CrimeNEWSನಮ್ಮಜಿಲ್ಲೆ

KSRTC ಓವರ್‌ ಟೇಕ್‌ ಮಾಡುವ ವೇಳೆ ಎರಡು ಬಸ್‌ಗಳ ನಡುವೆ ಭೀಕರ ಅಪಘಾತ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಎರಡು ಬಸ್‌ಗಳ ನಡುವೆ ಓವರ್​ ಟೇಕ್ ಮಾಡುವಾಗ ಘರ್ಷಣೆ ಸಂಭಿಸಿದ ಪರಿಣಾಮ ಭೀಕರ ಅಪಘಾತ ಸಂಭವಿಸಿದ ಘಟನೆ ತುಮಕೂರು ರಾಷ್ಟ್ರೀಯ ಹೆದ್ದಾರಿಯ ಮಾದಾವರದ ಬಳಿ ಇಂದು ಮುಂಜಾನೆ ನಡೆದಿದೆ.

ಅದೃಷ್ಟವಶಾತ್ ಯಾವುದೇ ಪ್ರಾಣಾಪಾಯ ಸಂಭವಿಸದೆ ಎಲ್ಲ ಪ್ರಯಾಣಿಕರು ಪಾರಾಗಿದ್ದಾರೆ. ಮಾದಾವರದ ಹೆದ್ದಾರಿಯಲ್ಲಿ ಒಂದು ‌ಕೆಎಸ್​ಆರ್​‌ಟಿಸಿ ಬಸ್ ಅನ್ನು, ಇನ್ನೊಂದು ಬಸ್​ ಓವರ್ ಟೇಕ್ ಮಾಡುತ್ತಿತ್ತು. ಆಗ ಎರಡು ಬಸ್​ಗಳ ನಡುವೆ ಭಯಾನಕ ಅಪಘಾತವಾಗಿದೆ. ಇದರಿಂದ ಎರಡು ಬಸ್​ಗಳು ಮೇಲು ಸೇತುವೆಯ ಡಿವೈಡರ್​​ಗೆ ಡಿಕ್ಕಿ ಹೊಡೆದು ಹೆದ್ದಾರಿಗೆ ಅಡ್ಡವಾಗಿ ನಿಂತಿವೆ.

ಈ ಅವಘಡದಿಂದ ಬೇರೆ ವಾಹನಗಳು ಹೆದ್ದಾರಿಯಲ್ಲಿ ಚಲಿಸದಂತೆ ಆಗಿದ್ದು ಟ್ರಾಫಿಕ್ ಜಾಮ್ ಉಂಟಾಗಿದೆ. ಪ್ರಯಾಣಿಕರು ತೊಂದರೆ ಅನುಭವಿಸುತ್ತಿದ್ದಾರೆ. ಇಂದು ಭಾನುವಾರವಾದ್ದರಿಂದ ತೀರ್ಥ ಕ್ಷೇತ್ರಕ್ಕೆ, ದೇವಾಲಯಗಳಿಗೆ ಹೋಗುತ್ತಿದ್ದ ಸವಾರರು, ಪ್ರಯಾಣಿಕರಿಗೆ ಬಸ್​ಗಳ ಅಪಘಾತದಿಂದ ಟ್ರಾಫಿಕ್ ಬಿಸಿ ತಟ್ಟಿದೆ‌.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು