NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ರಾತ್ರಿ ಪಾಳಿ ಕರ್ತವ್ಯ ನಿರತ ಚಾಲನಾ ಸಿಬ್ಬಂದಿಗೆ ಸಂಸ್ಥೆಯಿಂದ ಥರ್ಮೋ ಫ್ಲಾಸ್ಕ್!

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸುವ ಚಾಲನಾ ಸಿಬ್ಬಂದಿಗೆ ಉತ್ತಮ ಗುಣಮಟ್ಟದ 500 ಮಿಲಿ ಲೀಟರ್‌ (ಅರ್ಧ ಲೀಟರ್‌) ಥರ್ಮೋ ಫ್ಲಾಸ್ಕ್ ಅನ್ನು 1600 ಅನುಸೂಚಿಗಳಲ್ಲಿ ನೀಡಲಾಗಿದೆ ಎಂದು ಕೆಎಸ್‌ಆರ್‌ಟಿಸಿ ಅಧಿಕಾರಿಗಳು ತಿಳಿಸಿದ್ದಾರೆ.

ನಿಗಮ ಪ್ರಯಾಣಿಕರ ಹಾಗೂ ತನ್ನ ಸಿಬ್ಬಂದಿಗಳ ಸುರಕ್ಷತೆಗೆ ಪ್ರಥಮ ಆದ್ಯತೆ ಎಂಬ ನಿಟ್ಟಿನಲ್ಲಿ ತನ್ನ ಕಾರ್ಯಾಚರಣೆ ಹಾಗೂ ಸಂಬಂಧಿಸಿದ ಇತರೆ ಅಂಶಗಳನ್ನು ಕಾಲಕಾಲಕ್ಕೆ ಪರಾಮರ್ಶಿಸಿ ಪರಿಹಾರಾರ್ಥ ಕ್ರಮಗಳನ್ನು ಕೈಗೊಳ್ಳುತ್ತದೆ. ಇತ್ತೀಚೆಗೆ ನಡೆಸಿದ ಅಧ್ಯಯನದ ಪ್ರಕಾರ ನಿಗಮದ ವಾಹನಗಳು ರಾತ್ರಿ ವೇಳೆ ಕಾರ್ಯಾಚರಣೆಯಲ್ಲಿದ್ದಾಗ ಬೆಳಗಿನ ಜಾವ 3 ರಿಂದ 4 ಗಂಟೆಯ ಸಮಯದಲ್ಲಿ ಹೆಚ್ಚು ಅಪಘಾತಕ್ಕೆ ಒಳಪಟ್ಟಿರುವುದನ್ನು ಗಮನಿಸಲಾಗಿದೆ ಈ ನಿಟ್ಟಿನಲ್ಲಿ ಈ‌ ನಿರ್ಧಾರ ಕೈಗೊಂಡಿರುವುದಾಗಿ ತಿಳಿಸಿದ್ದಾರೆ.

ಸಾರ್ವಜನಿಕರಿಗೆ ಸುರಕ್ಷಿತ ಸೇವೆ ಒದಗಿಸುವ ಸಲುವಾಗಿ, ರಾತ್ರಿ ಸಾರಿಗೆಗಳಲ್ಲಿ ಕರ್ತವ್ಯ ನಿರ್ವಹಿಸುವ ಚಾಲಕರು ಸುರಕ್ಷಿತವಾಗಿ ವಾಹನ ಚಾಲನೆ ಮಾಡುವ ಅವಶ್ಯಕತೆ ಇರುವುದರಿಂದ, ಅವರ ಕಾರ್ಯ ಕ್ಷಮತೆಯನ್ನು ಉತ್ತಮ ಪಡಿಸುವ ಸಲುವಾಗಿ ಆ ಅವಧಿಯಲ್ಲಿ refresh ಆಗಲು ಕಾಫಿ-ಟೀ ಸೇವಿಸಿ ( ಆ ಸಮಯದಲ್ಲಿ ಮಾರ್ಗ ಮಧ್ಯದಲ್ಲಿ ಯಾವುದೇ ಹೋಟೆಲುಗಳ ಲಭ್ಯತೆಯು ಇರದ ಕಾರಣ) ವಾಹನವನ್ನು ಸುರಕ್ಷಿತವಾಗಿ ಚಾಲನೆ ಮಾಡಲು ಚಾಲಕರಿಗೆ ಉತ್ತಮ ಗುಣಮಟ್ಟದ ಫ್ಲಾಸ್ಕ್‌ಗಳನ್ನು 1600 ಅನುಸೂಚಿಗಳಲ್ಲಿ ಒದಗಿಸಲಾಗಿದೆ.

