KSRTC: ನೌಕರರ ವೇತನ ಸೇರಿ ಇತರ ಬೇಡಿಕೆಗಳ ಈಡೇರಿಕೆಗಾಗಿ ಒಗ್ಗಟ್ಟಾದ ಸಂಘಟನೆಗಳು-ಸಿಎಂ ಭೇಟಿಗೆ ನಿರ್ಧಾರ

- ಮಂಗಳವಾರದ ಸಭೆಯಲ್ಲಿ ಒಕ್ಕೋರಲಿನ ತೀರ್ಮಾನ
- ಬಣಗಳಾಗದೆ ಒಂದೇ ವೇದಿಕೆಯಡಿ ಸಿಎಂ, ಸಾರಿಗೆ ಸಚಿವರ, ಎಂಡಿಗಳ ಭೇಟಿಗೆ ನಿರ್ಧಾರ
ಬೆಂಗಳೂರು: ನಾಲ್ಕೂ ನಿಗಮಗಳ ಸಾರಿಗೆ ನೌಕರರಿಗೆ 38 ತಿಂಗಳ ಹಿಂಬಾಕಿ ವೇತನ, 1-1-2024ರ ವೇತನ ಹೆಚ್ಚಳದ ವಿಳಂಬ ಹಾಗೂ 7-4-2021ರಲ್ಲಿ ವಜಾಗೊಂಡಿರುವ ನೌಕರರನ್ನು ಯಥಾವತ್ತಾಗಿ ಯಾವುದೇ ಶಿಕ್ಷೆ ಇಲ್ಲದೇ ಡ್ಯೂಟಿ ಕೊಡಬೇಕು ಎಂದು ಸರ್ಕಾರ ಹಾಗೂ ಆಡಳಿತ ವರ್ಗಕ್ಕೆ ಒತ್ತಾಯಿಸುವ ಬಗ್ಗೆ ಎಲ್ಲ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘಟನೆಗಳು ಒಕ್ಕೋರಲಿನ ತೀರ್ಮಾನ ತೆಗೆದುಕೊಂಡವು.
ಮಂಗಳವಾರ ಮೇ 6ರ ಮಧ್ಯಾಹ್ನ ನಗರದ ಜೈಭೀಮ್ ಭವನದಲ್ಲಿ ನಡೆದ ಸರ್ವ ಸಂಘಟನೆಗಳ ಸಭೆಯಲ್ಲಿ ಭಾಗವಹಿಸಿದ್ದ ಸಂಘಟನೆಗಳ ಪದಾಧಿಕಾರಿಗಳು ಈ ಸಭೆಯಲ್ಲಿ ತೆಗೆದುಕೊಂಡ ಪ್ರಮುಖ ನಿರ್ಧಾರಗಳೆಂದರೆ, ಒಂದೇ ವೇದಿಕೆಯಲ್ಲಿ ಸಂಘಟಿತರಾಗಿ ನೌಕರರಿಗೆ ಬರಬೇಕಿರುವ 38 ತಿಂಗಳ ಹಿಂಬಾಕಿ ವೇತನ, 1-1-2024ರ ವೇತನ ಹೆಚ್ಚಳ ಹಾಗೂ 7-4-2021ರಲ್ಲಿ ನಡೆದ ಮುಷ್ಕರದಲ್ಲಿ ವಜಾಗೊಂಡಿರುವ ನೌಕರರನ್ನು ಯಥಾವತ್ತಾಗಿ ಯಾವುದೇ ಶಿಕ್ಷೆ ಇಲ್ಲದೇ ಡ್ಯೂಟಿಗೆ ತೆಗೆದುಕೊಳ್ಳಬೇಕು.
ಇನ್ನು ಈಗಿನ ಪರಿಸ್ಥಿತಿಯಲ್ಲಿ ನೌಕರರು ತುಂಬಾ ಗಂಭೀರ ಸ್ಥಿತಿಯಲ್ಲಿ ಕರ್ತವ್ಯ ಮಾಡುತ್ತಿದ್ದು ಸಂಸ್ಥೆಯ ಹಲವಾರು ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಇಂತಹ ಸಂದರ್ಭದಲ್ಲಿ ಘಟಕಗಳ ಮಟ್ಟದಲ್ಲಿ ಕಿರುಕುಳ ಕೂಡ ಹೆಚ್ಚಾಗಿದೆ. ಜತೆಗೆ ಅಧಿಕಾರಿಗಳ ದೌರ್ಜನ್ಯ ಎಲ್ಲೆಮೀರಿದೆ. ಇಂತಹ ಸಂದರ್ಭಗಳಲ್ಲಿ 38 ತಿಂಗಳ ವೇತನದ ಹಿಂಬಾಕಿಯೂ ಇಲ್ಲ, ದುಡಿಮೆಗೆ ತಕ್ಕ ವೇತನವೂ ಇಲ್ಲದೆ ನೌಕರರು ಪರಿತಪಿಸುತ್ತಿದ್ದಾರೆ.
