CrimeNEWSನಮ್ಮಜಿಲ್ಲೆ

KSRTC ತುಮಕೂರು: ಎರಡು ಬಸ್‌ಗಳ ನಡುವೆ ಸಿಲುಕಿ ಗೊರವನಹಳ್ಳಿ ಲಕ್ಷ್ಮೀ ದೇವಸ್ಥಾನಕ್ಕೆ ಹೋಗುತ್ತಿದ್ದ ಮಂಡ್ಯ ಜಿಲ್ಲೆಯ ಇಬ್ಬರು ಮಹಿಳೆಯರು ಮೃತ

ಸೆ.15ರ ಬೆಳಗ್ಗೆ 10 ಗಂಟೆ ಸುಮಾರಿಗೆ ನಡೆದ ಘಟನೆ

ವಿಜಯಪಥ ಸಮಗ್ರ ಸುದ್ದಿ

ತುಮಕೂರು: ಗೊರವನಹಳ್ಳಿ ಲಕ್ಷ್ಮೀ ದೇವಸ್ಥಾನಕ್ಕೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ಮಹಿಳೆಯರಿಬ್ಬರು ಎರಡು ಬಸ್‌ ನಡುವೆ ಸಿಲುಕಿ ಮೃತಪಟ್ಟಿರುವ ಘಟನೆ ತುಮಕೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಇಂದು ಬೆಳಗ್ಗೆ ಜರುಗಿದೆ.

ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕಿನ ಕೆ.ಶೆಟ್ಟಿಹಳ್ಳಿ ಗ್ರಾಮದ ಪುಟ್ಟತಾಯಮ್ಮ ಹಾಗೂ ಪಂಕಜ ಎಂಬುವರು ಮೃತಪಟ್ಟವರು.

ತುಮಕೂರು ಜಿಲ್ಲೆ ಕೊರಟಗೆರೆ ತಾಲೂಕಿನ ಗೊರವನಹಳ್ಳಿ ಗ್ರಾಮದ ಲಕ್ಷ್ಮೀ ದೇವಸ್ಥಾನಕ್ಕೆ ತೆರಳಲು ಕೆ.ಶೆಟ್ಟಿಹಳ್ಳಿ ಗ್ರಾಮದ ರೇಣುಕಾ, ಅನುಸೂಯ, ಪುಷ್ಪ, ಮಂಜಮ್ಮ, ಪುಟ್ಟತಾಯಮ್ಮ ಹಾಗೂ ಪಂಕಜ ಈ ಆರು ಮಹಿಳೆಯರು ಇಂದು ಸೆ.15ರ ಬೆಳಗ್ಗೆ 10 ಸುಮಾರಿಗೆ  ಆಗಮಿಸಿದ್ದು ತುಮಕೂರಿನ ಕೆಎಸ್ಆರ್ಟಿಸಿ ಬಸ್ ನಿಲ್ದಾಣದಲ್ಲಿ ಗೊರವನಹಳ್ಳಿಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದರು.

ಬಸ್ ನಿಲ್ದಾಣಕ್ಕೆ ಬಂದ ಕೂಡಲೇ ಬಸ್ ಹತ್ತಲು ಮುಂದಾದಾಗ ಬಸ್ ಏಕಾಏಕಿ ಹಿಂದಕ್ಕೆ ಚಲಿಸಿದ್ದು ಎರಡು ಬಸ್‌ಗಳ ನಡುವೆ ಸಿಲುಕಿದ ಪುಟ್ಟತಾಯಮ್ಮ ಹಾಗೂ ಪಂಕಜ ಈ ಇಬ್ಬರು ಮಹಿಳೆಯರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.

ಇವರ ಜತೆಯಲ್ಲಿದ್ದ ಇನ್ನು ನಾಲ್ವರು ಮಹಿಳೆಯರಾದ ರೇಣುಕಾ ಅನುಸೂಯ ಪುಷ್ಪ ಹಾಗೂ ಮಂಜಮ್ಮ ಎಂಬುವವರು ಯಾವುದೇ ಗಾಯಗಳಿಲ್ಲದೆ ಪಾರಾಗಿದ್ದಾರೆ. ಘಟನೆ ನಡೆದ ಕೂಡಲೇ ಕೆಎಸ್ಆರ್ಟಿಸಿ ಬಸ್ ಚಾಲಕ ಸ್ಥಳದಿಂದ ಪರಾರಿಯಾಗಿದ್ದಾನೆ. ಮೃತ ಮಹಿಳೆಯರ ಶವಗಳನ್ನು ತುಮಕೂರಿನ ಜಿಲ್ಲಾಸ್ಪತ್ರೆಗೆ ರವಾನಿಸಲಾಗಿದೆ.

ಇನ್ನು ಸ್ಥಳದಲ್ಲಿದ್ದ ಮೃತ ಮಹಿಳೆಯರ ಕುಟುಂಬಸ್ಥರು ಹಾಗೂ ಸ್ನೇಹಿತರ ಆಕ್ರಂದನ ಮುಗಿಲು ಮುಟ್ಟುವಂತಿತ್ತು.

ಫ್ರೀ ಬಸ್ ಎಂದು ದೇವಸ್ಥಾನಕ್ಕೆ ಬಂದಿದ್ದ ಮಹಿಳೆಯರು: ರಾಜ್ಯ ಸರ್ಕಾರದ ಮಹತ್ವಕಾಂಕ್ಷಿ ಯೋಜನೆಗಳಲ್ಲಿ ಒಂದಾದ ಮಹಿಳೆಯರಿಗಾಗಿ ಉಚಿತ ಬಸ್ ಪ್ರಯಾಣ ಜಾರಿ ಬಳಿಕ ಇದೇ ಮೊದಲ ಬಾರಿಗೆ ಬಸ್‌ನಲ್ಲಿ ದೇವಸ್ಥಾನಕ್ಕಾಗಿ ತೆರಳಿದ್ದ ಮಹಿಳೆಯರು ಧಾರುಣವಾಗಿ ಮೃತಪಟ್ಟಿರುವುದು ನಿಜಕ್ಕೂ ದುಃಖದ ಸಂಗತಿ.

ಈ ವೇಳೆ ಪ್ರತಿಕ್ರಿಯೆ ನೀಡಿರುವ ಜತೆಯಲ್ಲಿ ದೇವಸ್ಥಾನಕ್ಕೆ ಹೊರಟ್ಟಿದ್ದ ಪುಷ್ಪ ಎಂಬುವವರು ಇದೇ ಮೊದಲ ಬಾರಿಗೆ ಫ್ರೀ ಬಸ್ ಎಂದು ದೇವಸ್ಥಾನಕ್ಕಾಗಿ ಬಂದಿದ್ದವು. ಈ ಸಂದರ್ಭದಲ್ಲಿ ಇಂತಹ ಘಟನೆ ನಡೆದುಹೋಗಿದೆ ಎಂದು ದುಃಖದಲ್ಲೇ ಹೇಳಿದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು