ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಕರೆ ಕೊಟ್ಟಿದ್ದ ಮುಷ್ಕರದಿಂದ ಹಿಂದೆ ಸರಿದ KSRTC ಪ.ಜಾ.-ಪ.ಪಂ ನೌಕರರ ಸಂಘ
ಸಂಘದ ರಾಜ್ಯಾಧ್ಯಕ್ಷ ಎಫ್.ಎಚ್. ಜಕ್ಕಪ್ಪ ಅವರ ಆದೇಶದ ಮೇರೆಗೆ ನಮ್ಮ ಸಂಘವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಜಂಟಿ ಕ್ರಿಯಾ ಸಮಿತಿಯಿಂದ ಈ ಕೂಡಲೇ ನಿರ್ಗಮಿಸುತ್ತಿದ್ದೇವೆ.

ಬೆಂಗಳೂರು: ನಮ್ಮ ಸಂಘವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯಿಂದ ಹೊರಬರುತ್ತಿದ್ದು, ಹೀಗಾಗಿ ಮೇ 20ರ ಮುಷ್ಕರದಲ್ಲಿ ನಾವು ಭಾಗವಹಿಸುತ್ತಿಲ್ಲ ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ವ್ಯವಸ್ಥಾಪಕ ನಿರ್ದೇಶಕರಿಗೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ಎಸ್ಸಿ ಎಸ್ಟಿ ನೌಕರರ ಸಂಘ ತಿಳಿಸಿದೆ.

ಈ ಸಂಬಂಧ ಇಂದು ಕೆಎಸ್ಆರ್ಟಿಸಿ ಎಂಡಿ ಅವರಿಗೆ ಲಿಖಿತವಾಗಿ ಮಾಹಿತಿ ನೀಡಿರುವ ಸಂಘದ ಪದಾಧಿಕಾರಿಗಳು, ನಮ್ಮ ಸಂಘವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಕಾರ್ಮಿಕ ಸಂಘಟನೆಗಳ ಜಂಟಿ ಕ್ರಿಯಾ ಸಮಿತಿಯ ಭಾಗವಾಗಿದ್ದು, ವಿವಿಧ ಬೇಡಿಕೆಗಳ ಈಡೇರಿಕೆಗಾಗಿ 20.05.2026 ರಂದು ಅನಿರ್ದಿಷ್ಟಾವಧಿ ಮುಷ್ಕರ ಹೂಡಲು ತೀರ್ಮಾನಿಸಲಾಗಿತ್ತು.
ಆದರೆ, ನಮ್ಮ ಸಂಘದ ರಾಜ್ಯಾಧ್ಯಕ್ಷ ಎಫ್.ಎಚ್. ಜಕ್ಕಪ್ಪ ಅವರ ಆದೇಶದ ಮೇರೆಗೆ ನಮ್ಮ ಸಂಘವು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಜಂಟಿ ಕ್ರಿಯಾ ಸಮಿತಿಯಿಂದ ಈ ಕೂಡಲೇ ನಿರ್ಗಮಿಸುತ್ತಿದ್ದೇವೆ.
ಹೀಗಾಗಿ ಈ ಜಂಟಿ ಕ್ರಿಯಾ ಸಮಿತಿ ಹಮ್ಮಿಕೊಂಡಿರುವ ಮುಷ್ಕರದಲ್ಲಿ ನಮ್ಮ ಸಂಘದ ಪದಾಧಿಕಾರಿಗಳು ಹಾಗೂ ಸದಸ್ಯರು ಈ ಕ್ಷಣದಿಂದ ಭಾಗವಹಿಸುವುದಿಲ್ಲವೆಂದು ಈ ಮೂಲಕ ತಿಳಿಸುತ್ತೇವೆ ಎಂದು ಕೆಎಸ್ಆರ್ಟಿಸಿ ಎಂಡಿ ಅವರ ವಿಳಾಸ ನಮೂದಿಸಿ ಪತ್ರ ರವಾನಿಸಲಾಗಿದೆ.
ಇಂದು ಎಂಡಿ ಅವರಿಗೆ ಪತ್ರ ಬರೆದಿರುವ ಸಂಘದ ಮುಖಂಡರು, ರಾಜ್ಯ ಕಾರ್ಯಾಧ್ಯಕ್ಷ ರವಿಪ್ರಕಾಶ್ ಹಾಗೂ ರಾಜ್ಯ ಪ್ರಧಾನ ಕಾರ್ಯದರ್ಶಿ ವೆಂಕಟರವಣಪ್ಪ ಅವರ ಸಹಿಯೊಂದಿಗೆ ಈ ಪತ್ರವನ್ನು ಎಂಡಿ ಅವರಿಗೆ ರವಾನಿಸಿದ್ದಾರೆ.
Related









