KSRTC: ಹೆಂಡತಿ ತಂದೆ ನಿಧನರಾಗಿದ್ದಾರೆ ರಜೆ ಕೊಡಿ ಎಂದರೆ ಆಗಲ್ಲ ಡ್ಯೂಟಿಗ್ಹೋಗು ಎಂದ ಡಿಎಂ- ಎಲ್ಲಿದೆ ಮಾನವೀಯತೆ!

ಕನಕಪುರ: ತನ್ನ ಪತ್ನಿಯ ತಂದೆ ಅಂದರೆ ಹೆಣ್ಣುಕೊಟ್ಟ ಮಾವ ನಿಧನರಾಗಿದ್ದಾರೆ ಎಂಬ ವಿಷಯ ತಿಳಿದ ಚಾಲನಾ ಸಿಬ್ಬಂದಿಯೊಬ್ಬರು ಅಂತಿಮ ದರ್ಶನಕ್ಕೆ ಹೋಗಬೇಕು ರಜೆ ಕೊಡಿ ಎಂದರೆ ಕೆಎಸ್ಆರ್ಟಿಸಿ ಕನಕಪುರ ಘಟಕದ ಪ್ರಭಾರ ಘಟಕ ವ್ಯವಸ್ಥಾಪಕ ರಜೆ ಕೊಡದೆ ದೌರ್ಜನ್ಯದಿಂದ ನಡೆದುಕೊಂಡಿರುವ ಘಟನೆ ನಡೆದಿದೆ.
ಸ್ವಂತ ಹೆಂಡತಿಯ ಅಪ್ಪ ನಿಧನರಾಗಿದ್ದಾರೆ ಅವರ ಅಂತಿಮ ದರ್ಶನಕ್ಕೆ ಹೋಗಬೇಕು ಎಂದರೂ ಇಲ್ಲ ನೀನು ಡ್ಯೂಟಿಗೆ ಹೋಗು ಎಂದು ಹೇಳುತ್ತಾರೆ ಎಂದರೆ ಇವರನ್ನು ಮನುಷ್ಯರು ಅನ್ನಬೇಕೋ ಅಥವಾ ಇನ್ನೇನು ಅಂತ ತಿಳಿದುಕೊಳ್ಳಬೇಕೊ ಹೇಳಿ.
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ರಾಮನಗರ ವಿಭಾಗ ಕನಕಪುರ ಘಟಕದ ಪ್ರಭಾರ ಘಟಕ ವ್ಯವಸ್ಥಾಪಕ ನರಸಿಂಹರಾಜು ಎಂಬುವವರೇ ಈ ದರ್ಪ ಹಾಗೂ ದೌರ್ಜನ್ಯವನ್ನು ಘಟಕದಲ್ಲಿ ನಿರ್ವಾಹಕರಾಗಿರುವ ಉತ್ತರ ಕರ್ನಾಟಕ ಭಾಗದ ಕಂಡಕ್ಟರ್ ಒಬ್ಬರ ಮೇಲೆ ಎಸಗಿರುವವರು.
ಕಂಡಕ್ಟರ್ ಏ.17 ರಂದು ಕರ್ತವ್ಯ ನಿರತರಾಗಿದ್ದ ವೇಳೆ ಮಧ್ಯಾಹ್ನ ಸುಮಾರು 3 ಗಂಟೆ ಸಮಯದಲ್ಲಿ ತನ್ನ ಹೆಂಡತಿಯ ತಂದೆ ನಿಧನರಾಗಿದ್ದಾರೆ ಎಂಬ ಸುದ್ದಿ ಬರುತ್ತದೆ. ಆ ಬಳಿಕ ಅವರು ಹೆಂಡತಿಯ ಮೂಲಕ ಅದನ್ನು ಖಚಿತಪಡಿಸಿಕೊಳ್ಳುತ್ತಾರೆ. ತದನಂತರ ನಿರ್ವಾಹಕರು ಪ್ರಭಾರ ಘಟಕ ವ್ಯವಸ್ಥಾಪಕ ನರಸಿಂಹರಾಜು ಅವರಿಗೆ ಕರೆ ಮಾಡುತ್ತಾರೆ. ಆದರೆ, ಆ ಕರೆಯನ್ನು ಅವರು ಸ್ವೀಕರಿಸುವುದಿಲ್ಲ. ಹಾಗಾಗಿ ನಿರ್ವಾಹಕರು ಮೂಲತಃ ಉತ್ತರ ಕರ್ನಾಟಕದವರಾಗಿದ್ದರಿಂದ ಅವರು ತನ್ನ ಮಾವನ ಅಂತಿಮ ದರ್ಶನಕ್ಕೆ ಬೇಗನೇ ಹೊರಡಬೇಕಾದ ಅನಿವಾರ್ಯ ಸ್ಥಿತಿ ಎದುರಾಗಿತ್ತು.
