Please assign a menu to the primary menu location under menu

NEWSಉದ್ಯೋಗನಮ್ಮರಾಜ್ಯ

KSRTC: 1308 ನೌಕರರ ವರ್ಗಾವಣೆ- ಆಕ್ಷೇಪಣೆ ಸಲ್ಲಿಸಲು ಡಿ.4ರವರೆಗೂ ಅವಕಾಶ

ಸಾಂದರ್ಭಿಕ ಚಿತ್ರ.
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ನೌಕರರ ಕೋರಿಕೆ‌ ಮೇರೆಗೆ ಕೆಎಸ್ಆರ್‌ಟಿಸಿ ಅಂತರ ನಿಗಮ ವರ್ಗಾವಣೆಯಲ್ಲಿ ಒಟ್ಟು 1308 ನೌಕರರಿಗೆ ವರ್ಗಾವಣೆ ಸೌಲಭ್ಯ ಕಲ್ಪಿಸಲಾಗಿದೆ‌ ಎಂದು ಸಾರಿಗೆ ಸಚಿವರು ತಿಳಿಸಿದ್ದಾರೆ.

ಇದೇ ಪ್ರಥಮ ಬಾರಿಗೆ ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು ಹಾಗೂ ತೀವ್ರ ತರಹದ ಅನಾರೋಗ್ಯ (ಹೃದಯ ರೋಗ, ಕ್ಯಾನ್ಸರ್, ಸ್ಪೈನಲ್ ಕಾರ್ಡ್, ಕಿಡ್ನಿ ವೈಪಲ್ಯ ಹಾಗೂ ಮೆದಳು ಸಂಬಂಧಿತ ಕಾಯಿಲೆಗಳು) ನೌಕರರ ಪ್ರಕರಣಗಳಿಗೆ ಅಂತರ ನಿಗಮ ವರ್ಗಾವಣೆಯ ಶೇ.5 ರಷ್ಟು ಹುದ್ದೆಗಳನ್ನು ಮೀಸಲಿರಿಸಲಾಗಿದೆ.

ನೌಕರರ ಪತಿ ಅಥವಾ ಪತ್ನಿಯು ಕೇಂದ್ರ ಸರ್ಕಾರ/ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರ/ ರಾಜ್ಯ ಸರ್ಕಾರದ ಸ್ವಾಮ್ಯದ ಸಂಸ್ಥೆಯ ಅಧಿಕಾರಿ/ ನೌಕರರಾಗಿ ಬೇರೆ ಬೇರೆ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಕರಣಗಳಿಗೆ ಅಂತರ ನಿಗಮ ವರ್ಗಾವಣೆಯ ಶೇ.5 ರಷ್ಟು ಹುದ್ದೆಗಳನ್ನು ಮೀಸಲಿರಿಸಿದ್ದು, ಒಟ್ಟು ಶೇ.10 ರಷ್ಟು ಮೀಸಲಾತಿ ಸೌಲಭ್ಯ ಕಲ್ಪಿಸಲಾಗಿದೆ.

ಅದರಂತೆ ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ನೌಕರರ 2023ನೇ ಸಾಲಿನ ಅಂತರ ನಿಗಮ ವರ್ಗಾವಣೆ ಪ್ರಕ್ರಿಯೆ 05-07-2023 ರ ಬೆಳಗ್ಗೆ 11ಗಂಟೆಯಿಂದ ಪ್ರಾರಂಭವಾಗಿ, 31-12-2023ರ ಸಂಜೆ 5:30 ರವರೆಗೆ ಆನ್-ಲೈನ್ ಮೂಲಕ http://ksrtc.org/transfer ರಲ್ಲಿ ವರ್ಗಾವಣೆಗೆ ಅರ್ಜಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿತ್ತು.

ಈಗ ಅರ್ಜಿ ಸಲ್ಲಿಸಿದ್ದವರ ಅಂತರ ನಿಗಮ ವರ್ಗಾವಣೆಯ ವಿವರಗಳು ಈ ರೀತಿ ಇವೆ. 1‌.ಅಂತರ ನಿಗಮ ಸಾಮಾನ್ಯ ವರ್ಗದಡಿ ವರ್ಗಾವಣೆಗೊಂಡ ನೌಕರರ ಸಂಖ್ಯೆ – 1175.

2.ನೌಕರರ ಪತಿ ಅಥವಾ ಪತ್ನಿಯು ಕೇಂದ್ರ ಸರ್ಕಾರ/ ರಾಜ್ಯ ಸರ್ಕಾರ ಅಥವಾ ಕೇಂದ್ರ ಸರ್ಕಾರ/ ರಾಜ್ಯ ಸರ್ಕಾರದ ಸ್ವಾಮ್ಯದ ಸಂಸ್ಥೆಯ ಅಧಿಕಾರಿ/ ನೌಕರರಾಗಿ ಬೇರೆ ಬೇರೆ ಸ್ಥಳಗಳಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪ್ರಕರಣಗಳನ್ನು ಪರಿಗಣಿಸಿ ವರ್ಗಾವಣೆಗೊಂಡಿರುವ ನೌಕರರ ಸಂಖ್ಯೆ – 72

