NEWSನಮ್ಮಜಿಲ್ಲೆನಮ್ಮರಾಜ್ಯ

KSRTC ಸೇವೆ- ನಿರ್ವಹಣೆಗೆ ಮಾರುಹೋದ ಯುಪಿ ಸರ್ಕಾರ, ಅಧಿಕಾರಿಗಳ ತಂಡ ಕಳುಹಿಸಿ ಮಾಹಿತಿ ಸಂಗ್ರಹ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಎಲ್ಲೆಡೆ ಯುಪಿ ಮಾಡೆಲ್ ಎನ್ನುವ ಚರ್ಚೆಯ ನಡುವೆ ಯುಪಿಯಲ್ಲೇ ಕರ್ನಾಟಕ ಮಾಡೆಲ್‌ನ ಚಿಂತನೆ ನಡೆದಿದ್ದು ಕುತೂಹಲಮೂಡಿಸಿದೆ. ಇದಕ್ಕೆ ತಾಜಾ ನಿದರ್ಶನ ಎಂಬಂತೆ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮದ (KSRTC) ಉಪಕ್ರಮಗಳಿಗೆ ಉತ್ತರ ಪ್ರದೇಶ ಸರ್ಕಾರ ಫಿದಾ ಆಗಿದ್ದು, ಸಾಮಾನ್ಯ ಸಾರಿಗೆ ಹಾಗೂ ಪ್ರೀಮಿಯಂ ಸೇವೆಗಳೆರಡರ ನಿರ್ವಹಣೆಗೂ ಮಾರುಹೋಗಿದ್ದು ಯುಪಿ ಸರ್ಕಾರದ ಅಧಿಕಾರಿಗಳ ನಿಯೋಗವೇ KSRTC ಕಚೇರಿಗೆ ಭೇಟಿ ನೀಡಿ ಮಾಹಿತಿ ಪಡೆದುಕೊಂಡಿದೆ.

ಹೌದು! ನಿನ್ನೆ ಉತ್ತರ ಪ್ರದೇಶ ಸರ್ಕಾರದ ಹಿರಿಯ ಅಧಿಕಾರಿಗಳ ತಂಡದ ಯುಪಿಆರ್‌ಟಿಸಿ ನಿಯೋಗ KSRTC ಕೇಂದ್ರ ಕಚೇರಿಗೆ ಭೇಟಿ ನೀಡಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮಗಳ ಸೇವೆ ನಿರ್ವಾಹಣೆ ಬಗ್ಗೆ ಮಾಹಿತಿ ಸಂಗ್ರಹಿಸಿದೆ.

ಮುಖ್ಯ ಮಂತ್ರಿ ಯೋಗಿಆದಿತ್ಯ ನಾಥ್ ಅವರ ಸಲಹೆಗಾರ ಡಾ.ಕೆ.ವಿ.ರಾಜು, ಯುಪಿ ಸಾರಿಗೆ ಇಲಾಖೆ ಪ್ರಧಾನ ಕಾರ್ಯದರ್ಶಿ ಎಲ್. ವೆಂಕಟೇಶ್ವರಲು ಹಾಗೂ ಉದ್ಯಮಶೀಲತೆ ಇಲಾಖೆ ಪ್ರಧಾನ ಕಾರ್ಯದರ್ಶಿ ಡಾ.ಎಂ.ಕೆ.ಷಣ್ಮುಗ ಸುಂದರಂ ಸೇರಿದಂತೆ ಅಧಿಕಾರಿಗಳ ತಂಡವು ಶಾಂತಿನಗರದಲ್ಲಿರುವ ನಿಗಮದ ಕೇಂದ್ರ ಕಚೇರಿಗೆ ಭೇಟಿ ನೀಡಿ ನಿಗಮದಲ್ಲಿ ಅನುಷ್ಠಾನಗೊಳಿಸಿರುವ ಉಪಕ್ರಮಗಳ ಬಗ್ಗೆ ಪ್ರಾತ್ಯಕ್ಷಿಕೆಯ ಮೂಲಕ ವಿವರ ಪಡೆದರು.

ಸಾರಿಗೆ ಸಚಿವ ರಾಮಲಿಂಗಾರೆಡ್ಡಿ, KSRTC ವ್ಯವಸ್ಥಾಪಕ ನಿರ್ದೇಶಕ ವಿ.ಅನ್ಬುಕುಮಾರ್, ಯುಪಿ ನಿಯೋಗಕ್ಕೆ ಅಗತ್ಯ ಮಾಹಿತಿ ಒದಗಿಸಿದರು. ನಂತರ ತಂಡ ಬೆಂಗಳೂರು ಕೇಂದ್ರೀಯ ವಿಭಾಗದ ಘಟಕ-4ಕ್ಕೆ ಭೇಟಿ ನೀಡಿ, ನಿಗಮದ ಪ್ರತಿಷ್ಟಿತ ವಾಹನಗಳಾದ ಐರಾವತ ಕ್ಲಬ್ ಕ್ಲಾಸ್, ಅಂಬಾರಿ ಡ್ರೀಮ್ ಕ್ಲಾಸ್, ಅಂಬಾರಿ ಉತ್ಸವ ವಾಹನಗಳ ಕಾರ್ಯಾಚರಣೆ, ತಾಂತ್ರಿಕ ನಿರ್ವಹಣೆಯ ಬಗ್ಗೆ ಮಾಹಿತಿ ಹಾಗೂ ಎಲೆಕ್ಟ್ರಿಕ್ ಬಸ್‌ಗಳ ಘಟಕ ಮತ್ತು ಚಾರ್ಜಿಂಗ್ ಸ್ಟೇಷನ್‌ಗೆ ಭೇಟಿ ಕೊಟ್ಟಿತು. ಪ್ರೀಮಿಯಂ ಸೇವೆಗಳ ಉಪಕ್ರಮಗಳ ಕಾರ್ಯಾಚರಣೆ ಮತ್ತು ನಿರ್ವಹಣೆಗೆ ಮೆಚ್ಚುಗೆ ವ್ಯಕ್ತಪಡಿಸಿತು.

ಈ ಹಿಂದೆ KSRTC ಕೇಂದ್ರ ಕಚೇರಿಗೆ ಭೇಟಿ ನೀಡದ ಯುಪಿ ಅಧಿಕಾರಿಗಳ ನಿಯೋಗ ಸಚಿವ ರಾಮಲಿಂಗಾರೆಡ್ಡಿ ಜತೆ ಸಮಾಲೋಚನೆ ನಡೆಸಿ ಗ್ರಾಮೀಣ ಸಾರಿಗೆ, ನಗರ ಸಾರಿಗೆ, ವೇಗದೂತ, ರಾಜಹಂಸ, ಹವಾನಿಯಂತ್ರಣ ರಹಿತ ಸ್ಲೀಪರ್, ಎಸಿ ಸ್ಲೀಪರ್, ವೋಲ್ವೋ, ಮಲ್ಟಿ ಆಕ್ಸಲ್ ವೋಲ್ವೋ, ಮಲ್ಟಿ ಆ್ಯಕ್ಸಲ್ ಸ್ಲೀಪರ್‌ ಜತೆಗೆ ಅಂತರ್ಜಿಲ್ಲೆಗಳಿಗೆ ಎಸಿ ವಿದ್ಯುತ್ ಚಾಲಿತ ಬಸ್‌ಗಳನ್ನು ಕಾರ್ಯಾಚರಿಸುತ್ತಿರುವ ವಿವರ ಪಡೆದುಕೊಂಡಿತು.