ಈಗಿರುವ ಪ್ರತಿಯೊಂದು ವಸ್ತುವಿನ ಬೆಲೆ ಏರಿಕೆ ದಿನಮಾನದಲ್ಲಿ ಶಾಲೆಗಳಿಗೆ ಮಕ್ಕಳನ್ನು ದಾಖಲಿಸುವ ಸಂದರ್ಭವು ಬಂದಿದೆ. ಬೆಲೆ ಏರಿಕೆ ಗಗನಕ್ಕೆ ಏರುತ್ತೀರುವಂತೆ ಶಾಲೆಗಳ ಶುಲ್ಕವು ಕೂಡ ಹೆಚ್ಚಳವಾಗಿದೆ. ಈ ಎಲ್ಲದರಿಂದ ನೌಕರರು ಹೀನಾಯ ಪರಿಸ್ಥಿತಿಯಲ್ಲಿ ಜೀವನ ನಡೆಸುವ ಸ್ಥಿತಿ ನಿರ್ಮಾಣವಾಗುತ್ತಿದೆ.
ಈ ಎಲ್ಲವೂ ನೂರಕ್ಕೆ ನೂರರಷ್ಟು ಸತ್ಯ ಎಂಬುದು ನಮ್ಮ ಕಣ್ಣಿಗೆ ಕಾಣುತ್ತಿದೆ. ಇಂತಹ ಕಷ್ಟದ ದಿನಗಳಲ್ಲಿ ಸಂಘಟನೆಗಳು ನೌಕರರ ಪಾಲಿಗೆ ಸಂಜೀವಿನಿ ಆಗಬೇಕು. ಈ ನಿಟ್ಟಿನಲ್ಲಿ ನಾವೆಲ್ಲರೂ ಬಣಗಳಾಗದೆ ಒಂದಾಗಿ ಒಗ್ಗಟ್ಟಿನಿಂದ ಸರ್ಕಾರದ ಮುಂದೆ ಹೋಗಿ ಈ ನಮ್ಮ ಬೇಡಿಕೆಗಳನ್ನು ಈಡೇರಿಸಿಕೊಳ್ಳೋಣ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳ ನೌಕರರ ಮತ್ತು ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘದ ರುದ್ರೇಶ್ ಎಸ್. ನಾಯಕ ತಮ್ಮ ಅಭಿಪ್ರಾಯ ಮಂಡಿಸಿದರು.
ಎಲ್ಲ ಸಂಘಟನೆಗಳು ಜತೆಯಲ್ಲಿ ಹೋಗಿದ್ದೆ ಆದರೆ ನಮ್ಮ ಸಮಸ್ಯೆ ಯಾವುದು ಸಮಸ್ಯೆಯೇ ಅಲ್ಲ. ಆದರೆ ಎತ್ತು ಏರಿಗೆ ಕೋಣ ನೀರಿಗೆ ಎಂಬ ನಿಲುವು ಸಂಘಟನೆಗಳದ್ದಾಗಿದೆ. ಹಾಗಾಗಿ ಇನ್ನು ಮುಂದಾದರೂ ಬದಲಾಗಿ ಎಲ್ಲ ಸಂಘಟನೆಗಳು ಒಂದೇ ವೇದಿಕೆಯಲ್ಲಿ ಹೋಗಿ ನೌಕರರಿಗೆ ನ್ಯಾಯ ಕೊಡಿಸುವಂತ ಕೆಲಸ ಮಾಡೋಣ ಎಂದರು. ಅದಕ್ಕೆ ಸಭೆಯಲ್ಲಿದ್ದವರು ಒಕ್ಕೋರಲಿನಲ್ಲಿ ಇದೇ ಸರಿ ಎಂದು ನಿರ್ಧರಿಸಿದರು.
ಇನ್ನು ನೌಕರರ ಪಾಲಿನ ವಿಲನ್ಗಳಂತೆ ವರ್ತಿಸದೆ ಇನ್ನು ಮುಂದಾದರೂ ನಾವು ಅವರ ಹೆಸರಿನಲ್ಲಿ ಕಟ್ಟಿಕೊಂಡಿರುವ ಸಂಘಟನೆಗಳಾಗಿ ಅವರಿಗೆ ಸಂಸ್ಥೆಯಲ್ಲಿ ಸಿಗಬೇಕಿರುವ ಸೌಲಭ್ಯಗಳನ್ನು ಸಂಘಭೇದ ಮರೆತು ಒಂದಾಗಿ ಕೊಡಿಸಬೇಕು. ಎಲ್ಲ ಸಂಘಟನೆಗಳು ಒಂದಾಗಿ ನ್ಯಾಯ ಕೊಡಿಸುವ ಪ್ರಾಮಾಣಿಕ ಕೆಲಸ ಮಾಡೋಣ ಎಂದು ಒಕ್ಕೋರಲಿನಿಂದ ತಮ್ಮ ತಮ್ಮ ಅಭಿಪ್ರಾಯ ಹಂಚಿಕೊಂಡರು.
ಒಟ್ಟಾರೆ ಸರಿ ಸಮಾನವ ವೇತನವನ್ನಾದರೂ ಕೊಡಲಿ ಇಲ್ಲ ಅಗ್ರಿಮೆಂಟ್ ಆದರೂ ಮಾಡಲಿ ನಮ್ಮ ನೌಕರರಿಗೆ ನ್ಯಾಯಯುತವಾಗಿ ಸಿಗಬೇಕಿರುವ ವೇತನ ಸೌಲಭ್ಯಗಳು ಸಿಗಲೇಬೇಕು ಎಂದು ಸಭೆಯಲ್ಲಿದ್ದ ಎಲ್ಲ ಸಂಘಟನೆಗಳ ಪದಾಧಿಕಾರಿಗಳು ಒಂದೇ ಧ್ವನಿಯಲ್ಲಿ ನಿರ್ಣಯ ತೆಗೆದುಕೊಂಡಿದ್ದೇವೆ ಎಂದು ರುದ್ರೇಶ್ ಎಸ್. ನಾಯಕ ತಿಳಿಸಿದ್ದಾರೆ.
ಸಭೆಯಲ್ಲಿ ಕಾರ್ಯಕ್ರಮದ ಆಯೋಜಕ ನೌಕರರ ಸಂಘದ ಅಧ್ಯಕ್ಷ ಎಚ್ಆರ್. ಜಗದೀಶ್, ನೌಕರ ಕೂಟದ ಖಜಾಂಚಿ ಎನ್.ಸತೀಶ್, ವೆಂಕಟರಮಣಪ್ಪ, ತುಮಕೂರು ಪುಟ್ಟಣ್ಣ, ಗುತ್ತಲೇಗೌಡ, ಕೃಷ್ಣ, ಮಹೇಂದ್ರ ಅಪ್ಪಾಜಿ, ಕುಮಾರ್, ನವೀನ್, ಸುಣಗಾರ, ಕೂಟದ ಅನಿಲ್ ಕುಮಾರ್, ಶ್ರೀಧರ್ ತಹಶೀಲ್ದಾರ್, ಕುದರೆ ಜಗದೀಶ್, ಕ್ಷೇಮಾಭಿವೃದ್ಧಿ ಸಂಘದ ಉಪಾಧ್ಯಕ್ಷ ಪಿ.ಎಂ.ಪ್ರಕಾಶ್ ಸೇರಿದಂತೆ ಹಲವು ಹಿರಿಯ ಮುಖಂಡರು ಭಾಗವಹಿಸಿದ್ದರು.
Related

You Might Also Like
ಮೈಸೂರು ಅರಮನೆ ಸೇರಿದಂತೆ ಸೂಕ್ಷ್ಮ ವಲಯಗಳಲ್ಲಿ ಡ್ರೋನ್ ಹಾರಾಟ ನಿಷೇಧ
ಮೈಸೂರು: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ...
ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು...
ವೈದ್ಯರು, ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆಗೆ ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ ರಾಜ್ಯ ಸರ್ಕಾರ ಅನುಮೋದನೆ...
ರಾಜ್ಯಾದ್ಯಂತ 7 ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ 40 ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ದಾಖಲೆಗಳು ವಶ
ಬೆಂಗಳೂರು: ರಾಜ್ಯಾದ್ಯಂತ 40 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಭ್ರಷ್ಟರ ಭೇಟಿಯಾಡುತ್ತಾ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಭಷ್ಟ್ರ ಅಧಿಕಾರಿಗಳ ವಿರುದ್ಧ ಅಕ್ರಮ...
BMTC: ಸಾರಿಗೆ ನೌಕರರಿಗೆ ಹಿಂಬಾಕಿ, ವೇತನ ಹೆಚ್ಚಳ ಮಾಡದಿದ್ದರೂ ಪ್ರಯಾಣಿಕರಿಗೆ ಹೊಸ ಹೊಸ ಯೋಜನೆ ಮಾತ್ರ ನಿಂತಿಲ್ಲ
ಬೆಂಗಳೂರು: ರಾಜ್ಯ ಸರ್ಕಾರಿ ಸಾರಿಗೆ ನೌಕರರಿಗೆ 2024ರ ಜನವರಿಯಿಂದ ಆಗಬೇಕಿರುವ ವೇತನ ಹೆಚ್ಚಳ ಹಾಗೂ ಕಳೆದ 2020ರ ಜನವರಿಯಿಂದ ಆಗಿರುವ ತೇತನ ಹೆಚ್ಚಳದ 38 ತಿಂಗಳ ಹಿಂಬಾಕಿ...
44ನೇ ವಯಸ್ಸಿಗೇ ಸಿಎಂ ಆಗಿ ಸಾಧನೆಗೈದ ಆರ್. ಗುಂಡೂರಾವ್: ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಅವರು ಸಿಎಂ ಆಗಿದ್ದಾಗ ನಾನು ಜನತಾ ಪಕ್ಷದಲ್ಲಿ ಇದ್ದೇ, ಲೋಕಸಭಾ ಸದಸ್ಯರಾಗಿದ್ದ ಸಂದರ್ಭದಲ್ಲಿ ಅವರನ್ನು ನೋಡಲು ಹೋಗಿದ್ದೇ ಎಂದು ಸಿಎಂ ಸಿದ್ದರಾಮಯ್ಯ...
ಸಾಮಾಜಿಕ ನ್ಯಾಯದ ಬದ್ಧತೆ ಇರಬೇಕು ತೋರಿಕೆಯಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು. ತೋರಿಕೆ ಇರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಹಿರಿಯ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ...
ಕೆಂಪೇಗೌಡ ಬಸ್ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಸಿಎಂ ಎನಿಸಿಕೊಂಡಿದ್ದ ಆರ್. ಗುಂಡೂರಾವ್ ಪ್ರತಿಮೆ ಅನಾವರಣ
ಬೆಂಗಳೂರು: ದಕ್ಷಿಣ ಏಷ್ಯಾದಲ್ಲೇ ಪ್ರಪ್ರಥಮ ಹಾಗೂ ಅತ್ಯಪೂರ್ವ ಎಂಬ ಖ್ಯಾತಿಯ ಕೆಂಪೇಗೌಡ ಸಾರಿಗೆ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಮುಖ್ಯ ಮಂತ್ರಿ ಎನಿಸಿಕೊಂಡಿದ್ದ ಪ್ರಾತ:ಸ್ಮರಣಿಯ ಆರ್. ಗುಂಡೂರಾವ್...
ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ₹4,195 ಕೋಟಿ ಬಿಡುಗಡೆಯಾಗಿಲ್ಲ. ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಕೇಂದ್ರ ಪುರಸ್ಕೃತ ಯೋಜನೆಗಳಿಗೆ ಬಾಕಿಯಿರುವ ಕೇಂದ್ರದ ಪಾಲು ಸುಮಾರು ₹4,195 ಕೋಟಿ ಬಿಡುಗಡೆಯಾಗಿಲ್ಲ. ಈ ದಿಸೆಯಲ್ಲಿ ರಾಜ್ಯದ ಸಂಸದರು, ರಾಜ್ಯಸಭಾ ಸದಸ್ಯರು ಕೇಂದ್ರವನ್ನು ಒತ್ತಾಯಿಸಿ ಬಾಕಿ...