NEWSನಮ್ಮಜಿಲ್ಲೆನಮ್ಮರಾಜ್ಯ

KSRTC: ವೇತನ ಹೆಚ್ಚಳ ಸಂಬಂಧ ಹೈ ಕೋರ್ಟ್‌ನಲ್ಲಿ ಜ.30ರೊಳಗೆ ಅರ್ಜಿ ಸಲ್ಲಿಕೆ -ವಕೀಲ ಶಿವರಾಜು

H B Shivaraju, Advocate.
ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆಯ 4 ನಿಗಮಗಳಲ್ಲೂ ಕಳೆದ ಮೂರು ವರ್ಷದಿಂದ ವೇತನ ಪರಿಷ್ಕರಣೆ ಆಗದಿರುವುದನ್ನು ಪ್ರಶ್ನಿಸಿ ಹೈ ಕೋರ್ಟ್‌ನಲ್ಲಿ ಅತೀ ಶೀಘ್ರದಲ್ಲೇ ಅರ್ಜಿಸಲ್ಲಿಸಲಿದ್ದಾರೆ ಸುಪ್ರೀಂ ಕೋರ್ಟ್‌ ಮತ್ತು ಹೈ ಕೋರ್ಟ್‌ ವಕೀಲರಾದ ಎಚ್‌.ಬಿ. ಶಿವರಾಜು ಅವರು.

ಕಳೆದ 2020ರ ಜನವರಿ 1ರಿಂದ ಅಂದರೆ ಸರಿ ಸುಮಾರು 3ವರ್ಷ ಒಂದು ತಿಂಗಳ ಹಿಂದೆಯೇ ನಾಲ್ಕೂ ನಿಗಮಗಳಲ್ಲೂ ವೇತನ ಪರಿಷ್ಕರಣೆ ಆಗಬೇಕಿತ್ತು. ಆದರೆ ಈವರೆಗೂ ಆಗಿಲ್ಲ. ಹೀಗಾಗಿ ಅಧಿಕಾರಿಗಳು ಮತ್ತು ನೌಕರರು ಕಳೆದ ಮೂರು ವರ್ಷದಿಂದಲೂ ವೇತನ ಹೆಚ್ಚಳವಿಲ್ಲದೆ ದುಡಿಯುತ್ತಿದ್ದಾರೆ.

ಕಳೆದ ಮೂರು ವರ್ಷದ ಹಿಂದೆಯೇ ಆಗಬೇಕಿರುವ ವೇತನ ಪರಿಷ್ಕರಣೆ ಇನ್ನೂ ಆಗಿಲ್ಲ. ಹೀಗಾಗಿ ಈ ಬಗ್ಗೆ ಅರ್ಜಿ ಸಲ್ಲಿಸಲಾಗುವುದು ಎಂದು ವಕೀಲರಾದ ಶಿವರಾಜು ತಿಳಿಸಿದ್ದಾರೆ.

ಇನ್ನು ವೇತನ ಸೇರಿದಂತೆ ನೌಕರರಿಗೆ ನಿಗಮಗಳಲ್ಲಿ ಆಗುತ್ತಿರುವ ಅನೇಕ ಸಮಸ್ಯೆಗಳನ್ನು ಈ ಅರ್ಜಿ ಒಳಗೊಂಡಿದ್ದು, ಆ ಎಲ್ಲ ಜ್ವಲಂತ ಸಮಸ್ಯೆಗಳ ಬಗ್ಗೆ ಅರ್ಜಿಸಲ್ಲಿಸಲಾಗುವುದು.

ಇನ್ನು ಈವರೆಗೂ ವೇತನ ಪರಿಷ್ಕರಣೆ ಸಂಬಂಧ ಹೈ ಕೋರ್ಟ್‌ನಲ್ಲಿ ಅರ್ಜಿ ಹಾಕದೆ ಇರುವುದಕ್ಕೆ ಪ್ರಮುಖ ಕಾರಣ ನೌಕರರು ಮತ್ತು ಕೆಲ ಸಂಘಟನೆಗಳ ಮುಖಂಡರು ಸರ್ಕಾರ ಮತ್ತು ಆಡಳಿತ ಮಂಡಳಿಯೊಂದಿಗೆ ನಾವು ಮಾತನಾಡುತ್ತಿದ್ದೇವೆ. ಹೀಗಾಗಿ ಸದ್ಯ ನೀವು ಕೋರ್ಟ್‌ ಮೆಟ್ಟಿಲೇರಬೇಡಿ ಎಂದು ಮನವಿ ಮಾಡಿದ್ದರು. ಹೀಗಾಗಿ  ವಿಳಂಬವಾಗಿದೆ ಎಂದು ತಿಳಿಸಿದರು.