ಇನ್ನು ಈ ಎಲ್ಲ ವಿವರಗಳ ವರದಿ ಮೆಚ್ಚಿರುವ ಉತ್ತರಪ್ರದೇಶ ಸಾರಿಗೆ ಇಲಾಖೆ KSRTC ಉಪಕ್ರಮಗಳ ಕುರಿತು ಸಿಎಂ ಯೋಗಿ ಆದಿತ್ಯನಾಥ್ ಅವರಿಗೆ ಮಾಹಿತಿ ನೀಡಿತ್ತು. ಆ ವರದಿ ಹಿನ್ನೆಲೆಯಲ್ಲಿ ಖುದ್ದು ತಮ್ಮ ಸಲಹೆಗಾರರ ನೇತೃತ್ವದ ತಂಡವನ್ನೇ ಕರ್ನಾಟಕಕ್ಕೆ ಕಳಿಸಿಕೊಟ್ಟಿರುವ ಯೋಗಿ, KSRTC ಉಪಕ್ರಮಗಳ ಬಗ್ಗೆ ಮತ್ತಷ್ಟು ವಿವರ ಪಡೆದುಕೊಂಡು ಬರುವಂತೆ ಸೂಚಿಸಿದ್ದಾರೆ. ಅದರಂತೆ ಅಧಿಕಾರಗಳ ತಂಡ ಬಂದು ಹೋದ 10 ದಿನದಲ್ಲೇ ಸಿಎಂ ಸಲಹೆಗಾರರ ನಿಯೋಗ ರಾಜ್ಯಕ್ಕೆ ಆಗಮಿಸಿ ಮಾಹಿತಿ ಪಡೆದುಕೊಂಡಿದೆ.

Leave a Reply

error: Content is protected !!

Discover more from VIJAYAPATHA.IN

Subscribe now to keep reading and get access to the full archive.

Continue reading

LATEST
ಕ್ರೀಡಾಪಟುಗಳಿಗೆ ಕೊಡುವ ಏಕಲವ್ಯ ಪ್ರಶಸ್ತಿ ಮುಂದುವರಿಸಲಿ: ಶೋಭಾ ನಾರಾಯಣ್ ಬಿಡದಿಯಿಂದ ಹೆದ್ದಾರಿಯಲ್ಲೇ ಮುಂದೆ ಬಂದರೆ ನಿಮಗೆ ಟೋಲ್‌ ಬರೆ ಗ್ಯಾರಂಟಿ ಬೆಂಗಳೂರು-ಮೈಸೂರು ಹೆದ್ದಾರಿಯಲ್ಲಿ ಹೊತ್ತಿ ಉರಿದ ಸ್ಕಾರ್ಪಿಯೋ ಕಾರು KSRTC ಕನಕಪುರ ಬಸ್‌ ನಿಲ್ದಾಣದಲ್ಲಿ ವಿಕಲ ಚೇತನರಿಂದ ₹700 ವಸೂಲಿ, ಕಂಡಕ್ಟರ್ಸ್‌ ಕೊಡಬೇಕು ₹10 : ಟಿಸಿಗೆ ಡಿಎಂ ಸಾಥ್... ಹೆಚ್ಚುವರಿ ಬಡ್ಡಿ ವಿಧಿಸುವ ನೋಂದಾಯಿತ ಲೇವಾದೇವಿಸಂಸ್ಥೆಗಳ ವಿರುದ್ಧ ದೂರು ನೀಡಿ KSRTC: 38+13 ತಿಂಗಳ ವೇತನ ಹಿಂಬಾಕಿ ಯಾವಾಗ ಬರುತ್ತದೆ ಒಕ್ಕೂಟದ ವಿರುದ್ಧ ನೌಕರರು ಕಿಡಿ BMTC: ಅಪಘಾತದಲ್ಲಿ ಮೃತಪಟ್ಟ ನೌಕರರ ಕುಟುಂಬಕ್ಕೆ ₹1 ಕೋಟಿ ಪರಿಹಾರ ಚೆಕ್‌ ವಿತರಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಸಾರಿಗೆ ನಿವೃತ್ತ ನೌಕರರಿಗೆ ಮತ್ತೊಮ್ಮೆ ಮೊಗದೊಮ್ಮೆ ನಿರಾಸೆ: ಭಾರಿ ಆಕ್ರೋಶಗೊಂಡ EPS ನಿವೃತ್ತರು ಕಾರು ಡೋರ್‌ಗೆ ಬೈಕ್‌ ಗುದ್ದಿ ಕೆಳಗೆ ಬಿದ್ದ ಮಹಿಳೆ ಮೇಲೆ ಹರಿದ ಬಿಎಂಟಿಸಿ ಬಸ್‌ ನಾಟಿ ಕೋಳಿ ಸಾರಿನ ಜತೆ ರಾಗಿಮುದ್ದೆ ನುಂಗಿದವರಿಗೆ ಗೊತ್ತು ಅದರ ಗಮ್ಮತ್ತು