಿ ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹದಲ್ಲಿ ಉಪವಾಸವಿದ್ದ ಸಾರಿಗೆಯ ಮಹಿಳಾ ಸಿಬ್ಬಂದಿಗಳಿಬ್ಬರು ಅಸ್ವಸ್ಥಗೊಂಡು ಆಸ್ಪತ್ರೆ ಸೇರಿರುವ ಬೆನ್ನಲ್ಲೇ ಮತ್ತೊಬ್ಬ ನೌಕರರ ದಾಖಲಾಗಿರುವ ಘಟನೆ ಇಂದು ಮಧ್ಯಾಹ್ನ ನಡೆದಿದೆ.

ಬಸವರಾಜು ಅಸ್ವಸ್ಥಗೊಂಡ ಉಪವಾಸ ಸತ್ಯಾಗ್ರಹ ನಿರತ ಸಾರಿಗೆ ಸಿಬ್ಬಂದಿ. ಅಸ್ವಸ್ಥಗೊಂಡ ಸಿಬ್ಬಂದಿಯನ್ನು ನಗರದ ಜಿಲ್ಲಾಸ್ಪತ್ರೆಗೆ 108 ಆಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗಿ ದಾಖಲು ಮಾಡಲಾಗಿದೆ.

ಇತ್ತ ಕಳೆದ ಡಿ.19ರಿಂದ ಉಪವಾಸ ಕುಳಿತಿರುವ ನೌಕರರಲ್ಲಿ ಇನ್ನು ಒಂದಿಬ್ಬರು ನೌಕರರ ಆರೋಗ್ಯದಲ್ಲೂ ಏರುಪೇರಾಗುತ್ತಿದೆ ಎಂದು ಪ್ರತಿಭಟನಾ ನಿರತ ನೌಕರರು ತಿಳಿಸಿದ್ದಾರೆ.

ಇನ್ನು ಡಿ.20ರಂದು ಅಸ್ವಸ್ಥಗೊಂಡು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಇಬ್ಬರು ಮಹಿಳಾ ಸಿಬ್ಬಂದಿಯ ಆರೋಗ್ಯದಲ್ಲಿ ಚೇತರಿಕೆ ಕಂಡಿದ್ದು ಅವರು ಮತ್ತೆ ಉಪವಾಸ ಸತ್ಯಾಗ್ರಹ ಮುಂದುವರಿಸಿದ್ದಾರೆ.

ಈ ನಡುವೆಯೇ ಇಂದು ಉಪವಾಸ ಸತ್ಯಾಗ್ರಹ ನಿರತ ಮತ್ತೊಬ್ಬ ನೌಕರರು ಅಸ್ವಸ್ಥಗೊಂಡಿದ್ದು, ಆಸ್ಪತ್ರೆಗೆ ದಾಖಲಾಗಿದೆ. ಆದರೂ ಸರ್ಕಾರ ಈವರೆಗೂ ನೌಕರರ ಬೇಡಿಕೆ ಈಡೇರಿಸಲು ಮುಂದಾಗಿಲ್ಲ.

ಇಂದು ಅಸ್ವಸ್ಥಗೊಂಡ ಸಿಬ್ಬಂದಿಯನ್ನು ನಗರದ ಜಿಲ್ಲಾಸ್ಪತ್ರೆಗೆ 108 ಆಂಬುಲೆನ್ಸ್‌ನಲ್ಲಿ ಕರೆದುಕೊಂಡು ಹೋಗಿ ವೈದ್ಯರು ಚಿಕಿತ್ಸೆ ನೀಡಲು ಮುಂದಾಗುತ್ತಿದ್ದಾರೆ ಎಂದು ನೌಕರರು ತಿಳಿಸಿದ್ದಾರೆ.

ನಮ್ಮ ನ್ಯಾಯಯುತ ಬೇಡಿಕೆಗಳನ್ನು ಸರ್ಕಾರ ಈಡೇರಿಸಲು ಮೀನಮೇಷ ಎಣಿಸುತ್ತಿರುವುದರಿಂದ ನೂರಾರು ಕಿಲೋ ಮೀಟರ್‌ನಲ್ಲಿ ತಮ್ಮ ಸಂಸಾರವನ್ನು ಬಿಟ್ಟು ಹೋರಾಟಕ್ಕೆ ಧುಮುಕಿರುವ ಸಿಬ್ಬಂದಿ ಪ್ರಾಣದ ಹಂಗುತೊರೆದು ಉಪವಾಸ ಸತ್ಯಾಗ್ರಹವನ್ನು ಮುಂದುವರಿಸುತ್ತಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