NEWSನಮ್ಮಜಿಲ್ಲೆನಮ್ಮರಾಜ್ಯ

ಮತ್ತೇ ಸಚಿವರ ಭರವಸೆಗೆ ಕಿವಿಯಾಗಿ 8ದಿನದ ಉಪವಾಸ ಸತ್ಯಾಗ್ರಹ ಅಂತ್ಯಗೊಳಿಸಿದ ಸಾರಿಗೆ ನೌಕರರು

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಸುವರ್ಣ ಸೌಧದ ಮುಂಭಾಗ ಕಳೆದ 8 ದಿನಗಳಿಂದ ಸಾರಿಗೆ ಸಮಾನ ಮನಸ್ಕರ ವೇದಿಕೆಯಿಂದ ಸಾರಿಗೆ ನೌಕರರು ಹಮ್ಮಿಕೊಂಡಿದ್ದ ಉಪವಾಸ ಸತ್ಯಾಗ್ರಹ ಸಾರಿಗೆ ಸಚಿವರು ಕೊಟ್ಟ ಭರವಸೆಯ ಹಿನ್ನೆಲೆಯಲ್ಲಿ ಇಂದು ಅಂತ್ಯಕಂಡಿದೆ.

ಉಪವಾಸ ಸತ್ಯಾಗ್ರಹದ ನೇತೃತ್ವ ವಹಿಸಿದ್ದ ಚಂದ್ರಶೇಖರ್‌ ಅವರನ್ನು ಇಂದು ಸಂಜೆ ಸುವರ್ಣಸೌಧಕ್ಕೆ ಕರೆಸಿಕೊಂಡ ಸಾರಿಗೆ ಸಚಿವ ಶ್ರೀರಾಮುಲು ಅವರು, ಯಾವುದೇ ಷರತ್ತುಗಳಿಲ್ಲದೆ ವಜಾಗೊಳಿಸಿರುವ ನೌಕರರನ್ನು ತೆಗೆದುಕೊಳ್ಳುವ ಮತ್ತು ವೇತನ ಆಯೋಗ ಮಾದರಿಯಲ್ಲಿ ವೇತನ ನೀಡುವ ಸಂಬಂಧ ಭರವಸೆ ನೀಡಿದ್ದರಿಂದ ಇಂದು ಸತ್ಯಾಗ್ರಹವನ್ನು ಅಂತ್ಯಗೊಳಿಸುತ್ತಿರುವುದಾಗಿ ಚಂದ್ರಶೇಖರ್‌ ತಿಳಿಸಿದ್ದಾರೆ.

ಇಂದು ರಾತ್ರಿ 8.40ರ ಸುಮಾರಿಬಲ್ಲಿ ಮಾಧ್ಯಮಗಳ ಜತೆ ಮಾತನಾಡಿದ ಚಂದ್ರಶೇಖರ್‌, ಸಚಿವರು ವಜಗೊಂಡಿರುವ ನೌಕರರನ್ನು ವಾಪಸ್‌ ತೆಗೆದುಕೊಳ್ಳುವ ಜತೆಗೆ ವೇತನ ಆಯೋಗದ ಬಗ್ಗೆ ಸಚಿವರಿಗೆ ಇದ್ದ ಗೊಂದಲಗಳ ಬಗ್ಗೆ ವಿವರಣೆ ನೀಡಿದ್ದರಿಂದ ಅವರು ಈ ಬಗ್ಗೆ ಹಣಕಾಸು ಜವಾಬ್ದಾರಿಯನ್ನು ಹೊಂದಿರುವ ಮುಖ್ಯಮಂತ್ರಿಗಳ ಜತೆ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳೋಣ ಎಂದು ಭರವಸೆ ನೀಡಿದ್ದರಿಂದ ಉಪವಾಸ ಸತ್ಯಾಗ್ರಹವನ್ನು ಅಂತ್ಯಗೊಳಿಸಲಾಗುತ್ತಿದ ಎಂದು ತಿಳಿದಿದರು.

ಸಾರಿಗೆ ಸಚಿವರು ಬರಿ ಭರವಸೆಕೊಡುತ್ತಲೇ ಈಗ ಮೂರು ವರ್ಷಕಳೆದಿದ್ದಾರೆ. ಅವರ ಭರವಸೆಯನ್ನೇ ನಂಬಿಕೊಂಡು ನೌಕರರು ಕೂಡ ಇನ್ನೂ ಕಾಲ ಕಳೆಯುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ನೌಕರರು ಇಟ್ಟಿರುವ ಬೇಡಿಕೆಗಳನ್ನು ಸರ್ಕಾರ ಯಾವುದೇ ಕಾರಣಕ್ಕೂ ಈಡೇರಿಸುತ್ತದೆ ಎಂಬ ಭರವಸೆಯನ್ನು ಕೆಲ ನೌಕರರು ಕಳೆದುಕೊಂಡಿದ್ದು, ಕಾನೂನಾತ್ಮಕವಾಗಿ ಹೋರಾಟ ಒಂದೇ ದಾರಿ ಎಂದು ಹೇಳುತ್ತಿದ್ದಾರೆ.

Leave a Reply

error: Content is protected !!
LATEST
ಮೈತ್ರಿ ತೆಕ್ಕೆಗೆ ಬನ್ನೂರು ಪುರಸಭೆ: ಜೆಡಿಎಸ್‌ಗೆ ಅಧ್ಯಕ್ಷ ಗದ್ದುಗೆ, ಬಿಜೆಪಿಗೆ ಉಪಾಧ್ಯಕ್ಷ ಗಾದಿ ರಾಜ್ಯದ ಆರು ಪ್ರತ್ಯೇಕ ಸ್ಥಳಗಳಲ್ಲಿ ಅಪಘಾತ: 13 ಮಂದಿ ಸಾವು, ಹಲವರಿಗೆ ಗಾಯ ಯಡಿಯೂರು ಕೆರೆ: ಗಣಪತಿ ವಿಸರ್ಜನಾ ಕಲ್ಯಾಣಿಗೆ ನೀರು ತುಂಬಿಸಿದ ಬಿಬಿಎಂಪಿ ತಂದೆ ನಿಧನರಾದ ದುಃಖದಲ್ಲಿರುವ ನೌಕರನಿಗೆ ರಜೆ ಕೊಡದೆ ಗೈರು ತೋರಿಸಿದ್ದು ಅಲ್ಲದೆ ಕಾರಣ ಕೇಳಿ ನೋಟಿಸ್‌ ಕೊಟ್ಟ ಅಧಿಕಾರಿ... KKRTC ಬಸ್‌-ಶಾಲಾ ಬಸ್‌ ಮುಖಾಮುಖಿ ಡಿಕ್ಕಿ: ಇಬ್ಬರು ಮೃತ- 25ಕ್ಕೂ ಹೆಚ್ಚು ಮಕ್ಕಳಿಗೆ ಗಾಯ KSRTC: 38 ತಿಂಗಳ ವೇತನ ಹೆಚ್ಚಳ ಹಿಂಬಾಕಿಗೆ ಆಗ್ರಹಿಸಿ BMS ಪ್ರತಿಭಟನೆ- ಸರ್ಕಾರದ ವಿರುದ್ಧ ಕಿಡಿ MSRTC: ನೌಕರರ ಮುಷ್ಕರಕ್ಕೆ ಮಣಿದು 6500 ರೂ. ವೇತನ ಹೆಚ್ಚಳಕ್ಕೆ ಒಪ್ಪಿದ ಸರ್ಕಾರ- ಧರಣಿ ವಾಪಸ್‌ MSRTC: ತೀವ್ರಗೊಂಡ ನೌಕರರ ಮುಷ್ಕರ- 11 ಸಂಘಟನೆಗಳ ಒಗ್ಗಟ್ಟು- ನಿಗಮಕ್ಕೆ ನಡುಕ ಚಾಮುಂಡಿಬೆಟ್ಟದಲ್ಲಿ ಧೂಮಪಾನ, ಮದ್ಯಪಾನ, ಗುಟ್ಕಾ ನಿಷೇಧ: ಸಿಎಂ ಘೋಷಣೆ ಪೋಡಿ ಮುಕ್ತ ಅಭಿಯಾನ, ಪೌತಿ ಖಾತೆ ಆಂದೋಲನಕ್ಕೆ ಕ್ರಮ: ಕಂದಾಯ ಸಚಿವ ಕೃಷ್ಣ ಬೈರೇಗೌಡ