CRIMENEWSನಮ್ಮಜಿಲ್ಲೆ

KSRTC: ಡ್ಯೂಟಿಯಲ್ಲಿದ್ದ ಸಾಗರ ಘಟಕದ ಭದ್ರತಾ ಸಿಬ್ಬಂದಿ ಹೃದಯಾಘಾತದಿಂದ ಮೃತ

ವಿಜಯಪಥ ಸಮಗ್ರ ಸುದ್ದಿ

ಶಿವಮೊಗ್ಗ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಸಾಗರ ಘಟಕದ ಭದ್ರತಾ ಸಿಬ್ಬಂದಿ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತದಿಂದ ಮೃತಪಟ್ಟಿರುವ ಘಟನೆ ಸಾಗರದಲ್ಲಿ ನಡೆದಿದೆ.

ಸಾಗರದ ನಿವಾಸಿ ಸಂದೀಪ್ (41) ಮೃತರು. ಬುಧವಾರ ರಾತ್ರಿ ಪಾಳಿಯಲ್ಲಿ ಅವರು ಕೆಲಸ ಮಾಡುತ್ತಿದ್ದರು. ಈ ವೇಳೆ ಅವರಿಗೆ ಎದೆ ನೋವು ಕಾಣಿಸಿಕೊಂಡಿದೆ. ತಕ್ಷಣ ಸಂದೀಪ್​ ಅವರನ್ನು ಸಹೋದ್ಯೋಗಿಗಳು ಬಸ್ಸಿನಲ್ಲೇ ಆಸ್ಪತ್ರೆಗೆ ಕರೆದುಕೊಂಡು ಹೋಗಿದ್ದರು. ಆದರೆ ಅಷ್ಟರಲ್ಲೇ ಅವರು ಕೊನೆಯುಸಿರೆಳೆದಿದ್ದರು.

ಈ ಬಗ್ಗೆ ಆಸ್ಪತ್ರೆಗೆ ಕರೆದುಕೊಂಡು ಬಂದ ಸಿಬ್ಬಂದಿ ಚಂದ್ರು ಎಂಬುವರು ಮಾತನಾಡಿ, ನಾನು ಬಸ್​ನಲ್ಲಿ ಚಾಲಕ ಕಂ ನಿರ್ವಾಹಕನಾಗಿ ಕೆಲಸ‌ ಮಾಡುತ್ತಿದ್ದೇನೆ. ರಾತ್ರಿ ನಾನು ಬಸನ್ನು ಡಿಪೋಗೆ ಬಿಡಲು ಬಂದಾಗ ಗೇಟ್ ಬಳಿ ಹಾರ್ನ್ ಮಾಡಿದ್ರು ಸಹ ಸಂದೀಪ್ ಹೊರಗೆ ಬರಲಿಲ್ಲ.

ಸಂದೀಪ್ ಅವರು ಬಂದು ಬಸ್ ಚೆಕ್ ಮಾಡಿದ ಮೇಲೆಯೇ ಬಸ್ ಒಳಗೆ ಬಿಡಬೇಕಿತ್ತು. ಬಹಳ ಹೊತ್ತು ಇವರು ಬಾರದ ಕಾರಣಕ್ಕೆ ನಾನು ಬಸ್‌ ಇಳಿದು ಅವರ ರೂಮ್‌ನ ಬಳಿ ಹೋಗಿ ನೋಡಿದಾಗ ಅವರು ಕುಸಿದು ಬಿದ್ದಿದ್ದರು.

