CRIMENEWSನಮ್ಮಜಿಲ್ಲೆ

NWKRTC -ಖಾಸಗಿ ಬಸ್ ನಡುವೆ ಡಿಕ್ಕಿ: ಇಬ್ಬರು ಪ್ರಯಾಣಿಕರು ಮೃತ, 20 ಮಂದಿಗೆ ಗಾಯ

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ವಾಯವ್ಯ ಕರ್ನಾಟಕ ರಸ್ತೆ ಸಾರಿಗೆ ನಿಗಮದ (NWKRTC) ಬಸ್‌ ಹಾಗೂ ಖಾಸಗಿ ಬಸ್ ನಡುವೆ ಡಿಕ್ಕಿ ಸಂಭವಿಸಿದ ಪರಿಣಾಮ ಇಬ್ಬರು ಪ್ರಯಾಣಿಕರು ಸಾವನ್ನಪ್ಪಿದ್ದು, 20 ಮಂದಿ ಸಣ್ಣಪುಟ್ಟ ಗಾಯಗೊಂಡಿರುವ ಘಟನೆ ತುಮಕೂರು ಜಿಲ್ಲೆ ಶಿರಾ ಬೈಪಾಸ್ ಬಳಿ ನಡೆದಿದೆ.

ಇಂದು ಮುಂಜಾನೆ 3 ಗಂಟೆ ಸುಮಾರಿಗೆ ಘಟನೆ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ. ಓವರ್‌ಟೇಕ್ ಮಾಡುವ ವೇಳೆ ರಾಷ್ಟ್ರೀಯ ಹೆದ್ದಾರಿ 48ರಲ್ಲಿ ಘಟನೆ ನಡೆದಿದ್ದು, ಅವಘಡದಲ್ಲಿ ಕೆಎಸ್‌ಆರ್‌ಟಿಸಿ ಬಸ್‌ನಲ್ಲಿದ್ದ 12 ಪ್ರಯಾಣಿಕರು ಹಾಗೂ ಖಾಸಗಿ ಬಸ್‌ನಲ್ಲಿದ್ದ 6 ಪ್ರಯಾಣಿಕರಿಗೆ ಸಣ್ಣಪುಟ್ಟ ಗಾಯಗಳಾಗಿವೆ.

NWKRTC  ಬಸ್ ಬಾಗಲಕೋಟೆ ಜಿಲ್ಲೆಯ ಹುನಗುಂದದಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು. ಖಾಸಗಿ ಬಸ್ ಹುಬ್ಬಳ್ಳಿ ಕಡೆಯಿಂದ ಬೆಂಗಳೂರು ಕಡೆಗೆ ತೆರಳುತ್ತಿತ್ತು ಈ ವೇಳೆ ಓವರ್‌ಟೇಕ್ ಮಾಡಲು ಹೋಗಿ ಹಿಂಬದಿಯಿಂದ ಖಾಸಗಿ ಬಸ್‌ಗೆ ಕೆಎಸ್‌ಆರ್‌ಟಿಸಿ ಬಸ್ ಡಿಕ್ಕಿ ಹೊಡೆದಿದೆ.

ಗಾಯಾಳುಗಳನ್ನು ತುಮಕೂರು ಜಿಲ್ಲಾಸ್ಪತ್ರೆಗೆ ರವಾನಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಮೃತದೇಹಗಳನ್ನು ಶಿರಾ ಸರ್ಕಾರಿ ಆಸ್ಪತ್ರೆಯ ಶವಗಾರಕ್ಕೆ ರವಾನಿಸಲಾಗಿದೆ.

ಘಟನಾ ಸ್ಥಳಕ್ಕೆ ಶಿರಾ ಗ್ರಾಮಾಂತರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಘಟನೆ ಸಂಬಂಧ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
NWKRTC -ಖಾಸಗಿ ಬಸ್ ನಡುವೆ ಡಿಕ್ಕಿ: ಇಬ್ಬರು ಪ್ರಯಾಣಿಕರು ಮೃತ, 20 ಮಂದಿಗೆ ಗಾಯ KSRTC: ಪ್ರಣಾಳಿಕೆ ಭರವಸೆ ಈಡೇರಿಸದ ಸರ್ಕಾರದ ವಿರುದ್ಧ ಸಮರ ಸಾರಲು ಸಜ್ಜಾದ ಸಾರಿಗೆ ನೌಕರರಿಂದ ನಾಳೆ ಸುದ್ದಿಗೋಷ್ಠಿ KKRTC: ಏ.14ರಂದು ಡಾ.ಅಂಬೇಡ್ಕ‌ರ್‌ ಜಯಂತಿ-ತಲಾ 20 ಸಾವಿರ ರೂ. ಮಂಜೂರು 12ನೇ ತರಗತಿವರೆಗೆ ಗಂಡು ಮಕ್ಕಳಿಗೂ ಉಚಿತ ಸರ್ಕಾರಿ ಬಸ್‌ ಪ್ರಯಾಣಕ್ಕೆ ಶಿಫಾರಸು NWKRTC ಬಸ್‌ಗೆ ಡೆಪ್ಯುಟಿ ಸ್ಪೀಕರ್ ರುದ್ರಪ್ಪ ಲಮಾಣಿ ಬೆಂಗಾವಲು ವಾಹ‌ನ ಡಿಕ್ಕಿ ಎಲ್ಲ ಕಚೇರಿಗಳು, ನಿಗಮಗಳಲ್ಲೂ ಲೋಕಾ ಯುಕ್ತರ ಸಹಾಯವಾಣಿ ಸಂಖ್ಯೆ ಒಳಗೊಂಡ ಪ್ರದರ್ಶನ ಫಲಕ ಅಳವಡಿಸಲು ಸಿಎಸ್‌ ಡಾ. ಶಾಲಿನಿ... KSRTC ಕೂಟದಿಂದ ಏ.8ರಿಂದ ಪಾದಯಾತ್ರೆ, 21ರಿಂದ ಆಮರಣಾಂತ ಉಪವಾಸ ನಾಳೆ ಇಪಿಎಸ್-95 ಪಿಂಚಣಿದಾರರ 99ನೇ ಮಾಸಿಕ ಸಭೆ: BMTC ‍& KSRTC ನಿವೃತ್ತ ನೌಕರರ ಸಂಫದ ಅಧ್ಯಕ್ಷ ನಂಜುಂಡೇಗೌಡ ದ್ವಿತೀಯ ಪಿಯುಸಿ ಪರೀಕ್ಷೆ ಮೌಲ್ಯಮಾಪನ ಕಾರ್ಯ ಮುಕ್ತಾಯ: ಏ.7ರಂದು ಫಲಿತಾಂಶ ಪ್ರಕಟ ಸಾಧ್ಯತೆ ಪಾದಚಾರಿ ಮಾರ್ಗ ಒತ್ತುವರಿ ಮಾಡಿದರೆ ದಂಡ: GBA ಮುಖ್ಯ ಆಯುಕ್ತ ಮಹೇಶ್ವರ್ ರಾವ್