CrimeNEWSನಮ್ಮರಾಜ್ಯ

KSRTC ಸಿಬ್ಬಂದಿಯಿಂದಲೇ ಡಿಸಿಗೆ ಇರಿಯಲು ಯತ್ನ- ಕೈ ಅಡ್ಡಹಾಕಿ ಪ್ರಾಣಾಪಾಯದಿಂದ ಪಾರಾದ ಜಗದೀಶ್ ಕುಮಾರ್‌

ವಿಜಯಪಥ ಸಮಗ್ರ ಸುದ್ದಿ

ಚಿಕ್ಕಮಗಳೂರು: ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ ಚಿಕ್ಕಮಗಳೂರು ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿಗೆ ಸಾರಿಗೆ ಸಿಬ್ಬಂದಿಯೇ ಚಾಕು ಇರಿಯಲು ಯತ್ನಿಸಿರುವ ಘಟನೆ ನಗರದ ಬಸ್ ನಿಲ್ದಾಣದಲ್ಲಿ ಗುರುವಾರ ನಡೆದಿದೆ.

ಚಾಕುವಿನಿಂದ ದಾಳಿ ಮಾಡಿರುವ ಸಾರಿಗೆ ಸಿಬ್ಬಂದಿಯನ್ನು ಜೂನಿಯರ್ ಅಸಿಸ್ಟೆಂಟ್ ರಿತೇಶ್ ಎಂದು ಗುರುತಿಸಲಾಗಿದೆ. ಘಟನೆಯಿಂದ ಗಾಯಗೊಂಡಿರುವ ವಿಭಾಗೀಯ ನಿಯಂತ್ರಣಾಧಿಕಾರಿ ಜಗದೀಶ್ ಕುಮಾರ್ ಆಸ್ಪತ್ರೆಗೆ ದಾಖಲಾಗಿದ್ದು, ಚಿಕಿತ್ಸೆ ಪಡೆಯುತ್ತಿದ್ದಾರೆ.

ಡಿಸಿ ಮೇಲೆ ಮಾಡಿದ ರಿತೇಶ್ ಬಳಿಕ ಸ್ಥಳದಿಂದ ಪರಾರಿಯಾಗಿರುವುದಾಗಿದ್ದಾನೆ. ಸದ್ಯ ಚಾಕುವಿನಿಂದ ದಾಳಿ ಮಾಡುತ್ತಿದ್ದಾಗ ಕೈ ಅಡ್ಡ ಕೊಟ್ಟಿದ್ದರಿಂದ ಭಾರೀ ಅನಾಹುತ ತಪ್ಪಿದ್ದು, ಜೀವಾಪಾಯದಿಂದ ಪಾರಾಗಿದ್ದಾರೆ‌. ಘಟನೆಯಿಂದಾಗಿ ಡಿಸಿ ಜಗದೀಶ್ ಕುಮಾರ್ ಅವರ ಎಡಗೈನ ಎರಡು ಬೆರಳುಗಳಿಗೆ ಗಾಯವಾಗಿದೆ.

ರಿತೇಶ್ ಹಾಜರಾತಿ ಸರಿಯಿಲ್ಲ ಎಂದು ಕುಟುಂಬವರನ್ನು ಕರೆಸಿ ಜಗದೀಶ್ ಕುಮಾರ್ ಅವರು ಕೌನ್ಸೆಲಿಂಗ್ ಮಾಡಿದ್ದರು. ಕುಟುಂಬದವರ ಮನವಿಯ ಮೇರೆಗೆ ಚಿಕ್ಕಮಗಳೂರಿನಿಂದ ಬೇಲೂರಿಗೆ ರಿತೇಶ್ ಅವರನ್ನು ವರ್ಗಾವಣೆ ಮಾಡಲಾಗಿತ್ತು. ಇದರಿಂದ ಕುಪಿತಗೊಂಡಿದ್ದ ರಿತೇಶ್, ಗುರುವಾರ ಸಂಜೆ 7.30ರ ವೇಳೆಗೆ ಚಿಕ್ಕಮಗಳೂರು ಬಸ್ ನಿಲ್ದಾಣದಲ್ಲಿ ಚಾಕುವಿನಿಂದ ಇರಿಯಲು ಯತ್ನಿಸಿದ್ದಾನೆ.

ಚಿಕ್ಕಮಗಳೂರು ಸರ್ಕಾರಿ ಬಸ್ ನಿಲ್ದಾಣದ ಒಳಗೆಯೇ ಈ ಘಟನೆ ನಡೆದಿರುವುದು ಅಧಿಕಾರಿಗಳಿಗೆ ಆಘಾತ ಉಂಟು ಮಾಡಿದೆ. ಚಾಕುವಿನಿಂದ ಹಲ್ಲೆ ನಡೆಸಿದ ಬಳಿಕ ರಿತೇಶ್ ನಾಪತ್ತೆಯಾಗಿದ್ದು, ಈ ಸಂಬಂಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು