NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ಉಪವಾಸ ಸತ್ಯಾಗ್ರಹ ನಿರತ ಸಾರಿಗೆ ನೌಕರರ ಎಬ್ಬಿಸಲು ಬಂದ ಪೊಲೀಸರು – ಡಿ.24ರ ಬೆಳಗ್ಗೆ 7ರವರೆಗೆ ಗಡುವುಕೊಟ್ಟು ವಾಪಸ್‌

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಸುವರ್ಣ ಸೌಧದ ಮುಂದೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಸಾರಿಗೆ ನೌಕರರು ನಡೆಸುತ್ತಿರುವ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹವನ್ನು ಹತ್ತಿಕ್ಕಲು ಸರ್ಕಾರ ಸುಮಾರು 300 ಜನ ಪೊಲೀಸರನ್ನು ಬಿಟ್ಟಿತ್ತು. ಆದರೆ ನಾವು ಸ್ಥಳದಿಂದ ಕದಲುವುದಿಲ್ಲ ಎಂದು ನೌಕರರು ಪಟ್ಟು ಹಿಡಿದು ಉಪವಾಸ ಸತ್ಯಾಗ್ರಹ ಮುಂದುವರಿಸಿದ್ದಾರೆ.

ಈ ವೇಳೆ ಪೊಲೀಸರು ನಾಳೆ (ಡಿ.24) ಬೆಳಗ್ಗೆ ಏಳು ಗಂಟೆಯೊಳಗಾಗಿ ನೀವು ಎದ್ದು ಹೋಗಿರಬೇಕು ಇಲ್ಲದಿದ್ದರೆ ನಾವು ನಿಮ್ಮ ವಿರುದ್ಧ ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ಕೊಟ್ಟು ಹೋಗಿದ್ದಾರೆ.

ಆದರೆ ನಾವು ಈಗ ಜೀವಂತ ಹೆಣವಾಗಿದ್ದೇವೆ ಹೀಗಾಗಿ ನಾವು ಸತ್ತರೂ ಸರಿಯೇ ನಮ್ಮ ಬೇಡಿಕೆ ಈಡೇರಿಸದ ಹೊರತು ನಾವು ಉಪವಾಸ ಸತ್ಯಾಗ್ರಹ ಕೈ ಬಿಡುವುದಿಲ್ಲ ಎಂದು ನೌಕರರು ಸರ್ಕಾರಕ್ಕೆ ಎಚ್ಚರಿಕೆ ಸಂದೇಶ ರವಾನಿಸಿದ್ದಾರೆ.

ಇನ್ನು ಕಳೆದ ಸುಮಾರು ಮೂರು ವರ್ಷಗಳಿಂದಲೂ ಸರ್ಕಾರದ ಎಲ್ಲ ಸಚಿವರು, ಮುಖ್ಯಮಂತ್ರಿಗಳು ಹಾಗೂ ನಾಲ್ಕೂ ಸಾರಿಗೆ ನಿಗಮಗಳ ಉನ್ನತ ಅಧಿಕಾರಿಗಳು ಆಡಳಿತ ಮಂಡಳಿಗಳಿಗೆ ಸಾವಿರಾರು ಮನವಿ ಸಲ್ಲಿಸಿದ್ದು ಈವರೆಗೂ ನಮ್ಮ ಬೇಡಿಕೆಗೆ ಸ್ಪಂದಿಸಿಲ್ಲ. ಈ ನಡುವೆ ನಮ್ಮ ಹೋರಾಟವನ್ನು ಹತ್ತಿಕ್ಕಲು ಹೊರಟರೆ ನಾವು ಅದಕ್ಕೆ ಜಗ್ಗುವುದಿಲ್ಲ ಎಂದು ಖಡಕ್‌ ಆಗಿ ಸರ್ಕಾರಕ್ಕೆ ತಿಳಿಸಿದ್ದಾರೆ.

