NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಬಾನಂದೂರು – ಶ್ರೀಕ್ಷೇತ್ರ ಆದಿ ಚುಂಚನಗರಿ ನಡುವಿನ ಬಸ್‌ ಸಂಚಾರಕ್ಕೆ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ರಾಮನಗರ: ಭೈರವೈಕ್ಯ ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಜನ್ಮಸ್ಥಳ ಬಾನಂದೂರಿನಿಂದ ಶ್ರೀ ಕ್ಷೇತ್ರ ಆದಿಚುಂಚನಗರಿಗೆ ಸಾರಿಗೆ ಸಂಸ್ಥೆಯ ಬಸ್ ಸಂಚಾರಕ್ಕೆ ಆದಿಚುಂಚನಗಿರಿ ರಾಮನಗರ ಶಾಖಾ ಮಠದ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಮತ್ತು ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಂ.ಲಿಂಗಪ್ಪ ಬಾನಂದೂರಿನಲ್ಲಿ ಚಾಲನೆ ನೀಡಿದರು.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಶುಕ್ರವಾರ ಜೂನ್‌14ರಂದು ಬಾನಂದೂರು ಗ್ರಾಮಕ್ಕೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಬಸ್‌ ಬರುತ್ತಿದ್ದಂತೆ ಹೂವಿನ ಅಲಂಕಾರ ಮಾಡಿ ಪೂಜೆ ಸಲ್ಲಿಸಲಾಯಿತು. ಈ ವೇಳೆ ಲಿಂಗಪ್ಪ ಅವರು ಆದಿಚುಂಚನಗಿರಿಗೆ 127 ರೂ. ಕೊಟ್ಟು ಮೊದಲ ಟಿಕೆಟ್ ಪಡೆದು ಪ್ರಯಾಣ ಬೆಳೆಸಿ ಶುಭ ಹಾರೈಸಿದರು.

ಈ ವೇಳೆ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಮಾತನಾಡಿ, ಆದಿಚುಂಚನಗಿರಿಯನ್ನು ಚಿನ್ನದ ಗಿರಿಯಾಗಿ ಅಭಿವೃದ್ಧಿ ಮಾಡಿದ ಈ ಮಣ್ಣಿನಲ್ಲಿ ಜನಿಸಿದ ಪುಣ್ಯಪುರಷ, ಶ್ರೀ ಬಾಲಗಂಗಾಧರನಾಥ ಸ್ವಾಮೀಜಿಯವರ ಹುಟ್ಟೂರು ಬಾನಂದೂರು ಗ್ರಾಮದಿಂದ ಚುಂಚನಗಿರಿಗೆ ನೇರ ಬಸ್ ಸಂಚಾರ ಆರಂಭಿಸುವ ಮೂಲಕ ಸಾರಿಗೆ ಸಂಸ್ಥೆಯ ಅಧಿಕಾರಿಗಳು ಈ ಭಾಗದ ಜನರ ಬಹುದಿನದ ಕನಸ್ಸು ನನಸು ಮಾಡಿದ್ದಾರೆ ಎಂದು ಶ್ಲಾಘಿಸಿದರು.

ಈ ಭಾಗದ ಜನರು ಬೆಂಗಳೂರು ಅಥವಾ ಮಂಡ್ಯ ಮತ್ತಿತರ ಸ್ಥಳಗಳಿಂದ ಸುತ್ತಾಡಿ ಶ್ರೀಕ್ಷೇತ್ರಕ್ಕೆ ತೆರಳಬೇಕಾಗಿತ್ತು, ಆದರೆ ಗ್ರಾಮದ ಗಂಗಾಧರಯ್ಯ ಅವರ ಪರಿಶ್ರಮದಿಂದ ನೇರ ಬಸ್ ಸೌಲಭ್ಯ ಸಿಕ್ಕಿದೆ. ಈ ಬಸ್ ಶಾಶ್ವತವಾಗಿ ಉಳಿಯಬೇಕು, ಭಕ್ತರು ಮತ್ತು ಪ್ರಯಾಣಿಕರು ಚೀಟಿ ಪಡೆದು ಪ್ರಯಾಣಿಸಿ ಬಸ್‌ ಸೇವೆಯ ಸದುಪಯೋಗ ಪಡಿಸಿಕೊಳ್ಳಿ ಎಂದು ಆಶಿಸಿದರು.

ವಿಧಾನ ಪರಿಷತ್ ಮಾಜಿ ಸದಸ್ಯ ಸಿ.ಎಂ.ಲಿಂಗಪ್ಪ ಮಾತನಾಡಿ ಬಾನಂದೂರು ಗ್ರಾಮದಲ್ಲಿ ಜನಿಸಿದ ಬಾಲಗಂಗಾಧರನಾಥ ಸ್ವಾಮೀಜಿಯವರು ಈ ಜಗತ್ತು ಕಂಡ ಮಹಾ ಪುರುಷರು. ಅವರ ಹುಟ್ಟೂರಿನಿಂದ ಆದಿಚುಂಚನಗಿರಿ ಕ್ಷೇತ್ರಕ್ಕೆ ನೇರ ಬಸ್ ಸೌಲಭ್ಯ, ಈ ಭಾಗದ ಜನರಿಗೆ ಅನುಕೂಲವಾಗಿದೆ. ಈ ಭಾಗದ ಬಹುದಿನದ ಸಮಸ್ಯೆ ಇದೀಗ ಬಗೆಹರಿದಿದ್ದು, ಜನರು ಹೆಚ್ಚುಹೆಚ್ಚಾಗಿ ಪ್ರಯಾಣ ಮಾಡುವ ಮೂಲಕ ಸದುಪಯೋಗಪಡಿಸಿಕೊಳ್ಳುವಂತೆ ಕರೆ ನೀಡಿದರು.

ಕೆಎಸ್‌ಆರ್‌ಟಿಸಿ ರಾಮನಗರ ವಿಭಾಗದ ಡಿಟಿಒ  ಶ್ರೀನಿವಾಸಮೂರ್ತಿ, ಬಸ್ ಚಾಲಕ ಮಂಜುನಾಥ್, ನಿರ್ವಾಹಕ ವೆಂಕಟೇಶ್ ಅವರನ್ನು ಗ್ರಾಮಸ್ಥರ ಪರವಾಗಿ ಶ್ರೀ ಅನ್ನದಾನೇಶ್ವರನಾಥ ಸ್ವಾಮೀಜಿ ಸನ್ಮಾನಿಸಿ ಗೌರವಿಸಿದರು. ಬಸ್‌ಗೆ ಪೂಜೆ ಸಲ್ಲಿಸಿ ಸಿಹಿ ಹಂಚಿ ಸಂಭ್ರಮಿಸಲಾಯಿತು.

ಬಿಡದಿ ಪುರಸಭೆಯ ಸ್ಥಾಯಿ ಸಮಿತಿ ಅಧ್ಯಕ್ಷ ಸಿ.ಉಮೇಶ್, ಬಿಜಿಎಸ್ ಪ್ರಗತಿಪರ ವೇದಿಕೆಯ ಪದಾಧಿಕಾರಿಗಳಾದ ಗಂಗಾಧರಯ್ಯ, ಬಿ.ಎಂ.ಕುಮಾರ್, ನಂಜುಂಡಿ, ರೇಣುಕಯ್ಯ, ಕೇಶವಮೂರ್ತಿ, ಭಾನುಪ್ರಕಾಶ್, ಶಿವಣ್ಣ, ಸಂತೋಷ್, ಗಂಗಾಧರ್, ಕುಮಾರ್, ಜಯಕುಮಾರ್, ಬಿ.ಕೆ.ವಿಠ್ಠಲ್, ಜಾನಪದ ಗಾಯಕಿ ಬೋರಮ್ಮ ಸೇರಿದಂತೆ ಹಲವರು ಇದ್ದರು.

Leave a Reply

error: Content is protected !!
LATEST
BMTC ಕಂಡಕ್ಟರ್‌ಗೆ ಕಲ್ಲಿನಿಂದ ಹೊಡೆದ ಕಿರಾತಕ: ಆತಂಕದಲ್ಲೇ ಡ್ಯೂಟಿ, ಚಾಲನಾ ಸಿಬ್ಬಂದಿಗಳಿಗಿಲ್ಲ ಜೀವ ರಕ್ಷಣೆ KKRTC ಬಸ್‌ ಪಲ್ಟಿ ಮಹಿಳೆ ಸಾವು- ಒಬ್ಬರ ಸ್ಥಿತಿ ಗಂಭೀರ, 20ಕ್ಕೂ ಹೆಚ್ಚು ಮಂದಿಗೆ ಗಾಯ ವಿಜಯಪಥ ವರದಿ ಪರಿಣಾಮ-KSRTC ಚಾಲಕನಿಗೆ ಕೊಟ್ಟಿದ್ದ ಮೆಮೋ ವಾಪಸ್‌ ಪಡೆದು 20ದಿನಗಳ ರಜೆ ಮಂಜೂರು ಮಾಡಿದ ಡಿಸಿ ಸಾರಿಗೆ ನೌಕರರಿಂದ ಚುನಾಯಿತರಾಗದ ಸ್ವಯಂ ಘೋಷಿತ ಕಾರ್ಮಿಕ ನಾಯಕರ "ಚೌಕಾಶಿ" ವೇತನ ಒಪ್ಪಂದಕ್ಕೆ ಇತೀಶ್ರೀ ಹಾಡಿ ಸರಿ ಸಮಾನ... KSRTC ನೌಕರರ ಸಂಬಳ ಅ.30ರಂದೇ ಬ್ಯಾಂಕ್ ಖಾತೆಗೆ ಜಮೆ: ಸಂಸ್ಥೆ ನಿರ್ದೇಶಕರು ಬೆಳಗಾವಿಯಲ್ಲಿ ವಿಧಾನಮಂಡಲದ ಜಂಟಿ ಅಧಿವೇಶನಕ್ಕೆ ಬರಾಕ್ ಓಬಾಮಾ ಆಹ್ವಾನಕ್ಕೆ ಚಿಂತನೆ : ಸಚಿವ ಎಚ್.ಕೆ. ಪಾಟೀಲ ಹಸಿರು ಪಟಾಕಿ ಬಳಸಿ ದೀಪಾವಳಿ ಹಬ್ಬ ಆಚರಿಸಿ- ನಿಷೇಧಿತ ಪಟಾಕಿ ಮಾರಾಟ, ಬಳಕೆ ನಿಷೇಧ: ಜಿಲ್ಲಾಧಿಕಾರಿ ಡಾ.ಶಿವಶಂಕರ ಕೆಂಗೇರಿ ಕೆರೆಯಲ್ಲಿ ಮೃತಪಟ್ಟ ಇಬ್ಬರು ಮಕ್ಕಳ ಕುಟುಂಬಕ್ಕೆ ₹5 ಲಕ್ಷ ಪರಿಹಾರ APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