CRIMENEWSನಮ್ಮಜಿಲ್ಲೆ

KSRTC: ಮಳೆಗೆ ನೆಲಕ್ಕುರಳಿದ ವಿದ್ಯುತ್ ಕಂಬ ಲೈನ್‌ ಗಮನಿಸದೆ ಬೈಕ್‌ ಚಲಾಯಿಸಿ ಸಾರಿಗೆ ಸಂಚಾರಿ ನಿಯಂತ್ರಕ ಮೃತ

ವಿಜಯಪಥ ಸಮಗ್ರ ಸುದ್ದಿ

ಕೋಲಾರ: ಗಾಳಿ ಮಳೆಯಿಂದ ವಿದ್ಯುತ್ ಕಂಬ ನೆಲಕ್ಕುರಳಿದ್ದನ್ನು ಗಮನಿಸದೇ ಬೈಕ್ ಚಾಲನೆ ಮಾಡಿದ ಕೆಎಸ್‌ಆರ್‌ಟಿಸಿ ಸಂಚಾರಿ ನಿಯಂತ್ರಕರೊಬ್ಬರು ವಿದ್ಯುತ್ ಸ್ಪರ್ಶಿಸಿ ಮೃತಪಟ್ಟಿರುವ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನಲ್ಲಿ ನಡೆದಿದೆ.

ಕೋಲಾರ ಜಿಲ್ಲೆಯ ಮುಳಬಾಗಿಲು ತಾಲೂಕಿನ ರಾಜೇಂದ್ರ ಹಳ್ಳಿಯ ನಿವಾಸಿ ರೆಡ್ಡಪ್ಪ (58) ವಿದ್ಯುತ್ ತಂತಿ ತಗುಲಿ ಕೊನೆಯುಸಿರೆಳೆದ ಮುಳಬಾಗಿಲು ಕೆಎಸ್‌ಆರ್‌ಟಿಸಿ ಘಟಕದ ಸಂಚಾರಿ ನಿಯಂತ್ರಕ. ಇಂದು ಮುಂಜಾನೆ ಈ ಘಟನೆ ನಡೆದಿದೆ.

ಕಳೆದ ರಾತ್ರಿ ಅಂದರೆ ಶುಕ್ರವಾರ ಬಿರುಗಾಳಿ ಮಳೆಯಿಂದ ವಿದ್ಯುತ್ ಕಂಬಗಳು ನೆಲಕ್ಕುರುಳಿದ್ದವು. ಈ ವೇಳೆ ತಂತಿಗಳು ಕೂಡ ರಸ್ತೆಗೆ ಅಡ್ಡಲಾಗಿ ಬಿದ್ದಿದ್ದವು. ಆದರೆ ಅವುಗಳನ್ನು ಗಮನಿಸದೆ ಇಂದು ಮುಂಜಾನೆ ಎದ್ದು ಎಂದಿನಂತೆ ತೋಟಕ್ಕೆ ತೆರಳುತ್ತಿದ್ದಾಗ ಬೈಕ್‌ಗೆ ತಂತಿ ಟಚ್‌ಆಗಿದೆ ಇದರಿಂದ ರೆಡ್ಡಪ್ಪ ಅವರಿಗೂ ವಿದ್ಯುತ್‌ ಹರಿದಿದ್ದರಿಂದ ಅವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ.

ಇನ್ನು ವಿಷಯ ತಿಳಿಯುತ್ತಿದ್ದಂತೆ ಸ್ಥಳಕ್ಕೆ ಬೆಸ್ಕಾಂ ಇಲಾಖೆ ಸಿಬ್ಬಂದಿ ಭೇಟಿ ನೀಡಿದ್ದು, ವಿದ್ಯುತ್ ತಂತಿಗಳ ತೆರವು ಮಾಡಿದ್ದಾರೆ. ಮುಳಬಾಗಿಲು ಗ್ರಾಮಾಂತರ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಬಳಿಕ ಆಕಸ್ಮಿಕವಾಗಿ ವಿದ್ಯುತ್ ತಂತಿ ತಗುಲಿ ಮೃತಪಟ್ಟಿದ್ದಾರೆ ಎಂದು ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ತೆಗೆದುಕೊಂಡಿದ್ದಾರೆ.

