CrimeNEWSನಮ್ಮಜಿಲ್ಲೆ

KSRTC: ಬಸ್‌ ಚಾಲನೆ ಮಾಡುತ್ತಿದ್ದಾಗಲೇ ಚಾಲಕನಿಗೆ ಹೃದಯಾಘಾತ- ಪ್ರಯಾಣಿಕರ ಪ್ರಾಣ ಉಳಿಸಿ ಜೀವ ಬಿಟ್ಟ ಡ್ರೈವರ್‌

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಬಸ್‌ ಚಾಲನೆ ಮಾಡುತ್ತಿರುವಾಗಲೇ ಎದೆ ನೋವು ಕಾಣಿಸಿದ್ದು, ಸಮಯಪ್ರಜ್ಞೆ ಮೆರೆದ ಚಾಲಕ ರಸ್ತೆ ಮಧ್ಯೆ ಬಸ್ ನಿಲ್ಲಿಸಿ ಪ್ರಯಾಣಿಕರ ಪ್ರಾಣ ಉಳಿಸಿ ತನ್ನ ಜೀವವನ್ನು ಬಿಟ್ಟಿರುವ ಘಟನೆ ಮೂಡಿಗೆರೆ ತಾಲೂಕಿನ ಹೆಸ್ಗೋಡ್ ಗ್ರಾಮದ ಬಳಿ ನಡೆದಿದೆ.

ಕರ್ನಾಟಕ ರಾಜ್ಯ ರಸ್ತೆ ಸಾರಿಹೆ ಸಂಸ್ಥೆಯ ಬಸ್​ ಚಾಲಕ ರವಿ ಲಮಾಣಿ (46) ಎಂಬುವರೆ ಹೃದಯಾಘಾತದಿಂದ ಕೊನೆಯುಸಿರೆಳೆದವರು ಇವರು ಕೊಪ್ಪಳದ ಕುಕನೂರು ಗ್ರಾಮದ ನಿವಾಸಿಯಾಗಿದ್ದರು.

ಬಸ್ ಚಾಲನೆ ಮಾಡಿಕೊಂಡು ಮೂಡಿಗೆರೆ, ಗುತ್ತಿಹಳ್ಳಿ ಮಾರ್ಗವಾಗಿ ಹೆಸ್ಗೋಡ್ ಗ್ರಾಮಕ್ಕೆ ಹೋಗುವ ದಾರಿ ಮಧ್ಯೆ ಚಾಲಕನಿಗೆ ಎದೆ ನೋವು ಕಾಣಿಸಿಕೊಂಡಿದೆ. ಇದರಿಂದಾಗಿ ಹೆಸ್ಗೋಡ್ ಗ್ರಾಮದ ಬಳಿಯ ರಸ್ತೆ ಮಧ್ಯೆದಲ್ಲೇ ಬಸ್​ ನಿಲ್ಲಿಸಿದ್ದಾರೆ.

ಬಸ್‌ನಲ್ಲಿದ್ದ ಪ್ರಯಾಣಿಕರು, ಸ್ಥಳೀಯರು ಕೂಡಲೇ ಚಾಲಕ ರವಿ ಲಮಾಣಿ ಅವರನ್ನು ಆಸ್ಪತ್ರೆಗೆ ಕರೆದೊಯ್ಯಲು ಮುಂದಾಗಿದ್ದಾರೆ. ಆದರೆ ಅಷ್ಟರಲ್ಲಾಗಲೇ ಅವರ ಪ್ರಾಣಪಕ್ಷಿ ಹಾರಿಹೋಗಿತ್ತು.

ಹಲವಾರು ಪ್ರಯಾಣಿಕರ ಪ್ರಾಣ ಉಳಿಸಿ ಜೀವಬಿಟ್ಟ ಚಾಲಕ ರವಿ ನಿಜವಾಗಲು ಪ್ರಯಾಣಿಕರ ಪಾಲಿನ ದೇವರಾಗಿದ್ದಾರೆ. ಇವರ ಬಗ್ಗೆ ನಾವು ದುಃಖ ವ್ಯಕ್ತಪಡಿಸಬೇಕೋ ಇಲ್ಲ ದೇವರಾದ ರವಿ ಎಂದು ಕೈ ಮುಗಿಯಬೇಕೋ ಗೊತ್ತಾಗುತ್ತಿಲ್ಲ ಎಂದು ಬಸ್‌ನಲ್ಲಿದ್ದ ಕೆಲ ಪ್ರಯಾಣಿಕರು ಮಾತನಾಡಿಕೊಳ್ಳುತ್ತಿದ್ದರು.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು