NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಸಿಬ್ಬಂದಿಗಳ ವೇತನ ಪರಿಷ್ಕರಣೆ ಜಾರಿ ವೇಳೆ ತಪ್ಪುಗಳಾಗಿದ್ದು ಸರಿಪಡಿಸಿ : ನಿರ್ದೇಶಕರ ಆದೇಶ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: 2020 ಜನವರಿ 1ರಿಂದ ಜಾರಿಗೆ ಬರುವಂತೆ ಹೆಚ್ಚಳವಾಗಿರುವ ಶೇ.15ರಷ್ಟು ವೇತನ ಹೆಚ್ಚಳ ಮಾಡುವ ವೇಳೆ ವಿಭಾಗಗಳಲ್ಲಿ ಕೆಲವು ಸಿಬ್ಬಂದಿಗಳ ವೇತನ ಪರಿಷ್ಕರಣೆಯನ್ನು ಜಾರಿಗೊಳಿಸುವಾಗ ಸುತ್ತೋಲೆಯ ಕೆಲವು ಅಂಶಗಳನ್ನು ಪರಿಗಣಿಸದೆ ತಪ್ಪಾಗಿದ್ದು ಅದನ್ನು ಸರಿಪಡಿಸಬೇಕು ಎಂದು ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನಿರ್ದೇಶಕರು (ಸಿ & ಜಾ) ಆದೇಶ ಹೊರಡಿಸಿದ್ದಾರೆ.

ರಾಜ್ಯದ ನಾಲ್ಕು ಸಾರಿಗೆ ನಿಗಮಗಳ ನೌಕರರು, ಅಧಿಕಾರಿಗಳು 31.12.2019 ರಂದು ಪಡೆಯುತ್ತಿದ್ದ ಮೂಲವೇತನವನ್ನು ಶೇ.15 ರಷ್ಟು ಹೆಚ್ಚಿಸಿ, ಅದರಂತೆ ಮೂಲವೇತನ ಶ್ರೇಣಿಗಳನ್ನು ಪರಿಷ್ಕರಿಸಿ, 01.03.2023 ರಿಂದ ಜಾರಿಗೊಳಿಸಲಾಗಿದೆ.

ಆದರೆ, ವಿಭಾಗಗಳಲ್ಲಿ ಕೆಲವು ಸಿಬ್ಬಂದಿಗಳ ವೇತನ ಪರಿಷ್ಕರಣೆಯನ್ನು ಜಾರಿಗೊಳಿಸುವಾಗ ಸುತ್ತೋಲೆಯ ಕೆಲವು ಅಂಶಗಳನ್ನು ಪರಿಗಣಿಸದೆ ಇರುವುದರಿಂದ ತಪ್ಪುಗಳಾಗಿದ್ದು, ಈ ತಪ್ಪುಗಳನ್ನು ಸರಿಪಡಿಸಿ ಪರಿಷ್ಕೃತ ವೇತನ ನೀಡುವ ಅವಶ್ಯಕತೆ ಇದೆ ಎಂದು ತಿಳಿಸಿದ್ದಾರೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮ ನೌಕರರು, ಅಧಿಕಾರಿಗಳಿಗೆ ಕಳೆದ 2023ರ ಮಾರ್ಚ್‌ 1ರಿಂದ ಮೂಲವೇತನ ಶೇ.15ರಷ್ಟು ಹೆಚ್ಚಿಸಿ ಜಾರಿಗೊಳಿಸಲಾಗಿದೆ.

ಆದರೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆಯ ಅಂತರಿಕ ಲೆಕ್ಕಪರಿಶೋಧನಾ ಇಲಾಖೆಯಿಂದ ಪರಿಶೀಲಿಸಿದಾಗ ಕೆಲವು ವಿಭಾಗಗಳ ವೇತನ ಪರಿಷ್ಕರಣೆಯಲ್ಲಿ ತಪ್ಪುಗಳು ಕಂಡುಬಂದಿವೆ ಎಂದು ತಿಳಿಸಿದ್ದಾರೆ.

ಇನ್ನು ಎಲ್ಲ ವಿಭಾಗಗಳಲ್ಲಿ ಹಾಗೂ ಪ್ರಾದೇಶಿಕ ಕಾರ್ಯಾಗಾರಗಳಲ್ಲಿ ಮತ್ತೊಮ್ಮೆ ಈ ಬಗ್ಗೆ ಎಲ್ಲ ಸೇವಾ ಪುಸ್ತಕಗಳ ಪರಿಶೀಲನೆ ನಡೆಸಿ ಈ ರೀತಿಯ ವ್ಯತ್ಯಾಸಗಳಿದ್ದಲ್ಲಿ ಇದೇ ಮಾರ್ಚ್ 31 ರೊಳಗೆ ಸರಿಪಡಿಸಿಕೊಳ್ಳಬೇಕು ಹಾಗೂ ಮುಂದಿನ ದಿನಗಳಲ್ಲಿ ಈ ರೀತಿಯ ತಪ್ಪುಗಳು ಮರುಕಳಿಸದಂತೆ ಎಚ್ಚರ ವಹಿಸಬೇಕು ಎಂದು ನಿರ್ದೇಶಕರು (ಸಿ & ಜಾ) ಆದೇಶ ಹೊರಡಿಸಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