NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಬೆಂಗಳೂರಿಗೆ ಪಾದಯಾತ್ರೆ ಬರುತ್ತಿರುವ ಸಾರಿಗೆ ನೌಕರರ ಅರಿಸಿನಕುಂಟೆ ಬಳಿ ತಡೆದ ಪೊಲೀಸರು

ವಿಜಯಪಥ ಸಮಗ್ರ ಸುದ್ದಿ

ಅರಿಸಿನಕುಂಟೆ: ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸಂಘಟನೆಗಳ ಒಕ್ಕೂಟ ಇಂದಿನಿಂದ (ಏ.21) ಫ್ರೀಡಂ ಪಾರ್ಕ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಮತ್ತು ಧರಣಿ ಸತ್ಯಾಗ್ರಹ ಹಮ್ಮಿಕೊಂಡಿದ್ದು, ನೂರಾರು ಸಂಖ್ಯೆಯಲ್ಲಿ ನೆಲಮಂಗಲದಿಂದ ಹೊರಟಿದ್ದ ಸಾರಿಗೆ ನೌಕರರನ್ನು ಪೊಲೀರು ಅರಿಸಿನಕುಂಟೆ ಬಳಿ ತಡೆದು ನಿಲ್ಲಿಸಿದ್ದಾರೆ.

ಈ ವೇಳೆ ನಮಗೆ ನಮ್ಮ ಬೇಡಿಕಗಳ ಈಡೇರಿಸಿಕೊಳ್ಳುವುದಕ್ಕಾಗಿ ನಾವು ಫ್ರೀಟಂ ಪಾರ್ಕ್‌ವರೆಗೆ ಪಾದಯಾತ್ರೆ ಮಾಡಿ ಅಲ್ಲಿ ಅಮರಣಾಂತ ಉಪವಾಸ ಸತ್ಯಾಗ್ರಹ ಮಾಡಲು ಅವಕಾಶ ಮಾಡಿಕೊಡಬೇಕು ಎಂದು ಆರಕ್ಷಕರಲ್ಲಿ ಸಾರಿಗೆ ನೌಕರರು ಮನವಿ ಮಾಡುತ್ತಿದ್ದಾರೆ. ಆದರೆ, ಕೋರ್ಟ್‌ ಪಾದಯಾತ್ರೆ ಮಾಡಿಕೊಂಡು ಬೆಂಗಳೂರು ನಗರ ಪ್ರವೇಶಿಸುವುದಕ್ಕೆ ತಡೆನೀಡಿರುವುದರಿಂದ ನೀವು ಸಹಕರಿಸಬೇಕು ಎಂದು ನೌಕರರ ಮುಖಂಡರಲ್ಲಿ ಪೊಲೀಸರು ಮನವಿ ಮಾಡಿದ್ದಾರೆ.

ಈ ನಡುವೆ ನಾವು ತಾಲೂಕು ಕಚೇರಿ ಮುಂದೆ ಕುಳಿದು ಉಪವಾಸ ಸತ್ಯಾಗ್ರಹ ಮಾಡುವುದಕ್ಕೆ ಅವಕಾಶ ಮಾಡಿಕೊಡಬೇಕು ಎಂಬ ಬಗ್ಗೆ ಚರ್ಚೆ ನಡೆಸುತ್ತಿದ್ದಾರೆ. ಪೊಲೀಸ್‌ ಮೇಲಧಿಕಾರಿಗಳು ಬಂದು ಅನುಮತಿಸಿದರೆ ತಾಲೂಕು ಕಚೇರಿ ಬಳಿಯೇ ಉಪವಾಸ ಸತ್ಯಾಗ್ರಹ ಆರಂಭಿಸಲಾಗುವುದು ಎಂದು ನೌಕರರು ಹೇಳಿದ್ದಾರೆ.

ಅರಿಸಿನಕುಂಟೆ ಬಳಿ ಪೊಲೀಸರು ಪಾದಯಾತ್ರೆ ಮಾಡುತ್ತಿರುವ ಸಾರಿಗೆ ನೌಕರರನ್ನು ತಡೆದಿದ್ದು ಸಾರಿಗೆ ನೌಕರರು ಕೂಡ ಪೊಲೀಸರೊಂದಿಗೆ ಶಾಂತಿಯುವಾಗಿ ವರ್ತಿಸುವ ಮೂಲಕ ಸಹಕರಿಸುತ್ತಿದ್ದಾರೆ. ಮುಂದೆ ಏನಾಗುತ್ತದೆ ಎಂಬುದರ ಬಗ್ಗೆ ಅಪ್‌ಡೇಟ್‌ ನೀಡಲಾಗುವುದು.