ಈ ಕ್ರಮದಿಂದಾಗಿ ಸಂಸ್ಥೆಯ ಚಾಲಕರು ರಾತ್ರಿ ವೇಳೆಯಲ್ಲಿ ವಾಹನಗಳು ನಿಲ್ಲಿಸಿದ ಹೋಟೆಲ್ ಇತ್ಯಾದಿ ಸ್ಥಳಗಳಿಂದ ಟೀ/ಕಾಫಿಯನ್ನು ಫ್ಲಾಸ್ಕ್‌ನಲ್ಲಿ ಸಂಗ್ರಹಿಸಿಕೊಂಡು, ಬೆಳಗಿನ ಜಾವದಲ್ಲಿ ಬಳಸಿ ಸುರಕ್ಷತೆಯಿಂದ ವಾಹನವನ್ನು ಚಾಲನೆ ಮಾಡಿ ಪ್ರಯಾಣಿಕರನ್ನು ಅವರವರ ಗಮ್ಯ ಸ್ಥಳಕ್ಕೆ ಸುರಕ್ಷಿತವಾಗಿ ತಲುಪಿಸುವುದು ನಮ್ಮ ಜವಾಬ್ದಾರಿಯಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
ಪತ್ನಿ ಜೊತೆ 40 ವರ್ಷಗಳ ಹಿಂದೆ ಕೋಪ ಮಾಡಿಕೊಂಡಿದ್ದ ಪತಿ- ಸಾಯುವ ವೇಳೆಯೂ ಮಾತಾಡಲಿಲ್ಲ ! ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಯಲ್ಲಿ 2 ತಿಂಗಳಲ್ಲೇ₹ 1.96 ಕೋಟಿ ಕಾಣಿಕೆ ಸಂಗ್ರಹ ಕಡ್ಡಾಯವಾಗಿ ಮಣ್ಣಿನ ಪರೀಕ್ಷೆ ಮಾಡಿಸಿ: ಕೃಷಿ ಇಲಾಖೆ ಸಹಾಯಕ ನಿರ್ದೇಶಕ ಪ್ರಸಾದ್ ಕೆ.ಆರ್‌.ಪೇಟೆ: ಚೌಡೇಶ್ವರಿ ಅಮ್ಮನವರ ದೇಗುಲದಲ್ಲಿ ಆಷಾಢ ಶುಕ್ರವಾರ ಸಂಭ್ರಮ ಸಂಸತ್‌ನಲ್ಲಿ ಕನ್ನಡಿಗರ ಪರ ಧ್ವನಿ ಎತ್ತಿ: ರಾಜ್ಯದ ಎನ್‌ಡಿಎ ಸಂಸದರಿಗೆ ಎಎಪಿಯ ಡಾ. ಮುಖ್ಯಮಂತ್ರಿ ಚಂದ್ರು ಆಗ್ರಹ “ಶಕ್ತಿ" ಯೋಜನೆಯಿಂದ ಸಾರಿಗೆ ನಿಗಮಗಳ ಆದಾಯ ಹೆಚ್ಚಾಗಿದೆ- ಆದರೆ ನೌಕರರಿಗೆ ವೇತನಕೊಡಲು ಹಣವಿಲ್ಲ- ಎಂಥಾ ಹೇಳಿಕೆ ಇದು ಸಾ... KRS ಭರ್ತಿ: ಅಣೆಕಟ್ಟೆಯಿಂದ ಒಂದು ಲಕ್ಷ ಕ್ಯುಸೆಕ್‌ಗೂ ಅಧಿಕ ಪ್ರಮಾಣದ ನೀರು ಬಿಡುಗಡೆ- ಕಾವೇರಿ ಕೊಳ್ಳದ ಜನರಿಗೆ ಎಚ್ಚರಿ... ಪೊಲೀಸರ ಮೇಲೆ ಹಲ್ಲೆ ಮಾಡಿ ಪರಾರಿಗೆ ಯತ್ನ: ಕಳ್ಳನ ಹೆಡೆಮುರಿಕಟ್ಟಿದ ಮಹಿಳಾ ಎಸ್‌ಐ ಕೃಷ್ಣರಾಜಪೇಟೆ: ಶ್ರೀ ಚೌಡೇಶ್ವರಿ ಅಮ್ಮನವರ ಕರಗ ಮಹೋತ್ಸವ ಅದ್ದೂರಿ ಬೆಳಗಾವಿ: ಸವದತ್ತಿ ಯಲ್ಲಮ್ಮ ದೇವಿಯ ಹುಂಡಿಗೆ ಹರಿದು ಬಂತು ಕೋಟಿ ಕೋಟಿ ಹಣ