ಆ ತಕ್ಷಣ ನಮ್ಮದೇ ಬಸ್​ನಲ್ಲಿ ಸಂದೀಪ್​ ಅವರನ್ನು ಕರೆದುಕೊಂಡು ಹೋಗಿ ಆಸ್ಪತ್ರೆಗೆ ದಾಖಲಿಸಿದೆವು. ಅಷ್ಟೊತ್ತಿಗಾಗಲೇ ಸಂದೀಪ್ ನಿಧನರಾಗಿದ್ದಾರೆ ಎಂದು ವೈದ್ಯರು ಖಚಿತಪಡಿಸಿದರು ಎಂದು ಚಂದ್ರು ಹೇಳಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC ನೌಕರರದ್ದು ಹಾವು ಸಾಯೊಲ್ಲ ಕೋಲು ಮುರಿಯೊಲ್ಲ ಎಂಬ ಸ್ಥಿತಿ: ಇಂದಿನ ರಾಜೀ ಸಂಧಾನ ಸಭೆ ಮತ್ತೆ ವಿಫಲ ಜೂ.10ಕ್ಕೆ ಮ... 11 ತಿಂಗಳ ವೇತನ ಹಿಂಬಾಕಿಯಲ್ಲಿ ವ್ಯತ್ಯಾಸದ ಅನುಮಾನ ಹಿನ್ನೆಲೆ ಜೂ.1ರಂದು KSRTC ಎಂಡಿ ಭೇಟಿಗೆ ನೌಕರರು ಸಜ್ಜು BPL ಕಾರ್ಡ್‌ದಾರರು ಮಾತ್ರ ಗೃಹಲಕ್ಷ್ಮಿ ಫಲಾನುಭವಿಗಳು ಆದರೆ, ಅರ್ಹತೆ ಮೀರಿದವರು ಎಂದರೆ ಯಾರು? ಸರ್ಕಾರವನ್ನು ಪ್ರಶ್ನಿಸ... ಸರ್ಕಾರದ ಪಂಚ ಗ್ಯಾರಂಟಿಗಳಲ್ಲಿ ಈ 2 ಯೋಜನಗೆಳು ಇನ್ನು ಮುಂದೆ ಸಿಗಲ್ಲ!? ಭಟ್ಕಳ: ನದಿಯಲ್ಲಿ ಕಪ್ಪೆಚಿಪ್ಪು ತೆಗೆಯಲು ಹೋಗಿ ಒಂದೇ ಕುಟುಂಬದ 8 ಮಂದಿ ಮೃತ- ತಲಾ 5 ಲಕ್ಷ ರೂ. ಪರಿಹಾರ ಘೋಷಿಸಿದ ಸಿಎಂ ಹೈ ಕೋರ್ಟ್‌ CJಗೆ ಪತ್ರ ಬರೆದ ನೌಕರರು: ಸಮಾನ ಕೆಲಸಕ್ಕೆ ಸಮಾನ ವೇತನ ಬೇಕು! ಸಾರಿಗೆ ನಿಗಮ ನೌಕರರಿಗೆ ನ್ಯಾಯ ಬೇಕು! ವೇತನ ಹೆಚ್ಚಳ, 38 ತಿಂಗಳ ಹಿಂಬಾಕಿಗಾಗಿ ಪತ್ರ ಚಳವಳಿಗೆ ಮುಂದಾದ ಸಾರಿಗೆ ನೌಕರರು: ಹೈ ಕೋರ್ಟ್‌ ಸಿಜೆಗೆ ಲೆಟರ್ ಬರೆಯಲು ... ತಂದೆ-ತಾಯಿ ಇಬ್ಬರೂ IAS ಆಗಿದ್ದರೆ ಮಕ್ಕಳಿಗೆ ಮೀಸಲಾತಿ ಸೌಲಭ್ಯ ಏಕೆ ಮುಂದುವರಿಯ -ಬೇಕು: ಸುಪ್ರೀಂ ಕೋರ್ಟ್‌ ಮಹತ್ವದ ಪ್... KARNATAKA GOVT: ಕಾರ್ಮಿಕರ ಕನಿಷ್ಠ ವೇತನ ನಿಗದಿ ಮಾಡಿ ಸರ್ಕಾರದ ಆದೇಶ- ಮೇ 22ರಿಂದಲೇ ಜಾರಿ- ಕಾರ್ಮಿಕ ಅಧಿಕಾರಿ ತುಳಸ... ಕಲ್ಲಿದ್ದಲು ಗಣಿಯಲ್ಲಿ ಗ್ಯಾಸ್‌ ಸ್ಫೋಟ: 90 ಜನರು ಮೃತ, 100ಕ್ಕೂ ಹೆಚ್ಚು ಕಾರ್ಮಿಕರಿಗೆ ಗಾಯ