ನಾವು ಸಾರಿಗೆ ಸಚಿವರಿಗೂ ಈ ಬಗ್ಗೆ ನೂರಾರು ಬಾರಿ ಮನವಿ ಸಲ್ಲಿಸಿದೇವೆ ಅಲ್ಲದೆ ಈ ಹಿಂದೆ ಬಳ್ಳಾರಿಯಲ್ಲಿ ಉಪವಾಸ ಸತ್ಯಾಗ್ರಹ ಕುಳಿತಾಗ ಅಲ್ಲಿಗೆ ಬಂದ ಸಚಿವರು ನಿಮ್ಮ ಬೇಡಿಕೆಗಳನ್ನು ಒಂದು ವಾರದಲ್ಲೇ ಈಡೇರಿಸಿಬಿಡುತ್ತೇವೆ ನಮ್ಮ ಮಾತಿನ ಮೇಲೆ ನಂಬಿಕೆ ಇಡಿ ಎಂದು ಹೇಳಿದ್ದರು. ಆ ವೇಳೆ ಅವರ ಮಾತಿನ ಮೇಲೆ ನಂಬಿಕೆ ಇಟ್ಟು ಅಂದು ಉಪವಾಸ ಸತ್ಯಾಗ್ರಹವನ್ನು ಕೈ ಬಿಟ್ಟೆವು.

ಆದರೆ ಅಂದು ಮಾತು ಕೊಟ್ಟ ಸಾರಿಗೆ ಸಚಿವರು ಇಲ್ಲಿಯವರೆಗೂ ಆ ಬಗ್ಗೆ ಸಭೆಯನ್ನು ಕರೆದಿಲ್ಲ ಅಥವಾ ಬೇಡಿಕೆಗಳನ್ನು ಈಡೇರಿಸಿಯೂ ಇಲ್ಲ. ಮತ್ತೆ ನಾವು ಅವರ ಮಾತಿಗೆ ಒಪ್ಪಿ ಈ ಉಪವಾಸ ಸತ್ಯಾಗ್ರಹವನ್ನು ಕೈ ಬಿಟ್ಟರೆ ನಮಗೆ ಹಿಂದೆ ಆದ ಸ್ಥಿತಿಯೇ ಈಗಲೂ ಆಗುತ್ತದೆ. ಹೀಗಾಗಿ ನಾವು ಬೇಡಿಕೆ ಈಡೇರುವವರೆಗೂ ಪ್ರಾಣ ಹೋದರೂ ಸರಿಯೇ ಸ್ಥಳಬಿಟ್ಟು ಕದಲುವುದಿಲ್ಲ ಎಂದು ಸತ್ಯಾಗ್ರಹ ನಿರತ ನೌಕರರು ಹೇಳಿದ್ದಾರೆ.

ಇನ್ನು ಸೋಮವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರೇ ಸ್ಥಳಕ್ಕೆ ಬಂದು ನಿಮ್ಮ ಬೇಡಿಕೆ ಈಡೇರಿಸಲಿದ್ದಾರೆ. ಹೀಗಾಗಿ ನೀವು ಇಂದು ಉಪವಾಸ ಸತ್ಯಾಗ್ರಹವನ್ನು ಕೈ ಬಿಟ್ಟು ಸೋಮವಾರ ಮತ್ತೆ ಆರಂಭಿಸಿ ಎಂದು ಪೊಲೀಸರು ಸಲಹೆ ನೀಡಿದರು. ಆದರೆ ನಾವು ಸಿಎಂ ಬರುವವರೆಗೂ ಉಪವಾಸ ಸತ್ಯಾಗ್ರಹ ಮುಂದುವರಿಸುತ್ತೇವೆ ಎಂದು ಪೊಲೀಸರಿಗೆ ತಿಳಿಸಿದರು.

ಇದರಿಂದ ಕುಪಿತಗೊಂಡ ಪೊಲೀಸರು‌ ಸತ್ಯಾಗ್ರಹ ನಿರತ ನೌಕರರ ವಿರುದ್ಧ ಏರುಧ್ವನಿಯಲ್ಲೇ ಮಾತನಾಡಿದರು. ಆದರೆ ನೌಕರರು ನಿಮ್ಮ ಕರ್ತವ್ಯಕ್ಕೆ ನಾವು ಅಡ್ಡಿಪಡಿಸುವುದಿಲ್ಲ ನೀವು ನಿಮ್ಮ ಕರ್ತವ್ಯವನ್ನು ಮಾಡಿ ಎಂದು ಸಮಾಧಾನ ಚಿತ್ತದಿಂದಲೇ ಹೇಳಿದರು.

