KSRTC: ಮಹಿಳಾ ಪ್ರಯಾಣಿಕರೊಡನೆ ಅತ್ಯಂತ ಕೆಟ್ಟ ವರ್ತನೆ- ವಜಾಕ್ಕೆ ಕ್ರಮ ಕೈಗೊಳ್ಳಲು ಎಂಡಿಗೆ ಸಚಿವರ ಸೂಚನೆ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಮಂಗಳೂರು ವಿಭಾಗ ಮಂಗಳೂರು 3ನೇ ಘಟಕದ ಬಸ್ಸಿನಲ್ಲಿ ನಿರ್ವಾಹಕನೊಬ್ಬ ಮಹಿಳಾ ಪ್ರಯಾಣಿಕರೊಡನೆ ಅತ್ಯಂತ ಕೆಟ್ಟದಾಗಿ ನಡೆದುಕೊಂಡಿರುವ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಪ್ರಸಾರವಾದ ವಿಡಿಯೋಗೆ ಸಂಬಂಧಪಟ್ಟಂತೆ, ಮೇಲ್ನೋಟಕ್ಕೆ ಆರೋಪ ಸಾಬೀತಾಗಿದ್ದು ಈ ಹಿನ್ನೆಯಲ್ಲಿ ಆತನನ್ನು ಅಮಾನತು ಮಾಡಲಾಗಿದೆ ಎಂದು ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಈ ಬಗ್ಗೆ ಇಂದು ಸಂಜೆ ಎಂಡಿಗೆ ಆದೇಶ ಮಾಡಿರುವ ಅವರು, ಈಗಾಗಲೇ ನಿರ್ವಾಹಕನನ್ನು ಅಮಾನತು ಮಾಡಿರುವುದು ಸರಿಯಷ್ಟೇ. ಬಸ್ಸಿನಲ್ಲಿ ಪ್ರಯಾಣಿಸುವ ಪ್ರತಿಯೊಬ್ಬ ಹೆಣ್ಣು ಮಕ್ಕಳೊಡನೆ ಗೌರವದೊಂದಿಗೆ ನಡೆದುಕೊಳ್ಳುವುದು ನಮ್ಮ ಸಿಬ್ಬಂದಿಗಳ ಆದ್ಯ ಕರ್ತವ್ಯವಾಗಿರಬೇಕು. ಈ ರೀತಿಯ ಅಸಹ್ಯಕರ ನಡವಳಿಕೆ ಅಕ್ಷಮ್ಯ ಅಪರಾಧ ಎಂದು ಹೇಳಿದ್ದಾರೆ.
ಅಲ್ಲದೆ ಕೆಎಸ್ಆರ್ಟಿಸಿ ಬಸ್ಸುಗಳು ಹಾಗೂ ಚಾಲಕ- ನಿರ್ವಾಹಕರ ಬಗ್ಗೆ ಸಾರ್ವಜನಿಕ ಪ್ರಯಾಣಿಕರು ಅತೀವ ನಂಬಿಕೆ ಮತ್ತು ಪ್ರೀತಿ ಹೊಂದಿದ್ದಾರೆ. ಕೆಲವೊಬ್ಬರು ಮಾಡುವ ಈ ರೀತಿಯ ಕೆಲಸಗಳು ಸಂಸ್ಥೆ ಹಾಗೂ ಸಿಬ್ಬಂದಿಗಳ ಗೌರವಕ್ಕೆ ಧಕ್ಕೆ ತರುವಂತಹದು. ಈ ಘಟನೆಗೆ ಸಂಬಂಧಪಟ್ಟಂತೆ ಕೂಡಲೇ ವಿಚಾರಣಾ ಪ್ರಕ್ರಿಯೆ ಪ್ರಾರಂಭಿಸಿ, ತ್ವರಿತವಾಗಿ ವಿಚಾರಣೆ ಮುಗಿಸಿ, ಆ ನಿರ್ವಾಹಕನನ್ನು ಸೇವೆಯಿಂದಲೇ ವಜಾ ಮಾಡಲು ಕ್ರಮಕೈಗೊಳ್ಳುವಂತೆ ಸಂಸ್ಥೆಯ ವ್ಯವಸ್ಥಾಪಕ ನಿರ್ದೇಶಕರಿಗೆ ಸೂಚಿಸಿದ್ದೇನೆ ಎಂದು ತಿಳಿಸಿದ್ದಾರೆ.
ಪೊಲೀಸರಿಂದ ಸ್ವಯಂಪ್ರೇರಿತ ದೂರು: ಮಹಿಳಾ ಪ್ರಯಾಣಿಕರೊಬ್ಬರ ಗುಪ್ತಾಂಗ ಸ್ಪರ್ಶಿಸಿ ಅಸಭ್ಯವಾಗಿ ನಡೆದುಕೊಂಡ ನಿರ್ವಾಹಕನನ್ನು ಈಗಾಗಲೇ ಪೊಲೀಸರು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡು ವಶಕ್ಕೆ ಪಡೆದಿದ್ದಾರೆ.
KSRTC ಮಂಗಳೂರು ವಿಭಾಗದ 3ನೇ ಘಟಕದ ಉಲ್ಲಾಳ-ಮುಡಿಪು ಮಾರ್ಗದಲ್ಲಿ ಚಲಿಸುತ್ತಿದ್ದಾಗ ಶೀಟ್ನಲ್ಲಿ ಕುಳಿತಿದ್ದ ಮಹಿಳೆ ಪಕ್ಕದಲ್ಲಿ ಹೋಗಿ ನಿಂತುಕೊಂಡ ನಿರ್ವಾಹಕ ಪ್ರದೀಪ್ ನಾಯ್ಕರ್ ಎಂಬಾತ ಆಕೆಯ ಎದೆ ಭಾಗವನ್ನು ಸ್ಪರ್ಶಿಸಿದ್ದಾನೆ.
ಇತ್ತ ನಿರ್ವಾಹಕ ಅಸಭ್ಯವಾಗಿ ವರ್ತಿಸಿದ್ದಾನೆ ಎಂಬ ವಿಷಯ ತಿಳಿಯುತ್ತಿದ್ದಂತೆ ಮಂಗಳೂರು ಪೊಲೀಸರು ನಿರ್ವಾಹಕನನ್ನು ವಶಕ್ಕೆ ಪಡೆದಿದ್ದು, ಸುಮೋಟೊ ಕೇಸ್ ದಾಖಲಿಸಿ FIR ಕೂಡ ಮಾಡಿದ್ದಾರೆ.
ಇನ್ನು ಬೆಂಗಳೂರಿನಲ್ಲಿರುವ ಸಾರಿಗೆ ಕೇಂದ್ರ ಕಚೇರಿಯಿಂದ ಈತನ ವಿರುದ್ಧ ಸೂಕ್ತ ಶಿಸ್ತು ಕ್ರಮ ಕೈಗೊಳ್ಳಲು ಮಂಗಳೂರು ವಿಭಾಗೀಯ ನಿಯಂತ್ರಣಾಧಿಕಾರಿಗಳಿಗೆ ನಿರ್ದೇಶನ ನೀಡಿದ್ದು, ಡಿಸಿ ನಿರ್ವಾಹಕನ ಅಮಾನತು ಆದೇಶ ಮಾಡಿದ್ದರು.
Related

You Might Also Like
BMTC ಬಸ್ ಬಾಗಿಲಿಗೆ ಸಿಲುಕಿದ ಕೈ- ಬಿದ್ದು ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಸಾವು
ಬೆಂಗಳೂರು: ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ ಎಲೆಕ್ಟ್ರಿಕ್ ಬಸ್ ಚಕ್ರಕ್ಕೆ ಸಿಲುಕಿ ಪ್ರಯಾಣಿಕ ಮೃತಪಟ್ಟಿರುವ ಘಟನೆ ಇಂದು ಜಯನಗರದ 4ನೇ ಬ್ಲಾಕ್ನಲ್ಲಿ ನಡೆದಿದೆ. ಸಂಪಂಗಿ (64) ಮೃತಪಟ್ಟವರು....
ರೀಲ್ಸ್, ವಿಡಿಯೋ ಮಾಡುವ ವಕೀಲರಿಗೆ ಶಿಸ್ತು ಕ್ರಮದ ಎಚ್ಚರಿಕೆ ಕೊಟ್ಟ ವಕೀಲರ ಪರಿಷತ್
ಬೆಂಗಳೂರು: ವೃತ್ತಿನಿರತ ವಕೀಲರು ತಮ್ಮನ್ನು ತಾವೇ ಉನ್ನತೀಕರಿಸಿಕೊಳ್ಳುವಂತಹ ಪ್ರಚಾರದ ಯಾವುದೇ ರೀಲ್ಗಳು ಮತ್ತು ವಿಡಿಯೋಗಳನ್ನು ಸಾಮಾಜಿಕ ಮಾಧ್ಯಮಗಳಲ್ಲಿ ಅಪ್ ಲೋಡ್ ಮಾಡಿದ್ದರೆ ಅಂತಹ ಆಕ್ಷೇಪಾರ್ಹ ರೀಲ್ಗಳು, ವಿಡಿಯೋಗಳನ್ನು...
KKRTC ಬಸ್ – ಟಿಪ್ಪರ್ ನಡುವೆ ಭೀಕರ ಅಪಘಾತ: ಕಂಡಕ್ಟರ್ ಸ್ಥಳದಲ್ಲೇ ಸಾವು, ಚಾಲಕ ಸೇರಿ ಹಲವರಿಗೆ ಗಾಯ
ಹೊಸಪೇಟೆ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ಬಸ್ ಹಾಗೂ ಟಿಪ್ಪರ್ ನಡುವೆ ಸಂಭವಿಸಿದ ಭೀಕರ ಅಪಘಾತದಲ್ಲಿ ನಿರ್ವಾಹಕ ಸ್ಥಳದಲ್ಲೇ ಮೃತಪಟ್ಟಿದ್ದು, ಹಲವರು ಗಾಯಗೊಂಡಿರುವ ಘಟನೆ ಚಿಲಕನಹಟ್ಟಿ (ಮರಿಯಮ್ಮನಹಳ್ಳಿ)...
KSRTC ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ: 2035ರವರೆಗೆ ಎಸ್ಮಾ ವಿಸ್ತರಣೆ – ಚರ್ಚೆ ಇಲ್ಲದೇ ಸದನದಲ್ಲಿ ವಿಧೇಯಕ ಅಂಗೀಕಾರ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳ ನೌಕರರು ಮುಷ್ಕರ ನಡೆಸಿದರೆ ಕಠಿಣ ಕ್ರಮ ಕೈಗೊಳ್ಳುವ ಎಸ್ಮಾ ಕಾಯ್ದೆ 10 ವರ್ಷಗಳ ಅವಧಿಗೆ ವಿಸ್ತರಣೆಯಾಗುವ ಅತ್ಯಾವಶ್ಯಕ...
ರೈತರ ಸಮಸ್ಯೆ ಬಗೆ ಹರಿಸಲು ಒತ್ತಾಯಿಸಿ ಡಿಸಿ ಕಚೇರಿ ಮುಂದೆ ರೈತ ಮುಖಂಡರ ಪ್ರತಿಭಟನೆ
ಮೈಸೂರು: ರೈತರ ಸಮಸ್ಯೆ ಬಗೆ ಹರಿಸುವಂತೆ ಒತ್ತಾಯಿಸಿ ಜಿಲ್ಲಾಧಿಕಾರಿ ಕಚೇರಿ ಮುಂದೆ ಪ್ರತಿಭಟನೆ ನಡೆಸಿದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ , ರಾಜ್ಯ ಕಬ್ಬು ಬೆಳೆಗಾರರ ಸಂಘದ...
