- ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು
- ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ?
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರಿಗೆ 2024ರ ಜನವರಿ 1ರಿಂದ ಆಗಬೇಕಿರುವ ವೇತನ ಹೆಚ್ಚಳ ಸಂಬಂಧ ಇಂದು (14ರಂದು) ನಡೆಬೇಕಿದ್ದ ನೌಕರರ ಸಂಘಟನೆಗಳ ಜತೆಗೆ ಸಿಎಂ ಸಭೆಯನ್ನು ಕೆಲ ಕಾರಣಗಳಿಂದ ಮಾಡಲಾಗಲಿಲ್ಲ. ಆದರೆ ಶೀಘ್ರದಲ್ಲೇ ಸಭೆ ಕರೆಯಲಾಗುವುದು ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಅತೀ ಶೀಘ್ರದಲ್ಲೇ ಸಭೆಯನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ಆಯೋಜಿಸಲಾಗುವುದು ಹೀಗಾಗಿ ಸಭೆಗೆ ಎಲ್ಲ ಸಂಘಟನೆಗಳ ಪದಾಧಿಕಾರಿಗಳನ್ನು ಕರೆಯಲಾಗುವುದು. ಯಾವುದೇ ನೌಕರರು ಗಾಬರಿ ಪಡುವುದು ಬೇಡ ಎಂದು ತಮ್ಮನ್ನು ಭೇಟಿ ಮಾಡಿದ ಒಕ್ಕೂಟದ ಪದಾಧಿಕಾರಿಗಳಿಗೆ ತಿಳಿಸಿದ್ದಾರೆ.
ಆದರೆ, ಈ ಎಲ್ಲವನ್ನು ಗಮನಿಸಿದರೆ ಸಿಎಂ ಪದೇಪದೆ ಸಾರಿಗೆ ನೌಕರರ ವೇತನ ಸಂಬಂಧ ಸಭೆ ಕರೆಯುವುದಾಗಿ ಹೇಳಿ ಮತ್ತೆ ಅದನ್ನು ಯಾವುದೇ ಸಕಾರಣವಿಲ್ಲದೆ ಕೈಬಿಡುವ ಕೆಲಸ ಮಾಡುತ್ತಿದ್ದಾರೆ. ಇದು ಒಂದು ರೀತಿ ಮಕ್ಕಳಾಟದಂತೆ ಸಿಎಂ ಸಾರಿಗೆ ನೌಕರರ ವಿಷಯದಲ್ಲಿ ನಡೆದುಕೊಳ್ಳುತ್ತಿದ್ದಾರೆ ಎಂದು ಸಂಘಟನೆಗಳ ಮುಖಂಡರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
ಅಲ್ಲದೆ, ಸಾರಿಗೆ ಸಚಿವರು ಸಭೆ ಕರೆಯುತ್ತೇವೆ ಎಂದು ನಮ್ಮ ಬಳಿ ಹೇಳುತ್ತಾರೆ. ಆದರೆ ಸಿಎಂ ಸಭೆಯನ್ನು ಹೇಳದೆ ಕೇಳದೆ ಕೈಬಿಡುತ್ತಾರೆ. ಅಂದರೆ ಸಿಎಂ ಮತ್ತು ಸಾರಿಗೆ ಸಚಿವರ ನಡುವೆ ಹೊಂದಾಳಿಕೆ ಕೊರತೆ ಇದೆಯೇ ಎಂದು ಅನಿಸುತ್ತಿದೆ. ಕಾರಣ ಸಚಿವರು ಸಿಎಂ ಸಭೆ ನಡೆಸುತ್ತಾರೆ ಎಂದು ದಿನಾಂಕವನ್ನು ಹೇಳಿರುತ್ತಾರೆ. ಆದರೆ ಅತ್ತ ಸಿಎಂ ಅದನ್ನು ಡಸ್ಟ್ಬಿನ್ಗೆ ಹಾಕುತ್ತಾರೆ.
