NEWSನಮ್ಮಜಿಲ್ಲೆ

KSRTC ತುಮಕೂರು: ಡಿಸಿ ಚಂದ್ರುಶೇಖರ್ ಅಮಾನತುಗೊಳಿಸಿ- ಎಂಡಿಸಿಗೆ ದೂರುಕೊಟ್ಟು ಒತ್ತಾಯ 

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ಸಂಸ್ಥೆ ತುಮಕೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಚಂದ್ರುಶೇಖರ್ ಅವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಅದಕ್ಕೂ ಮೊದಲು ಅವರನ್ನು ಅಮಾನತು ಮಾಡಬೇಕು ಎಂದು ನಿಗಮದ ವ್ಯವಸ್ಥಾಪಕ ನಿರ್ದೇಶಕರವರಿಗೆ ಬಾನುಪ್ರಕಾಶ್ ಎಂಬುವರು ದೂರು ನೀಡಿದ್ದಾರೆ.

ತುಮಕೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಎಸ್.ಚಂದ್ರುಶೇಖರ್ ವಿರುದ್ಧ  ಬಾನುಪ್ರಕಾಶ್ (C/o ರಾಜಶೇಖರ್, ನಂ:93. ಮಾರುತಿ ಫಾರಂ, ದೂಂದರಹಳ್ಳಿ, ಅಪೊಲೋ ಅಂಗ್ಲ ಪೌಢಶಾಲೆ ಹತ್ತಿರ, ಲಕ್ಷ್ಮೀಪುರ ಅಂಚೆ. ಬೆಂಗಳೂರು ಉತ್ತರ-562152) ಅವರು ಬೆಂಗಳೂರಿನ ಶಾಂತಿನಗರದಲ್ಲಿರುವ ಸಂಸ್ಥೆಯ ಕೇಂದ್ರ ಕಚೇರಿಗೆ ಇದೇ ಫೆ.13ರಂದು ತೆರಳಿ ದೂರು ನೀಡಿದ್ದಾರೆ.

ಈ ವಿಷಯಕ್ಕೆ ಸಂಭಂದಪಟ್ಟಂತೆ ಈ ಅಧಿಕಾರಿಯ ಮೇಲೆ ಹಲವಾರು ಪ್ರಕರಣಗಳು ಸಾಮಾಜಿಕ ಜಾಲತಾಣದಲ್ಲಿ ಪ್ರಕಟವಾಗಿದ್ದರು ಸಹ ಇವರ ವಿರುದ್ಧ ಈವರೆಗೂ ಯಾವುದೆ ಕ್ರಮ ಜರುಗಿಸಿಲ್ಲ. ವಿಜಯಪಥ ಸಮಗ್ರ ಸುದ್ದಿಯಲ್ಲಿ ಪ್ರಕಟವಾಗಿರುವುದನ್ನು ಗಮನಿಸಿದರೆ ಸಂಸ್ಥೆಯ ಮಾನ ಮರ್ಯಾದೆಯನ್ನು ಹಾಳು ಮಾಡಿ ಸಂಸ್ಥೆಗೆ ಕೆಟ್ಟ ಹೆಸರನ್ನು ತಂದಿರುವುದು ಮೇಲ್ನೋಟಕ್ಕೆ ಕಂಡುಬರುತ್ತಿದೆ.

ಜತೆಗೆ ಬೆಂಗಳೂರು ಮಹನಗರ ಸಾರಿಗೆ ಸಂಸ್ಥೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದ ಈತ 7-04-2021ರಲ್ಲಿ ಎಲ್ಲ ನೌಕರರು ಮುಷ್ಕರಕ್ಕೆ ಬೆಂಬಲ ನೀಡಿ ಗೈರು ಹಾಜರಾಗಿದ್ದರೂ ಸಹ ಕೆಲವೊಂದು ನೌಕರರನ್ನು ಯಾವುದೇ ತನಿಖೆ ನಡೆಸದೆ ವಜಾಗೊಳಿಸಿದ್ದಾರೆ.

ಇನ್ನು ಈ ಪ್ರಕರಣಗಳಿಗೆ ಸಂಭಂದಪಟ್ಟ ದಾಖಲೆಗಳನ್ನು ನ್ಯಾಯಾಲಯಕ್ಕೆ ಸಲ್ಲಿಸದೆ ದಿಕ್ಕು ತಪ್ಪಿಸುವ ದಾಖಲೆಗಳನ್ನು ಸಲ್ಲಿಸಿದ್ದಾರೆ. ಇವರು ಶಿಸ್ತುಪಾಲನಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ನೌಕರರಿಗೆ ತಾರತಮ್ಯತೆ ಮಾಡಿ ವೈಯಕ್ತಿಕವಾಗಿ ಕರ್ತವ್ಯ ನಿರ್ವಹಿಸಿ ಸಂಸ್ಥೆಯ ನಿಯಮಗಳನ್ನು ಉಲ್ಲಂಘಿಸಿದ್ದಾರೆ.

