CRIMENEWSನಮ್ಮಜಿಲ್ಲೆ

KSRTCಶಿರಾ: ಬರಗೂರು ಸಮೀಪ ಬಸ್‌ಗೆ ಬೈಕ್ ಡಿಕ್ಕಿ: ಇಬ್ಬರು ಸವಾರರ ಸಾವು

ವಿಜಯಪಥ ಸಮಗ್ರ ಸುದ್ದಿ

ಶಿರಾ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್‌ ಮತ್ತು ಬೈಕ್‌ ನಡುವೆ ಸಂಭವಿಸಿದ ಅಪಘಾತದಲ್ಲಿ ಇಬ್ಬರು ಮೃತಪಟ್ಟಿರುವ ಘಟನೆ ಶಿರಾ ತಾಲೂಕಿನ ಬರಗೂರು ಸಮೀಪದ ಬರಗೂರು-ದಾಸರಹಳ್ಳಿ ರಸ್ತೆಯಲ್ಲಿ ನಡೆದಿದೆ.

ಶುಕ್ರವಾರ ಈ ಅವಘಡ ನಡೆದಿದ್ದು, ಈ ವೇಳೆ ಬೈಕ್‌ನಲ್ಲಿದ್ದ ಬರಗೂರು ಗ್ರಾಮದ ಮೂರ್ತಿ (25) ಮೃತರು. ಮತ್ತೊಬ್ಬರ ಮಾಹಿತಿ ತಿಳಿದು ಬಂದಿಲ್ಲ.

ಕೆಎಸ್‌ಆರ್‌ಟಿಸಿ ಬಸ್ ಮತ್ತು ಬೈಕ್ ಮುಖಾಮುಖಿಯಾಗಿ ಈ ದುರಂತ ಸಂಭವಿಸಿದೆ. ಇಬ್ಬರು ಸ್ಥಳದಲ್ಲಿಯೇ ಅಸುನೀಗಿದ್ದಾರೆ.

ವಿಷಯ ತಿಳಿಯುತ್ತಿದ್ದಂತೆ ಪಟ್ಟನಾಯಕನಹಳ್ಳಿ ಠಾಣೆ ಪೊಲೀಸರು ಸ್ಥಳಕ್ಕೆ ಬಂದು ಪರಿಶೀಲನೆ ನಡೆಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Megha
the authorMegha

Leave a Reply

error: Content is protected !!