  1. ಶೇ.40ಕ್ಕಿಂತ ಹೆಚ್ಚಿನ ಅಂಗವಿಕಲತೆ ಹೊಂದಿರುವ ನೌಕರರು ತೀವ್ರ ತರಹದ ಅನಾರೋಗ್ಯ, ಹೃದಯ ರೋಗ, ಕ್ಯಾನ್ಸರ್, ಸ್ಪೈನಲ್ ಕಾರ್ಡ್, ಕಿಡ್ನಿ ವೈಫಲ್ಯ ಹಾಗೂ ಮೆದಳು ಸಂಬಂಧಿಸಿದ ಕಾಯಿಲೆಗಳು) ಪ್ರಕರಣದಲ್ಲಿ ನೌಕರರ ಕೋರಿಕೆ ಪರಿಗಣಿಸಿ ವರ್ಗಾವಣೆಗೊಂಡಿರುವ ನೌಕರರ ಸಂಖ್ಯೆ – 61

ದರ್ಜೆ-3 ಮೇಲ್ವಿಚಾರಕೇತರ ಮತ್ತು ದರ್ಜೆ-4 ರ 1,308 ನೌಕರರು ಅಂತರ ನಿಗಮ ವರ್ಗಾವಣೆಗೆ ಅವರ ಕೋರಿಕೆ ಮೇರೆಗೆ ಅರ್ಹರಿರುತ್ತಾರೆ. ಈ ಸಂಭವನೀಯ ಅಂತರ ನಿಗಮ ವರ್ಗಾವಣೆ ಪಟ್ಟಿಯನ್ನು 28.11.2024 ರಂದು http://ksrtc.karnataka.gov.in ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದೆ.

ಈ ಪಟ್ಟಿಗೆ 28.11.2024 ರಿಂದ 04.12.2024ರ ಸಂಜೆ 5.30 ರವರೆಗೆ ಲಿಖಿತ ಆಕ್ಷೇಪಣೆ ಸಲ್ಲಿಸಲು ನೌಕರರಿಗೆ ಅವಕಾಶವನ್ನು ನೀಡಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Leave a Reply

error: Content is protected !!
LATEST
ಮದುವೆಗೆ ಒಪ್ಪಿ ಬಳಿಕ ತಿರಸ್ಕರಿಸಿದ ಪ್ರಿಯತಮೆ: ಕೋಪಗೊಂಡು ಇರಿದ ಪ್ರಿಯತಮ ಬಾಲಿವುಡ್ ನಟ ಸೈಫ್ ಅಲಿ ಖಾನ್‌ಗೆ ಚಾಕು ಇರಿದಿದ್ದ ಆರೋಪಿ ಸೆರೆ ಬೀದರ್: ಸಿಬ್ಬಂದಿ ಹತ್ಯೆಮಾಡಿ 93 ಲಕ್ಷ ದೋಚಿ ಪರಾರಿಯಾಗಿದ್ದ ಖದೀಮರ ಬಂಧನ ದುಷ್ಕರ್ಮಿಗಳಿಂದ ಇರಿತಕ್ಕೊಳಗಾಗಿದ್ದ ನಟ ಸೈಫ್‌ ಅಲಿ ಖಾನ್‌ ಪ್ರಾಣಾಪಾಯದಿಂದ ಪಾರು ಎಟಿಎಂಗೆ ಹಣ ತುಂಬಲು ಬಂದ ಎಸ್‌ಬಿಐ ಸಿಬ್ಬಂದಿ ಮೇಲೆ ಖದೀಮರಿಂದ ಗುಂಡಿನ ದಾಳಿ- ಓರ್ವ ಸಾವು, ₹93 ಲಕ್ಷ ದೋಚಿ ಪರಾರಿ ಬ್ಯಾಟರಿ ಚಾಲಿತ ವ್ಹೀಲ್‌ಚೇರ್‌ ವಿತರಣೆಗೆ ವಿಕಲಚೇತನರಿಂದ ಅರ್ಜಿ ಆಹ್ವಾನ ₹390 ಕೋಟಿ ಹೂಡಿಕೆಯ ಬ್ಯಾಟರಿ ಫ್ಯಾಕ್ಟರಿಗೆ ಶಂಕುಸ್ಥಾಪನೆ : ಸಚಿವ ಪಾಟೀಲ್‌ ಕನ್ನಡ ಚಿತ್ರರಂಗದ ಹಿರಿಯ ನಟ ಸರಿಗಮ ವಿಜಿ ವಿಧಿವಶ ಬೆಳಗಾವಿ: ಸಚಿವರ ಕಾರು ಅಪಘಾತ- ಲಕ್ಷ್ಮೀ ಹೆಬ್ಬಾಳ್ಕರ್ ಬೆನ್ನು ಮೂಳೆ ಮುರಿತ BMTC ಕಂಡಕ್ಟರ್‌: 1ನೇ ಮದುವೆ ಮುಚ್ಚಿಟ್ಟು ಯುವತಿ ಜತೆ ಲವ್ವಿಡವ್ವಿ - ಬಳಿಕ ತಾಳಿ ಕಟ್ಟಿ ಗರ್ಭಿಣಿ ಮಾಡಿ ವಲ್ಲೆ ಎನ್ನು...