ಆ ಪರಿಸ್ಥಿತಿ ಎದುರಾಗಿದ್ದರಿಂದ ಅವರು ರಾತ್ರಿಪಾಳಿಯ ವಾಹನವನ್ನು ರಾತ್ರಿ ಘಟಕಕ್ಕೆ ತೆಗೆದುಕೊಂಡು ಬಂದಿದ್ದಾರೆ. ಇತ್ತ ಮಾನವೀಯತೆ ದೃಷ್ಟಿಯಿಂದ ಹೇಳುವುದಾದರೆ ಘಟಕ ವ್ಯವಸ್ಥಾಪಕರು ಪರ್ಯಾಯ ನಿರ್ವಾಹಕರನ್ನು ಆ ಮಾರ್ಗಕ್ಕೆ ನಿಯೋಜಿಸಿ, ಈ ನಿರ್ವಾಹಕರನ್ನು ಅವರ ಮಾವನ ಅಂತ್ಯಕ್ರಿಯೆಗೆ ಕಳುಹಿಸಬೇಕಾಗಿತ್ತು. ಇದು ಅವರ ಕರ್ತವ್ಯ ಕೂಡ ಆಗಿತ್ತು.
ಆದರೆ ಡಿಎಂ ಅವರು ದರ್ಪ ದೌರ್ಜನ್ಯದಿಂದ ಆತನನ್ನು ಪ್ರಾಣಿಯ ರೀತಿಯಲ್ಲಿ ನಡೆಸಿಕೊಂಡು ಈ ಕತೆಯಲ್ಲ ಹೇಳಬೇಡ ಮೊದಲು ಗಾಡಿ ತೆಗೆದುಕೊಂಡು ಜಾಗಖಾಲಿ ಮಾಡು ಎಂದು ದರ್ಪದಿಂದ ನಡೆದುಕೊಂಡಿದ್ದಾರೆ.
ಆದರೂ ಮಾವನ ಅಂತಿಮ ದರ್ಶನಕ್ಕೆ ಹೋಗಲೇ ಬೇಕು ನನಗೆ ರಜೆ ಕೊಡಿ ಎಂದು ನಿರ್ವಾಹಕ ಹಠ ಮಾಡಿಕೊಂಡು ಹೋಗಿದ್ದಾರೆ ಎಂದು ಘಟಕದ ಸಿಬ್ಬಂದಿಯೊಬ್ಬರು ವಿಜಯಪಥಕ್ಕೆ ತಿಳಿಸಿದ್ದಾರೆ. ಅಲ್ಲದೆ ನಿರ್ವಾಹಕನೊಂದಿಗೆ ಡಿಎಂ ನಡೆದುಕೊಂಡಿರುವುದನ್ನು ವಿಡಿಯೋ ಮಾಡಿ ಕಳಿಸಿದ್ದಾರೆ.
ದೌರ್ಜನ್ಯ ಇದೇನು ಮೊದಲೇನಲ್ಲ: ಪ್ರಭಾರ ಘಟಕ ವ್ಯವಸ್ಥಾಪಕರ ಈ ದರ್ಪ ದೌರ್ಜನ್ಯ ಇದೇನು ಮೊದಲೇನಲ್ಲ ಈ ಹಿಂದೆ ಈ ರೀತಿಯ ಹಲವಾರು ಪ್ರಕರಣಗಳು ಇವರ ವಿರುದ್ಧ ದಾಖಲಾಗಿವೆ ಆದರೂ ಸಹ ಮೇಲಧಿಕಾರಿಗಳು ಇವರ ಮೇಲೆ ಯಾವುದೇ ಸೂಕ್ತ ಕ್ರಮ ಕೈಗೊಳ್ಳದೆ ಇವರನ್ನು ವರ್ಗಾವಣೆ ಸಹ ಮಾಡದೆ ಇರುವುದನ್ನು ನೋಡಿದರೆ ಇದರಲ್ಲಿ ಮೇಲಧಿಕಾರಿಗಳ ಪಾತ್ರವೂ ಎದ್ದು ಕಾಣುತ್ತದೆ.
ಹಾಗಾದರೆ ನೌಕರರು ನ್ಯಾಯವನ್ನು ಕೇಳಲು ಯಾರ ಬಳಿ ಹೋಗಬೇಕು. ಸಂಬಂಧಿಕರು ಸತ್ತರು ಕೂಡ ಅವರ ಅಂತಿಮ ದರ್ಶಕ್ಕೆ ಹೋಗಲಾರದ ಪರಿಸ್ಥಿತಿಯಲ್ಲಿ ನಾವು ಡ್ಯೂಟಿ ಮಾಡಬೇಕು ಎಂದರೆ ನಾವು ದುಡಿಯುತ್ತಿರುವುದು ಏತಕ್ಕಾಗಿ, ನಮ್ಮವರು ತಮ್ಮವರು ಎಂಬುದಕ್ಕೆ ಇಲ್ಲಿ ಜಾಗವಿಲ್ಲ ಎಂದರೆ ನಾವು ಪ್ರಾಣಿಗಳ? ಪ್ರಾಣಿಗಳಿಗೂ ಸಾವು ನೋವಿನ ಮಿಡಿತವಿರುತ್ತದೆ. ಆದರೆ ನಮ್ಮ ಸಂಸ್ಥೆಯಲ್ಲಿರುವ ಬಹುತೇಕ ಅಧಿಕಾರಿಗಳಿಗೆ ಇದು ಇಲ್ಲದಿರುವುದು ಭಾರಿ ನೋವಿನ ಸಂಗತಿ ಎಂದು ನೌಕರರು ಅಸಮಾಧಾನ ವ್ಯಕ್ತಪಡಿಸಿದ್ದಾರೆ.
Related

You Might Also Like
NWKRTC: ಸಾರಿಗೆ ನೌಕರರ ವೇತನ ಹೆಚ್ಚಳ ಯಾವಾಗ? ನಾಟಕದ ಮೂಲಕ ಸರ್ಕಾರದ ಗಮನ ಸೆಳೆದ ನಗರ ಸಾರಿಗೆ ಸಿಬ್ಬಂದಿ
ಹುಬ್ಬಳ್ಳಿ: ರಾಜ್ಯದಲ್ಲಿರುವ ನಮ್ಮ ಸಾರಿಗೆ ನಿಗಮಗಳ ಅಧಿಕಾರಿಗಳು - ನೌಕರರಲ್ಲಿ ಹಾಗೂ ನೌಕರರು - ನೌಕರರಲ್ಲೇ ಒಗ್ಗಟ್ಟಿಲ್ಲ. ಪರಿಣಾಮ ನಾಲ್ಕೂ ನಿಗಮಗಳಲ್ಲಿ ಸಮಸ್ಯೆಗಳ ಸರಮಾಲೆಯೇ ಇದೆ. ಹೀಗಾಗಿ...
ಮೈಸೂರು ಅರಮನೆ ಸೇರಿದಂತೆ ಸೂಕ್ಷ್ಮ ವಲಯಗಳಲ್ಲಿ ಡ್ರೋನ್ ಹಾರಾಟ ನಿಷೇಧ
ಮೈಸೂರು: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು ಸುವ್ಯವಸ್ಥೆಗೆ...
ಸೂಕ್ಷ್ಮ ವಲಯಗಳಲ್ಲಿ ಖಾಸಗಿ ಡ್ರೋನ್ ಚಟುವಟಿಕೆ ನಿಷೇಧ: ಡಿಸಿ ಬಸವರಾಜು
ಬೆಂಗಳೂರು ಗ್ರಾಮಾಂತರ: ಭಯೋತ್ಪಾದಕರು/ ದೇಶ ವಿರೋಧಿಗಳು ಡ್ರೋನ್ಗಳು, ರಿಮೋಟ್ ಕಂಟ್ರೋಲ್ಡ್ ಮೈಕ್ರೋ-ಲೈಟ್ ಏರ್ಕ್ರಾಫ್ಟ್ ಗಳು, ಪ್ಯಾರಿ-ಗ್ಲೈಡರ್ ಗಳನ್ನು ಬಳಸಿಕೊಂಡು ದಾಳಿಯ ಮೂಲಕ ಸಾರ್ವಜನಿಕ ಆಸ್ತಿ-ಪಾಸ್ತಿ ನಾಶಪಡಿಸಿ ಕಾನೂನು...
ವೈದ್ಯರು, ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆ: ಸಚಿವ ದಿನೇಶ್ ಗುಂಡೂರಾವ್
ಬೆಂಗಳೂರು: ರಾಜ್ಯದ ಸರ್ಕಾರಿ ಆಸ್ಪತ್ರೆಗಳ ವೈದ್ಯರು ಮತ್ತು ದಾದಿಯರಿಗೆ ಶೇ. 55 ರಷ್ಟು ವೇತನ ಪರಿಷ್ಕರಣೆಗೆ ರಾಷ್ಟ್ರೀಯ ಆರೋಗ್ಯ ಮಿಷನ್ (NHM) ಅಡಿಯಲ್ಲಿ ರಾಜ್ಯ ಸರ್ಕಾರ ಅನುಮೋದನೆ...
