NEWSನಮ್ಮರಾಜ್ಯಲೇಖನಗಳು

ಸಾರಿಗೆ ಕಾರ್ಮಿಕ ಸಂಘಟನೆಗಳ ಚುನಾವಣೆ ನಡೆಸಿ: ಸಿಎಂ ಸಿದ್ದರಾಮಯ್ಯಗೆ ನೌಕರರ ಮನವಿ

ವಿಜಯಪಥ ಸಮಗ್ರ ಸುದ್ದಿ

ಬೆಂಗಳೂರು: ಸಾರಿಗೆ ನೌಕರರು ಕಳೆದ ಹತ್ತಾರು ವರ್ಷಗಳಿಂದ ಅನುಭವಿಸಿಕೊಂಡು ಬರುತ್ತಿರುವ ಸಮಸ್ಯೆಗಳಿಂದ ಆದಷ್ಟು ಮುಕ್ತಿ ಪಡೆಯಬೇಕು. ಅದಕ್ಕಾಗಿ ನೌಕರರ ಸಂಘಟನೆಗಳ ಚುನಾವಣೆ ನಡೆಸಿ ಎಂದು ಅಧಿಕಾರಕ್ಕೆ ಬಂದ ಸರ್ಕಾರಗಳನ್ನು ಒತ್ತಾಯಿಸುತ್ತಲೇ ಇದ್ದೇವೆ ಆದರೆ ಯಾವ ಸರ್ಕಾರಗಳು ಮನಸ್ಸು ಮಾಡಿಲ್ಲ ತಾವಾದರು ಈ ಬಗ್ಗೆ ಕಾಳಜಿ ವಹಿಸಿ ಎಂದು ಸಿಎಂ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ ಸಾರಿಗೆ ನೌಕರರು.

ಕಳೆದ 1994ರಿಂದೀಚೆಗೆ ಸಾರಿಗೆ ನೌಕರರ ಸಂಘಟನೆಗಳ ಚುನಾವಣೆ ನಡೆಸಲು ಏಕೋ ಸರ್ಕಾರಗಳು ಈವರೆಗೂ ಮನಸ್ಸು ಮಾಡಿಲ್ಲ. ಹೀಗಾಗಿ ಯಾವುದೇ ಸಂಘಟನೆಯ ಮುಖಂಡರಿಗೂ ಸರ್ಕಾರ ಮಟ್ಟದಲ್ಲಿ ಮತ್ತು ನಿಗಮಗಳ ಆಡಳಿತ ಮಂಡಳಿಯಲ್ಲಿ ತಮ್ಮ ಬೇಡಿಕೆಗಳನ್ನು ಕಟಿಬದ್ಧವಾಗಿ ಈಡೇರಿಸಿಕೊಳ್ಳುವುದಕ್ಕೆ ಸಾಧ್ಯವಾಗುತ್ತಿಲ್ಲ.

ಇನ್ನಾದರೂ ಸಾರಿಗೆ ನೌಕರರಿಗೆ ಸರಿ ಸಮಾನ ವೇತನ ಕೊಡುತ್ತೇವೆ ಎಂದು ತಮ್ಮ ಚುನಾವಣಾ ಪ್ರಣಾಳಿಕೆಯಲ್ಲಿ ಭರವಸೆ ನೀಡಿರುವ ಕಾಂಗ್ರೆಸ್‌ ಅಧಿಕಾರಕ್ಕೆ ಬಂದಿದ್ದು, ನೌಕರರಿಗೆ ಸರಿ ಸಮಾನ ವೇತನದ ಜತೆಗೆ ಪ್ರಮುಖವಾಗಿ ನೌಕರರ ಸಂಘಟನೆಗಳು ಚುನಾವಣೆ ನಡೆಸುವುದಕ್ಕೆ ಮುಂದಾಗಬೇಕಿದೆ ಎಂದು ಒತ್ತಾಯಿಸಿದ್ದಾರೆ.

ಈ ಹಿಂದಿನ ಬಿಜೆಪಿ ಸರ್ಕಾರ ರಾಜ್ಯದಲ್ಲಿ ಅಧಿಕಾರದಲ್ಲಿ ಇದ್ದಾಗ ನೌಕರರ ಮೂಗಿಗೆ ತುಪ್ಪ ಸವರಿತೆ ವಿನಃ ಬೇರೆನು ಮಾಡಲಿಲ್ಲ. ವೇತನ ಕಡಿಮೆ ಇದೆ ಅದನ್ನು ಸರಿ ದೂಗಿಸಿ ಎಂದು ಬೇಡಿಕೆ ಇಟ್ಟರು ಪೂರೈಸುವಲ್ಲಿ ಉದಾಸೀನತೆ ತೋರಿತು. ಅದರ ಪರಿಣಾಮವನ್ನು ಈ ಚುನಾವಣೆಯಲ್ಲಿ ಉಂಡಿತು ಕೂಡ. ಹೀಗಾಗಿ ಈಗ ಹೊಸದಾಗಿ ರಚನೆಯಾಗಿರುವ ಕಾಂಗ್ರೆಸ್‌ ಸರ್ಕಾರವಾದರೂ ನೌಕರರಿಗೆ ಕೊಟ್ಟಿರುವ ಭರವಸೆಯನ್ನು ಈಡೇರಿಸಬೇಕಿದೆ. ಆ ನಿಟ್ಟಿನಲ್ಲಿ ಹೆಜ್ಜೆಯಿಟ್ಟು ನಾವು ಕೊಟ್ಟ ಭರವಸೆಯನ್ನು ಈಡೇರಿಸಿದ್ದೇವೆ ಎಂದು ತೋರಿಸಿ ಕೊಡಬೇಕಿದೆ.

ಹಿಂದಿನ ಸರ್ಕಾರದಲ್ಲಿ ವೇತನ ಹೆಚ್ಚಳ ಮಾಡಿದ ವೇಳೆ ಶೆ.15ರಷ್ಟು ಕೊಟ್ಟಿರುವುದನ್ನು ನಾವು ಒಪ್ಪಲು ಸಾಧ್ಯವಿಲ್ಲ, ನಮಗೆ ಮೂಲ ವೇತನಕ್ಕೆ ಬಿಡಿಎ ಮರ್ಜ್‌ ಮಾಡಿ ಶೇ.25ರಷ್ಟು ವೇತನ ಹೆಚ್ಚಳ ಮಾಡಬೇಕು ಎಂದು ಬೇಡಿಕೆ ಇಟ್ಟಿದ್ದ ಸಾರಿಗೆ ಕಾರ್ಮಿಕರ ಜಂಟಿ ಕ್ರಿಯಾ ಸಮಿತಿ ಬಳಿಕ ಸರ್ಕಾರ ಆದೇಶ ಮಾಡಿದ ಶೇ.15ರಷ್ಟು ವೇತನ ಹೆಚ್ಚಳವನ್ನೇ ಒಪ್ಪಿ ನಿಕಟಪೂರ್ವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಬಳಿ ಮಂಡಿಯೂರಿದ್ದು ಇನ್ನು ಹಸಿಹಸಿಯಾಗಿಯೇ ಇದೆ. ಅಲ್ಲದ ಅವರ ನಡೆ ನೌಕರರ ಕೆಂಗಣ್ಣಿಗೂ ಗುರಿಯಾಗಿತ್ತು.

ಅಂದರೆ, ಒಂದು ಚುನಾಯಿತ ಸಂಘಟನೆ ಇದ್ದಿದ್ದರೆ, ಸರ್ಕಾರ ಈ ರೀತಿ ಏಕಪಕ್ಷೀಯ ನಿರ್ಧಾರ ತೆಗೆದುಕೊಳ್ಳುವುದಕ್ಕೆ ಆಗುತ್ತಿರಲಿಲ್ಲ. ಜತೆಗೆ ನೌಕರರಿಗೆ ನಾವು ಯಾವ ಸಂಘಟನೆ ಜತೆಗೆ ಹೋಗಬೇಕು ಎಂಬ ಗೊಂದಲವು ಇರುತ್ತಿರಲಿಲ್ಲ. ಈಗ ಸಂಘಟನೆಗಳ ಮುಖಂಡರಲ್ಲಿ ಬಣಗಳು ಹುಟ್ಟಿಕೊಂಡಿದ್ದು, ನೌಕರರ ಹಿತ ಕಾಪಾಡುವುದಕ್ಕಿಂತಲೂ ತಮ್ಮ ಸ್ವ ಪ್ರತಿಷ್ಟೆ ಮೆರೆಯುತ್ತಿರುವುದೇ ಹೆಚ್ಚಾಗಿದೆ. ಇದನ್ನು ಹೋಗಲಾಡಿಸಲು ಚುನಾವಣೆ ನಡೆಸಿ ಎಂದು ಸಿಎಂ ಸಿದ್ದರಾಮಯ್ಯ ಅವರಲ್ಲಿ ಮನವಿ ಮಾಡಿದ್ದಾರೆ ಸಾರಿಗೆ ನೌಕರರು.

