NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಅಂಬಾರಿ ಉತ್ಸವ ಹೆಸರಿನ ಮಲ್ಟಿ ಆಕ್ಸೆಸ್ ಬಸ್‌ಗಳಿಗೆ ಸಿಎಂ ಚಾಲನೆ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮವು ಒಟ್ಟು 50 ವೋಲ್ವೋ ಕಂಪನಿಯ 9600S ಮಲ್ಟಿ ಆಕ್ಸೆಸ್ ಬಸ್​ಗಳನ್ನು ಖರೀದಿ ಮಾಡಿದೆ. ಸದ್ಯ ಆ ಪೈಕಿ 20 ಬಸ್​ಗಳಿಗೆ ಇಂದು ಚಾಲನೆ ನೀಡಲಾಗಿದೆ.

ಇಂದು ವಿಧಾನಸೌಧದ ಮುಂಭಾಗ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಸಿರು ನಿಶಾನೆ ತೋರಿಸುವ ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ನಿಗಮದ ಅಧ್ಯಕ್ಷ ಚಂದ್ರಪ್ಪ, ಈ ಮೂಲಕ ನಿಗಮವು ತನ್ನ ಪ್ರಯಾಣಿಕರಿಗೆ ಸಿಹಿ ಸುದ್ದಿ ನೀಡಿದ್ದು, ಭಾರತದಲ್ಲೇ ಮೊದಲ ಬಾರಿಗೆ ಅತ್ಯಾಧುನಿಕ ಹೈಟೆಕ್ ಬಸ್ ಸೇವೆಯನ್ನು ನಾಡಿನ ಜನತೆಗೆ ಪರಿಚಯಿಸಿದೆ ಎಂದರು.

ಇನ್ನು ಸದ್ಯ ಈ ಪೈಕಿ 20 ಬಸ್​ಗಳಿಗೆ ಇಂದು (ಫೆ. 21) ಚಾಲನೆ ನೀಡಲಾಗಿದ್ದು ಮುಂದಿನ ಡಿಸೆಂಬರ್ ವೇಳೆಗೆ ಉಳಿದ 30 ಬಸ್​ಗಳಿಗೆ ಚಾಲನೆ ನೀಡಲಾಗುವುದು ಎಂದು ತಿಳಿಸಿದರು.

ನಮ್ಮ ಸಂಸ್ಥೆ ಆರಂಭಿಸಿರುವ ಈ ಅತ್ಯಾಧುನಿಕ ಹೈಟೆಕ್ ಒಂದು ಬಸ್​ನ ಬೆಲೆ 1.70 ಕೋಟಿ ರೂ.ಗಳು! ವೋಲ್ವೋ ಕಂಪನಿ ತಯಾರಿಸಿರುವ ಈ ಬಸ್ ಇಡೀ ಭಾರತದಲ್ಲಿ ಯಾವ ಸರ್ಕಾರಿ, ಖಾಸಗಿ ನಿಗಮಗಳಲ್ಲಿಯೂ ಬಳಕೆಯಲ್ಲಿಲ್ಲ ಎಂಬುದು ವಿಶೇಷ ಎಂದು ವಿವರಿಸಿದರು.

ಈ ಹೊಸ ಬಸ್‌ಗಳಿಗೆ ನಿಗಮದಲ್ಲಿ ಅಂಬಾರಿ ಉತ್ಸವ ಎಂದು ಹೆಸರು ಇಡಲಾಗಿದೆ. 40 ಆಸನಗಳುಳ್ಳ ಪ್ರಯಾಣಿಕರು ಮಲಗುವ ಮತ್ತು ಕುಳಿತುಕೊಳ್ಳುವ ಬೆಸ್ಟ್ ಇನ್ ಕ್ಲಾಸ್ ಹೆಡ್ ರೂಮ್ ಸೌಲಭ್ಯದ ಬಸ್ ಇದಾಗಿದೆ. ಪಿಯು ಫೋಮ್ ಸ್ಲೀಪರ್ ಆಸನ ಜತೆಗೆ ಬ್ಯಾಕ್ ರೆಸ್ಟ್ ಪ್ರೀಮಿಯಂ ದರ್ಜೆಯ ಅಂಬಾರಿ ಉತ್ಸವ ವಾಹನವೇ ಆಗಿದೆ ಎಂದರೆ ತಪ್ಪಾಗಲ್ಲ ಎಂದು ತಿಳಿಸಿದರು.

ರೈಲು ಮಾದರಿಯಲ್ಲಿಯೇ ಬಸ್ಸಿನ ಒಳಭಾಗದಲ್ಲಿ ಸೌಲಭ್ಯ ಕಲ್ಪಿಸಲಾಗಿದೆ. ಈ ಬಸ್‌ಗಳು ದೂರ ಪ್ರಯಾಣಕ್ಕೆ ಬಹಳ ಅನುಕೂಲವಾಗಲಿದೆ. ಪ್ರಯಾಣಿಕರಿಗೆ ಆರಾಮದಾಯಕ ಅನುಭವ ಬಸ್ಸಿನಲ್ಲಿ ಸಿಗಲಿದೆ. ಈ ಬಸ್ಸುಗಳಿಗೆ ಪಡೆ ಅಂತ ನಾನು ಕರೆಯುತ್ತೇನೆ “ಎಂದು ಈ ಬಸ್​ಗಳಿಗೆ ಲೋಕಾರ್ಪಣೆ ಮಾಡಿದ ಸಿಎಂ ಬಸವರಾಜ ಬೊಮ್ಮಾಯಿ ವ್ಯಾಖ್ಯಾನಿಸಿದ್ದಾರೆ.

ಬರ್ತ್ ಕ್ಯೂಬಿಕಲ್ ಇಂಟಿಗ್ರೇಟೆಡ್ ಪರಿಕರ, ರೀಡಿಂಗ್ ಲೈಟ್ಸ್, ಏರ್ ವೆಂಟ್ಸ್, USB ಪೋರ್ಟ್, ಮೊಬೈಲ್ ಹೋಲ್ಡರ್ ಸೇರಿ ಪ್ರಯಾಣಿಕರಿಗೆ ಹಲವು ಸೌಲಭ್ಯಗಳನ್ನು ಈ ಅಂಬಾರಿ ಉತ್ಸವ ಬಸ್ ಒಳಗೊಂಡಿದೆ. ಜತೆಗೆ 12 ಸ್ಪೀಡ್ ಐ ಶಿಫ್ಟ್ ಮೆಕ್ಯಾನಿಕಲ್ ಗೇರ್ ಬಾಕ್ಸ್, ಅಡ್ವಾನ್ಸ್ ಇಂಟೆಲಿಜೆಂಟ್ ಶಿಫ್ಟಿಂಗ್ ತಂತ್ರಜ್ಞಾನ, 9600s ಮಾದರಿಯಲ್ಲಿ ಕವಚ ಜತೆಗೆ ಸುಧಾರಿತ ಅಬ್ಸರ್ವರ್ ಸಹ ಅಂಬಾರಿ ಉತ್ಸವ ಬಸ್​ಗಳಿಗೆ ಇರಲಿದೆ ಎಂದು ತಿಳಿಸಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