CrimeNEWSನಮ್ಮಜಿಲ್ಲೆ

ತಡರಾತ್ರಿ ಮನೆಗಳ ಸರಣಿಗಳ್ಳತನ: ಹಣ, ಚಿನ್ನಾಭರಣ ಎಗರಿಸಿ ಖದೀಮರು ಪರಾರಿ

ವಿಜಯಪಥ ಸಮಗ್ರ ಸುದ್ದಿ

ಬೆಳಗಾವಿ: ಹುಕ್ಕೇರಿ ತಾಲೂಕಿನ ನರಸಿನಂಗಪೂರ ಗ್ರಾಮದಲ್ಲಿ ರಾತ್ರಿ ವೇಳೆ 6ಕ್ಕೂ ಹೆಚ್ಚು ಮನೆಗಳಲ್ಲಿ ಹಣ ಹಾಗೂ ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕದ್ದು ಕಳ್ಳರು ಪರಾರಿಯಾಗಿದ್ದು, ಇದರಿಂದ ಇಡೀ ಗ್ರಾಮವೇ ಬೆಚ್ಚಿಬಿದ್ದಿದೆ.

Loading poll ...
KSRTC ನೌಕರರಿಗೆ ಸರಿಸಮಾನ ವೇತನ OR ಅಗ್ರಿಮೆಂಟ್‌ ನಿಮ್ಮ ಆಯ್ಕೆ ಯಾವುದು?

ಪುಣೆ-ಬೆಂಗಳೂರು ರಾಷ್ಟ್ರೀಯ ಹೆದ್ದಾರಿಗೆ ನರಸಿಂಗಪೂರ ಗ್ರಾಮ ಹೊಂದಿಕೊಂಡಿದೆ. ಈ ಗ್ರಾಮದಲ್ಲಿನ ಅಂಬೇಡ್ಕರ್​ ಗಲ್ಲಿ ಹಾಗೂ ಪಾಟೀಲ ಗಲ್ಲಿಯಲ್ಲಿ ತಡರಾತ್ರಿ ಕಳ್ಳರು ಕೈಚಳಕ ತೋರಿಸಿದ್ದಾರೆ.

ಯಾರು ಇಲ್ಲದ ಮನೆಗಳನ್ನೇ ಟಾರ್ಗೆಟ್ ಮಾಡಿರುವ ಖದೀಮರು ಮೊದಲೇ ಪ್ಲಾನ್ ರೂಪಿಸಿ 6ಕ್ಕೂ ಹೆಚ್ಚು ಮನೆಗಳಿಗೆ ರಾತ್ರೋರಾತ್ರಿ ನುಗ್ಗಿ ಹಣ, ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣಗಳನ್ನು ಕಳವು ಮಾಡಿದ್ದಾರೆ. ಅಲ್ಲದೇ ಕೈಗೆ ಸಿಕ್ಕ ಬೆಲೆಬಾಳುವ ವಸ್ತುಗಳನ್ನು ಹೊತ್ತೋಯ್ದಿದ್ದಾರೆ.

ಹಣ ಆಭರಣಗಳನ್ನು ಕಳೆದುಕೊಂಡಿರುವ ಮನೆಯ ಮಾಲೀಕರು ಈಗ ಕಂಗಲಾಗಿದ್ದು ಜೀವನಕ್ಕೆ ಆಧಾರವಾಗಲಿ ಎಂದು ತೆಗೆದಿಟ್ಟಿದ್ದ ಎಲ್ಲ ವಸ್ತುಗಳನ್ನು ಕದೀಮರು ಕಳವು ಮಾಡಿ ನಮ್ಮ ಜೀವನವನ್ನು ನರಕವಾಗಿಸಿದ್ದಾರೆ ಎಂದು ಗೋಳಾಡುತ್ತಿದ್ದಾರೆ.

ಇನ್ನು ಈ ಘಟನೆಯಿಂದ ಇಡೀ ಗ್ರಾಮವೇ ಬೆಚ್ಚಿ ಬಿದ್ದಿದೆ. ಸ್ಥಳಕ್ಕೆ ಯಮಕನಮರಡಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಖದೀಮರ ಪತ್ತೆ ಬಲೆ ಬೀಸಿದ್ದಾರೆ.

Leave a Reply

error: Content is protected !!
LATEST
APSRTC ನೌಕರರು ಸಂತೋಷವಾಗಿದ್ದಾರೆ, ಕರ್ನಾಟಕದ ಸಾರಿಗೆ ನೌಕರರು ತೊಂದರೆಗೆ ಒಳಗಾಗಿದ್ದಾರೆ ಇದಕ್ಕೆ ಕಾರಣರಾರು? APSRTC ನೌಕರರಿಗೆ ಸರ್ಕಾರದಿಂದಲೇ ವೇತನ ಪಾವತಿ, 5 ತಿಂಗಳ ಫ್ಯಾಮಿಲಿ ಪಾಸ್‌, ಇನ್ನಷ್ಟು ಸೌಲಭ್ಯಗಳು ಸೇರ್ಪಡೆ BBMP: ನಗರದಲ್ಲಿ ವಿಪತ್ತು ನಿರ್ವಹಣೆಯ ನಿವಾರಣೆಗೆ ತುರ್ತು ಕ್ರಮ: ತುಷಾರ್ ಗಿರಿನಾಥ್ ಕೆಎಸ್‌ಆರ್‌ಟಿಸಿ ರಾಮನಗರ: ಹೊಸ ETM ಮಷಿನ್ ಅವಾಂತರ- ಪಾಸ್ ನಮೂದಿಸಿದರೂ ಟಿಕೆಟ್ ಬರುತ್ತದೆ ! KSRTC: ಇದು ನಿನ್ನ ಮಗುವಲ್ಲ, ಪ್ಯಾಸೆಂಜರ್‌, ಫ್ಯಾಮಿಲಿ ಎದುರೆ ಸಹೋದ್ಯೋಗಿಯ ಅವಮಾನಿಸಿದ ಕಂಡಕ್ಟರ್‌!!? ವೇತನ ಸಂಬಂಧ ಸಾರಿಗೆ  4 ನಿಗಮಗಳ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನ KKRTC ಇಂಡಿ ಘಟಕದ ಡಿಎಂ ಕರ್ಮಕಾಂಡ: 1-2ದಿನ ರಜೆಗೆ ಕೊಡಬೇಕು 2ಸಾವಿರ - ನೌಕರರ ಕಿತ್ತು ತಿನ್ನುತ್ತಿರುವ ನರರೂಪದ ರಕ್ಕಸ ವಿಜಯಪಥ: ಸಂಬಳ ಕುರಿತ KSRTC ಅಧಿಕಾರಿಗಳು/ ನೌಕರರ ಅಭಿಪ್ರಾಯ ಸಂಗ್ರಹ ಅಭಿಯಾನಕ್ಕೆ ಉತ್ತಮ ಪ್ರತಿಕ್ರಿಯೆ KSRTC ಚಾಲನಾ ಸಿಬ್ಬಂದಿ ತಮ್ಮ ಜೀವವನ್ನು ಪಣಕ್ಕಿಟ್ಟು ಸಲ್ಲಿಸುವ ಸೇವೆ ಅವಿಸ್ಮರಣೀಯ- ಶ್ರೀ ಸೌಮ್ಯನಾಥ ಸ್ವಾಮೀಜಿ ಶ್ಲಾಘ... ಬನ್ನೂರು: ಸ್ಮಶಾನ ರಸ್ತೆಗಾಗಿ ಶವವಿಟ್ಟು ಮುಖ್ಯರಸ್ತೆ ಬಂದ್‌ಮಾಡಿ ಪ್ರತಿಭಟನೆ