ನೌಕರರ ಸಮಾಧಾನವನ್ನು ಕಂಡ ಪೊಲೀಸರು ಏನು ಮಾತನಾಡಬೇಕು ಎಂಬುದನ್ನು ತಿಳಿಯದೆ ನಾಳೆ ಬೆಳಗ್ಗೆ 7ಗಂಟೆಯ ಒಳಗಾಗಿ ನೀವು ಜಾಗ ಖಾಲಿ ಮಾಡಬೇಕು ಎಂದು ಹೇಳಿ ಹೋಗಿದ್ದಾರೆ. ಆದರೆ ನಾವು ಯಾವುದೇ ಕಾರಣಕ್ಕೂ ಉಪವಾಸ ಸತ್ಯಾಗ್ರಹವನ್ನು ಕೈ ಬಿಡುವುದಿಲ್ಲ ಎಂದು ನೌಕರರು ಮುಂದುವರಿಸುವುದಾಗಿ ತಿಳಿಸಿದ್ದಾರೆ.

Leave a Reply

error: Content is protected !!
LATEST
160 ಕ್ಯಾಬಿನೆಟ್ ಸೆಕ್ರೆಟರಿಯೇಟ್, ಡೆಪ್ಯೂಟಿ ಫೀಲ್ಡ್ ಆಫೀಸರ್ ಹುದ್ದೆಗಳಿಗೆ ಕೂಡಲೇ ಅರ್ಜಿ ಹಾಕಿ ಮುನಿರತ್ನಗೆ ಜಾಮೀನು ಮಂಜೂರು ಮಾಡಿದ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಹೋರಾಟ ಪಂಜಾಬ್, ಹರಿಯಾಣ ರೈತರದಷ್ಟೇ ಎಂಬಂತೆ ಬಿಂಬಿಸುವ ಸುಪ್ರೀಂ ಆದೇಶ ಪುನರ್ ಪರಿಶೀಲಿಸಿ: ಕುರುಬೂರ್‌ ಶಾಂತಕುಮಾರ್ KSRTC ಅಧಿಕಾರಿಗಳು-ನೌಕರರಲ್ಲಿ, ನೌಕರರು-ನೌಕರರಲ್ಲೇ ಒಗ್ಗಟ್ಟಿಲ್ಲಕ್ಕೆ ಈ ಸ್ಥಿತಿ: NWKRTC ನಿಗಮದ ಅಧ್ಯಕ್ಷ ಭರಮಗೌಡ KSRTC ನೌಕರರ ವೇತನ ಹೆಚ್ಚಳದ 38 ತಿಂಗಳ ಹಿಂಬಾಕಿ ಬೇಗ ಕೊಟ್ಟರೆ ನನಗೂ ಸಮಾಧಾನ: ಸಚಿವ ರಾಮಲಿಂಗಾ ರೆಡ್ಡಿ KSRTC-ನಮ್ಮ ಸರ್ಕಾರ ಸರಿ ಸಮಾನ ವೇತನ ಕೊಡುತ್ತದೆ ನೆಮ್ಮದಿಯಾಗಿರಿ: ಕಾಂಗ್ರೆಸ್‌ ಪ್ರಣಾಳಿಕೆ ಸಮಿತಿ ಉಪಾಧ್ಯಕ್ಷ ರಾಧಾಕೃ... KSRTC: ಅಗ್ರಿಮೆಂಟ್‌ ಎಂಬ ಸೆಟಲ್‌ಮೆಂಟ್‌ ಭೂತವನ್ನು ಬುಡಸಮೇತ ಕಿತ್ತೊಗೆಯಬೇಕು - ವಕೀಲ ನಟರಾಜ ಶರ್ಮಾ ವೇತನ ಸಂಬಂಧ 4ವರ್ಷಕ್ಕೊಮ್ಮೆ ಆಗುವ ಅಗ್ರಿಮೆಂಟ್‌ ಬೇಡ ಕೊಟ್ಟ ಭರವಸೆ ಈಡೇರಿಸಿ: ಸಾರಿಗೆ ಸಚಿವರಿಗೆ ಚಂದ್ರು ಒತ್ತಾಯ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ 247 ಹುದ್ದೆಗಳಿಗೆ ಅರ್ಜಿ ಆಹ್ವಾನ: 3 ವರ್ಷ ವಯಸ್ಸಿನ ಸಡಿಲಿಕೆ, ಡಿಗ್ರಿ ಅರ್ಹತೆ ಮೇಲುಸೇತುವೆ-ಕೆಳಸೇತುವೆಗಳ ನಿರ್ವಹಣೆ ಸರಿಯಾಗಿ ಮಾಡಿ: ತುಷಾರ್ ಗಿರಿನಾಥ್