Megha
the authorMegha

Leave a Reply

error: Content is protected !!
Latest news
KSRTC: ಅರಿಸಿನಕುಂಟೆಯಲ್ಲಿ ಪಾದಯಾತ್ರೆ ತಡೆದಿದ್ದ ಪೊಲೀಸರು ಸದ್ಯ ಫ್ರೀಡಂ ಪಾರ್ಕ್‌ನತ್ತ ಹೊರಟ ಸಾರಿಗೆ ನೌಕರರು ಸಾರಿಗೆ ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ, ಸಾರಿಗೆ ಸಚಿವರಿಗೆ ಮಾರ್ಗದರ್ಶನ ನೀಡುವಂತೆ ಹೈ ಕೋರ್ಟ್‌ ಸಿಜೆಗೆ ಲಿಖಿತ ಮನವ... KSRTC: ಬೆಂಗಳೂರಿಗೆ ಪಾದಯಾತ್ರೆ ಬರುತ್ತಿರುವ ಸಾರಿಗೆ ನೌಕರರ ಅರಿಸಿನಕುಂಟೆ ಬಳಿ ತಡೆದ ಪೊಲೀಸರು KSRTC: ಮುಂದಿನ ಚಕ್ರದ ಮುಡಿ ಕಟ್ಟಾಗಿ ಬಸ್‌ ಪಲ್ಟಿ- ಸಣ್ಣಪುಟ್ಟಗಾಯಗಳೊಂದಿಗೆ 74 ಪ್ರಯಾಣಿಕರು ಪಾರು KSRTC ನೆಲಮಂಗಲದಿಂದ ಬೆಂಗಳೂರಿನ ಫ್ರೀಡಂ ಪಾರ್ಕ್‌ನತ್ತ ಹೊರಟ ಪಾದಯಾತ್ರೆ: ಆಮರಣಾಂತ ಉಪವಾಸ ಸತ್ಯಾಗ್ರಹ ! KSRTC: ಸರ್ಕಾರದ ವಿಳಂಬ ನೀತಿ ಖಂಡಿಸಿ ಇಂದಿನಿಂದ ಸಾರಿಗೆ ನೌಕರರ ಅನಿರ್ದಿಷ್ಟಾವಧಿ ಆಮರಣಾಂತ ಉಪವಾಸ ಸತ್ಯಾಗ್ರಹ NWKRTC: ಜಾತಿರಹಿತ ಲಿಂಗ ತಾರತಮ್ಯ ಇಲ್ಲದ ಸಮಾಜ ಕಟ್ಟಲು ಶ್ರಮಿಸಿದವರು ಬಸವಣ್ಣ: ಸಾರಿಗೆ ಅಧಿಕಾರಿ ಅಶೋಕ ಪಾಟೀಲ ಕನಿಷ್ಠ 36,000 ರೂ. ಜತೆಗೆ ವೇತನ ಆಯೋಗ ಮಾದರಿ ಸಮಾನ ವೇತನಕ್ಕೆ ಸಾರಿಗೆ ಅಧಿಕಾರಿಗಳ ಆಗ್ರಹ -ಏ.30ರವರೆಗೆ ಗಡುವು ನಾಳೆಗೆ ಸಾರಿಗೆ ನೌಕರರ 14ದಿನಗಳ ಪಾದಯಾತ್ರೆ ಪೂರ್ಣ- ಆಮರಣಾಂತ ಉಪವಾಸ ಸತ್ಯಾಗ್ರಹ ಆರಂಭ KSRTC: ನಾಲ್ಕೂ ಸಾರಿಗೆ ನಿಗಮಗಳ ಆರ್ಥಿಕ ಪರಿಸ್ಥಿತಿ ಅವಲೋಕಿಸಿ ಅಂದು ಅಧಿಕಾರಿಗಳ/ ನೌಕರರ ವೇತನ ಪರಿಷ್ಕರಣೆಯಾಗಿತ್ತು.....