ಅಂದರೆ ಇಲ್ಲಿ ನಾವು ದುಡಿಯುವ ವರ್ಗದ ಪರ ಇದ್ದೇವೆ ಎಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡುವ ಸಿಎಂ ಈ ಜಬಾಬ್ದಾರಿಯನ್ನೇ ಮರೆಯುತ್ತಿದ್ದಾರೆ ಏಕೆ? ಇದರಿಂದ ಸಾರಿಗೆ ನೌಕರರಿಗೆ ಕಳೆದ 2020 ಜನವರಿ ಒಂದರಿಂದ ಅನ್ವಯವಾಗುವಂತೆ ಆಗಿರುವ ಶೇ.15ರಷ್ಟು ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿನ್ನು ಈವರೆಗೂ ಕೊಟ್ಟಿಲ್ಲ. ಜತೆಗೆ 2024ರ ಜನವರಿ 1 ರಿಂದ ಆಗಬೇಕಿರುವ ವೇತನ ಹೆಚ್ಚಳದ ಬಗ್ಗೆಯೂ ಯಾವುದೇ ನಿರ್ಧಾರ ತೆಗೆದುಕೊಳ್ಳುತ್ತಿಲ್ಲ.
ಇದನ್ನು ನೋಡಿದರೆ ಸಿಎಂ ಸಾರಿಗೆಯ ನಾಲ್ಕೂ ನಿಗಮಗಳ ಬಗ್ಗೆ ತಾರತಮ್ಯತೆ ಅನುಸರಿಸುತ್ತಿದ್ದಾರೆ ಎಂಬುವುದು ಮೇಲ್ನೋಟಕ್ಕೆ ಅನಿಸುತ್ತಿದೆ. ಅಲ್ಲದೆ ಈ ಸಾರಿಗೆ ನೌಕರರ ಒಕ್ಕೂಟ ಮತ್ತು ಜಂಟಿ ಕ್ರಿಯಾ ಸಮಿತಿಯ ನಿಲುವುಗಳು ವಿರುದ್ಧ ದಿಕ್ಕಿನಲ್ಲಿರುವುದರಿಂದ ಸಿಎಂ ಸಿದ್ದರಾಮಯ್ಯ ನೌಕರರ ವೇತನ ಸಂಬಂಧ ದೃಢ ನಿರ್ಧಾರಕ್ಕೆ ಬರದೆ ಸುಖಸುಮ್ಮನೆ ಕಾಲ ದೂಡಿಕೊಂಡೆ ಬರುತ್ತಿದ್ದಾರೆ.
ಇದು ಹೀಗೆಯೇ ಮುಂದುವರಿದರೆ ಮತ್ತೆ 2021ರ ಮುಷ್ಕರವನ್ನು ಕಾಂಗ್ರೆಸ್ ಸರ್ಕಾರ ಕೂಡ ಎದುರಿಸಬೇಕಾಗುತ್ತದೆ ಎಂಬ ಎಚ್ಚರಿಕೆಯನ್ನು ಈ ಹಿಂದಿನಿಂದಲೂ ಸಾರಿಗೆ ನೌಕರರು ಕೊಡುತ್ತಲೇ ಬರುತ್ತಿದ್ದಾರೆ. ಅದು ಆಗುವಂತೆ ಮಾಡಿ ಸರ್ಕಾರಕ್ಕೆ ಕೆಟ್ಟ ಹೆಸರು ತಂದುಕೊಳ್ಳುತ್ತಾರೋ ಇಲ್ಲ ತಾವು ಪ್ರಣಾಳಿಕೆಯಲ್ಲಿ ನೀಡಿರುವಂತೆ ಸರಿ ಸಮಾನ ವೇತನ ಮಾಡಿ ಸಿಎಂ ತಮ್ಮ ಮತ್ತು ಸರ್ಕಾರ ಮಾನ ಉಳಿಸಿಕೊಳ್ಳುತ್ತಾರೋ ಎಂಬುದನ್ನು ಕಾದು ನೋಡಬೇಕಿದೆ.
Related

You Might Also Like
ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು: ಸಿಎಂ ಸಿದ್ದರಾಮಯ್ಯ ಸಲಹೆ
ಬೆಂಗಳೂರು: ಸರ್ಕಾರಿ ನೌಕರರು ಜಾತಿ, ಧರ್ಮ ಮಾಡಬಾರದು. ಇದು ವೃತ್ತಿಗೆ ಮಾಡುವ ಅವಮಾನ. ನಮ್ಮ ಮೇಲೆ, ಸರ್ಕಾರಿ ನೌಕರರ ಮೇಲೆ ಸಮಾಜದ ಋಣ ಇದೆ ಎಂದು ಮುಖ್ಯಮಂತ್ರಿ...
ಸಗಟು ಮಳಿಗೆಗೆ ದಿಢೀರ್ ಭೇಟಿ ನೀಡಿದ ಆಹಾರ ಸಚಿವ ಮುನಿಯಪ್ಪ
ಮೈಸೂರು: ಮೈಸೂರಿನ ದಕ್ಷಿಣ ನಗರದ ಸಗಟು ಮಳಿಗೆ ಬಂಡಿಪಾಲ್ಯಕ್ಕೆ ಆಹಾರ ನಾಗರಿಕ ಸರಬರಾಜು ಮತ್ತು ಗ್ರಾಹಕ ವ್ಯವಹಾರಗಳ ಸಚಿವ ಕೆ.ಎಚ್.ಮುನಿಯಪ್ಪ ಇಂದು ಭೇಟಿ ನೀಡಿ ಆಹಾರ ಧಾನ್ಯಗಳ...
ಪಾದಚಾರಿ ಮಾರ್ಗ ಒತ್ತುವರಿ, ಅನಧಿಕೃತ ಜಾಹೀರಾತು ತೆರವು: ಆಯುಕ್ತ ಸತೀಶ್
ಬೆಂಗಳೂರು: ಬಿಬಿಎಂಪಿ ರಾಜರಾಜೇಶ್ವರಿನಗರ ವಲಯ ವ್ಯಾಪ್ತಿಯಲ್ಲಿ ಪಾದಚಾರಿ ಮಾರ್ಗ ಒತ್ತುವರಿ, ಅನಧಿಕೃತ ಜಾಹೀರಾತು ತೆರವು ಕಾರ್ಯಾಚರಣೆ ಹಾಗೂ ಸ್ವಚ್ಛತಾ ಅಭಿಯಾನ ನಡೆಸಲಾಯಿತು. ಪಾಲಿಕೆ ವ್ಯಾಪ್ತಿಯ ರಾಜರಾಜೇಶ್ವರಿನಗರ ವಲಯದಲ್ಲಿ...
ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹಣೆಯಾದರೆ ನಿವೇಶನ ಮಾಲೀಕರಿಗೆ ದಂಡ ವಿಧಿಸಿ: ಸ್ನೇಹಲ್
ಬೆಂಗಳೂರು: ಖಾಲಿ ನಿವೇಶನಗಳಲ್ಲಿ ತ್ಯಾಜ್ಯ ಸಂಗ್ರಹಣೆಯಾದಲ್ಲಿ ನಿವೇಶನ ಮಾಲೀಕರಿಗೆ ನೋಟಿಸ್ ನೀಡಿ ದಂಡ ವಿಧಿಸುವಂತೆ ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ರವರು ಅಧಿಕಾರಿಗಳಿಗೆ ಸೂಚನೆ ನೀಡಿದರು. ಪೂರ್ವ...