ಆದರೆ, ನೌಕರರ ಮತ್ತು ಸಂಘಟನೆಗಳ ಮನವಿಗೆ ಸರ್ಕಾರವಾಗಲೀ ಅಥವಾ ಆಡಳಿತ ಮಂಡಳಿಯಾಗಲೀ ಸ್ಪಂದಿಸಿದಂತೆ ಕಾಣುತ್ತಿಲ್ಲ. ಹೀಗಾಗಿ ಇದೇ ಜ.30ರ ಒಳಗೆ ನೌಕರರಿಗೆ ಸರ್ಕಾರದಿಂದ ಸಿಹಿ ಸುದ್ದಿ ಬರದಿದ್ದರೆ ನಾವು ಜ.30ರೊಳಗೇ ಹೈ ಕೋರ್ಟ್‌ನಲ್ಲಿ ವೇತನ ಹೆಚ್ಚಳ ಸಂಬಂಧ ಅರ್ಜಿಸಲ್ಲಿಸುತ್ತಿದ್ದೇವೆ ಎಂದು ತಿಳಿಸಿದರು.

ಇನ್ನು ಕೋರ್ಟ್‌ನಲ್ಲಿ ವಕಾಲತ್ತು ವಹಿಸಿ ವಾದ ಮಾಡುವ ಕುರಿತು ನುರಿತ ಹಿರಿಯ ವಕೀಲರ ತಂಡವು ಸಜ್ಜಾಗಿದ್ದು, ಈ ಸಂಬಂಧ ಈಗಾಗಲೇ ಹಲವಾರು ಸುತ್ತಿನ ಮಾತುಕತೆಗಳು ನಡೆದಿವೆ. ಇನ್ನೇನಿದ್ದರು ಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿ ಸಾಧ್ಯವಾದಷ್ಟು ಬೇಗ ನೌಕರರಿಗೆ ಕಳೆದ ಮೂರು ವರ್ಷದಿಂದಲೂ ವೇತನ ಹೆಚ್ಚಳವಾಗದೆ ನನೆಗುದಿಗೆ ಬಿದ್ದಿರುವುದನ್ನು ತೆರವುಗೊಳಿಸಲು ಶ್ರಮಿಸಲಾಗುವುದು ಎಂದು ತಿಳಿಸಿದ್ದಾರೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ನಾನು ಕಾದು ಕುಳಿತಿದ್ದರೂ ಬಸ್‌ ನಿಲ್ಲಿಸಿಲ್ಲ - ಚಾಲಕ, ಕಂಡಕ್ಟರ್‌ ತಿಂಗಳ ಸಂಬಳ ನನಗೆ ನಷ್ಟಪರಿಹಾರ ಕೊಡಿ: ವಕೀಲನ ಒತ್ತ... ಕೆಎಂಎಫ್ ಸಿಬ್ಬಂದಿಗೆ 7ನೇ ವೇತನ ಆಯೋಗ ಜಾರಿ- 2024ರ ಆ.1ರಿಂದಲೇ ಪೂರ್ವಾನ್ವಯ KSRTC ಏಕಸ್ವಾಮ್ಯಕ್ಕೆ ಮೂಗುದಾರ ಹಾಕಿ- ಸರ್ಕಾರದ ಕಾಯ್ದೆ ಸರಿ ಎಂದ ಕೋರ್ಟ್ ಸ್ಮಶಾನ ಜಾಗ ಭೂಗಳ್ಳನಿಗೆ ಬಿಟ್ಟುಕೊಡಲು ಟಿಪ್ಪಣಿ ಮಂಡಿಸಿರುವ ಭ್ರಷ್ಟ ಅಧಿಕಾರಿಗಳು: ಎನ್.ಆರ್.ರಮೇಶ್ ಆರೋಪ ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