Leave a Reply

error: Content is protected !!
LATEST
KSRTC: ₹8.76 ಲಕ್ಷ ನಷ್ಟವುಂಟು ಮಾಡಿರುವ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸರ್ಕಾರದ ಮುಖ್ಯ ಕಾರ್ಯದರ್ಶ... BMTC ಚಾಲಕರಿಗೆ ಕೂಡಲೇ ವೇತನ ಪಾವತಿಸಿ: ಎಎಪಿಯ ಜಗದೀಶ್ ವಿ. ಸದಂ ಆಗ್ರಹ ಬಸವನಹಳ್ಳಿ: ನಿವೃತ್ತ ಸಹಾಯಕ ತೋಟಗಾರಿಕಾ ಇಲಾಖೆಯ ನಿರ್ದೇಶಕ ಚಿಕ್ಕಮಾಯಿಗೌಡರ ಪತ್ನಿ ಸಿದ್ದಮ್ಮ ನಿಧನ KSRTC ನೌಕರರ 2024ರ ವೇತನ ಪರಿಷ್ಕರಣೆ, 38 ತಿಂಗಳ ಹಿಂಬಾಕಿ ಬಿಡುಗಡೆಗೆ ಜೂನ್‌ 6ರಬಳಿಕ ನಿರ್ಧಾರ: ರಾಮಲಿಂಗಾರೆಡ್ಡಿ ಚಿಕ್ಕಮಗಳೂರಲ್ಲಿ ಧಾರಾಕಾರ ಮಳೆ- ಬೆಂಗಳೂರಿಗೂ ಆಗಮಿಸಲಿದ್ದಾನೆ ವರುಣ BMTC: ವೇತನಕ್ಕೆ ಆಗ್ರಹಿಸಿ ಬಿಎಂಟಿಸಿ ಎಲೆಕ್ಟ್ರಿಕ್‌ ಬಸ್‌ ಚಾಲಕರ ದಿಢೀರ್‌ ಪ್ರತಿಭಟನೆ ನಮ್ಮಲ್ಲಿ ಒಳಜಗಳ ಗಿಳಜಗಳ ಯಾವುದೂ ಇಲ್ಲ : ಸಿಎಂ ಸಿದ್ದರಾಮಯ್ಯ ಲೋಕಸಮರ 2024: 7ನೇ ಹಂತದ ಚುನಾವಣೆ - ವಾರಣಾಸಿಯಿಂದ 3ನೇ ಬಾರಿಗೆ ಪರೀಕ್ಷೆಗಿಳಿದ ಪ್ರಧಾನಿ ಮೋದಿ KSRTC: ಕರ್ತವ್ಯದ ವೇಳೆಯೇ ಬ್ರೈನ್‌ಸ್ಟ್ರೋಕ್‌ - ಸಾರಿಗೆ ನೌಕರನಿಗೆ ಬೇಕಿದೆ ಆರ್ಥಿಕ ನೆರವು ನಾಲ್ಕನೇ ಹಂತದ ಲೋಕಸಭಾ ಚುನಾವಣೆ: 10 ರಾಜ್ಯಗಳ 96 ಕ್ಷೇತ್ರಗಳಲ್ಲಿ ಒಟ್ಟಾರೆ ಶೇ. 62.84ರಷ್ಟು ಮತದಾನ