Megha
the authorMegha

Leave a Reply

error: Content is protected !!
Latest news
KSRTC: ಪಲ್ಲಕ್ಕಿಯಲ್ಲಿ ಆಕಸ್ಮಿಕ ಬೆಂಕಿ- ಧಗಧಗಿಸಿದ ಬಸ್‌- ಚಾಲಕನ ಸಮಯ ಪ್ರಜ್ಞೆಯಿಂದ ತಪ್ಪಿದ ಭಾರಿ ಅನಾಹುತ KSRTC ಕಡೂರು: ಘಟಕದಲ್ಲೊಬ್ಬಳು ಟಾರ್ಚರ್‌ ಟಿಸಿ- ನೌಕರರಿಗೆ ಮಾನಸಿಕ ಕಿರುಕುಳ- ರಜೆ ಬದಲು ಗೈರು ತೋರಿಸುವ ನಟ ಭಯಂಕರಿ! EPS ಪಿಂಚಣಿದಾರರ 100ನೇ ಮಾಸಿಕ, ಶತದಿನೋತ್ಸವದಲ್ಲಿ ಮುಸ್ಸಂಜೆಯ ತರುಣರ ಸಂಭ್ರಮ KSRTC: ಫ್ರೀಡಂ ಪಾರ್ಕ್‌ನಲ್ಲಿ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿಗೆ ಆಗ್ರಹಿಸಿ ಸಾರಿಗೆ ನೌಕರರ ಪ್ರತಿಭಟನೆ- ಸರ್ಕಾರ... ಗೆದ್ದ3ವರ್ಷದ ಬಳಿಕ ಶಾಸಕರಾದ ಜೀವರಾಜ್: ಅಧಿಕಾರಿಗಳ ಎಡವಟ್ಟಿಗೆ ಸೋತರು 3ವರ್ಷ ಶಾಸಕರಾಗಿದ್ದ ರಾಜೇಗೌಡ KSRTC: ಇಂದು ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡಲು ಆಗ್ರಹಿಸಿ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KSRTC: ನಾಳೆ ಸರಿ ಸಮಾನ ವೇತನ, 38 ತಿಂಗಳ ಹಿಂಬಾಕಿ ಕೊಡದ ಸರ್ಕಾರದ ವಿರುದ್ಧ ಸಾರಿಗೆ ನೌಕರರ ಧರಣಿ ಸತ್ಯಾಗ್ರಹ KKRTC: ನೋಡಿ ಎಂಡಿ ಅವರೇ ನಿಮ್ಮ ಸಂಸ್ಥೆಯಲ್ಲಿ ಚಾಲನಾ ಸಿಬ್ಬಂದಿಗಳು ಮೇ 1ರಂದು ರಜೆ ತೆಗೆದುಕೊಂಡರೆ ಆಬ್ಸೆಂಟ್‌ ಹಾಕುವ ... ಪ್ರಾಮಾಣಿಕತೆ ಮೆರೆದ KSRTC ಸಿಬ್ಬಂದಿ - ಆಭರಣ ಅಡವಿಟ್ಟು ತಂದಿದ್ದ ಹಣ ಕಳೆದು ಕೊಂಡ ಪ್ರಯಾಣಿಕನಿಗೆ ಮರಳಿ ಕೊಟ್ಟ ನೌಕರರ... KSRTC: ಚಾಲನಾ ಸಿಬ್ಬಂದಿ ವಿರುದ್ಧ ಮೆಮೊ ನೀಡುವುದಕಷ್ಟೇ ತಮ್ಮ ಕಾರ್ಯ ವ್ಯಾಪ್ತಿಯ ಸೀಮಿತಗೊಳಿಸಿಕೊಂಡ ತನಿಖಾಧಿಕಾರಿಗಳು?...