ರಾಜ್ಯಾದ್ಯಂತ 7 ಅಧಿಕಾರಿಗಳ ಮನೆ, ಕಚೇರಿ ಸೇರಿದಂತೆ 40 ಕಡೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ: ದಾಖಲೆಗಳು ವಶ
ಬೆಂಗಳೂರು: ರಾಜ್ಯಾದ್ಯಂತ 40 ಕಡೆಗಳಲ್ಲಿ ಇಂದು ಬೆಳ್ಳಂಬೆಳಗ್ಗೆ ಲೋಕಾಯುಕ್ತ ದಾಳಿ ನಡೆದಿದ್ದು, ಭ್ರಷ್ಟರ ಭೇಟಿಯಾಡುತ್ತಾ ಹಲವು ಮಹತ್ವದ ದಾಖಲೆಗಳನ್ನು ವಶಕ್ಕೆ ಪಡೆಯಲಾಗುತ್ತಿದೆ. ಭಷ್ಟ್ರ ಅಧಿಕಾರಿಗಳ ವಿರುದ್ಧ ಅಕ್ರಮ...
BMTC: ಸಾರಿಗೆ ನೌಕರರಿಗೆ ಹಿಂಬಾಕಿ, ವೇತನ ಹೆಚ್ಚಳ ಮಾಡದಿದ್ದರೂ ಪ್ರಯಾಣಿಕರಿಗೆ ಹೊಸ ಹೊಸ ಯೋಜನೆ ಮಾತ್ರ ನಿಂತಿಲ್ಲ
ಬೆಂಗಳೂರು: ರಾಜ್ಯ ಸರ್ಕಾರಿ ಸಾರಿಗೆ ನೌಕರರಿಗೆ 2024ರ ಜನವರಿಯಿಂದ ಆಗಬೇಕಿರುವ ವೇತನ ಹೆಚ್ಚಳ ಹಾಗೂ ಕಳೆದ 2020ರ ಜನವರಿಯಿಂದ ಆಗಿರುವ ತೇತನ ಹೆಚ್ಚಳದ 38 ತಿಂಗಳ ಹಿಂಬಾಕಿ...
44ನೇ ವಯಸ್ಸಿಗೇ ಸಿಎಂ ಆಗಿ ಸಾಧನೆಗೈದ ಆರ್. ಗುಂಡೂರಾವ್: ಸಿದ್ದರಾಮಯ್ಯ
ಬೆಂಗಳೂರು: ಮಾಜಿ ಮುಖ್ಯಮಂತ್ರಿ ಆರ್.ಗುಂಡೂರಾವ್ ಅವರು ಸಿಎಂ ಆಗಿದ್ದಾಗ ನಾನು ಜನತಾ ಪಕ್ಷದಲ್ಲಿ ಇದ್ದೇ, ಲೋಕಸಭಾ ಸದಸ್ಯರಾಗಿದ್ದ ಸಂದರ್ಭದಲ್ಲಿ ಅವರನ್ನು ನೋಡಲು ಹೋಗಿದ್ದೇ ಎಂದು ಸಿಎಂ ಸಿದ್ದರಾಮಯ್ಯ...
ಸಾಮಾಜಿಕ ನ್ಯಾಯದ ಬದ್ಧತೆ ಇರಬೇಕು ತೋರಿಕೆಯಲ್ಲ: ಸಿಎಂ ಸಿದ್ದರಾಮಯ್ಯ
ಬೆಂಗಳೂರು: ಸಾಮಾಜಿಕ ನ್ಯಾಯದ ಬಗ್ಗೆ ಬದ್ಧತೆ ಇರಬೇಕು. ತೋರಿಕೆ ಇರಬಾರದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. ಇಂದು ಸಿಎಂ ನಿವಾಸ ಕಾವೇರಿಯಲ್ಲಿ ಹಿರಿಯ ಪತ್ರಕರ್ತ ಡಾ.ಎಂ.ಎಸ್.ಮಣಿ ಅವರ...
ಕೆಂಪೇಗೌಡ ಬಸ್ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಸಿಎಂ ಎನಿಸಿಕೊಂಡಿದ್ದ ಆರ್. ಗುಂಡೂರಾವ್ ಪ್ರತಿಮೆ ಅನಾವರಣ
ಬೆಂಗಳೂರು: ದಕ್ಷಿಣ ಏಷ್ಯಾದಲ್ಲೇ ಪ್ರಪ್ರಥಮ ಹಾಗೂ ಅತ್ಯಪೂರ್ವ ಎಂಬ ಖ್ಯಾತಿಯ ಕೆಂಪೇಗೌಡ ಸಾರಿಗೆ ನಿಲ್ದಾಣದ ನಿರ್ಮಾತೃ ರಾಜ್ಯದ ಧೀಮಂತ ಮುಖ್ಯ ಮಂತ್ರಿ ಎನಿಸಿಕೊಂಡಿದ್ದ ಪ್ರಾತ:ಸ್ಮರಣಿಯ ಆರ್. ಗುಂಡೂರಾವ್...