NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಸಿಬ್ಬಂದಿಗಳ ವೇತನ ಪರಿಷ್ಕರಣೆ ಜಾರಿ ವೇಳೆ ತಪ್ಪುಗಳಾಗಿದ್ದು ಸರಿಪಡಿಸಿ : ನಿರ್ದೇಶಕರ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 2020 ಜನವರಿ 1ರಿಂದ ಜಾರಿಗೆ ಬರುವಂತೆ ಹೆಚ್ಚಳವಾಗಿರುವ ಶೇ.15ರಷ್ಟು ವೇತನ ಹೆಚ್ಚಳ ಮಾಡುವ ವೇಳೆ ವಿಭಾಗಗಳಲ್ಲಿ ಕೆಲವು ಸಿಬ್ಬಂದಿಗಳ ವೇತನ ಪರಿಷ್ಕರಣೆಯನ್ನು ಜಾರಿಗೊಳಿಸುವಾಗ ಸುತ್ತೋಲೆಯ ಕೆಲವು ಅಂಶಗಳನ್ನು ಪರಿಗಣಿಸದೆ ತಪ್ಪಾಗಿದ್ದು ಅದನ್ನು ಸರಿಪಡಿಸಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕರು (ಸಿ & ಜಾ) ಆದೇಶ ಹೊರಡಿಸಿದ್ದಾರೆ.

ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು, ಅಧಿಕಾರಿಗಳು 31.12.2019 ರಂದು ಪಡೆಯುತ್ತಿದ್ದ ಮೂಲವೇತನವನ್ನು ಶೇ.15 ರಷ್ಟು ಹೆಚ್ಚಿಸಿ, ಅದರಂತೆ ಮೂಲವೇತನ ಶ್ರೇಣಿಗಳನ್ನು ಪರಿಷ್ಕರಿಸಿ, 01.03.2023 ರಿಂದ ಜಾರಿಗೊಳಿಸಲಾಗಿದೆ.

ಆದರೆ, ವಿಭಾಗಗಳಲ್ಲಿ ಕೆಲವು ಸಿಬ್ಬಂದಿಗಳ ವೇತನ ಪರಿಷ್ಕರಣೆಯನ್ನು ಜಾರಿಗೊಳಿಸುವಾಗ ಸುತ್ತೋಲೆಯ ಕೆಲವು ಅಂಶಗಳನ್ನು ಪರಿಗಣಿಸದೆ ಇರುವುದರಿಂದ ತಪ್ಪುಗಳಾಗಿದ್ದು, ಈ ತಪ್ಪುಗಳನ್ನು ಸರಿಪಡಿಸಿ ಪರಿಷ್ಕೃತ ವೇತನ ನೀಡುವ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮ ನೌಕರರು, ಅಧಿಕಾರಿಗಳಿಗೆ ಕಳೆದ 2023ರ ಮಾರ್ಚ್‌ 1ರಿಂದ ಮೂಲವೇತನ ಶೇ.15ರಷ್ಟು ಹೆಚ್ಚಿಸಿ ಜಾರಿಗೊಳಿಸಲಾಗಿದೆ.

ಆದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಂತರಿಕ ಲೆಕ್ಕಪರಿಶೋಧನಾ ಇಲಾಖೆಯಿಂದ ಪರಿಶೀಲಿಸಿದಾಗ ಕೆಲವು ವಿಭಾಗಗಳ ವೇತನ ಪರಿಷ್ಕರಣೆಯಲ್ಲಿ ತಪ್ಪುಗಳು ಕಂಡುಬಂದಿವೆ ಎಂದು ತಿಳಿಸಿದ್ದಾರೆ.

ಇನ್ನು ಎಲ್ಲ ವಿಭಾಗಗಳಲ್ಲಿ ಹಾಗೂ ಪ್ರಾದೇಶಿಕ ಕಾರ್ಯಾಗಾರಗಳಲ್ಲಿ ಮತ್ತೊಮ್ಮೆ ಈ ಬಗ್ಗೆ ಎಲ್ಲ ಸೇವಾ ಪುಸ್ತಕಗಳ ಪರಿಶೀಲನೆ ನಡೆಸಿ ಈ ರೀತಿಯ ವ್ಯತ್ಯಾಸಗಳಿದ್ದಲ್ಲಿ ಇದೇ ಮಾರ್ಚ್ 31 ರೊಳಗೆ ಸರಿಪಡಿಸಿಕೊಳ್ಳಬೇಕು ಹಾಗೂ ಮುಂದಿನ ದಿನಗಳಲ್ಲಿ ಈ ರೀತಿಯ ತಪ್ಪುಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ನಿರ್ದೇಶಕರು (ಸಿ & ಜಾ) ಆದೇಶ ಹೊರಡಿಸಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