KSRTC ನೌಕರರ ಸಾಮಾನ್ಯ ಮರಣ ಪ್ರಕರಣಕ್ಕಿದ್ದ 10 ಲಕ್ಷ ರೂ. ಪರಿಹಾರ ಮೊತ್ತ 14 ಲಕ್ಷ ರೂ.ಗಳಿಗೆ ಏರಿಸಿ ಎಂಡಿ ಆದೇಶ
ಪರಿಷ್ಕರಿಸಿದ 14 ಲಕ್ಷ ರೂ. ಪರಿಹಾರ ಮೊತ್ತ ಸೆಪ್ಟೆಂಬರ್ 1-2025ರಿಂದ ಜಾರಿ ಬೆಂಗಳೂರು: 10 ಲಕ್ಷ ರೂ.ಗಳಿದ್ದ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ನೌಕರರ ಕುಟುಂಬ...
KSRTC- ಪ್ರತಿಷ್ಠಿತ ವಿಶ್ವ ದಾಖಲೆ ಸೇರಿದ ಶಕ್ತಿ ಯೋಜನೆ: ಅತೀವ ಸಂತಸ, ಹೆಮ್ಮೆಯ ಕ್ಷಣ- ಸಾರಿಗೆ ಸಚಿವ ರಾಮಲಿಂಗಾರೆಡ್ಡಿ
ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ ನಾಲ್ಕೂ ನಿಗಮಗಳಲ್ಲಿ 2023ರ ಜೂನ್ 11ರಿಂದ ಜಾರಿಗೆ ಬಂದ ಶಕ್ತಿ ಯೋಜನೆ ಪ್ರತಿಷ್ಠಿತ ವಿಶ್ವ ದಾಖಲೆಗೆ ಸೇರ್ಪಡೆ (Golden Book...
KKRTC ವಿಜಯಪುರ: ಸಂಸ್ಥೆ ನಿಯಮವನ್ನೇ ಗಾಳಿಗೆ ತೂರಿ ಮತ್ತೆ ಮತ್ತೆ ನೌಕರರಿಂದ ಸ್ವಂತ ಕಾರನ್ನು ಸರ್ವಿಸ್ ಮಾಡಿಸಿಕೊಳ್ಳುತ್ತಿರುವ ಡಿಎಂ
ವಿಜಯಪುರ: ಕಲ್ಯಾಣ ಕರ್ನಾಟಕ ರಸ್ತೆ ಸಾರಿಗೆ ನಿಗಮದ ಅದರಲ್ಲೂ ವಿಜಯಪುರ ವಿಭಾಗದಲ್ಲಿ ಇವರ ಬಹುತೇಕ ಎಲ್ಲ ಘಟಕ ವ್ಯವಸ್ಥಾಪಕರು ಸೇರಿದಂತೆ ವಿಭಾಗೀಯ ನಿಯಂತ್ರಣಾಧಿಕಾರಿಗಳೂ ಅಂಕುಶವಿಲ್ಲದ ಆನೆಯಂತಾಗಿದ್ದಾರೆ. ಅಂದರೆ...
ಕಾವೇರಿ ನದಿಗೆ 31,550 ಕ್ಯೂಸೆಕ್ ನೀರು ಬಿಡುಗಡೆ- ನದಿ ತಟದ ಜನರಿಗೆ ಸೂಚನೆ
ಮಂಡ್ಯ: ಕಾವೇರಿ ಜಲಾನಯನ ಪ್ರದೇಶದಲ್ಲಿ ಮತ್ತೆ ವರುಣನ ಆರ್ಭಟ ಹೆಚ್ಚಾಗಿದ್ದು ಈ ಹಿನ್ನೆಲೆ ಹಳೇ ಮೈಸೂರು ಭಾಗದ ಜೀವನಾಡಿ ಕೆಆರ್ಎಸ್ ಡ್ಯಾಂಗೆ ಒಳಹರಿವು ಹೆಚ್ಚಾಗುತ್ತಿದೆ. ಹೀಗಾಗಿ ನದಿ...