KSRTC ಅಧಿಕಾರಿಗಳು ಕಚೇರಿಗೆ ಬಂದಾಗ ತಮ್ಮ ಹಣ ಎಷ್ಟಿತ್ತು ಹೋಗುವಾಗ ಎಷ್ಟಿದೆ ಅಂತ ತಿಳಿಸಬೇಕು: ಎಂಡಿ ಆದೇಶ
ಬೆಂಗಳೂರು: ರಾಜ್ಯ ಸರ್ಕಾರವು ಕಚೇರಿಗಳಲ್ಲಿ ನಗದು ಘೋಷಣೆ ವಹಿ ನಿರ್ವಹಣೆ ಕುರಿತು ವಿವರವಾಗಿ ಮಾರ್ಗಸೂಚಿಗಳನ್ನು ನೀಡಿ, ನಿಗಮ/ ಮಂಡಳಿಗಳಲ್ಲಿ ಸಹ ನಗದು ಘೋಷಣೆ ವಹಿ ನಿರ್ವಹಣೆ ಮಾಡುವಂತೆ...
ಕರ್ನಾಟಕ ಹೈಕೋರ್ಟ್ ಸಿಜೆಯಾಗಿ ನ್ಯಾ.ವಿಭು ಬಖ್ರು ಪ್ರಮಾಣ ವಚನ ಸ್ವೀಕಾರ
ಬೆಂಗಳೂರು: ಕರ್ನಾಟಕ ಹೈಕೋರ್ಟ್ ಮುಖ್ಯ ನ್ಯಾಯಮೂರ್ತಿಯಾಗಿ ನ್ಯಾಯಮೂರ್ತಿ ವಿಭು ಬಖ್ರು ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಿದರು. ಇಂದು ರಾಜ್ಯಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ...
BMTC ನೌಕರರಿಗೆ ಕಿರುಕುಳ: ಸಮಸ್ಯೆ ಕೇಳದ ಘಟಕ- 20ರ ಡಿಎಂ- ಸರ್ವಾಧಿಕಾರಿಯ ವರ್ತನೆ
2 ಗಂಟೆ ಬಳಿಕ ತನ್ನ ಕಚೇರಿ ಬಾಗಿಲು ಹಾಕಿಕೊಂಡು ಚೇಳಗಳ ಜತೆ ಹರಟೆ ನೌಕರರ ಸಮಸ್ಯೆ ಬಗೆಹರಿಸದೆ ದರ್ಪ ಮೆರೆಯುತ್ತಿರುವ ಕಿರಾತಕ ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ...
BMTC: ಹೋಟೆಲ್ಗೆ ನುಗ್ಗಿದ ಎಲೆಕ್ಟ್ರಿಕ್ ಬಸ್, ಓರ್ವ ಯುವತಿ ಸಾವು, ಮೂವರಿಗೆ ಗಾಯ
ಬೆಂಗಳೂರು: ಕಿಲ್ಲರ್ ಬಿಎಂಟಿಸಿ ಎಂದು ಕರೆಸಿಕೊಳ್ಳುವ ಬೆಂಗಳೂರು ಮಹಾನಗರ ಸಾರಿಗೆಯ ಎಲೆಕ್ಟ್ರಿಕ್ ಬಸ್ ಚಾಲಕನ ನಿಯಂತ್ರಣ ತಪ್ಪಿ ಫುಟ್ಪಾತ್ಗೆ ನುಗ್ಗಿದ ಪರಿಣಾಮ ಯುವತಿಯೋರ್ವರು ಮೃತಪಪ್ಟಿದ್ದು, ಫುಟ್ಪಾತ್ ಮೇಲೆ...
ಸಾರಿಗೆ ನೌಕರರು ಮುಷ್ಕರ ಹೂಡುವುದಾಗಿ ಕೊಟ್ಟ ಮುಷ್ಕರದ ನೋಟಿಸ್ ಸಂಬಂಧ ನಿರ್ದೇಶನ ಕೋರಿ ಸರ್ಕಾರದ ಕಾರ್ಯದರ್ಶಿಗಳಿಗೆ ಪತ್ರ ಬರೆದ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರ ವೇತನ ಹೆಚ್ಚಳ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆ ಸಂಬಂಧ ಸರ್ಕಾರ ಯಾವುದೇ ನಿರ್ಧಾರ ತೆಗೆದುಕೊಳ್ಳದ ಹಿನ್ನೆಲೆಯಲ್ಲಿ ಆ.5ರಿಂದ...