CRIMENEWSನಮ್ಮಜಿಲ್ಲೆ

KSRTC: ಟೈಯರ್ ಸ್ಫೋಟ, ತಡೆಗೋಡೆಗೆ ಗುದ್ದಿ ನಿಂತ ಬಸ್‌ – ತಪ್ಪಿದ ಭಾರಿ ಅನಾಹುತ

ವಿಜಯಪಥ ಸಮಗ್ರ ಸುದ್ದಿ

ದೊಡ್ಡಬಳ್ಳಾಪುರ: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಬಸ್ ಟೈಯರ್ ಸ್ಫೋಟಗೊಂಡು ರಸ್ತೆಯ ತಡೆಗೋಡೆಗೆ ಗುದ್ದಿ ಜಖಂಗೊಂಡಿರುವ ಘಟನೆ ತಾಲೂಕಿನ ಮೆಣಸಿಗೇಟ್ ಬಳಿಯ ರಾಷ್ಟ್ರೀಯ ಹೆದ್ದಾರಿ 648ರಲ್ಲಿ ನಿನ್ನೆ ಸಂಜೆ ನಡೆದಿದೆ.

ಘಟನೆ ವೇಳೆ ಚಾಲಕ ಚಾಲಕ ಮುನಿಶ್ಯಾಮಪ್ಪ ಅವರ ಸಮಯ ಪ್ರಜ್ಞೆಯಿಂದ 35ಕ್ಕೂ ಹೆಚ್ಚು ಪ್ರಯಾಣಿಕರಿದ್ದ ಬಸ್‌ ನಿಯಂತ್ರಣಕ್ಕೆ ಬಂದಿದ್ದರಿಂದ ಆ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ.

ಬಸ್‌ ಸೂಲಿಕುಂಟೆ-ದೊಡ್ಡಬಳ್ಳಾಪುರ ಮಾರ್ಗವಾಗಿ ದೊಡ್ಡಬಳ್ಳಾಪುರಕ್ಕೆ ಬರುತ್ತಿತ್ತು. ಈ ವೇಳೆ ಟೈಯರ್ ಸ್ಫೋಟಗೊಂಡಿದ್ದು ಅವಘಡ ಸಂಭವಿಸಿದೆ.

ಟೈಯರ್ ರೀ ಬಿಲ್ಡ್ ಆಗಿದ್ದು, ಬಸ್ಸಿನ ಟೈಯರ್ ಸ್ಫೋಟಗೂಳ್ಳಲು ಕಾರಣ ಎಂದು ಸ್ಥಳೀಯರು ಸಂಸ್ಥೆಯ ಅಧಿಕಾರಿಗಳ ವಿರುದ್ಧ ಕಿಡಿಕಾರಿದ್ದಾರೆ. ಅಲ್ಲದೆ ಟೈಯರ್ ಸ್ಫೋಟಗೊಂಡ ತಕ್ಷಣವೇ ಚಾಲಕ ತಡೆಗೋಡೆಯ ಕಡೇ ಬಸ್ ಚಲಿಸದಿದ್ದರೆ ಭಾರಿ ಅನಾಹುತವೆ ಆಗುತ್ತಿತ್ತು ಎಂದು ತಿಳಿಸಿದ್ದಾರೆ.

ಇನ್ನು ಒಂದು ವೇಳೆ ತಡೆಗೋಡೆ ಇಲ್ಲದಿದ್ದಲ್ಲಿ ಬಸ್ ಹಳ್ಳಕ್ಕೆ ಬೀಳುತ್ತಿತ್ತು. ಒಂದು ವೇಳೆ ಹಳ್ಳಕ್ಕೆ ಬಸ್‌ ಬಿದ್ದಿದ್ದರೆ ಎಂಥ ಅನಾಹುತ ಆಗುತ್ತಿತ್ತು ಎಂದು ನೆನಪಿಸಿಕೊಂಡು ಮೈ ನಡುಗುತ್ತದೆ. ಇದರಿಂದ ಅಪಾರ ಸಾವು ನೋವು ಆಗುವ ಸಾಧ್ಯತೆ ಇತ್ತು. ಸದ್ಯ ಚಾಲಕನ ಸಮಯ ಪ್ರಜ್ಞೆಯಿಂದ ಎಲ್ಲ ಪ್ರಯಾಣಿಕರು ಸುರಕ್ಷಿತವಾಗಿದ್ದಾರೆ ಎಂದು ಚಾಲಕನ ಸಮಯ ಪ್ರಜ್ಞೆಯನ್ನು ಪ್ರಯಾಣಿಕರೆ ಪ್ರಶಂಸಿದ್ದಾರೆ.

Deva
the authorDeva

Leave a Reply

error: Content is protected !!
Latest news
7ಕೋಟಿಗೂ ಹೆಚ್ಚು ಮಂದಿಗೆ ಸಿಹಿಸುದ್ದಿ: UPI-ATMನಲ್ಲಿ ಶೇ.75ರಷ್ಟು ಪಿಎಫ್‌ ಹಣ ವಿತ್‌ಡ್ರಾಗೆ ಅವಕಾಶ- ಜೂನ್ ಅಂತ್ಯದ... ತಪ್ಪಿಸಿಕೊಳ್ಳಲು ಯತ್ನಿಸಿದ ಕೊಲೆ ಪ್ರಕರಣದ ಪ್ರಮುಖ ಆರೋಪಿ: ಕಾಲಿಗೆ ಹಾಡುಹಗಲೇ ಗುಂಡು ಹಾರಿಸಿ ಬಂಧಿಸಿದ ಪೊಲೀಸರು KSRTC: ಸಾರಿಗೆ ನಿಗಮದ ನೌಕರರಿಗೆ ಗಳಿಕೆ ರಜೆ (EL) ನಗದೀಕರಣ ಸೌಲಭ್ಯ ವಿಸ್ತರಿಸಿ ಎಂಡಿ ಆದೇಶ KSRTC: ಶೇ.1.5ರಷ್ಟು ಹೆಚ್ಚಳದ ತುಟ್ಟಿಭತ್ಯೆ ಜೂನ್‌ ವೇತನದಲ್ಲಿ ಅನುಷ್ಠಾನಗೊಳಿಸಿ ನೌಕರರಿಗೆ ಪಾವತಿಸಲು ಎಂಡಿ ಆದೇಶ 'ಕರ್ತವ್ಯ' ಆಪ್ ನೋಂದಣಿ ಶೇ.70.6 ರಷ್ಟು ಪ್ರಗತಿ - ಮಾಧ್ಯಮಗಳ ವರದಿಗೆ ಸರ್ಕಾರದ ಸ್ಪಷ್ಟನೆ ಗೃಹಲಕ್ಷ್ಮಿ, ಗೃಹಜ್ಯೋತಿಗೆ  ಹೊಸದಾಗಿ ಅರ್ಜಿ ಸಲ್ಲಿಸಬೇಕೆಂಬ ನಿರ್ಧಾರ ಸ್ವಾಗತಾರ್ಹ KSRTC ಪುತ್ತೂರು: ಡ್ರಿಂಕ್ಸ್ ಪರೀಕ್ಷಿಸಲು ಮಷೀನ್ ತಂದಿದ್ದಾರೆ ಎಂದು ತಪ್ಪು ತಿಳಿದು ಹೆದರಿದ ನೌಕರ- ಮೆಟ್ಟಲುಗಳಿಂದ ಬಿ... 2037ರ ವೇಳೆಗೆ ಬೆಂಗಳೂರು ಆಗಲಿದೆ ಜಾಗತಿಕ ಆರ್ಥಿಕ ಶಕ್ತಿಕೇಂದ್ರ: 35 ಲಕ್ಷ ಕೋಟಿ ರೂ.ಗೂ ಅಧಿಕ ಕಾಂಚಾಣ, 30 ಲಕ್ಷ ಹೊಸ ... ಪಂಜಾಬ್ ಮಾದರಿ ಕರ್ನಾಟಕದಲ್ಲೂ ಹೆದ್ದಾರಿ ಟೋಲ್‌ ರದ್ದತಿಗೆ ಆಗ್ರಹಿಸಿ 23ರಂದು ರೈತ ಸಂಘಟನೆಗಳ ಒಕ್ಕೂಟದಿಂದ ಪ್ರತಿಭಟನೆ KSRTC ನೌಕರರ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಓಂಕಾರಪ್ಪನ ಸಹಿ ಮಾಡುವ ಅಧಿಕಾರ ರದ್ದುಗೊಳಿಸಿ ತನಿಖೆಗೆ ಹೈ ಕೋರ್ಟ್‌ ಆದೇಶ