KSRTC ತುಮಕೂರು: ಡ್ಯೂಟಿರೋಟದಡಿ ಲಾಂಗ್ರೂಟ್- ರಾತ್ರಿ ಪಾಳಿ ಕರ್ತವ್ಯ ನಿರ್ವಹಿಸಲು ಚಾಲಕ ಕಂ ನಿರ್ವಾಹಕರ ನೇಮಿಸಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ತುಮಕೂರು ವಿಭಾಗದ ಡ್ಯೂಟಿ ರೋಟ ಪದ್ಧತಿಯಲ್ಲಿ ರಾತ್ರಿ ಪಾಳೆಯ ಕರ್ತವ್ಯ ನಿರ್ವಹಿಸುವಾಗ ಚಾಲಕ ಹಾಗೂ ಚಾಲಕ ಕಂ ನಿರ್ವಾಹಕರನ್ನು ನಿಯೋಜಿಸಬೇಕು ಎಂದು ವ್ಯವಸ್ಥಾಪಕ ನಿರ್ದೇಶಕರಿಗೆ ನೌಕರರು ಮನವಿ ಮಾಡಿದ್ದಾರೆ.
ಈ ಸಂಬಂಧ ಇತ್ತೀಚೆಗಷ್ಟೆ KSRTC: ಡ್ಯೂಟಿರೋಟ ಜೇಷ್ಠತೆ ಆಧಾರದ ಮೇಲಾಗುತ್ತಿಲ್ಲ- ಎಂಡಿಗೆ ಲಿಖಿತ ದೂರು ಕೊಟ್ಟ ಲೋಕೇಶ್ ಎಂಬ ಶೀರ್ಷಿಕೆಯಡಿ ವಿಜಯಪೈದಲ್ಲಿ ವರದಿಯಾಗಿತ್ತು. ವರದಿಯಿಂದ ಎಚ್ಚೆತ್ತ ಅಧಿಕಾರಿಗಳು ತುಮಕೂರು ವಿಭಾಗದಲ್ಲಿ ಇತ್ತೀಚಿಗೆ ಡ್ಯೂಟಿರೋಟ ಪದ್ಧತಿ ಪಟ್ಟಿ ಪ್ರಕಟಿಸಿದ್ದು, ಪ್ರಕ್ರಿಯೆ ನಡೆಸುವ ಬಗ್ಗೆ ಚಾಲನಾ ಸಿಬ್ಬಂದಿಗೆ ತಿಳಿಸಿದ್ದಾರೆ.
ಹೀಗಾಗಿ ಡ್ಯೂಟಿ ರೋಟ ಪದ್ಧತಿಯಲ್ಲಿ ರಾತ್ರಿ ಪಾಳೆಯ ಕರ್ತವ್ಯ ನಿರ್ವಹಿಸುವಾಗ ಚಾಲಕ ಹಾಗೂ ಚಾಲಕ ಕಂ ನಿರ್ವಾಹಕರನ್ನು ನಿಯೋಜಿಸಬೇಕು ಎಂದು ನೌಕರರು ಮನವಿ ಮಾಡಿದ್ದು ಈ ಸಂಬಂಧ ಲೋಕೇಶ್ ಅವರು ಎಂಡಿಗೆ ಲಿಖಿತವಾಗಿ ಕೋರಿಕೊಂಡಿದ್ದಾರೆ.
ಇತ್ತೀಚಿಗೆ ಶಿರಾ ಘಟಕದ ಬಸ್ ಹುಬ್ಬಳ್ಳಿ ಮಾರ್ಗಾಚರಣೆ ಮಾಡುತ್ತಿದ್ದ ವೇಳೆ ಚಾಲಕ ಹಾಗೂ ನಿರ್ವಾಹಕರು ಮಾರ್ಗಕ್ಕೆ ಹೋಗಿದ್ದ ಸಂದರ್ಭದಲ್ಲಿ ಚಾಲಕರು ವಾಹನ ಓಡಿಸಲು ನಿರ್ವಾಹಕರಿಗೆ ಕೊಟ್ಟಿದ್ದಾರೆ. ಈ ವೇಳೆ ವಾಹನವು ಅಪಘಾತವಾಗಿ ಒಬ್ಬ ವ್ಯಕ್ತಿ ಮೃತಪಟ್ಟಿದ್ದರು.
ಚಾಲಕರು ಆ ಸಂದರ್ಭದಲ್ಲಿ ಮಲಗಿದ್ದು ಚಾಲನೆ ಮಾಡಲು ಅವಕಾಶ ಮಾಡಿಕೊಟ್ಟಿರುವ ಕಾರಣಕ್ಕಾಗಿ ಅವರಿಗೆ ಅಮಾನತು ಶಿಕ್ಷೆ ನೀಡಲಾಗಿದೆ. ಪ್ರಸ್ತುತ ತುಮಕೂರು ವಿಭಾಗದಲ್ಲಿ ರಾತ್ರಿ ಪಾಳಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಅಂತಹ ಎಲ್ಲ ಮಾರ್ಗಗಳಿಗೂ ಚಾಲಕರು ಹಾಗೂ ಚಾಲಕ ಕಂ ನಿರ್ವಾಹಕರನ್ನು ನಿಯೋಜಿಸಬೇಕಿದೆ.
500ಕ್ಕೂ ಹೆಚ್ಚು ಕಿಮೀ ಒಂದು ಸುತ್ತುಗಳಿ ಮಾರ್ಗಗಳಿರುವುದರಿಂದ ಬರೀ ಚಾಲಕರಿಗೆ ತುಂಬಾ ಪ್ರಯಾಸದಾಯಕವಾಗುತ್ತಿದೆ. ಆ ಕಾರಣಕ್ಕಾಗಿ ಅಂಥ ಮಾರ್ಗಗಳಲ್ಲಿ ನಿರ್ವಾಹಕರಿಗೆ ವಾಹನ ನೀಡಿದರೆ ಸಂಸ್ಥೆಯ ನಿಯಮಾವಳಿಗಳ ಪ್ರಕಾರ ಅದು ತಪ್ಪಾಗುತ್ತದೆ ಮತ್ತು ಕೆಲವು ಘಟಕಗಳಲ್ಲಿ ಬರಿ ನಿರ್ವಾಹಕರೇ ರಾತ್ರಿ ಪಾಳಿಯಲ್ಲಿ ಡ್ಯೂಟಿ ಮಾಡುತ್ತಿದ್ದಾರೆ.
ಈ ಸಂದರ್ಭದಲ್ಲಿ ವಾಹನವನ್ನು ಚಲಾವಣೆ ಮಾಡುವುದು ಕಂಡು ಬರುತ್ತಿದೆ. ಇದು ಪೂರ್ತಿ ಕಾನೂನಿಗೆ ವಿರೋಧವಾಗಿದ್ದು ಕೆಲವು ನಿರ್ವಾಹಕರಿಗೆ ಯಾವುದೇ ರೀತಿಯ ಭಾರಿ ವಾಹನಗಳ ಚಾಲನೆ ಪರವಾನಿಗೆ ಇರುವುದಿಲ್ಲ. ನಿರ್ವಾಹಕರು ವಾಹನ ಓಡಿಸಿದರೆ ಅದು ಸಂಸ್ಥೆಗೂ ಕೆಟ್ಟ ಹೆಸರು ಬರುವ ಸಾಧ್ಯತೆ ಇದೆ.
ಈ ಬಾರಿ ರಾತ್ರಿ ಪಾಳಿಯ ಮಾರ್ಗಗಳನ್ನು ನಿಯೋಜನೆ ಮಾಡುವಾಗ ಚಾಲಕ ಕಂ ನಿರ್ವಾಹಕರ ಹೆಸರು ಹಾಗೂ ಬಿಲ್ಲೆ ಸಂಖ್ಯೆಗಳು ಲಾಲ್ಸೀಟ್ನಲ್ಲಿ ನಮೂದಿಸುವುದು ಒಳ್ಳೆಯದು ಹಾಗೂ ಫಾರಂ 4 ಗಳಲ್ಲಿ ಚಾಲಕ ಕಂ. ನಿರ್ವಾಹಕರು ಇಂತಿಷ್ಟು ಕಿಲೋಮೀಟರ್ಗಳ ವಾಹನ ಚಲಾವಣೆ ಮಾಡುವುದನ್ನು ನಿಗದಿಪಡಿಸಿ ಆದೇಶ ಹೊರಡಿಸುವುದು ಚಾಲನಾ ಸಿಬ್ಬಂದಿಗಳು ಹಾಗೂ ಸಂಸ್ಥೆಯ ಹಿತ ದೃಷ್ಟಿಯಿಂದ ಒಳ್ಳೆಯದಾಗುತ್ತದೆ. ಅಲ್ಲದೆ ಅನಾವಶ್ಯಕವಾಗಿ ವಾಹನ ನೀಡಿದ ಚಾಲಕರನ್ನು ಹೊಣೆಗಾರಿಕೆ ಮಾಡುವುದು ತಪ್ಪುತ್ತದೆ.