ಈ ಎಲ್ಲವನ್ನು ಗಂಭೀರವಾಗಿ ಪರಿಗಣಿಸಿ ತಾವು ಇವರನ್ನು ಅಮಾನತು ಮಾಡಿ ತನಿಖೆ ನಡೆಸಿ ಸೂಕ್ತ ಕ್ರಮ ಜರುಗಿಸಿ ಎಂದು ಬಾನುಪ್ರಕಾಶ್ ವ್ಯವಸ್ಥಾಪಕ ನಿರ್ದೇಶಕರಿಗೆ ಒತ್ತಾಯಿಸಿದ್ದಾರೆ.

Megha
the authorMegha

Leave a Reply

error: Content is protected !!
Latest news
8ನೇ ವೇತನ ಆಯೋಗ: ಸಲಹೆ ಸಂಗ್ರಹಕ್ಕೆ ಸರ್ಕಾರ ಕೊಟ್ಟಿದ್ದ ಗಡುವು ಇಂದಿಗೆ ಮುಕ್ತಾಯ- ವರದಿ ಸಲ್ಲಿಕೆಯೊಂದೇ ಬಾಕಿ ಬೇಕಾಬಿಟ್ಟಿ ಗ್ಯಾರಂಟಿಗಳ ಕೊಡುವುದರಿಂದ ದೇಶದ ಆರ್ಥಿಕತೆ ಮೇಲೆ ಪರಿಣಾಮ ಬೀರಲಿದೆ: ಸರ್ಕಾರಗಳಿಗೆ ಎಚ್ಚರಿಕೆ ನೀಡಿ ವಿತ್ತ... ಲಾರಿ ಓವರ್‌ಟೇಕ್‌ ಮಾಡುವ ವೇಳೆ ಚಾಲಕನ ನಿಯಂತ್ರ ಕಳೆದುಕೊಂಡ ಕಾರು ಪಲ್ಟಿ: ದಂಪತಿಗೆ ಗಂಭೀರ ಗಾಯ ಆಸ್ಪತ್ರೆಗೆ ದಾಖಲು ಗ್ಯಾರಂಟಿ ಯೋಜನೆಗಳು ನಿಲ್ಲುವುದಿಲ್ಲ, ಆತಂಕಬೇಡ: ಸಿಎಂ ಶಿವಕುಮಾರ್‌ ಭರವಸೆ KSRTC ಕನಕಪುರ ಘಟಕದಲ್ಲಿ ಚಾಲಕನ ಮೇಲೆ ಹಲ್ಲೆ ಮಾಡಿದ ನಾಲ್ವರ ಅಮಾನತು ಸಿಎಂ ತವರಲ್ಲೇ KSRTC ಚಾಲನಕನ ಮೇಲೆ ಹಲ್ಲೆ, ಗೂಂಡಾ ವರ್ತನೆ: ಡಿಎಂ ಎದುರೇ ಘಟಕದಲ್ಲಿ ರೌಡಿಸಂ ನೌಕರನ ವಿರುದ್ಧ ಸಾಬೀತಾಗಿರುವ ದುರ್ನಡತೆಗೆ ಹೋಲಿಸಿದರೆ ಆತನ ವಜಾ ಮಾಡಿರುವುದು ಕಾನೂನುಬಾಹಿರ,ಅತ್ಯಂತ ಕಠಿಣ ಶಿಕ್ಷೆ: ಸು... ತಜ್ಞರ ಸಲಹೆ ಪಡೆದು ಪಾಲಿಕೆ ಆಯವ್ಯಯ ಅನುದಾನ ಬಳಕೆ : GBA ದಕ್ಷಿಣ ಆಯುಕ್ತ BMTC: ಜೂನ್‌ 18ರೊಳಗೆ ನಿವೃತ್ತ ನೌಕರರು ಏ-2018 ರಿಂದ ಜು-2018ರವರೆಗಿನ ತುಟ್ಟಿಭತ್ಯೆ ಪಡೆಯಲು ಬ್ಯಾಂಕ್‌ ಖಾತೆ ವಿವರ ... ಕುಡಿಯುವ ನೀರು ಸಮಸ್ಯೆ ಉಂಟಾದಲ್ಲಿ ಅಧಿಕಾರಿಗಳೇ ಹೊಣೆ: ಸಚಿವ ಖಂಡ್ರೆ ಎಚ್ಚರಿಕೆ