NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ನಾಡಿನೊಳಗಿನ ಸೈನಿಕರಾದ ಸಾರಿಗೆ ನೌಕರರ 38 ತಿಂಗಳ ವೇತನ ಹಿಂಬಾಕಿ ಬಿಡುಗಡೆಗೆ ನಿವೃತ್ತ ನೌಕರರ ಒತ್ತಾಯ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ದೇಶದ ಸೈನಿಕರು ಹೇಗೆ ಗಡಿಯಲ್ಲಿ ತಮ್ಮ ಕರ್ತವ್ಯ ನಿಷ್ಠೆ ಮೆರೆಯುತ್ತಿದ್ದಾರೋ ಹಾಗೆಯೇ ನಾಡಿನ ಒಳಗೆ ಸಾರಿಗೆ ನೌಕರರು ಕೂಡ ಕರ್ತವ್ಯದಲ್ಲಿ ಮಗ್ನರಾಗಿದ್ದಾರೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಒಂದು ಗಂಟೆ ಬಸ್‌ಗಳು ತಡವಾದರೆ ನೂರಾರು ಮಂದಿ ತಾವು ತಲುಪಬೇಕಾದ ಸ್ಥಳವನ್ನು ತಲುಪುತ್ತೇವೋ ಇಲ್ಲವೋ ಎಂಬ ಚಿಂತೆಯಲ್ಲಿ ಒದ್ದಾಡುತ್ತಿರುತ್ತಾರೆ. ಅಂಥ ಜನರಿಗೆ ಸಂಜೀವಿನಿಯಂತೆ ಧಾವಿಸುವ ಸಾರಿಗೆ ಸಿಬ್ಬಂದಿ ಅವರನ್ನು ಸುರಕ್ಷಿತವಾಗಿ ಕರೆದುಕೊಂಡು ಹೋಗಿ ಅವರ ಸ್ಥಳಕ್ಕೆ ತಲುಪಿಸುತ್ತಾರೆ. ಈ ರೀತಿ ಸೇವೆ ಮಾಡುವ ಇವರು ನಿಜವಾಗಲು ಸಾರ್ವಜನಿಕ ಸೇವಕರಲ್ಲಿ ಮೊದಲ ಪಂಕ್ತಿಯಲ್ಲಿ ನಿಲ್ಲುತ್ತಾರೆ ಎಂದರೆ ತಪ್ಪಾಗಲಾರದು.

ಇನ್ನು ಇಂಥ ಸಾರಿಗೆ ನೌಕರರನ್ನು ನಾಡಿನ ಜನರು ಗೌರವದಿಂದ ಕಾಣಬೇಕು. ಇದಕ್ಕೂ ಮಿಗಿಲಾಗಿ ರಾಜ್ಯ ಸರ್ಕಾರ ಈ ನೌಕರರಿಗೆ ಸಿಗಬೇಕಿರುವ ಎಲ್ಲ ಸೌಲಭ್ಯಗಳನ್ನು ದೊರಕಿಸಿಕೊಡುವಲ್ಲಿ ಮೀನಮೇಷ ಎಣಿಸಬಾರದು. ಆದರೆ, ಕಳೆದ ಬಿಜೆಪಿ ಸರ್ಕಾರ ಈ ನೌಕರರನ್ನು ಭಾರೀ ತುಚ್ಯವಾಗಿ ನಡೆಸಿಕೊಂಡಿದ್ದು ಮಾತ್ರ ಖೇದಕರ ಸಂಗತಿ.

ಬಿಜೆಪಿಗರಂತೆ ಕಾಂಗ್ರೆಸ್‌ ಸರ್ಕಾರ ನಡೆಸಿಕೊಳ್ಳದೆ ಸಾರಿಗೆ ಸಿಬ್ಬಂದಿಗೆ ನ್ಯಾಯಯುತವಾಗಿ ಸಿಗಬೇಕಿರುವ ಸೌಲಭ್ಯಗಳನ್ನು ಕೊಡುವಲ್ಲಿ ಹಿಂದೇಡು ಹಾಕಬಾರದು. ಜತೆಗೆ 2020 ಜನವರಿಯಿಂದ-2023ರ ಫೆಬ್ರವರಿ ನಡುವೆ ನಿವೃತ್ತರಾಗಿರುವ ನೌಕರರಿಗೆ ದೊರಕಬೇಕಿರುವ ಸೌಲಭ್ಯಗಳನ್ನು ನೀಡಬೇಕಿದೆ. ಇದನ್ನು ತಡಮಾಡದೆ ರಾಜ್ಯ ಸರ್ಕಾರ ಕೊಡಬೇಕು.

ಈಗಾಗಲೇ 60 ವಸಂತಗಳನ್ನು ದಾಟಿರುವ ಜೀವಗಳು ನೀವು ತಡವಾಗಿ ಕೊಡುವ ಸೌಲಭ್ಯಗಳನ್ನು ಅನುಭವಿಸುವುದಕ್ಕೆ ಸಾಧ್ಯವಾಗುವುದಿಲ್ಲವೇನೋ. ಅದಕ್ಕೆ ಆ ಹಿರಿಯ ಜೀವಗಳು ಬದುಕಿರುವಾಗಲೇ ಅವರಿಗೆ ಸಿಗಬೇಕಿರುವ ಸೌಲಭ್ಯಗಳನ್ನು ತಲುಪಿಸುವತ್ತ ಸರ್ಕಾರ ಮುಂದಾಗಬೇಕಿದೆ.

ಇನ್ನು ಈ ಬಗ್ಗೆ ಈಗಾಗಲೇ ನಿವೃತ್ತ ನೂರಾರು ನೌಕರರು ಮುಖ್ಯಮಂತ್ರಿ, ಸಾರಿಗೆ ಸಚಿವ, ಸಂಬಂಧಪಟ್ಟ ನಾಲ್ಕೂ ನಿಗಮಗಳ ಎಂಡಿಗಳಿಗೂ ಮನವಿ ಸಲ್ಲಿಸಿದ್ದಾರೆ. ಅಲ್ಲದೆ ಧರಣಿಯನ್ನು ಮಾಡಿದ್ದಾರೆ. ಆದರೂ ಯಾವುದೇ ಪ್ರಯೋಜವಾಗಿಲ್ಲ. ಹೀಗಾಗಿ ಇನ್ನಾದರೂ 38 ತಿಂಗಳ ವೇತನ ಹಿಂಬಾಕಿಯನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಮೈಸೂರು ಭಾಗದ ನಿವೃತ್ತ ನೌಕರರಾದ ನಟರಾಜ್‌, ನಾಗಮಣಿ, ದೇವರಾಜ್‌ ಮುಂತಾದವರು ಮನವಿ ಮಾಡಿದ್ದಾರೆ.

Leave a Reply

error: Content is protected !!
LATEST
BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