ಇತ್ತೀಚಿನ ದಿನಗಳಲ್ಲಿ ತುಮಕೂರು ವಿಭಾಗದ ಸಂಚಲನಾಧಿಕಾರಿ ಮನಸೋ ಇಚ್ಛೆ ಬೇಕಾಬಿಟ್ಟಿಯಾಗಿ ಮಾರ್ಗದ ಫಾರಂ 4 ಬದಲಿಸುತ್ತಿದ್ದಾರೆ. ಕೆಲವು ಮಾರ್ಗದ ಫಾರಂ 4 ಗಳನ್ನು ಒಂದು ತಿಂಗಳಿಗೆ ನಾಲ್ಕರಿಂದ ಐದು ಬಾರಿ ಬದಲಾಯಿಸಿರುವಂತಹ ಉದಾಹರಣೆಗಳು ಸಹ ಇವೆ. ಚಾಲನಾ ಸಿಬ್ಬಂದಿಗಳು ಈ ಬಗ್ಗೆ ವಿಚಾರಿಸಿದರೆ ಆರಿಕೆ ಉತ್ತರ ನೀಡುತ್ತಾರೆ ಹಾಗೂ ಸಾರ್ವಜನಿಕರಿಂದ ಮನವಿ ಬಂದಿದೆ ಎಂದು ತಿಳಿಸುತ್ತಾರೆ.
ಮುಖ್ಯವಾಗಿ ಫಾರಂ ಫೋರ್ ಬದಲಾಯಿಸಲು ವಿಭಾಗಿಯ ಸಂಚಲನ ಅಧಿಕಾರಿಗಳು ಖಾಸಗಿ ವಾಹನಗಳ ಮಾಲೀಕರ ನಡುವಿನ ಹೊಂದಾಣಿಕೆ ಘಟಕ ವ್ಯವಸ್ಥಾಪಕರು ಹಾಗೂ ಸಂಚಾರ ಶಾಖೆಯವರು ಹೊಂದಾಣಿಕೆ ಇಲ್ಲದ ಚಾಲನಾ ಸಿಬ್ಬಂದಿಗಳ ಮಾರ್ಗಗಳ ಫಾರಂ ಬೋರ್ಡ್ ಗಳನ್ನು ಬದಲಿಸಿ ಕೊಡುವಂತೆ ವಿಭಾಗೀ ಸಂಚಲನಾಧಿಕಾರಿಗಳಿಗೆ ಕೇಳಿಕೊಳ್ಳುತ್ತಾರೆ ಹಾಗೂ ಕೆಲವು ಸ್ವಯಂಘೋಷಿತ ಯೂನಿಯನ್ ಲೀಡರ್ಗಳು ಓಡಾಡುವ ಮಾರ್ಗಗಳನ್ನು ಸಾಮಾನ್ಯ ಪಾಳಿ ಇದ್ದರೂ ವೇಗದೂತ ಮಾಡಿಸಿಕೊಳ್ಳುತ್ತಾರೆ.
ವೇಗದೂತ ವಿದ್ದರೆ ಸಾಮಾನ್ಯ ಪಾಳಿ ಮಾಡಿಸಿಕೊಳ್ಳುತ್ತಾರೆ. ಇವೆಲ್ಲದಕ್ಕೂ ಪರೋಕ್ಷವಾಗಿ ಸಂಚಲನಾಧಿಕಾರಿ ಬೆಂಬಲ ನೀಡುತ್ತಾ ಬರುತ್ತಿದ್ದಾರೆ. ಮಾರ್ಗಗಳ ಫಾರಂ 4 ಬದಲಾಯಿಸುವುದು ಮುಖ್ಯವಾಗಿ ಚಾಲನಾ ಸಿಬ್ಬಂದಿಗಳಿಗೆ ಕಿರುಕುಳ ನೀಡುವುದೇ ಆಗಿದೆ. ಫಾರಂ 4 ಗಳನ್ನು ಬದಲಾಯಿಸುವ ಸಂದರ್ಭದಲ್ಲಿ. ಆ ಮಾರ್ಗಗಳ ರೂಟ್ ಸರ್ವೆ ಮಾಡುವ ಪದ್ದತಿಯೇ ಕಾಣುತ್ತಿಲ್ಲ. ಇನ್ನೂ ಮುಖ್ಯವಾಗಿ ಕೆಲವು ಮಾರ್ಗಗಳಲ್ಲಿ ಕೆಲವು ಪಕ್ಷದ ಮುಖಂಡರು ಹೇಳಿರುವ ಕಾರಣಕ್ಕೆ ಆದಾಯ ಬರದಿದ್ದರೂ ಸಹ ಅವರ ಊರುಗಳ ಮಾರ್ಗಗಳಲ್ಲಿ ಕಾರ್ಯಾಚರಣೆ ಮಾಡುತ್ತಿದ್ದಾರೆ.
