NEWSನಮ್ಮರಾಜ್ಯಬೆಂಗಳೂರು

KSRTC -ನೌಕರರ ಹಿಂಬಾಕಿ ಯಾವಾಗಿಂದ ಎಂಬುವುದು ಒನ್‌ ಮ್ಯಾನ್‌ ಕಮಿಟಿ ಸಭೆಯಲ್ಲೇ ನಿರ್ಧಾರ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ರಾಜ್ಯದ ನಾಲ್ಕೂ ರಸ್ತೆ ಸಾರಿಗೆ ನಿಗಮಗಳ ನೌಕರರ/ ಅಧಿಕಾರಿಗಳು (ಪೂರ್ವ ಕಿಂಕೋ ನೌಕರರ/ ಅಧಿಕಾರಿಗಳು ಸೇರಿದಂತೆ) 31.12.2019 ರಂದು ಪಡೆಯುತ್ತಿದ್ದ ಮೂಲ ವೇತನಕ್ಕೆ ಶೇ.15 ರಷ್ಟು ಹೆಚ್ಚಿಸಿ, ಅದರಂತೆ ವೇತನ ಶ್ರೇಣಿ ಪರಿಷ್ಕರಿಸಿ, 01.03.2023 ರಿಂದ ಜಾರಿಗೊಳಿಸಲು ರಾಜ್ಯ ಸರ್ಕಾರವು 17.03.2023ರಂದು ಆದೇಶಿಸಿದೆ.

ಆದರೆ, 2020ರ ಜನವರಿ 1ರಿಂದ ವೇತನ ಪರಿಷ್ಕರಣೆ ಆಗಬೇಕಿದೆ. ಹೀಗಾಗಿ 2020ರ ಜನವರಿ 1ರಿಂದಲೇ ಹಿಂಬಾಕಿ ( Arrears) ಕೊಡುವ ಸಂಬಂಧ ಇನ್ನು ಯಾವುದೇ ತೀರ್ಮಾನವಾಗಿಲ್ಲ. ಕಾರಣ ಈ ಸಂಬಂಧ ಸಾರಿಗೆ ಅಧಿಕಾರಿಗಳು, ಸರ್ಕಾರದ ಅಧಿಕಾರಿಗಳು, ನೌಕರರ ಸಂಘಟನೆಗಳು ಹಾಗೂ ನ್ಯಾಯಾಲಯದ ಅಧಿಕಾರಿಗಳು ಒನ್‌ ಮ್ಯಾನ್‌ ಕಮಿಟಿ ಅಧ್ಯಕ್ಷ ನಿವೃತ್ತ ಐಎಎಸ್‌ಅಧಿಕಾರಿ ಎಂ.ಆರ್‌.ಶ್ರೀನಿವಾಸ್‌ಮೂರ್ತಿ ಅವರ ನೇತೃತ್ವದಲ್ಲಿ ಸಭೆ ನಡೆಸಿ ಅದರಲ್ಲಿ ತೀರ್ಮಾನ ತೆಗೆದುಕೊಂಡ ಬಳಿಕ ಹಿಂಬಾಕಿಯ ಬಗ್ಗೆ ಸ್ಪಷ್ಟತೆ ಸಿಗಲಿದೆ.

ಇನ್ನು ಸರ್ಕಾರ ಈ ಬಗ್ಗೆ ಕಳೆದ ಮಾರ್ಚ್‌17ರಂದು ಶೇ.15ರಷ್ಟು ವೇತನ ಹೆಚ್ಚಳದ ಆದೇಶ ಹೊರಡಿಸಿದ ಸಂದರ್ಭದಲ್ಲೇ ಒಂದು ತಿಂಗಳ ಒಳಗಾಗಿ ಈ ಎಲ್ಲ ಅಧಿಕಾರಿಗಳು ಸಭೆ ಸೇರಿ ಹಿಂಬಾಕಿಯನ್ನು ಯಾವಾಗಿನಿಂದ ಕೊಡಬೇಕು ಎಂಬ ಬಗ್ಗೆ ನಿರ್ಧಾರ ತೆಗೆದುಕೊಳ್ಳಬೇಕು ಎಂದು ಸ್ಪಷ್ಟ ಪಡಿಸಿದೆ.

ಈ ಹಿನ್ನೆಲೆಯಲ್ಲಿ ಸಾರಿಗೆ ಅಧಿಕಾರಿಗಳು ಮತ್ತು ನೌಕರರಿಗೆ ಯಾವಾಗಿನಿಂದ ವೇತನದ ಹಿಂಬಾಕಿ ಕೊಡಬೇಕು ಎಂಬುವುದು ಇನ್ನು ಅಂತಿಮ ತೀರ್ಮಾನವಾಗಿಲ್ಲ. ಆದರೆ, ಈ ಬಗ್ಗೆ ನೌಕರರಲ್ಲಿ ಹಲವು ರೀತಿಯ ಗೊಂದಲಗಳಿದ್ದು, ಈ ಗೊಂದಲಗಳನ್ನು ನಿವಾಸರಿಸುವ ಸಲುವಾಗಿ ವಿಜಯಪಥ ಸಂಬಂಧಪಟ್ಟ ಅಧಿಕಾರಿಗಳನ್ನು ಭೇಟಿ ಮಾಡುವ ಮೂಲಕ ಸ್ಪಷ್ಟ ಮಾಹಿತಿ ಪಡೆದು ಅದನ್ನು ನೌಕರರಿಗೆ ತಲುಪಿಸುವ ಕೆಲಸ ಮಾಡುವ ಮೂಲಕ ಅವರ ಗೊಂದಲಗಳನ್ನು ನಿವಾರಿಸಲು ಪ್ರಯತ್ನಿಸಿದೆ.

ಮಾರ್ಚ್‌17ರಿಂದ ಒಂದು ತಿಂಗಳ ಒಳಗೆ ಒನ್‌ ಮ್ಯಾನ್‌ ಕಮಿಟಿ ಅಧ್ಯಕ್ಷರ ನೇತೃತ್ವದಲ್ಲಿ ಸಭೆ ನಡೆಸಿ ತೀರ್ಮಾನ ತೆಗೆದುಕೊಳ್ಳಬೇಕಿದೆ. ಇದಕ್ಕೆ ಇನ್ನೊಂದು ಪ್ರಮುಖ ಕಾರಣ ಏನೆಂದರೆ, ರಾಜ್ಯದಲ್ಲಿ ಕೊರೊನಾ ಬಂದಿದ್ದರಿಂದ ಸಂಸ್ಥೆಗಳು ತುಂಬ ಲಾಸ್‌ನಲ್ಲಿ ನಡೆಯುತ್ತಿದ್ದು, ಹೀಗಾಗಿ ಕಳೆದ 2020ರ ಜನವರಿ 1ರಿಂದಲೇ ಅನ್ವಯವಾಗುವಂತೆ ವೇತನದ ಹಿಂಬಾಕಿ ಕೊಡುವ ಬಗ್ಗೆ ಯಾವ ನಿರ್ಧಾರ ತೆಗೆದುಕೊಳ್ಳುತ್ತಾರೋ ಎಂಬುದು ಇನ್ನಷ್ಟೆ ತಿಳಿಯಬೇಕಿದೆ.

ಇನ್ನು ಏ.17ರೊಳಗೆ ಸಭೆ ನಡೆಯಬೇಕಿದ್ದು, ಅಂದರೆ ಈಗಾಗಲೇ ಸಭೆ ನಡೆಯಬೇಕಿತ್ತು. ಆದರೆ, ಈವರೆಗೂ ಯಾವುದೇ ಸಭೆ ನಡೆದಿಲ್ಲ. ಅಲ್ಲದೆ, ಈ ಸಭೆ ನಡೆಸುವ ಸಂಬಂಧ ಏನು ಕ್ರಮ ಕೈಗೊಳ್ಳಲಾಗಿದೆ ಮತ್ತು ಯಾವಾಗ ಸಭೆ ನಡೆಸಲಾಗುತ್ತದೆ ಎಂಬ ಬಗ್ಗೆ ತಿಳಿದು ಕೊಳ್ಳಲು ಕೆಎಸ್‌ಆರ್‌ಟಿಸಿ ವ್ಯವಸ್ಥಾಪಕ ನಿರ್ದೇಶಕ ಅನ್ಬುಕುಮಾರ್‌ ಅವರನ್ನು ವಿಜಯಪಥ ಸಂಪರ್ಕಿಸಲು ಪ್ರಯತ್ನಿಸಿತು. ಆದರೆ, ಅವರು ಫೋನ್‌ ಕಾಲ್‌ ಪಿಕ್‌ ಮಾಡಿಲ್ಲ.

ಹೀಗಾಗಿ ಸಭೆ ಯಾವಾಗ ನಡೆಸಲಾಗುತ್ತದೆ ಎಂಬ ಬಗ್ಗೆ ಇನ್ನೂ ಅಧಿಕಾರಿಗಳಿಗೆ ಸ್ಪಷ್ಟತೆ ಸಿಕ್ಕಿಲ್ಲ ಎಂದು ಹೇಳಲಾಗುತ್ತಿದೆ. ಆದರೆ, ಮೂಲಗಳ ಪ್ರಕಾರ 2020ರ ಜನವರಿ 1ರಿಂದಲೇ ವೇತನ ಹಿಂಬಾಕಿ ನೀಡದಿದ್ದರೆ ನಾವು ಕಾನೂನು ಹೋರಾಟಕ್ಕೆ ಮುಂದಾಗುತ್ತೇವೆ ಎಂದು ಕೆಲ ಅಧಿಕಾರಿಗಳು ಕೂಡ ಹೇಳುತ್ತಿದ್ದಾರೆ ಎಂದು ತಿಳಿದು ಬಂದಿದೆ.

ಒಟ್ಟಾರೆ, ಈ ಒನ್‌ ಮ್ಯಾನ್‌ ಕಮಿಟಿ ಸಭೆ ನಡೆಯುವವರೆಗೂ ಯಾವುದೇ ಹಿಂಬಾಕಿ ಕೊಡುವ ಬಗ್ಗೆ ಸ್ಪಷ್ಟತೆ ಸಿಗುವುದಿಲ್ಲ ಎಂಬುವುದು ಖಚಿತವಾಗಿದೆ. ಹೀಗಾಗಿ ನೌಕರರು ಯಾವುದೇ ಗೊಂದಲಕ್ಕೂ ಒಳಗಾಗದೆ ಸಭೆ ನಡೆಯುವವರೆಗೂ ಕಾದು ನೋಡಬೇಕಿದೆ. ಆನಂತರವಷ್ಟೆ ಹಿಂಬಾಕಿಯ ಬಗ್ಗೆ ಸ್ಪಷ್ಟ ಚಿತ್ರಣ ಸಿಗುವುದು ಎಂದು ಅಧಿಕಾರಿಗಳು ವಿಜಯಪಥಕ್ಕೆ ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು ನೀವು ಗಬಗಬನೆ ಊಟ ಮಾಡುವವರಿದ್ದೀರಾ? ಹಾಗಿದ್ದರೆ ನಿಮಗೆ ಈ ಸಮಸ್ಯೆ ಕಾಡದಿರದು! BMTC ನೌಕರರಿಗೆ ಆನ್-ಲೈನ್ ಮೂಲಕ ವೇತನ ಚೀಟಿ ಪಡೆಯುವ ವ್ಯವಸ್ಥೆ- ಜಾರಿ ಸ್ಕೂಟರ್‌ಗೆ ಕಾರು ಡಿಕ್ಕಿ- ಮೊಪೆಡ್‌ನಲ್ಲಿ ತೆರಳುತ್ತಿದ್ದ ಮಾವ-ಸೊಸೆ ದಾರುಣ ಸಾವು ಪೊಲೀಸ್‌ ಠಾಣೆ ಮೆಟ್ಟಿಲೇರಿದ ಹಿಟ್‌ ಧಾರಾವಾಹಿಗಳ ನಿರ್ದೇಶಕ, ನಿರ್ಮಾಪಕ ರಾಮ್​ಜೀ