ಈ ಎಲ್ಲ ಅಂಶಗಳನ್ನು ಹಾಗೂ ವಿಚಾರಗಳನ್ನು ಪರಿಶೀಲಿಸಿ ಸೂಕ್ತ ರೀತಿಯ ಕ್ರಮ ಕೈಗೊಳ್ಳ ಬೇಕೆಂದು ಲೋಕೇಶ್ ವ್ಯವಸ್ಥಾಪಕ ನಿರ್ದೇಶಕರಿಗೆ ಮನವಿ ಮಾಡಿದ್ದಾರೆ.
Related

You Might Also Like
KSRTC: ನೌಕರರ ವೇತನ ಹೆಚ್ಚಳ ಸಂಬಂಧ ಸಿಎಂ-ಸಾರಿಗೆ ಸಚಿವರ ನಡುವೆ ಏನೋ ಸರಿ ಇಲ್ಲ..!
ಇಂದು ನಡೆಯಬೇಕಿದ್ದ ಸಭೆ ಮಾಹಿತಿಯೇ ಇಲ್ಲದೆ ರದ್ದು ಇದಕ್ಕೆ ಸಿಎಂ ಸಾರಿಗೆ ಸಚಿವರ ನಡುವೆ ಹೊಂದಾಣಿಕೆ ಕೊರತೆ ಕಾರಣವೆ? ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ...
BMTC: ಸಾಮಾನ್ಯ ಪಾಳಿಯ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳ ನಿಯೋಜನೆ ಮಾಡದಿರಲು ತೀರ್ಮಾನ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ಬಸ್ಗಳ ಸಾಮಾನ್ಯ ಪಾಳಿಯಲ್ಲಿ ಕರ್ತವ್ಯಕ್ಕೆ ಸೀನಿಯರ್ ಚಾಲನಾ ಸಿಬ್ಬಂದಿಗಳನ್ನು ನಿಯೋಜನೆ ಮಾಡದಿರಲು ಸಂಸ್ಥೆಯ ಮುಖ್ಯ ಸಂಚಾರ ವ್ಯವಸ್ಥಾಪಕರ (ಆ) ಅಧ್ಯಕ್ಷತೆಯಲ್ಲಿ...
BMTC: 79ರ ಬದಲು 34ಕಿಮೀ ಕಾರ್ಯಾಚರಣೆ ಮಾಡಿ ಆರ್ಥಿಕ ನಷ್ಟಮಾಡಿದ ಆರೋಪ- ಚಾಲನಾ ಸಿಬ್ಬಂದಿಗೆ ಡಿಎಂ ಮೆಮೋ
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಗೆ ಸುಮಾರು 3500 ರೂ.ಗಳಷ್ಟು ಆರ್ಥಿಕ ನಷ್ಟವುಂಟಾಗಲು ಕಾರಣರಾಗಿರುತ್ತೀರಿ ಎಂದು ಆರೋಪಿಸಿ ಚಾಲನಾ ಸಿಬ್ಬಂದಿ ವಿರುದ್ಧ ಘಟಕ ವ್ಯವಸ್ಥಾಪಕರು ಆರೋಪಣ ಪತ್ರ...
ಹಾಳಾಗಿರುವ ಒಳಚರಂಡಿ ಸ್ಲ್ಯಾಬ್ ಬದಲಾಯಿಸಿ: ಅಧಿಕಾರಿಗಳಿಗೆ ಸ್ನೇಹಲ್ ತಾಕೀತು
ಬೆಂಗಳೂರು: ಪೂರ್ವ ವಲಯ ವ್ಯಾಪ್ತಿಯಲ್ಲಿ ಹಾಳಾಗಿರುವ ಒಳಚರಂಡಿ ಮೇಲ್ಭಾಗದ ಕವರ್ ಸ್ಲ್ಯಾಬ್ ಬದಲಾಯಿಸಲು ಪೂರ್ವ ವಲಯ ಆಯುಕ್ತರಾದ ಸ್ನೇಹಲ್ ಜಲಮಡಂಳಿ ಅಧಿಕಾರಿಗಳಿಗೆ ತಾಕೀತು ಮಾಡಿದರು. ಪೂರ್ವ ವಲಯ...
ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ: ರಾಜ್ಯ ಸ್ವೀಪ್ ನೋಡಲ್ ಅಧಿಕಾರಿ ವಸ್ತ್ರದ್ ಸಲಹೆ
ಬೆಂಗಳೂರು ಗ್ರಾಮಾಂತರ: ಜಿಲ್ಲೆಯಲ್ಲಿ ಸ್ವೀಪ್ ಕಾರ್ಯ ಚಟುವಟಿಕೆಗಳನ್ನು ನಿರಂತರವಾಗಿ ಕೈಗೊಳ್ಳುವ ಮೂಲಕ ಮತದಾರರಿಗೆ ಜಾಗೃತಿ ಮೂಡಿಸಿ ಚುನಾವಣೆಯಲ್ಲಿ ಮತದಾನ ಪ್ರಮಾಣ ಹೆಚ್ಚಿಸಲು ಕ್ರಮ ವಹಿಸಿ ಎಂದು ಅಧಿಕಾರಿಗಳಿಗೆ...
ಗ್ರಾಪಂ- ಮನೆ ಬಾಗಿಲಿಗೆ ಇ-ಸ್ವತ್ತು ಖಾತೆ ವಿತರಣೆ: ಜಿಪಂ ಸಿಇಒ ಡಾ.ಅನುರಾಧ
ಪಂಚಾಯತ್ ರಾಜ್ ಇಲಾಖೆಯಿಂದ ಮಹತ್ವಕಾಂಕ್ಷಿ ಕಾರ್ಯಕ್ರಮ ಗ್ರಾಮಠಾಣಾ ವ್ಯಾಪ್ತಿಯ ಮನೆ ಬಾಗಿಲಿಗೇ ಈ ಸ್ವತ್ತು ಖಾತೆ ನೀಡುವ ಯೋಜನೆ ಆರಂಭ ಬೆಂಗಳೂರು ಗ್ರಾಮಾಂತರ: ಪಂಚಾಯತ್ ರಾಜ್ ಮತ್ತು...
ರೈತರಿಗಾಗಿ ಜಿಲ್ಲಾ ಮಟ್ಟದ ಮಾವು- ಹಲಸು ಮೇಳ: ಸಚಿವ ಮುನಿಯಪ್ಪ
ಬೆಂಗಳೂರು ಗ್ರಾಮಾಂತರ: ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ತೋಟಗಾರಿಕೆ ಇಲಾಖೆ, ಕೃಷಿ ಇಲಾಖೆ ಸಂಯುಕ್ತಾಶ್ರಯದಲ್ಲಿ ದೇವನಹಳ್ಳಿಯಲ್ಲಿ ಆಯೋಜಿಸಿದ್ದ ಜಿಲ್ಲಾ ಮಟ್ಟದ ಮಾವು, ಹಲಸು ಮತ್ತು ಇತರೆ ಹಣ್ಣುಗಳ ಪ್ರದರ್ಶನ...
ಖಾಸಗಿ ಕಂಪನಿಯ ಮುಖ್ಯ ಕಾನೂನು ಸಲಹೆಗಾರರಾಗಿ ನೇಮಕಗೊಂಡ ವಕೀಲ ಶಿವರಾಜುರಿಗೆ ಅಭಿನಂದನೆಗಳು
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ಹಲವು ನೌಕರರು ಸೇರಿದಂತೆ ಇತರರಿಗೆ ಉಚಿತವಾಗಿ ಕಾನೂನು ಸೇವೆ ನೀಡಿದ ಫಲವಾಗಿ ವಕೀಲರಾದ ಎಚ್.ಬಿ.ಶಿವರಾಜು ಅವರಿಗೆ ಕೈ...
KSRTC ನೂತನ ಎಂಡಿ ಅಕ್ರಮ್ ಪಾಷಗೆ ಸ್ವಾಗತ ಕೋರಿದ ನಿಗಮದ ಪ್ರಭಾರ ಎಂಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೂತನ ವ್ಯವಸ್ಥಾಪಕ ನಿರ್ದೇಶಕರಾಗಿ ಐಎಎಸ್ ಅಧಿಕಾರಿ ಅಕ್ರಮ್ ಪಾಷ ಇಂದು ಅಧಿಕಾರ ಸ್ವೀಕರಿಸಿದರು. ನಿಗಮದ ಪ್ರಭಾರ ಎಂಡಿಯಾಗಿದ್ದ ಬಿಎಂಟಿಸಿ...